Homeಮುಖಪುಟತಿರುಪತಿ ದೇವಸ್ಥಾನ: 12.75 ಟನ್‌ ಚಿನ್ನ; ₹16 ಸಾವಿರ ಕೋಟಿ ಠೇವಣಿ; ಒಟ್ಟು ₹2.5 ಲಕ್ಷ...

ತಿರುಪತಿ ದೇವಸ್ಥಾನ: 12.75 ಟನ್‌ ಚಿನ್ನ; ₹16 ಸಾವಿರ ಕೋಟಿ ಠೇವಣಿ; ಒಟ್ಟು ₹2.5 ಲಕ್ಷ ಕೋಟಿಗೂ ಅಧಿಕ ಮೌಲ್ಯದ ಆಸ್ತಿ!

- Advertisement -
- Advertisement -

ಆಂದ್ರಪ್ರದೇಶದ ತಿರುಪತಿಯಲ್ಲಿರುವ ಜಗತ್ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನದ ನಿವ್ವಳ ಮೌಲ್ಯ 2.5 ಲಕ್ಷ ಕೋಟಿ ರೂ. ಎಂದು ವರದಿಯಾಗಿದೆ. ಇದು ಐಟಿ ಸೇವಾ ಸಂಸ್ಥೆಯಾದ ವಿಪ್ರೋ, ಆಹಾರ ಮತ್ತು ಪಾನೀಯ ಕಂಪನಿ ನೆಸ್ಲೆ ಮತ್ತು ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಯಾದ ಆಯಿಲ್ ಆಂಡ್‌ ನೇಚರ್‌ ಗ್ಯಾಸ್‌‌ ಕಾರ್ಪೊರೇಷನ್ (ONGC) ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC)ನ ಮಾರುಕಟ್ಟೆ ಬಂಡವಾಳೀಕರಣಕ್ಕಿಂತ ಹೆಚ್ಚಿನ ಮೌಲ್ಯದ ಆಸ್ತಿಯಾಗಿದೆ.

ತಿರುಪತಿಯ ಪ್ರಧಾನ ದೇವರಿಗೆ ಸಮರ್ಪಿತವಾದ ದೇವಾಲಯದ ‘ತಿರುಮಲ ತಿರುಪತಿ ದೇವಸ್ಥಾನಂ’ ತನ್ನ ನಿವ್ವಳ ಮೌಲ್ಯವನ್ನು 1933 ರಲ್ಲಿ ಮೊದಲ ಬಾರಿಗೆ ಘೋಷಿಸಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇವಸ್ಥಾನದ ಆಸ್ತಿಯಲ್ಲಿ ಬ್ಯಾಂಕ್‌ಗಳಲ್ಲಿ 10.25 ಟನ್ ಚಿನ್ನದ ಠೇವಣಿ ಮತ್ತು 2.5 ಟನ್ ಚಿನ್ನಾಭರಣ ಇವೆ. ಸುಮಾರು 16 ಸಾವಿರ ಕೋಟಿ ರೂ. ಬ್ಯಾಂಕ್‌ಗಳಲ್ಲಿ ಠೇವಣಿ ಇದ್ದು, ದೇವಸ್ಥಾನಕ್ಕೆ ಭಾರತದಾದ್ಯಂತ 960 ಆಸ್ತಿಗಳು ಇವೆ. ಇವೆಲ್ಲದರ ಒಟ್ಟು ಮೌಲ್ಯ 2.5 ಲಕ್ಷ ಕೋಟಿ ರೂ.ಗೂ ಹೆಚ್ಚು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

ಪ್ರಸ್ತುತ ವ್ಯಾಪಾರಿ ಬೆಲೆಯಲ್ಲಿ ಹೇಳಬಹುದಾದರೆ, ತಿರುಪತಿ ದೇವಸ್ಥಾನದ ನಿವ್ವಳ ಮೌಲ್ಯವು ಭಾರತದ ಹಲವಾರು ದೊಡ್ಡ ಕಾರ್ಪೋರೇಟ್‌ ಕಂಪೆನಿಗಳಿಗಿಂತ ಹಚ್ಚಿನದ್ದಾಗಿದೆ ಎಂದು ಎನ್‌ಡಿಟಿವಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಶುಕ್ರವಾರದ ವಹಿವಾಟಿನ ಮುಕ್ತಾಯಕ್ಕೆ ಬೆಂಗಳೂರು ಮೂಲದ ವಿಪ್ರೋ 2.14 ಲಕ್ಷ ಕೋಟಿ ರೂ. ಗಳಷ್ಟು ಮಾರುಕಟ್ಟೆ ಮೌಲ್ಯವನ್ನು ಹೊಂದಿದ್ದು, ಅಲ್ಟ್ರಾಟೆಕ್ ಸಿಮೆಂಟ್ 1.99 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಮೌಲ್ಯವನ್ನು ಹೊಂದಿದೆ.

ಸ್ವಿಸ್ ಬಹುರಾಷ್ಟ್ರೀಯ ಆಹಾರ ಮತ್ತು ಪಾನೀಯದ ಪ್ರಮುಖ ಸಂಸ್ಥೆಯಾದ ನೆಸ್ಲೆಯ ಭಾರತದ ಘಟಕವು 1.96 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಮೌಲ್ಯವನ್ನು ಹೊಂದಿದ್ದು, ತಿರುಪತಿಯ ಆಸ್ತಿಗಿಂತ ಕಡಿಮೆ ಮೌಲ್ಯವನ್ನು ಹೊಂದಿದೆ.

ಇದನ್ನೂ ಓದಿ: ಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಯಾದ ಆಯಿಲ್ ಆಂಡ್‌ ನೇಚರ್‌ ಗ್ಯಾಸ್‌‌ ಕಾರ್ಪೊರೇಷನ್ (ONGC) ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC) ಸಹ ದೇವಾಲಯದ ಟ್ರಸ್ಟ್‌ಗಿಂತ ಕಡಿಮೆ ಮೌಲ್ಯವನ್ನು ಹೊಂದಿವೆ.

ದೇಶದಲ್ಲಿ ಕೇವಲ ಎರಡು ಡಜನ್ ಕಂಪನಿಗಳು ಮಾತ್ರ ದೇವಾಲಯದ ಟ್ರಸ್ಟ್‌ನ ಒಟ್ಟು ಮೌಲ್ಯಕ್ಕಿಂತ ಹೆಚ್ಚಿನ ಮಾರುಕಟ್ಟೆ ಮೌಲ್ಯವನ್ನು ಹೊಂದಿವೆ. ಇವುಗಳಲ್ಲಿ ಬಿಲಿಯನೇರ್ ಮುಖೇಶ್ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (17.53 ಲಕ್ಷ ಕೋಟಿ ರೂ.), ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ರೂ. 11.76 ಲಕ್ಷ ಕೋಟಿ), ಎಚ್‌ಡಿಎಫ್‌ಸಿ ಬ್ಯಾಂಕ್ (ರೂ. 8.34 ಲಕ್ಷ ಕೋಟಿ), ಇನ್ಫೋಸಿಸ್ (ರೂ. 6.37 ಲಕ್ಷ ಕೋಟಿ), ಐಸಿಐಸಿಐ ಬ್ಯಾಂಕ್ (ರೂ. 6.31 ಲಕ್ಷ ಕೋಟಿ), ಹಿಂದುಸ್ತಾನ್ ಯೂನಿಲಿವರ್ ಲಿಮಿಟೆಡ್ (5.92 ಲಕ್ಷ ಕೋಟಿ ರೂ.), ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (5.29 ಲಕ್ಷ ಕೋಟಿ ರೂ.), ಭಾರ್ತಿ ಏರ್‌ಟೆಲ್ (ರೂ. 4.54 ಲಕ್ಷ ಕೋಟಿ) ಮತ್ತು ಐಟಿಸಿ (ರೂ. 4.38 ಲಕ್ಷ ಕೋಟಿ) ಸೇರಿವೆ.

ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಮತ್ತೆ ಮತ್ತೆ ಶ್ರೀಮಂತವಾಗಿ ಬೆಳೆಯುತ್ತಿದ್ದು, ದೇವಸ್ಥಾನದಲ್ಲಿ ಭಕ್ತರು ನೀಡುವ ನಗದು ಮತ್ತು ಚಿನ್ನದ ಕಾಣಿಕೆಗಳು ಹೆಚ್ಚುತ್ತಲೇ ಇವೆ. ಬಡ್ಡಿದರಗಳ ಹೆಚ್ಚಳದ ದೃಷ್ಟಿಯಿಂದ ಬ್ಯಾಂಕ್‌ಗಳಲ್ಲಿನ ಸ್ಥಿರ ಠೇವಣಿಗಳು ಕೂಡಾ ಹೆಚ್ಚಿನ ಆದಾಯವನ್ನು ಗಳಿಸುತ್ತಿವೆ ಎಂದು ದೇವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ಜಾರಿಯಾಗದಿರಲು ‘ಉತ್ತರ ಭಾರತದ ಮನಸ್ಥಿತಿಯೆ’ ಕಾರಣ: ಶರದ್ ಪವಾರ್

ಟಿಟಿಡಿ ಒಡೆತನದ ಆಸ್ತಿಗಳಲ್ಲಿ ಭೂಮಿ, ಕಟ್ಟಡಗಳು, ಬ್ಯಾಂಕ್‌ಗಳಲ್ಲಿನ ನಗದು ಮತ್ತು ಚಿನ್ನದ ಠೇವಣಿಗಳು ಸೇರಿವೆ, ಇದನ್ನು ಭಕ್ತರು ದೇವಸ್ಥಾನಕ್ಕೆ ಕಾಣಿಕೆಯಾಗಿ ನೀಡುತ್ತಾರೆ.

ಭಕ್ತರಿಗೆ ಸೌಕರ್ಯಗಳನ್ನು ಒದಗಿಸುವ ಏಳು ಬೆಟ್ಟಗಳ ಮೇಲಿನ ಕಾಟೇಜ್‌ಗಳು ಮತ್ತು ಅತಿಥಿ ಗೃಹಗಳು ಸೇರಿದಂತೆ ಬೆಲೆಬಾಳುವ ಪುರಾತನ ಆಭರಣಗಳು ಮತ್ತು ಆಸ್ತಿಗಳಿಗೆ ಮೌಲ್ಯವನ್ನು ನಿಗದಿಪಡಿಸುವುದು ತಪ್ಪುದಾರಿಗೆಳೆಯುವಂತಿದೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ವಿಸ್ತಾರವಾದ ಏಳು ಬೆಟ್ಟಗಳನ್ನು ಭಕ್ತರು ಪವಿತ್ರ ಮತ್ತು ವೆಂಕಟೇಶ್ವರನ ವಾಸಸ್ಥಾನವೆಂದು ಪರಿಗಣಿಸುತ್ತಾರೆ. ಫೆಬ್ರವರಿಯಲ್ಲಿ ಮಂಡಿಸಿದ 2022-23ರ ಸುಮಾರು 3,100 ಕೋಟಿ ರೂ. ವಾರ್ಷಿಕ ಬಜೆಟ್‌ನಲ್ಲಿ, ಟಿಟಿಡಿ ಬ್ಯಾಂಕ್‌ಗಳಲ್ಲಿನ ನಗದು ಠೇವಣಿಗಳಿಂದ ಬಡ್ಡಿಯ ರೂಪದಲ್ಲಿ 668 ಕೋಟಿ ರೂ. ಗಿಂತ ಹೆಚ್ಚಿನ ಆದಾಯವನ್ನು ಯೋಜಿಸಿದೆ. ಅಲ್ಲದೆ, ಬೆಟ್ಟದ ದೇವಸ್ಥಾನದ ಹುಂಡಿಯಲ್ಲಿ ಸುಮಾರು 2.5 ಕೋಟಿ ಭಕ್ತರಿಂದ ನಗದು ಕಾಣಿಕೆ ರೂಪದಲ್ಲಿ 1,000 ಕೋಟಿ ರೂ. ಆದಾಯ ಬರಲಿದೆ.

ಇದನ್ನೂ ಓದಿ: ಮೀಸಲಾತಿ ಹೆಚ್ಚಳ ಮತ್ತು ಬಿಜೆಪಿಯ ಎರಡು ನಾಲಗೆ

ಟಿಟಿಡಿ ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ, ಒಡಿಶಾ, ಹರಿಯಾಣ, ಮಹಾರಾಷ್ಟ್ರ ಮತ್ತು ನವದೆಹಲಿಯಲ್ಲಿ ಹೆಚ್ಚಿನ ಸಂಖ್ಯೆಯ ದೇವಾಲಯಗಳನ್ನು ನಿರ್ವಹಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...