HomeಮುಖಪುಟEWS: ಸಾಮಾಜಿಕ ನ್ಯಾಯಕ್ಕಾಗಿ ನಡೆದ ಶತಮಾನದ ಹೋರಾಟಕ್ಕೆ ಹಿನ್ನಡೆ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

EWS: ಸಾಮಾಜಿಕ ನ್ಯಾಯಕ್ಕಾಗಿ ನಡೆದ ಶತಮಾನದ ಹೋರಾಟಕ್ಕೆ ಹಿನ್ನಡೆ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

- Advertisement -
- Advertisement -

ಆರ್ಥಿಕವಾಗಿ ಹಿಂದುಳಿದ ವರ್ಗ(ಇಡಬ್ಲ್ಯೂಎಸ್‌) ಗಳಿಗೆ ಒಕ್ಕೂಟ ಸರ್ಕಾರ ನೀಡಿರುವ 10% ಮೀಸಲಾತಿಯನ್ನು ಸುಪ್ರಿಂಕೋರ್ಟ್‌ ಸೋಮವಾರ ಎತ್ತಿ ಹಿಡಿದಿದೆ. ಇದನ್ನು ವಿರೋಧಿಸಿರುವ ತಮಿಳುನಾಡು ಮುಖ್ಯಮಂತ್ರಿ ಇಂದಿನ ತೀರ್ಪು ಸಾಮಾಜಿಕ ನ್ಯಾಯಕ್ಕಾಗಿ ನಡೆದ ಶತಮಾನದ ಹೋರಾಟಕ್ಕೆ ಹಿನ್ನಡೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮಿಳುನಾಡು ಸರ್ಕಾರ ಕೂಡಾ ಇಡಬ್ಲ್ಯೂಎಸ್‌‌ಗಳಿಗೆ 10% ಮೀಸಲಾತಿ ವಿರೋಧಿಸಿ ಸುಪ್ರಿಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸುಪ್ರೀಂಕೋರ್ಟ್‌ ತಮಿಳುನಾಡು ಸೇರಿದಂತೆ ದೇಶದಾದ್ಯಂತ ದಾಖಲಿಸಲಾದ ಒಟ್ಟು 40 ಅರ್ಜಿಗಳನ್ನು ಆಲಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋಮವಾರ ತೀರ್ಪು ಪ್ರಕಟಿಸಿರುವ ಸುಪ್ರೀಂಕೋರ್ಟ್‌, “ಇಡಬ್ಲ್ಯೂಎಸ್‌‌ 10% ಮೀಸಲಾತಿ ತಾರತಮ್ಯವಲ್ಲ ಮತ್ತು ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. 50% ಸೀಲಿಂಗ್ ಮಿತಿಯ ನಿಯಮವನ್ನು ಉಲ್ಲಂಘಿಸುವುದಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ: ಇಡಬ್ಲ್ಯುಎಸ್ ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್!

ಐವರು ನ್ಯಾಯಮೂರ್ತಿಗಳಲ್ಲಿ ನಾಳೆ ನಿವೃತ್ತರಾಗಲಿರುವ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮತ್ತು ನ್ಯಾಯಮೂರ್ತಿ ರವೀಂದ್ರ ಭಟ್‌‌ ಮಾತ್ರ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಆರ್ಥಿಕ ದುರ್ಬಲತೆ, ಆರ್ಥಿಕ ಹಿಂದುಳಿದಿರುವಿಕೆ ಸಂವಿಧಾನ ಈ ತಿದ್ದುಪಡಿಯ ಬೆನ್ನೆಲುಬಾಗಿದೆ. ಆದರೆ ಈ ತಿದ್ದುಪಡಿಯು ಸಾಂವಿಧಾನಿಕವಾಗಿ ಅಸಮರ್ಥನೀಯವಾಗಿದೆ. ಜೊತೆಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳು, ಇತರೆ ಹಿಂದುಳಿದ ವರ್ಗಗಳು (ಒಬಿಸಿ) ಯಂತಹ ವರ್ಗಗಳನ್ನು ಈ ಮೀಸಲಾತಿಯಿಂದ ಹೊರತುಪಡಿಸಿರುವುದು ಸಂವಿಧಾನಾತ್ಮಕವಾಗಿ ಅನುಮತಿಸಲಾಗುವುದಿಲ್ಲ” ಎಂದು ರವೀಂದ್ರ ಭಟ್‌‌ ಹೇಳಿದ್ದಾರೆ.

ಇಡಬ್ಲ್ಯೂಎಸ್‌ ಮೀಸಲಾತಿಯನ್ನು ವಿರೋಧಿಸಿ ಆರಂಭದಿಂದಲೂ ಹೋರಾಟ ನಡೆಸುತ್ತಲೆ ಬಂದಿರುವ ಚಿಂತಕ ಶ್ರೀಪಾದ ಭಟ್‌‌ ಅವರು, ಸುಪ್ರಿಂಕೋರ್ಟ್‌ನ ತೀರ್ಪು ನಿರಾಶೆದಾಯಕವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಈ ವಿಚಾರವನ್ನು ಆರಂಭದಿಂದಲೂ ಗಂಭೀರವಾಗಿ ತೆಗೆದುಕೊಂಡು ಹೋರಾಟ ರೂಪಿಸದ ಸಾಮಾಜಿಕ ಸಂಘಟನೆಗಳ ಬಗ್ಗೆಯೂ ನನಗೆ ನಿರಾಸೆಯಿದೆ” ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

ನಾನುಗೌರಿ.ಕಾಂ ಜೊತೆಗೆ ಮಾತನಾಡಿ ಅವರು, “ಬಹಳ ಮುಖ್ಯವಾಗಿ ನ್ಯಾಯಾಂಗದಲ್ಲಿ ಪ್ರಾತಿನಿಧ್ಯವಿಲ್ಲದಿರುವುದು ಕೂಡಾ ಇಂತಹ ತೀರ್ಪಿಗೆ ಕಾರಣವಾಗುತ್ತದೆ. ಮುಸ್ಲಿಮರ ಪ್ರಾತಿನಿಧ್ಯವಿಲ್ಲ ಎಂದರೆ ಅವರ ಪರವಾಗಿ ತೀರ್ಪು ಬರುವುದಿಲ್ಲ. ದಲಿತರ ಪ್ರಾತಿನಿಧ್ಯವಿಲ್ಲ ಎಂದರೆ ದಲಿತರ ಪರವಾಗಿ ತೀರ್ಪು ಬರುವುದಿಲ್ಲ. ಹಾಗೆಂದ ಮಾತ್ರಕ್ಕೆ ಪ್ರಾತಿನಿಧ್ಯ ಇದ್ದ ಮಾತ್ರಕ್ಕೆ ಆಯಾ ಸಮುದಾಯದ ಪರವಾಗಿ ತೀರ್ಪು ನೀಡುತ್ತಾರೆ ಎಂದೇನೂ ಇಲ್ಲ. ಆದರೆ ಆಯಾ ಸಮುದಾಯದ ಪ್ರಾತಿನಿಧ್ಯ ಎಂಬುವುದು ಮೂಲಭೂತವಾದ ವಿಚಾರವಾಗಿದೆ” ಎಂದು ಶ್ರೀಪಾದ ಭಟ್ ಅವರು ಹೇಳುತ್ತಾರೆ.

“ನ್ಯಾಯಾಲಯದಲ್ಲಿ ಕೂತಿರುವ ನ್ಯಾಯಮೂರ್ತಿಗಳು ಕೂಡಾ ನಮ್ಮ ತರ ಮನುಷ್ಯರೆ ಆಗಿದ್ದಾರೆ. ಅವರು ದಿನನಿತ್ಯದ ವಿದ್ಯಾಮಾನದಿಂದ ಪ್ರಭಾವಿತರಾಗಿ ತೀರ್ಪು ನೀಡುತ್ತಾ ಇರುತ್ತಾರೆ. ಆರಂಭದಿಂದಲೂ ಈ ಬಗ್ಗೆ ಹೋರಾಟವೆ ಇಲ್ಲದ್ದರಿಂದ ಅವರು ಕೂಡಾ ಇದರ ಬಗ್ಗೆ ಅಷ್ಟೆನೂ ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಒಂದು ವೇಳೆ ಹೋರಾಟಗಳು ಆಗುತ್ತಿದ್ದರೆ, ಅವರು ಕೂಡಾ ಇದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿದ್ದರು. ಒಟ್ಟಿನಲ್ಲಿ ಮೀಸಲಾತಿ ಏನಕ್ಕೆ ಬೇಕು ಎಂದು ಕೇಳುತ್ತಿದ್ದವರಿಗೆ ಮೀಸಲಾತಿ ಸಿಕ್ಕಿದೆ” ಎಂದು ಶ್ರೀಪಾದ ಭಟ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

“10% ಮೀಸಲಾತಿ ಬಗ್ಗೆ ದೊಡ್ಡ ಮಟ್ಟದ ಚರ್ಚೆ ಆಗಿಲ್ಲ. ಸಾಮಾಜಿಕ ಸಂಘಟನೆಗಳು ಕೂಡಾ ಇವುಗಳನ್ನು ಹಿಡಿದು ಹೋರಾಟ ರೂಪಿಸಿಲ್ಲ. ಸಂಸತ್ತಿನಲ್ಲಿ ಕೂಡಾ ಯಾವ ಚರ್ಚೆಯೂ ಆಗದೆ ಇವುಗಳನ್ನು ಪಾಸ್ ಮಾಡಲಾಗಿತ್ತು. ನ್ಯಾಯಾಂಗವು ಸಂವಿಧಾನಕ್ಕಿಂತ ದೊಡ್ಡದಲ್ಲ. ನ್ಯಾಯಾಂಗದಲ್ಲಿ ಇರುವ ಕಾನೂನು ಪರಿಣಿತರು, ಸಾಮಾಜಿಕ ಸಂಘಟನೆಗಳು, ಹೋರಾಟಗಾರರು ಸೇರಿಕೊಂಡು ಒಂದು ತಂಡ ರಚನೆಯಾಗಿ ಇವುಗಳ ಬಗ್ಗೆ ಚರ್ಚೆ ಮಾಡಬೇಕು. ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಈ ತೀರ್ಪು ನೀಡಿರುವುದರಿಂದ ಇದನ್ನು ಮೀರಿ ಹೇಗೆ ಹೋರಾಟ ರೂಪಿಸಬೇಕು ಎಂಬ ಬಗ್ಗೆ ಚರ್ಚೆ ನಡೆಯಬೇಕು” ಎಂದು ಶ್ರೀಪಾದ ಭಟ್ ಹೇಳಿದರು.

ಇದನ್ನೂ ಓದಿ: ಮೀಸಲಾತಿ ಹೆಚ್ಚಳ ಮತ್ತು ಬಿಜೆಪಿಯ ಎರಡು ನಾಲಗೆ

ಈ ಪ್ರಕರಣವನ್ನು ಮೊದಲು ಮೂವರು ನ್ಯಾಯಾಧೀಶರ ಮುಂದೆ ತರಲಾಗಿತ್ತು. ಆದರೆ ಅವರು ಅದನ್ನು 2019 ರಲ್ಲಿ ಐದು ನ್ಯಾಯಾಧೀಶರ ದೊಡ್ಡ ಪೀಠಕ್ಕೆ ವರ್ಗಾಯಿಸಿದ್ದರು. ಕಳೆದ ಸೆಪ್ಟೆಂಬರ್‌ನಲ್ಲಿ ನ್ಯಾಯಾಲಯವು ಈ ಪ್ರಕರಣವನ್ನು ನಿರಂತರವಾಗಿ ಆರೂವರೆ ದಿನಗಳ ವಿಚಾರಣೆಯನ್ನು ನಡೆಸಿತು ಮತ್ತು ಅದರ ತೀರ್ಪನ್ನು ಕಾಯ್ದಿರಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...