Homeಕರ್ನಾಟಕಅಪ್ಪು ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರ್‌ಎಸ್‌ಎಸ್ ಕಾರ್ಯಕರ್ತೆ: ಕಿಡಿಕಾರಿದ ಕನ್ನಡಿಗರು

ಅಪ್ಪು ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರ್‌ಎಸ್‌ಎಸ್ ಕಾರ್ಯಕರ್ತೆ: ಕಿಡಿಕಾರಿದ ಕನ್ನಡಿಗರು

ಟ್ವಿಟರ್‌ನಲ್ಲಿ ನರೇಂದ್ರ ಮೋದಿಯವರು ಫಾಲೋ ಮಾಡುವ ಜ್ಯೋತಿ ಸುಪರ್ಣ ಟ್ವಿಟರ್‌ ಖಾತೆಯಿಂದ ರಾಜ್‌ಕುಮಾರ್ ಕುಟುಂಬವನ್ನು ಗುರಿಯಾಗಿಸಿಕೊಂಡು ಹಗುರವಾಗಿ ಮಾತನಾಡಲಾಗಿದೆ.

- Advertisement -
- Advertisement -

ತಮ್ಮ ಸರಳ ನಡೆ ನುಡಿಗಳ ಮೂಲಕ ಕರ್ನಾಟಕದ ಮನೆಮಾತಾಗಿದ್ದ ಪ್ರತಿಭಾನ್ವಿತ ನಟ ಪುನೀತ್‌ ರಾಜ್‌ಕುಮಾರ್‌ರವರು ನಮ್ಮನ್ನಗಲಿ ಒಂದು ವರ್ಷವಾಗಿದೆ. ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವ ಸೂಚಿಸಲಾಗಿದೆ. ಅಪ್ಪು ತಮ್ಮ ಪ್ರಕೃತಿ ಪ್ರೀತಿಯನ್ನು ದಾಖಲಿಸಿರುವ ‘ಗಂಧದಗುಡಿ’ ಸಾಕ್ಷ್ಯಚಿತ್ರವೂ ಚಿತ್ರಮಂದಿರದಲ್ಲಿ ಪ್ರದರ್ಶನವಾಗುತ್ತಿದೆ. ಅವರ ಕುರಿತು ಯಾರಾದರೂ ಹಗುರವಾಗಿ ಮಾತನಾಡುವುದನ್ನು ಕನ್ನಡಿಗರು ಊಹಿಸುವುದೂ ಇಲ್ಲ. ಈ ಹೊತ್ತಿನಲ್ಲಿ ಜ್ಯೋತಿ ಸುಪರ್ಣ ಚಿಂಚೋಳಿ ಎಂಬ ಆರ್‌ಎಸ್‌ಎಸ್‌ ಕಾರ್ಯಕರ್ತೆಯೊಬ್ಬರು ಟ್ವಿಟರ್‌ನಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್‌ರವರಿಗೆ ಅಪಮಾನ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಟ್ವಿಟರ್‌ನಲ್ಲಿ ನರೇಂದ್ರ ಮೋದಿಯವರು ಫಾಲೋ ಮಾಡುವ ಜ್ಯೋತಿ ಸುಪರ್ಣ ಟ್ವಿಟರ್‌ ಖಾತೆಯಿಂದ ರಾಜ್‌ಕುಮಾರ್ ಕುಟುಂಬವನ್ನು ಗುರಿಯಾಗಿಸಿಕೊಂಡು ಹಗುರವಾಗಿ ಸರಣಿ ಟ್ವೀಟ್‌ಗಳನ್ನು ಮಾಡಿರುವುದರ ವಿರುದ್ಧ ಕನ್ನಡಿಗರು ಕಿಡಿಕಾರಿದ್ದಾರೆ.

ಜ್ಯೋತಿ ಸುಪರ್ಣ ಚಿಂಚೋಳಿ

“ಕರ್ನಾಟಕದಲ್ಲಿ ರಾಜ್‌ಕುಮಾರ್‌ ವಂಶದ ಕುಡಿಗಳು ದೇವರುಗಳಾಗಿದ್ದಾರೆ. ಬಾಲಿವುಡ್‌ನಲ್ಲಿ ಕರಣ್ ಜೋಹರ್ ಇದ್ದಂತೆ. ಸ್ಯಾಂಡಲ್‌ವುಡ್‌ನಲ್ಲಿ ಯಾರಾದರೂ ಉಳಿದುಕೊಳ್ಳಬೇಕಿದ್ದರೆ ಅವರಿಗೆ ಸಲಾಂ ಹೊಡೆಯಲೇಬೇಕಿದೆ. ರಿಷಬ್ ಶೆಟ್ಟಿ ಕೂಡ ಕಾಂತಾರ ಚಿತ್ರದಲ್ಲಿ ನಟಿಸುವಂತೆ ದಿವಂಗತ ಪುನೀತ್‌ ರಾಜ್‌ ಕುಮಾರ್‌ರವರಿಗೆ ಆಹ್ವಾನ ನೀಡಿದ್ದೆ ಎಂದು ಹೇಳಿಕೊಂಡಿದ್ದಾರೆ. ಆದರೆ ಪ್ರಾಮಾಣಿಕವಾಗಿ ಹೇಳಿ ಪುನೀತ್ ರಾಜ್‌ಕುಮಾರ್ ಆ ಪಾತ್ರವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದರೆ? ರಿಷಬ್‌ ಶೆಟ್ಟಿಯವರಿಗೆ ಭೂತ ಮತ್ತು ದೈವ ಆರಾಧನೆಯ ಸಂಸ್ಕೃತಿಯಲ್ಲಿ ಆಳವಾದ ಬೇರುಗಳಿದ್ದ ಕಾರಣದಿಂದಲೇ ಅವರು ಕಾಂತಾರ ಚಿತ್ರದಲ್ಲಿ ಪರಿಣಾಮಕಾರಿಯಾಗಿ ದೈವಿಕ ಪ್ರದರ್ಶನ ನೀಡಲು ಸಾಧ್ಯವಾಯಿತು” ಎಂದು ಜ್ಯೋತಿ ಸುಪರ್ಣ ಟ್ವೀಟ್ ಮಾಡಿದ್ದಾರೆ.

ಮುಂದುವರಿದು “ಪುನೀತ್ ರಾಜ್‌ ಕುಮಾರ್‌ ಮರಣ ಹೊಂದಿದುರ ಬಗ್ಗೆ ನನಗೂ ಬೇಸರವಿದೆ. ಆದರೆ ವಾಸ್ತವದಲ್ಲಿ ರಿಷಬ್ ಶೆಟ್ಟಿಯಂತಹ ಪ್ರತಿಭಾವಂತ ನಟ/ನಿರ್ದೇಶಕ/ಬರಹಗಾರ ಸ್ಯಾಂಡಲ್‌ವುಡ್‌ನಲ್ಲಿ ದಶಕಗಳ ಕಾಲ ಹೋರಾಡಬೇಕಿದೆ. ಅವರು ಒಂದು ದಶಕದ ಹಿಂದೆಯೇ ಸ್ಯಾಂಡಲ್‌ವುಡ್ ಅನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಮೂಲಕ ನಾವು ಕನ್ನಡಿಗರು ಹೆಮ್ಮೆ ಪಡುವಂತೆ ಮಾಡಬಹುದಿತ್ತು” ಎಂದು ಆರ್‌ಎಸ್‌ಎಸ್‌ ಕಾರ್ಯಕರ್ತೆ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಒಟ್ಟಾರೆಯಾಗಿ ಈ ಟ್ವೀಟ್‌ನಲ್ಲಿ ರಿಷಬ್ ಶೆಟ್ಟಿಯನ್ನು ಹೊಗಳುತ್ತಲೇ ಅವರು ಇಷ್ಟು ದಿನ ಬೆಳಯದಿರಲು ರಾಜ್ ಕುಟುಂಬವೇ ಕಾರಣವಾಗಿದೆ. ಪುನೀತ್ ರಾಜ್ ಕುಮಾರ್ ಉತ್ತಮವಾಗಿ ಅಭಿನಯಿಸಲು ಸಾಧ್ಯವಾಗುತ್ತಿಲಿಲ್ಲ. ಕನ್ನಡ ಚಿತ್ರರಂಗ ರಾಜ್ ಕುಟುಂಬದ ಕೈಯಲ್ಲಿದ್ದು ಎಲ್ಲರು ಅವರ ಅಣತಿಯಂತೆಯೇ ನಡೆದುಕೊಳ್ಳಬೇಕು. ಅದರಿಂದಾಗಿ ಕನ್ನಡ ಚಿತ್ರರಂಗ ಹಿಂದುಳಿದಿದೆ ಎಂಬರ್ಥದಲ್ಲಿ ಟ್ವೀಟ್ ಮಾಡಿರುವುದು ಕನ್ನಡಿಗರನ್ನು ಕೆರಳಿಸಿದೆ.

ಕರಣ್ ಜೋಹರ್ ಅವರನ್ನು ಡಾ.ರಾಜ್‌ಕುಮಾರ್‌ಗೆ ಹೋಲಿಸಬೇಡಿ. ಮತ್ತು ಪುನೀತ್ ರಾಜ್‌ಕುಮಾರ್ ವಂಶವಾಹಿನಿ ನಟರಲ್ಲ. ಅವರು 10 ವರ್ಷದವರಾಗಿದ್ದಾಗಲೆ ನಟನೆಗಾಗಿ ಅಭಿಮಾನಿಗಳನ್ನು ಹೊಂದಿದ್ದರು. ರಾಜ್ ಕುಟುಂಬವು ಯಾರ ವಿರುದ್ಧವೂ ಎಂದೂ ದ್ವೇಷದ ಮಾತುಗಳನ್ನಾಡಿಲ್ಲ. ಆದರೆ ನೀವು ಅವರನ್ನು ತುಂಬಾ ದ್ವೇಷಿಸುತ್ತಿದ್ದೀರಿ ಎಂದು ಕನ್ನಡಿಗರೊಬ್ಬರು ಟ್ವೀಟ್ ಮಾಡಿದ್ದಾರೆ.

ಅರ್ಥಹೀನವಾಗಿ ಮಾತನಾಡಬೇಡಿ. ಡಾ.ರಾಜ್‌ಕುಮಾರ್ ಅವರ ಕುಟುಂಬದ ಮೇಲಿನ ಅಭಿಮಾನವು ಗೌರವದಿಂದ ಬಂದಿದೆಯೇ ಹೊರತು ಬಲವಂತದಿಂದಲ್ಲ. ಪುನೀತ್ ಅವರು ಬಹಳ ಒಳ್ಳೆಯ ಮನುಷ್ಯರಾಗಿದ್ದರು ಮತ್ತು ಅದ್ಭತ ಪ್ರತಿಭೆ ಅವರಲ್ಲಿತ್ತು. ಈ ರೀತಿಯ ಪ್ರತಿಭೆ ಇದ್ದರೆ ಪ್ರತಿ ನಟನ ಮಕ್ಕಳು ಯಶಸ್ವಿಯಾಗುತ್ತಾರೆ. ನಿಮ್ಮ RSS ಕನ್ನಡ ವಿರೋಧಿ ನಿಲುವು ಈ ಟ್ವೀಟ್‌ನಲ್ಲಿದೆ ಎಂದು ನೀಹ ಎಂಬುವವರು ಕಿಡಿಕಾರಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರು 8 ನೇ ವಯಸ್ಸಿನಲ್ಲಿಯೇ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದಿದ್ದಾರೆ, ದಯವಿಟ್ಟು ಅವರು ಹಾಡಿದ ಹಾಡುಗಳನ್ನು ಕೇಳಿ, ನಮ್ಮ ಎಷ್ಟು ನಟರು ಹಾಡುವಲ್ಲಿ ಮತ್ತು ಅತ್ಯುತ್ತಮ ನಟನೆ ಮಾಡುವಲ್ಲಿ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ? ಪುನೀತ್ ಅವರು ಪ್ರತಿಭೆಯ ಕಣಜ ಮತ್ತು ಆಂಕರ್ ಕೂಡ ಆಗಿದ್ದರು ಎಂದು ಅಪ್ಪು ಸಾಗರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಹಾಡು ಹೇಳಿ ಬಂದ ಹಣದಿಂದ ಸಾಮಾಜಿಕ ಕಾರ್ಯ ಮಾಡಿದ್ದಾರೆ. ನಾವು ಕನ್ನಡಿಗರು, ಎಲ್ಲರನ್ನೂ ಗೌರವಿಸುತ್ತೇವೆ. ರಿಷಬ್ ಶೆಟ್ಟಿ ಅವರ ಮೇಲೂ ನಮಗೆ ತುಂಬ ಗೌರವ ಇದೆ. ಅವರು ಅಪ್ಪು ಅವರ ಮೇಲಿನ ಗೌರವದಿಂದ ಹೇಳಿದ್ದಾರೆ ಅಷ್ಟೆ. ಗೌರವವನ್ನ ಹೆದರಿಸಿ ಅಥವಾ ಹಣದಿಂದ ಪಡೆಯೋಕೆ ಆಗಲ್ಲ. ಸಾಧನೆ ನೋಡಿ ಗೌರವ ಕೊಡುತ್ತಾರೆ ಎಂದು ಕನ್ನಡಿಗ ಎಂಬುವವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಯಾರನ್ನೋ ಮೆಚ್ಚಿಸುವ ಸಲುವಾಗಿ ಹೀಗೆ ಬಾಯಿಗೆ ಬಂದಂತೆ ಮಾತನಾಡುವುದು ಬೇರೆಯವರ ಗಮನವನ್ನು ಸೆಳೆಯಲಿಕ್ಕೆ ಹಾಗೂ ತಮ್ಮ ಹೆಸರು ಚಾಲ್ತಿಯಲ್ಲಿ ಇಟ್ಟುಕೊಳ್ಳುವುದಕ್ಕೆ ಮಾಡುವ cheap gimmick ಅಷ್ಟೇ. ರಾಜಕುಮಾರ್, ಏನು, ಅವರ ಹಾಗೂ ಅವರ ಕುಟುಂಬದ ಕಾಣಿಕೆ ಕನ್ನಡ ಚಿತ್ರರಂಗವನ್ನು ಕಟ್ಟಲು ಎಷ್ಟು ಎಂಬುದು ಎಲ್ಲರಿಗೂ ಗೊತ್ತಿದೆ. ರಿಷಬ್ ಶೆಟ್ಟಿ ಒಬ್ಬ ಪ್ರತಿಭಾವಂತ ನಟ ನಿರ್ದೇಶಕರು, ಅವರಿಂದ ಇನ್ನೂ ಒಳ್ಳೆಯ ಚಿತ್ರಗಳು ಬರಬೇಕಿದೆ. ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡುವುದನ್ನು ಸಂಘ ಪರಿವಾರಿಗಳು ನಿಲ್ಲಿಸಬೇಕು. ಪುನೀತ್ ಮಾಡಿರುವ ಸಾಮಾಜಿಕ ಕೆಲಸದಲ್ಲಿ ಅರ್ಧದಷ್ಟು ಸಂಘ ಪರಿವಾರದವರು ಮಾಡಿದ್ದರೆ ಹೇಳಲಿ.

  2. ಮತ್ತೆ ಸಂಘ ಪರಿವಾರದ ಬಗ್ಗೆ ಅಂದುಕೊಂಡಿದ್ದೀರಾ ಅವರ ಗುಲಾಮಗಿರಿ ಚಾಕರಿ ಮಾಡದಿದ್ದರೆ ಬರೀ ಮುಸಲ್ಮಾನರಿಗೆ ಮಾತ್ರ ಅಲ್ಲ ಯಾರಿಗೂ ಜಾಗ ಇಲ್ಲ, ಈಗ ನೋಡಿ ಡಾಕ್ಟರ್ ರಾಜಕುಮಾರ್ ಕುಟುಂಬದವರು ಸಂಘ ಪರಿವಾರಕ್ಕೆ ಅಷ್ಟೊಂದು ಹೊಂದಿಕೊಂಡು ಹೋಗದ ಕಾರಣ ಹೊಟ್ಟೆಯ ಅಗ್ನಿ ಸಲ್ಪ ಸಲ್ಲನೆ ಹೊರ ಬರುತ್ತಿದೆ

  3. ನಾಯಿ ಬೊಗಳಿದರೆ ದೇವಲೋಕ ಹಾಳಾಗುವುದೇ ಬೊಗಳುವವರು ಬೊಗಳುತ್ತನೆ ಇರಲಿ ಉರಿದುಕೊಳ್ಳುವವರು ಉರ್ಕಂತನೇ ಇರಲಿ.

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...