Homeಕರ್ನಾಟಕಜಾರ್ಖಂಡ್ ಸಿಎಂ ವಿರುದ್ಧ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ ಪಿಐಎಲ್‌‌ಗೆ ಸುಪ್ರೀಂಕೋರ್ಟ್ ತಡೆ

ಜಾರ್ಖಂಡ್ ಸಿಎಂ ವಿರುದ್ಧ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ ಪಿಐಎಲ್‌‌ಗೆ ಸುಪ್ರೀಂಕೋರ್ಟ್ ತಡೆ

- Advertisement -
- Advertisement -

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್‌) ಪ್ರಶ್ನಿಸಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್‌ ಸಲ್ಲಿಸಿದ ಮನವಿಯನ್ನು ಸುಪ್ರೀಂಕೋರ್ಟ್ ಅಂಗೀಕರಿಸಿದೆ.

ಗಣಿಗಾರಿಕೆ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸೋರೆನ್ ವಿರುದ್ಧ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಹೈಕೋರ್ಟ್ ನಡೆಸಿತ್ತು. ಸೊರೆನ್ ಮನವಿಯನ್ನು ಅಂಗೀಕರಿಸಿರುವ ಸರ್ವೋಚ್ಚ ನ್ಯಾಯಾಲಯ, ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೇಮಂತ್ ಸೊರೆನ್ ಅವರು ಟ್ವಿಟರ್‌ನಲ್ಲಿ “ಸತ್ಯಮೇವ ಜಯತೇ!” ಎಂಬ ಸಂದೇಶದೊಂದಿಗೆ ಸುಪ್ರೀಂ ಕೋರ್ಟ್‌ನ ಆದೇಶವನ್ನು ಹಂಚಿಕೊಂಡಿದ್ದಾರೆ.

2021ರಲ್ಲಿ ತಮಗೆ ತಾವೇ ಗಣಿ ಗುತ್ತಿಗೆ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ದೂರು ನೀಡಿತ್ತು. ಸೋರೆನ್‌ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಆಗ್ರಹಿಸಲಾಗಿತ್ತು. ಚುನಾವಣಾ ಆಯೋಗವು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ರಮೇಶ್ ಬೈಸ್‌ಗೆ ಶಿಫಾರಸು ಮಾಡಿತ್ತು.

ಜುಲೈನಲ್ಲಿ ದಾಳಿ ನಡೆಸಿದ ಜಾರಿ ನಿರ್ದೇಶನಾಲಯವು ಗಣಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋರೆನ್‌ ಅವರ ಸಹಾಯಕ ಪಂಕಜ್ ಮಿಶ್ರಾ ಮತ್ತು ಇತರ ಇಬ್ಬರನ್ನು ಬಂಧಿಸಿತ್ತು. ಮಿಶ್ರಾ ಅವರ ಬ್ಯಾಂಕ್ ಖಾತೆಗಳಿಂದ ₹ 11.88 ಕೋಟಿ ವಶಪಡಿಸಿಕೊಂಡ ನಂತರ, ಮಿಶ್ರಾ ಅವರ ಮನೆಯಿಂದ ₹ 5.34 ಕೋಟಿ “ಲೆಕ್ಕ ರಹಿತ” ನಗದು ಪತ್ತೆಯಾಗಿದೆ ಎಂದು ಸಂಸ್ಥೆ ಹೇಳಿಕೊಂಡಿತ್ತು. ಮೂರು ತಿಂಗಳ ಹಿಂದೆ ಸೋರೆನ್ ಅವರ ಪತ್ರಿಕಾ ಸಲಹೆಗಾರ ಅಭಿಷೇಕ್ ಪ್ರಸಾದ್ ಅವರನ್ನೂ ಇ.ಡಿ. ಪ್ರಶ್ನಿಸಿತ್ತು.

ಮುಖ್ಯ ಆರೋಪಿ ಮಿಶ್ರಾ ಅವರ ಮನೆಯಿಂದ ಹೇಮಂತ್ ಸೊರೆನ್ ಅವರ ಪಾಸ್‌ಬುಕ್ ಮತ್ತು ಅವರು ಸಹಿ ಮಾಡಿದ ಕೆಲವು ಚೆಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇ.ಡಿ. ಹೇಳಿರುವುದಾಗಿ ವರದಿಯಾಗಿತ್ತು.

ಹೇಮಂತ್ ಸೊರೆನ್ ಅವರ ರಾಜಕೀಯ ಪ್ರತಿನಿಧಿಯಾಗಿರುವ ಪಂಕಜ್ ಮಿಶ್ರಾ ಅವರು ತಮ್ಮ ಸಹಚರರ ಮೂಲಕ ಮುಖ್ಯಮಂತ್ರಿಗಳ ವಿಧಾನಸಭಾ ಕ್ಷೇತ್ರವಾದ ಬರ್ಹೈತ್‌ನಲ್ಲಿ ಅಕ್ರಮ ಗಣಿಗಾರಿಕೆ ವ್ಯವಹಾರವನ್ನು “ನಿಯಂತ್ರಿಸುತ್ತಾರೆ” ಎಂದು ಇಡಿ ತನ್ನ ಚಾರ್ಜ್‌ಶೀಟ್‌ನಲ್ಲಿ ಹೇಳಿಕೊಂಡಿದೆ.

ಇದನ್ನೂ ಓದಿರಿ: ಇಡಬ್ಲ್ಯುಎಸ್ ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್!

ಸೊರೆನ್ ಅವರು ಆರೋಪಗಳನ್ನು ತಳ್ಳಿಹಾಕಿದ್ದಾರೆ ಮತ್ತು ಇತ್ತೀಚಿನ ಇಡಿ ಸಮನ್ಸ್ ಅನ್ನು “ಬುಡಕಟ್ಟು ಮುಖ್ಯಮಂತ್ರಿಗೆ ಕಿರುಕುಳ ನೀಡುವ ಸಂಚಿನ ಭಾಗ” ಎಂದು ಕರೆದಿದ್ದಾರೆ.

“ನಾನು ತಪ್ಪಿತಸ್ಥನಾಗಿದ್ದರೆ, ನೀವು ನನ್ನನ್ನು ಏಕೆ ಪ್ರಶ್ನಿಸುತ್ತಿದ್ದೀರಿ? ನಿಮಗೆ ಸಾಧ್ಯವಾದರೆ ಬಂದು ನನ್ನನ್ನು ಬಂಧಿಸಿ” ಎಂದು ಅವರು ಕೇಂದ್ರ ತನಿಖಾ ಸಂಸ್ಥೆಗೆ ತಿಳಿಸಿದ್ದರು.

“ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಜಾರ್ಖಂಡ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯು ಕೇಂದ್ರೀಯ ಸಂಸ್ಥೆಗಳನ್ನು ಕಳಹಿಸಿದೆ. ನಾನು ಇ.ಡಿ. ಮತ್ತು ಸಿಬಿಐಗೆ ಹೆದರುವುದಿಲ್ಲ. ಇದು ಸಾಂವಿಧಾನಿಕ ಸಂಸ್ಥೆಗಳನ್ನು ವಿರೋಧಿಸುವ ಯಾರೊಬ್ಬರ ಧ್ವನಿಯನ್ನು ಹತ್ತಿಕ್ಕಲು ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗವಾಗಿದೆ” ಎಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಕಳೆದ ವಾರ ಸೊರೆನ್ ಭಾಷಣ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...