Homeಮುಖಪುಟಇಡಬ್ಲ್ಯುಎಸ್ ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್!

ಇಡಬ್ಲ್ಯುಎಸ್ ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್!

- Advertisement -
- Advertisement -

ಬಡವರು ಅಥವಾ ಆರ್ಥಿಕವಾಗಿ ದುರ್ಬಲ ವಿಭಾಗ (EWS)ಗಳಿಗೆ ಕಾಲೇಜು ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ನೀಡಿರುವ 10% ಮೀಸಲಾತಿಯನ್ನು ಸುಪ್ರೀಂಕೋರ್ಟ್ ಸೋಮವಾರ ಬೆಂಬಲಿಸಿದೆ. ಇದು ತಾರತಮ್ಯವಲ್ಲ ಮತ್ತು ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ ಎಂದು ಅದು ತೀರ್ಪಿನಲ್ಲಿ ಹೇಳಿದೆ.

50% ಸೀಲಿಂಗ್ ಮಿತಿಯ ನಿಯಮವನ್ನು EWS ಮೀಸಲಾತಿ ಉಲ್ಲಂಘಿಸುವುದಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

EWS ಮೀಸಲಾತಿಯನ್ನು 2019 ರ ಸಾರ್ವತ್ರಿಕ ಚುನಾವಣೆಯ ಮೊದಲು ಪ್ರಾರಂಭಿಸಲಾಯಿತು ಮತ್ತು ಭಾರತೀಯ ಸಮಾಜದಲ್ಲಿ ಸಾಂಪ್ರದಾಯಿಕವಾಗಿ ಅಂಚಿನಲ್ಲಿರುವ ಸಮುದಾಯಗಳಿಗೆ ಪ್ರಯೋಜನಕಾರಿಯಾಗಲು ಇದನ್ನು ತರಲಾಗಿದೆ.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು! 

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ಚುನಾವಣೆಗಳಲ್ಲಿ ಆಡಳಿತಾರೂಢ ಬಿಜೆಪಿ ಸೋತ ಕೂಡಲೇ 103 ನೇ ಸಾಂವಿಧಾನಿಕ ತಿದ್ದುಪಡಿಯನ್ನು ಮಾಡಿದ ಒಕ್ಕೂಟ ಸರ್ಕಾರವು ಜನವರಿ 2019 ರಲ್ಲಿ ಈ ಕಾನೂನು ಅಂಗೀಕರಿಸಿತ್ತು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದ ಈ ಕಾನೂನನ್ನು ಪ್ರಶ್ನಿಸಿ ತಕ್ಷಣವೇ ಸುಪ್ರೀಂಕೋರ್ಟ್‌ನಲ್ಲಿ ದಾವೆ ಹೂಡಲಾಗಿತ್ತು.

1992 ರಲ್ಲಿ ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮೀಸಲಾತಿಯ 50% ದ ರಾಷ್ಟ್ರೀಯ ಮಿತಿಯನ್ನು ಈ ಮೀಸಲಾತಿ ದಾಟಬಹುದೆ ಮತ್ತು ಸಂವಿಧಾನದ “ಮೂಲ ರಚನೆ” ಯನ್ನು ಬದಲಾಯಿಸಿದ್ದು ಸರಿಯೆ ಎಂದು ಅರ್ಜಿಗಳು ಪ್ರಶ್ನಿಸಿದ್ದವು.

ಇದನ್ನೂ ಓದಿ: ಮೀಸಲಾತಿ ಹೆಚ್ಚಳ ಮತ್ತು ಬಿಜೆಪಿಯ ಎರಡು ನಾಲಗೆ

ಐವರು ನ್ಯಾಯಮೂರ್ತಿಗಳಲ್ಲಿ ನಾಳೆ ನಿವೃತ್ತರಾಗಲಿರುವ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮತ್ತು ನ್ಯಾಯಮೂರ್ತಿ ರವೀಂದ್ರ ಭಟ್‌‌ ಮಾತ್ರ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಆರ್ಥಿಕ ದುರ್ಬಲತೆ, ಆರ್ಥಿಕ ಹಿಂದುಳಿದಿರುವಿಕೆ ಸಂವಿಧಾನ ಈ ತಿದ್ದುಪಡಿಯ ಬೆನ್ನೆಲುಬಾಗಿದೆ. ಆದರೆ ಈ ತಿದ್ದುಪಡಿಯು ಸಾಂವಿಧಾನಿಕವಾಗಿ ಅಸಮರ್ಥನೀಯವಾಗಿದೆ. ಜೊತೆಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳು, ಇತರೆ ಹಿಂದುಳಿದ ವರ್ಗಗಳು (ಒಬಿಸಿ) ಯಂತಹ ವರ್ಗಗಳನ್ನು ಈ ಮೀಸಲಾತಿಯಿಂದ ಹೊರತುಪಡಿಸಿರುವುದು ಸಂವಿಧಾನಾತ್ಮಕವಾಗಿ ಅನುಮತಿಸಲಾಗುವುದಿಲ್ಲ” ಎಂದು ರವೀಂದ್ರ ಭಟ್‌‌ ಹೇಳಿದರು.

ಇದರ ಜೊತೆಗೆ ಜಸ್ಟಿಸ್ ಪಾರ್ದಿವಾಲ ಮತ್ತು ಜಸ್ಟಿಸ್ ತ್ರಿವೇದಿ ಅವರುಗಳು 75 ವರ್ಷಗಳು ಕಳೆದರೂ ಮೀಸಲಾತಿ ವ್ಯವಸ್ಥೆ ಮುಂದುವರೆದಿರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸೇರಿದಂತೆ ಬಹುತೇಕ ವಿರೋಧ ಪಕ್ಷಗಳು ಈ ಕಾನೂನನ್ನು ವಿರೋಧಿಸಲಿಲ್ಲ. ಆದರೆ ದೇಶದಲ್ಲೇ ಅತಿ ಹೆಚ್ಚು ಮೀಸಲಾತಿ ಹೊಂದಿರುವ ತಮಿಳುನಾಡು ಸೇರಿದಂತೆ ಒಟ್ಟು 40 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಆಲಿಸಿದೆ.

ಇದನ್ನೂ ಓದಿ: ಮುಂದಿನ ವರ್ಷದಿಂದ ವೈದ್ಯಕೀಯ ಕೋರ್ಸ್‌ಗಳ ಇಡಬ್ಲ್ಯೂಎಸ್‌ ಮೀಸಲಾತಿ ಮಾನದಂಡ ಬದಲು: ಕೇಂದ್ರ

ಈ ಪ್ರಕರಣವನ್ನು ಮೊದಲು ಮೂವರು ನ್ಯಾಯಾಧೀಶರ ಮುಂದೆ ತರಲಾಗಿತ್ತು. ಆದರೆ ಅವರು ಅದನ್ನು 2019 ರಲ್ಲಿ ಐದು ನ್ಯಾಯಾಧೀಶರ ದೊಡ್ಡ ಪೀಠಕ್ಕೆ ವರ್ಗಾಯಿಸಿದ್ದರು. ಕಳೆದ ಸೆಪ್ಟೆಂಬರ್‌ನಲ್ಲಿ ನ್ಯಾಯಾಲಯವು ಈ ಪ್ರಕರಣವನ್ನು ನಿರಂತರವಾಗಿ ಆರೂವರೆ ದಿನಗಳ ವಿಚಾರಣೆಯನ್ನು ನಡೆಸಿತು ಮತ್ತು ಅದರ ತೀರ್ಪನ್ನು ಕಾಯ್ದಿರಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಒಟ್ಟಿನಲ್ಲಿ, ಸಂವಿಧಾನದ ರಕ್ಷಣೆ ಮಾಡ್ತಾಇದ್ದೇವೆ ಎಂದು ಹೇಳಿಕೊಂಡು ಬಂದ ನ್ಯಾಯಲಯಾಗಳೇ ಸಂವಿಧಾನದ ಅಶಯಗಳನ್ನ ಗಾಳಿಗೆ ತೂರಿ ಅಸಂವಿಧಾನಕ ತೀರ್ಪು ನೀಡಿದೆ.

  2. EWS ಮೀಸಲಾತಿ, ಸುಪ್ರೀಂ ಕೋರ್ಟ್ 1992 ರಲ್ಲಿ ನಿಗದಿಪಡಿಸಿದ 50% ಮಿತಿ ಮೀರುವುದಿಲ್ಲ ಎಂಬುದು ಹೇಗೆ ಎಂದು ನನ್ನಂಥ ಪಾಮರರಿಗೆ ಅರ್ಥ ಆಗಲೇ ಇಲ್ಲ!

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...