Homeಕರ್ನಾಟಕಮೈಸೂರು: ಮಾಜಿ ಗುಪ್ತಚರ ಅಧಿಕಾರಿಯ ಹಿಟ್‌ ಆಂಡ್‌ ರನ್‌‌ ಪ್ರಕರಣಕ್ಕೆ ತಿರುವು; ಸಿಸಿಟಿವಿಯಿಂದ ಬಹಿರಂಗವಾಯ್ತು ಘಟನೆ!

ಮೈಸೂರು: ಮಾಜಿ ಗುಪ್ತಚರ ಅಧಿಕಾರಿಯ ಹಿಟ್‌ ಆಂಡ್‌ ರನ್‌‌ ಪ್ರಕರಣಕ್ಕೆ ತಿರುವು; ಸಿಸಿಟಿವಿಯಿಂದ ಬಹಿರಂಗವಾಯ್ತು ಘಟನೆ!

- Advertisement -
- Advertisement -

ನವೆಂಬರ್‌ 4ರ ಶುಕ್ರವಾರದಂದು ಮೈಸೂರಿನ ಮಾನಸ ಗಂಗೋತ್ರಿ ಕ್ಯಾಪಸ್‌ನಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟ ನಿವೃತ್ತ ಇಂಟೆಲಿಜೆನ್ಸ್ ಬ್ಯೂರೋ (ಐಬಿ) ಅಧಿಕಾರಿಯೊಬ್ಬರ ಪ್ರಕರಣಕ್ಕೆ ತಿರುವು ಲಭಿಸಿದೆ. ಅವರನ್ನು ಉದ್ದೇಶಪೂರ್ವಕವಾಗಿ ಕಾರು ಗುದ್ದಿ ಕೊಲೆ ಮಾಡಲಾಗಿದೆ ಎಂದು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ತಿಳಿದುಬಂದಿದೆ.

ಎಂಬತ್ತಮೂರು ವರ್ಷದ ಮಾಜಿ ಐಬಿ ಅಧಿಕಾರಿ ಆರ್.ಎನ್. ಕುಲಕರ್ಣಿ ಅವರು ನವೆಂಬರ್‌ 4 ರಂದು ಮೈಸೂರಿನ ಮಾನಸ ಗಂಗೋತ್ರಿ ಕ್ಯಾಂಪಸ್‌ನಲ್ಲಿ ತಮ್ಮ ದಿನನಿತ್ಯದ ಸಂಜೆ ವಾಕಿಂಗ್ ಮಾಡುತ್ತಿದ್ದಾಗ ಮೃತಪಟ್ಟಿರುವುದು ಪತ್ತೆಯಾಗಿದೆ. ಅವರ ಸಾವು ಕಾರು ಅಪಘಾತದ ಪರಿಣಾಮ ಎಂದು ಆರಂಭದಲ್ಲಿ ಭಾವಿಸಲಾಗಿತ್ತು. ಆದರೆ ಪೊಲೀಸರಿಗೆ ಇದೀಗ ಸಿಕ್ಕಿರುವ ಸಿಸಿಟಿವಿ ದೃಶ್ಯಾವಳಿಗಳು ಅವರ ಸಾವು ಪೂರ್ವನಿಯೋಜಿತ ಕೊಲೆ ಎಂಬುವುದನ್ನು ಎತ್ತಿ ತೋರಿಸಿವೆ. ಆರ್‌‌.ಎನ್‌. ಕುಲಕರ್ಣಿ ಅವರು ಇಂಟೆಲಿಜೆನ್ಸ್ ಬ್ಯೂರೋದ ನಿವೃತ್ತ ಅಧಿಕಾರಿಯಾಗಿದ್ದರು ಮತ್ತು ಭಾರತ ಸರ್ಕಾರದ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗ (RAW) ದೊಂದಿಗೆ ಕೆಲಸ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲೆ ನಡೆದ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಕುಲಕರ್ಣಿ ಅವರು ಮಾನಸ ಗಂಗೋತ್ರಿ ಕ್ಯಾಂಪಸ್‌ನ ಬಯೋಟೆಕ್ನಾಲಜಿ ವಿಭಾಗದ ಕಿರಿದಾದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ಈ ವೇಳೆ ಅವರ ಬಳಿಗೆ ಅತ್ಯಂತ ವೇಗವಾಗಿ ಬೂದು ಬಣ್ಣದ ಸೆಡಾನ್ ಕಾರು ಬರುತ್ತದೆ. ಕುಲಕರ್ಣಿ ಅವರು ವಾಹನಕ್ಕೆ ದಾರಿ ಮಾಡಿಕೊಡಲು ಪಕ್ಕಕ್ಕೆ ಚಲಿಸುತ್ತಾರಾದರೂ, ಕಾರು ಅವರಿಗೆ ಬಳಿಗೆ ನುಗ್ಗಿ ಅವರಿಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಹೊರಟುಹೋಗುತ್ತದೆ.

ಇದನ್ನೂ ಓದಿ: ಅಪ್ಪು ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರ್‌ಎಸ್‌ಎಸ್ ಕಾರ್ಯಕರ್ತೆ: ಕಿಡಿಕಾರಿದ ಕನ್ನಡಿಗರು

ಮೈಸೂರಿನ ಶಾರದಾದೇವಿ ನಗರದ ನಿವಾಸಿಯಾಗಿರುವ ಆರ್.ಎನ್.ಕುಲಕರ್ಣಿ ಅವರು ಪತ್ನಿ ವತ್ಸಲಾ ಹಾಗೂ ಪುತ್ರಿ ಪರಿಣಿತಾ ಅವರನ್ನು ಅಗಲಿದ್ದಾರೆ. ಕುಲಕರ್ಣಿ ಅವರ ಅಳಿಯ ನೀಡಿದ ದೂರಿನ ಆಧಾರದ ಮೇಲೆ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

“ಕುಲಕರ್ಣಿ ಅವರ ಮನೆಯ ಪಕ್ಕದಲ್ಲಿ ಮನೆ ನಿರ್ಮಿಸುವಾಗ ನೆರೆಹೊರೆಯವರು ಮಾಡಿದ ಅಕ್ರಮಗಳ ಬಗ್ಗೆ ಕುಲಕರ್ಣಿ ಅವರು ತಮ್ಮ ನೆರೆಹೊರೆಯವರೊಂದಿಗೆ ಜಗಳವಾಡುತ್ತಿದ್ದರು. ನೆರೆಮನೆಯವರು ನಿರ್ಮಿಸುತ್ತಿರುವ ಮನೆ ಯೋಜನೆಯ ಲೋಪದೋಷದ ಬಗ್ಗೆ ಕುಲಕರ್ಣಿ ಅವರು ಮಹಾನಗರ ಪಾಲಿಕೆಯ ವಿರುದ್ಧ ದೂರು ನೀಡಿದ್ದರು” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತನಗೆ ಜೀವ ಭಯವಿದೆ ಎಂದು ಮಗಳ ಬಳಿ ಹೇಳಿದ್ದ ಕುಲಕರ್ಣಿ ಅವರಿಗೆ ಅವರ ಮಗಳು ಪೊಲೀಸ್ ದೂರು ದಾಖಲಿಸುವಂತೆ ಸಲಹೆ ನೀಡಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕುಲಕರ್ಣಿ ಅವರು ಪೊಲೀಸರಿಗೆ ದೂರು ನೀಡಿದ್ದರು ಮತ್ತು ತನ್ನ ನೆರೆ ಮನೆಯವರ ಸಹಚರರು ತನ್ನನ್ನು ಹಿಂಬಾಲಿಸುತ್ತಿದ್ದಾರೆ ಎಂದು ಹೇಳಿದ್ದರು ಎಂದು ಅಳಿಯ ಹೇಳಿದ್ದಾರೆ. ತನ್ನನ್ನು ಹಿಂಬಾಲಿಸುತ್ತಿದೆ ಎಂದು ಶಂಕಿಸಿ ವಾಹನಗಳ ಲೈಸೆನ್ಸ್ ಪ್ಲೇಟ್ ನಂಬರ್‌ಗಳ ಪಟ್ಟಿಯನ್ನೂ ಅವರು ನೀಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಮತ್ತೊಂದು ವಿವಾದಕ್ಕೆ ರಂಗಾಯಣ ನಿರ್ದೇಶಕರ ರೂಪುರೇಷೆ; ‘ಟಿಪ್ಪು’ ಕುರಿತ ನಾಟಕ ಪ್ರದರ್ಶನಕ್ಕೆ ಸಿದ್ಧ

“83 ವರ್ಷದ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದರು ಮತ್ತು ಕಾರು ಅವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ನಮಗೆ ವರದಿಯಾಗಿದೆ. ಇದು ಹಿಟ್ ಅಂಡ್ ರನ್ ಕೇಸ್ ಎಂದು ನಾವು ನಂಬಿದ್ದೆವು, ಆದರೆ ಈ ಬಗ್ಗೆ ನಾವು ಎಚ್ಚರಿಕೆಯಿಂದ ಪರಿಶೀಲಿಸಿದಾಗ, ಅದು ಉದ್ದೇಶಪೂರ್ವಕವಾಗಿ ನಡೆಸಿದ ಕೃತ್ಯದಂತೆ ಕಾಣುತ್ತದೆ. ಅವರು ರಸ್ತೆ ಬದಿಗೆ ಸರಿದರೂ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ಅದರ ಆಧಾರದ ಮೇಲೆ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಅವರು ನಿವೃತ್ತರಾಗಿ 23 ವರ್ಷಗಳಾಗಿದ್ದು, ಇದು ಯಾಕೆ ಸಂಭವಿಸಿತು ಎಂದು ನಮಗೆ ತಿಳಿದಿಲ್ಲ” ಎಂದು ಮೈಸೂರು ಪೊಲೀಸ್ ಕಮಿಷನರ್ ಚಂದ್ರಗುಪ್ತ ಹೇಳಿದ್ದಾರೆ.

ನರಸಿಂಹರಾಜ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರು (ಎಸಿಪಿ) ಪ್ರಕರಣದ ತನಿಖೆ ನಡೆಸುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ. ಕುಲಕರ್ಣಿ ಅವರಿಗೆ ಡಿಕ್ಕಿ ಹೊಡೆದ ವಾಹನಕ್ಕೆ ನಂಬರ್‌‌ ಪ್ಲೇಟ್‌‌ ಇರಲಿಲ್ಲ ಎಂದು ಆಯುಕ್ತ ಚಂದ್ರಗುಪ್ತ ತಿಳಿಸಿದ್ದಾರೆ.

1998 ರಲ್ಲಿ ಸಹಾಯಕ ನಿರ್ದೇಶಕರಾಗಿ ನಿವೃತ್ತರಾದ ಕುಲಕರ್ಣಿ ಅವರು ವಿವಿಧ ಹುದ್ದೆಗಳಲ್ಲಿ ಇಂಟೆಲಿಜೆನ್ಸ್ ಬ್ಯೂರೋದಲ್ಲಿ ಕೆಲಸ ಮಾಡಿದ್ದು, RAW ಮತ್ತು ವಿದೇಶಿ ಗುಪ್ತಚರ ಸಂಸ್ಥೆಯೊಂದಿಗೆ ಸಹ ಸೇವೆ ಸಲ್ಲಿಸಿದ್ದಾರೆ. ಅವರು ರಾಜತಾಂತ್ರಿಕ ಕಾರ್ಯಾಚರಣೆಗಳ ಭಾಗವಾಗಿದ್ದರು ಮತ್ತು ಪರವಾನಗಿ ಪಡೆದ ಪೈಲಟ್ ಆಗಿದ್ದರು.

ಇದನ್ನೂ ಓದಿ: ತವರು ರಾಜ್ಯಕ್ಕೆ ಮಲ್ಲಿಕಾರ್ಜುನ ಖರ್ಗೆ: ಭಾನುವಾರ ಕಾಂಗ್ರೆಸ್‌ನಿಂದ ಅದ್ದೂರಿ ಸ್ವಾಗತ

ಮೂರು ಪುಸ್ತಕಗಳ ಲೇಖಕರಾಗಿರುವ ಅವರು, ಗುಪ್ತಚರ ಸಂಸ್ಥೆಗೆ ಸಾಂವಿಧಾನಿಕ ಅನುಮತಿಯ ಕೊರತೆಯು ಲೆಕ್ಕಪರಿಶೋಧನೆ ಮತ್ತು ಸುಧಾರಣೆಯನ್ನು ತಡೆಯುತ್ತದೆ ಎಂದು ಕುಲಕರ್ಣಿ ಅವರು ಈ ಹಿಂದೆ ಕರ್ನಾಟಕ ಹೈಕೋರ್ಟ್‌ನಲ್ಲಿ ಇಂಟೆಲಿಜೆನ್ಸ್ ಬ್ಯೂರೋದ ಕಾನೂನು ಸ್ಥಾನಮಾನವನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸಲ್ಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...