Homeಕರ್ನಾಟಕಅಪ್ಪು ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರ್‌ಎಸ್‌ಎಸ್ ಕಾರ್ಯಕರ್ತೆ: ಕಿಡಿಕಾರಿದ ಕನ್ನಡಿಗರು

ಅಪ್ಪು ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರ್‌ಎಸ್‌ಎಸ್ ಕಾರ್ಯಕರ್ತೆ: ಕಿಡಿಕಾರಿದ ಕನ್ನಡಿಗರು

ಟ್ವಿಟರ್‌ನಲ್ಲಿ ನರೇಂದ್ರ ಮೋದಿಯವರು ಫಾಲೋ ಮಾಡುವ ಜ್ಯೋತಿ ಸುಪರ್ಣ ಟ್ವಿಟರ್‌ ಖಾತೆಯಿಂದ ರಾಜ್‌ಕುಮಾರ್ ಕುಟುಂಬವನ್ನು ಗುರಿಯಾಗಿಸಿಕೊಂಡು ಹಗುರವಾಗಿ ಮಾತನಾಡಲಾಗಿದೆ.

- Advertisement -
- Advertisement -

ತಮ್ಮ ಸರಳ ನಡೆ ನುಡಿಗಳ ಮೂಲಕ ಕರ್ನಾಟಕದ ಮನೆಮಾತಾಗಿದ್ದ ಪ್ರತಿಭಾನ್ವಿತ ನಟ ಪುನೀತ್‌ ರಾಜ್‌ಕುಮಾರ್‌ರವರು ನಮ್ಮನ್ನಗಲಿ ಒಂದು ವರ್ಷವಾಗಿದೆ. ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವ ಸೂಚಿಸಲಾಗಿದೆ. ಅಪ್ಪು ತಮ್ಮ ಪ್ರಕೃತಿ ಪ್ರೀತಿಯನ್ನು ದಾಖಲಿಸಿರುವ ‘ಗಂಧದಗುಡಿ’ ಸಾಕ್ಷ್ಯಚಿತ್ರವೂ ಚಿತ್ರಮಂದಿರದಲ್ಲಿ ಪ್ರದರ್ಶನವಾಗುತ್ತಿದೆ. ಅವರ ಕುರಿತು ಯಾರಾದರೂ ಹಗುರವಾಗಿ ಮಾತನಾಡುವುದನ್ನು ಕನ್ನಡಿಗರು ಊಹಿಸುವುದೂ ಇಲ್ಲ. ಈ ಹೊತ್ತಿನಲ್ಲಿ ಜ್ಯೋತಿ ಸುಪರ್ಣ ಚಿಂಚೋಳಿ ಎಂಬ ಆರ್‌ಎಸ್‌ಎಸ್‌ ಕಾರ್ಯಕರ್ತೆಯೊಬ್ಬರು ಟ್ವಿಟರ್‌ನಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್‌ರವರಿಗೆ ಅಪಮಾನ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಟ್ವಿಟರ್‌ನಲ್ಲಿ ನರೇಂದ್ರ ಮೋದಿಯವರು ಫಾಲೋ ಮಾಡುವ ಜ್ಯೋತಿ ಸುಪರ್ಣ ಟ್ವಿಟರ್‌ ಖಾತೆಯಿಂದ ರಾಜ್‌ಕುಮಾರ್ ಕುಟುಂಬವನ್ನು ಗುರಿಯಾಗಿಸಿಕೊಂಡು ಹಗುರವಾಗಿ ಸರಣಿ ಟ್ವೀಟ್‌ಗಳನ್ನು ಮಾಡಿರುವುದರ ವಿರುದ್ಧ ಕನ್ನಡಿಗರು ಕಿಡಿಕಾರಿದ್ದಾರೆ.

ಜ್ಯೋತಿ ಸುಪರ್ಣ ಚಿಂಚೋಳಿ

“ಕರ್ನಾಟಕದಲ್ಲಿ ರಾಜ್‌ಕುಮಾರ್‌ ವಂಶದ ಕುಡಿಗಳು ದೇವರುಗಳಾಗಿದ್ದಾರೆ. ಬಾಲಿವುಡ್‌ನಲ್ಲಿ ಕರಣ್ ಜೋಹರ್ ಇದ್ದಂತೆ. ಸ್ಯಾಂಡಲ್‌ವುಡ್‌ನಲ್ಲಿ ಯಾರಾದರೂ ಉಳಿದುಕೊಳ್ಳಬೇಕಿದ್ದರೆ ಅವರಿಗೆ ಸಲಾಂ ಹೊಡೆಯಲೇಬೇಕಿದೆ. ರಿಷಬ್ ಶೆಟ್ಟಿ ಕೂಡ ಕಾಂತಾರ ಚಿತ್ರದಲ್ಲಿ ನಟಿಸುವಂತೆ ದಿವಂಗತ ಪುನೀತ್‌ ರಾಜ್‌ ಕುಮಾರ್‌ರವರಿಗೆ ಆಹ್ವಾನ ನೀಡಿದ್ದೆ ಎಂದು ಹೇಳಿಕೊಂಡಿದ್ದಾರೆ. ಆದರೆ ಪ್ರಾಮಾಣಿಕವಾಗಿ ಹೇಳಿ ಪುನೀತ್ ರಾಜ್‌ಕುಮಾರ್ ಆ ಪಾತ್ರವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದರೆ? ರಿಷಬ್‌ ಶೆಟ್ಟಿಯವರಿಗೆ ಭೂತ ಮತ್ತು ದೈವ ಆರಾಧನೆಯ ಸಂಸ್ಕೃತಿಯಲ್ಲಿ ಆಳವಾದ ಬೇರುಗಳಿದ್ದ ಕಾರಣದಿಂದಲೇ ಅವರು ಕಾಂತಾರ ಚಿತ್ರದಲ್ಲಿ ಪರಿಣಾಮಕಾರಿಯಾಗಿ ದೈವಿಕ ಪ್ರದರ್ಶನ ನೀಡಲು ಸಾಧ್ಯವಾಯಿತು” ಎಂದು ಜ್ಯೋತಿ ಸುಪರ್ಣ ಟ್ವೀಟ್ ಮಾಡಿದ್ದಾರೆ.

ಮುಂದುವರಿದು “ಪುನೀತ್ ರಾಜ್‌ ಕುಮಾರ್‌ ಮರಣ ಹೊಂದಿದುರ ಬಗ್ಗೆ ನನಗೂ ಬೇಸರವಿದೆ. ಆದರೆ ವಾಸ್ತವದಲ್ಲಿ ರಿಷಬ್ ಶೆಟ್ಟಿಯಂತಹ ಪ್ರತಿಭಾವಂತ ನಟ/ನಿರ್ದೇಶಕ/ಬರಹಗಾರ ಸ್ಯಾಂಡಲ್‌ವುಡ್‌ನಲ್ಲಿ ದಶಕಗಳ ಕಾಲ ಹೋರಾಡಬೇಕಿದೆ. ಅವರು ಒಂದು ದಶಕದ ಹಿಂದೆಯೇ ಸ್ಯಾಂಡಲ್‌ವುಡ್ ಅನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಮೂಲಕ ನಾವು ಕನ್ನಡಿಗರು ಹೆಮ್ಮೆ ಪಡುವಂತೆ ಮಾಡಬಹುದಿತ್ತು” ಎಂದು ಆರ್‌ಎಸ್‌ಎಸ್‌ ಕಾರ್ಯಕರ್ತೆ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಒಟ್ಟಾರೆಯಾಗಿ ಈ ಟ್ವೀಟ್‌ನಲ್ಲಿ ರಿಷಬ್ ಶೆಟ್ಟಿಯನ್ನು ಹೊಗಳುತ್ತಲೇ ಅವರು ಇಷ್ಟು ದಿನ ಬೆಳಯದಿರಲು ರಾಜ್ ಕುಟುಂಬವೇ ಕಾರಣವಾಗಿದೆ. ಪುನೀತ್ ರಾಜ್ ಕುಮಾರ್ ಉತ್ತಮವಾಗಿ ಅಭಿನಯಿಸಲು ಸಾಧ್ಯವಾಗುತ್ತಿಲಿಲ್ಲ. ಕನ್ನಡ ಚಿತ್ರರಂಗ ರಾಜ್ ಕುಟುಂಬದ ಕೈಯಲ್ಲಿದ್ದು ಎಲ್ಲರು ಅವರ ಅಣತಿಯಂತೆಯೇ ನಡೆದುಕೊಳ್ಳಬೇಕು. ಅದರಿಂದಾಗಿ ಕನ್ನಡ ಚಿತ್ರರಂಗ ಹಿಂದುಳಿದಿದೆ ಎಂಬರ್ಥದಲ್ಲಿ ಟ್ವೀಟ್ ಮಾಡಿರುವುದು ಕನ್ನಡಿಗರನ್ನು ಕೆರಳಿಸಿದೆ.

ಕರಣ್ ಜೋಹರ್ ಅವರನ್ನು ಡಾ.ರಾಜ್‌ಕುಮಾರ್‌ಗೆ ಹೋಲಿಸಬೇಡಿ. ಮತ್ತು ಪುನೀತ್ ರಾಜ್‌ಕುಮಾರ್ ವಂಶವಾಹಿನಿ ನಟರಲ್ಲ. ಅವರು 10 ವರ್ಷದವರಾಗಿದ್ದಾಗಲೆ ನಟನೆಗಾಗಿ ಅಭಿಮಾನಿಗಳನ್ನು ಹೊಂದಿದ್ದರು. ರಾಜ್ ಕುಟುಂಬವು ಯಾರ ವಿರುದ್ಧವೂ ಎಂದೂ ದ್ವೇಷದ ಮಾತುಗಳನ್ನಾಡಿಲ್ಲ. ಆದರೆ ನೀವು ಅವರನ್ನು ತುಂಬಾ ದ್ವೇಷಿಸುತ್ತಿದ್ದೀರಿ ಎಂದು ಕನ್ನಡಿಗರೊಬ್ಬರು ಟ್ವೀಟ್ ಮಾಡಿದ್ದಾರೆ.

ಅರ್ಥಹೀನವಾಗಿ ಮಾತನಾಡಬೇಡಿ. ಡಾ.ರಾಜ್‌ಕುಮಾರ್ ಅವರ ಕುಟುಂಬದ ಮೇಲಿನ ಅಭಿಮಾನವು ಗೌರವದಿಂದ ಬಂದಿದೆಯೇ ಹೊರತು ಬಲವಂತದಿಂದಲ್ಲ. ಪುನೀತ್ ಅವರು ಬಹಳ ಒಳ್ಳೆಯ ಮನುಷ್ಯರಾಗಿದ್ದರು ಮತ್ತು ಅದ್ಭತ ಪ್ರತಿಭೆ ಅವರಲ್ಲಿತ್ತು. ಈ ರೀತಿಯ ಪ್ರತಿಭೆ ಇದ್ದರೆ ಪ್ರತಿ ನಟನ ಮಕ್ಕಳು ಯಶಸ್ವಿಯಾಗುತ್ತಾರೆ. ನಿಮ್ಮ RSS ಕನ್ನಡ ವಿರೋಧಿ ನಿಲುವು ಈ ಟ್ವೀಟ್‌ನಲ್ಲಿದೆ ಎಂದು ನೀಹ ಎಂಬುವವರು ಕಿಡಿಕಾರಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರು 8 ನೇ ವಯಸ್ಸಿನಲ್ಲಿಯೇ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದಿದ್ದಾರೆ, ದಯವಿಟ್ಟು ಅವರು ಹಾಡಿದ ಹಾಡುಗಳನ್ನು ಕೇಳಿ, ನಮ್ಮ ಎಷ್ಟು ನಟರು ಹಾಡುವಲ್ಲಿ ಮತ್ತು ಅತ್ಯುತ್ತಮ ನಟನೆ ಮಾಡುವಲ್ಲಿ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ? ಪುನೀತ್ ಅವರು ಪ್ರತಿಭೆಯ ಕಣಜ ಮತ್ತು ಆಂಕರ್ ಕೂಡ ಆಗಿದ್ದರು ಎಂದು ಅಪ್ಪು ಸಾಗರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಹಾಡು ಹೇಳಿ ಬಂದ ಹಣದಿಂದ ಸಾಮಾಜಿಕ ಕಾರ್ಯ ಮಾಡಿದ್ದಾರೆ. ನಾವು ಕನ್ನಡಿಗರು, ಎಲ್ಲರನ್ನೂ ಗೌರವಿಸುತ್ತೇವೆ. ರಿಷಬ್ ಶೆಟ್ಟಿ ಅವರ ಮೇಲೂ ನಮಗೆ ತುಂಬ ಗೌರವ ಇದೆ. ಅವರು ಅಪ್ಪು ಅವರ ಮೇಲಿನ ಗೌರವದಿಂದ ಹೇಳಿದ್ದಾರೆ ಅಷ್ಟೆ. ಗೌರವವನ್ನ ಹೆದರಿಸಿ ಅಥವಾ ಹಣದಿಂದ ಪಡೆಯೋಕೆ ಆಗಲ್ಲ. ಸಾಧನೆ ನೋಡಿ ಗೌರವ ಕೊಡುತ್ತಾರೆ ಎಂದು ಕನ್ನಡಿಗ ಎಂಬುವವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಯಾರನ್ನೋ ಮೆಚ್ಚಿಸುವ ಸಲುವಾಗಿ ಹೀಗೆ ಬಾಯಿಗೆ ಬಂದಂತೆ ಮಾತನಾಡುವುದು ಬೇರೆಯವರ ಗಮನವನ್ನು ಸೆಳೆಯಲಿಕ್ಕೆ ಹಾಗೂ ತಮ್ಮ ಹೆಸರು ಚಾಲ್ತಿಯಲ್ಲಿ ಇಟ್ಟುಕೊಳ್ಳುವುದಕ್ಕೆ ಮಾಡುವ cheap gimmick ಅಷ್ಟೇ. ರಾಜಕುಮಾರ್, ಏನು, ಅವರ ಹಾಗೂ ಅವರ ಕುಟುಂಬದ ಕಾಣಿಕೆ ಕನ್ನಡ ಚಿತ್ರರಂಗವನ್ನು ಕಟ್ಟಲು ಎಷ್ಟು ಎಂಬುದು ಎಲ್ಲರಿಗೂ ಗೊತ್ತಿದೆ. ರಿಷಬ್ ಶೆಟ್ಟಿ ಒಬ್ಬ ಪ್ರತಿಭಾವಂತ ನಟ ನಿರ್ದೇಶಕರು, ಅವರಿಂದ ಇನ್ನೂ ಒಳ್ಳೆಯ ಚಿತ್ರಗಳು ಬರಬೇಕಿದೆ. ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡುವುದನ್ನು ಸಂಘ ಪರಿವಾರಿಗಳು ನಿಲ್ಲಿಸಬೇಕು. ಪುನೀತ್ ಮಾಡಿರುವ ಸಾಮಾಜಿಕ ಕೆಲಸದಲ್ಲಿ ಅರ್ಧದಷ್ಟು ಸಂಘ ಪರಿವಾರದವರು ಮಾಡಿದ್ದರೆ ಹೇಳಲಿ.

  2. ಮತ್ತೆ ಸಂಘ ಪರಿವಾರದ ಬಗ್ಗೆ ಅಂದುಕೊಂಡಿದ್ದೀರಾ ಅವರ ಗುಲಾಮಗಿರಿ ಚಾಕರಿ ಮಾಡದಿದ್ದರೆ ಬರೀ ಮುಸಲ್ಮಾನರಿಗೆ ಮಾತ್ರ ಅಲ್ಲ ಯಾರಿಗೂ ಜಾಗ ಇಲ್ಲ, ಈಗ ನೋಡಿ ಡಾಕ್ಟರ್ ರಾಜಕುಮಾರ್ ಕುಟುಂಬದವರು ಸಂಘ ಪರಿವಾರಕ್ಕೆ ಅಷ್ಟೊಂದು ಹೊಂದಿಕೊಂಡು ಹೋಗದ ಕಾರಣ ಹೊಟ್ಟೆಯ ಅಗ್ನಿ ಸಲ್ಪ ಸಲ್ಲನೆ ಹೊರ ಬರುತ್ತಿದೆ

  3. ನಾಯಿ ಬೊಗಳಿದರೆ ದೇವಲೋಕ ಹಾಳಾಗುವುದೇ ಬೊಗಳುವವರು ಬೊಗಳುತ್ತನೆ ಇರಲಿ ಉರಿದುಕೊಳ್ಳುವವರು ಉರ್ಕಂತನೇ ಇರಲಿ.

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...