Homeಅಂಕಣಗಳುರಂಜಿಸಿ ವಂಚಿಸುವ ಕಾಂತಾರ

ರಂಜಿಸಿ ವಂಚಿಸುವ ಕಾಂತಾರ

- Advertisement -
- Advertisement -

ಚಂಡಮಾರುತ, ಭೂಕಂಪ, ಪ್ರವಾಹ ಇತ್ಯಾದಿ ನೈಸರ್ಗಿಕ ದುರಂತಗಳಂತೆಯೇ ಬಿಜೆಪಿ ಸರಕಾರದಲ್ಲಿ ನಡೆದ ನೋಟುಬ್ಯಾನು, ಜಿಎಸ್‌ಟಿ, ಕೃಷಿಕಾಯ್ದೆಗಳಿಂದಾಗಿರಬಹುದಾದ ಅನಾಹುತಗಳನ್ನು ದಾಖಲಿಸುವ ಬದಲು, ಮಾಧ್ಯಮದವರು ಚೀನಾದಲ್ಲಿ ಏನಾಗಿದೆ ಆಫ್ಘಾನಿನ ಕತೆಯೇನು, ಪಾಕಿಸ್ತಾನ ಉಳಿಯುವುದೆ, ಶ್ರೀಲಂಕಾದಲ್ಲಿ ಅರಮನೆಗೇ ನುಗ್ಗಿ ಆಹಾರ ಹೊತ್ತುಕೊಂಡು ಹೋಗುತ್ತಿದ್ದಾರೆ ಎಂಬಿತ್ಯಾದಿಯಾಗಿ ಹುಡುಕುತ್ತಾ ಕುಳಿತಿರಬೇಕಾದರೆ ಹಸಿವಿನ ವಿಷಯದಲ್ಲಿ ನಮ್ಮ ಸುತ್ತಮುತ್ತಲ ದೇಶಗಳನ್ನ ಭಾರತ ಹಿಂದಿಕ್ಕಿದೆಯಂತಲ್ಲಾ. ಈ ಬಗ್ಗೆ ಮಾಧ್ಯಮದವರನ್ನ ಕೇಳಿದರೆ, ಅದೆಲ್ಲಾ ಕಾಂಗ್ರೆಸ್ಸಿಗರು ಹರಡುತ್ತಿರುವ ಸುಳ್ಳು ಸುದ್ದಿ; ಈಗ ನಮ್ಮನ್ನೇ ನೋಡಿ, ದಿನಬೆಳಗಾಯ್ತೆಂದರೆ ಯಾರಾದರೂ ಕಾಫಿ, ತಿಂಡಿ ಕೊಡಿಸುವವರು ಸಿಗುತ್ತಾರ ಎಂದು ಹುಡುಕುತ್ತಿದ್ದೆವು. ಮಧ್ಯಾಹ್ನದ ಊಟಕ್ಕೂ ಅದೇ ಸ್ಥಿತಿಯಿತ್ತು. ಸಾಯಂಕಾಲಕ್ಕೆ ಯಾರಾದರೂ ಪಾರ್ಟಿಗೆ ಕರೆಯುತ್ತಿದ್ದರು. ಈಗ ನಾವೇ ಕರೆಯುತ್ತೇವೆ. ಅಲ್ಲದೆ ಅವರವರ ಮನೆಯವರೆಗೂ ಬಿಟ್ಟುಕೊಡುವ ವಾಹನವೂ ನಮ್ಮಲ್ಲಿದೆ. ನಾವೇ ಹೀಗೆ ಸುಧಾರಿಸುತ್ತಿರಬೇಕಾದರೆ, ಇನ್ನು ನಮ್ಮ ದೇಶದ ಜನ ಹಸಿದು ಮಲಗುತ್ತಾರೆಂಬುದು ಹಸಿಸುಳ್ಳು ಎಂದು ಮಾರಿಕೊಂಡ ಮಾಧ್ಯಮದವರು ಬೊಮ್ಮಾಯಿ ಕೊಟ್ಟ ಗಿಫ್ಟನ್ನು ಜೋಪಾನವಾಗಿ ಮನೆಗೆ ತೆಗೆದುಕೊಂಡು ಹೋದರಂತಲ್ಲಾ, ಥೂತ್ತೇರಿ.

******

ಒಂದಲ್ಲಾ ಒಂದು ದಿನ ಶುದ್ಧ ಸಾಹಿತ್ಯದ ಕಡೆಗೆ ಸಾಹಿತಿ ತಿರುಗಲೇಬೇಕೆಂದು ನಮ್ಮ ಸಂತೆಶಿವರದ ಭೈರಪ್ಪ ಹಾಸನಕ್ಕೆ ಬಂದು ಭೈರಿಗೆ ಹಿಡಿದು ಹೋಗಿದ್ದಾರಲ್ಲಾ! ಸದರಿ ಸಾಹಿತಿಗೆ ಈ ಜ್ಞಾನೋದಯ ತಡವಾಗಿ ಸಂಭವಿಸಿದೆ. ಭೈರಪ್ಪನವರು ಧರ್ಮಶ್ರೀ, ದಾಟು, ಆವರಣ ಇತ್ಯಾದಿ ಶುದ್ಧವಲ್ಲದ ಸಾಹಿತ್ಯ ರಚಿಸಿದ ಮೇಲೆ ಕಡೆಗೂ ಶುದ್ಧ ಸಾಹಿತ್ಯದ ಬಗ್ಗೆ ಹಲುಬಿದ್ದಾರೆ. ಪರಂಪರೆಯ ಹಾಳುಗುಡಿಯಲ್ಲೇ ಕುಳಿತು ರಿಮ್ಮುಗಟ್ಟಲೆ ಬರೆದ ಭೈರಪ್ಪನವರಿಗೆ ಆಧುನಿಕತೆ ಚಿಂತನೆಯ ಸಾಹಿತಿಗಳನ್ನು ಕಂಡರಾಗುವುದಿಲ್ಲ. ಅವರೆಲ್ಲಾ ವಿಜೃಂಭಿಸುತ್ತಿದ್ದ ಕಾಲದಲ್ಲಿ ಕೀಳರಿಮೆಯಿಂದ ಹಿಂದೂ ಧರ್ಮದ ಕಗ್ಗ ಹೊಸೆಯುತ್ತಿದ್ದ ಭೈರಣ್ಣ ಅವರೆಲ್ಲಾ ಕಾಲವಾದ ನಂತರ ಅವರ ಸಾಹಿತ್ಯವನ್ನು ಅಣಕಿಸುತ್ತಿದ್ದಾರೆ. ಸುದೈವದಿಂದ ಅವರೆಲ್ಲಾ ಭೈರಪ್ಪನ ಸಾಹಿತ್ಯ ಅಂದರೆ ಏನು ಎಂದು ದಾಖಲಿಸಿ ಹೋಗಿದ್ದಾರೆ. ಅವು ನೆನಪಿಗೆ ಬಂದಾಗಲೆಲ್ಲಾ ಆಧುನಿಕ ಸಾಹಿತಿಗಳು ಮತ್ತು ಕವಿಗಳನ್ನ ಟೀಕಿಸುತ್ತಲೇ ಬರುತ್ತಿದ್ದಾರಲ್ಲಾ, ಥೂತ್ತೇರಿ.

ಇದನ್ನೂ ಓದಿ: ಸಿನಿಮಾ, ಮಿಥ್ ಮತ್ತು ರಾಜಕೀಯ; ಕಾಂತಾರ ಮತ್ತದರ ಯಶಸ್ಸಿನ ಸುತ್ತ…

******

ಭೈರಪ್ಪನವರ ಬರವಣಿಗೆಯ ಬೆಲೆ ಕಟ್ಟಿದ ಯು.ಆರ್ ಅನಂತಮೂರ್ತಿಯವರು ಭೈರಪ್ಪ ರಂಜಿಸಿ ವಂಚಿಸುವ ಲೇಖಕ ಎಂದು ಸಾಕ್ಷಿಸಮೇತ ತೋರಿ ಹೋಗಿದ್ದರು. ಈ ವ್ಯಾಖ್ಯಾನ ಕಾಂತಾರ ಎಂಬ ಕಂತೆ ಪುರಾಣದ ಸಿನಿಮಾ ನೋಡುವಾಗ ಜ್ಞಾಪಕಕ್ಕೆ ಬಂತಲ್ಲಾ. ಕಾಂತಾರದ ನಿರ್ದೇಶಕ ಜಗ್ಗೇಶ್ ಚೇಷ್ಟೆಗಳನ್ನು ಅನುಕರಿಸಿ ಮೇಲೆ ಬಂದವರು. ಹಾಗೆಯೇ ಜನ ಹಗುರವಾಗಿ ನಗುವ ದೃಶ್ಯಗಳನ್ನು ತೆಗೆದು ತೋರಿದವರು. ಹೀಗೆ ತೋರುತ್ತ ಬಂದ ಆತನೊಳಗೆ ಅಮಾನುಷತೆ ಅಡಗಿರುವುದು ಅವರಿಗೇ ಗೊತ್ತಿಲ್ಲ. ಉಬ್ಬುಹಲ್ಲಿರುವ ಪಾತ್ರವೊಂದನ್ನು ಸೃಷ್ಠಿ ಮಾಡಿ ಆಡಿಕೊಳ್ಳುವ ಈತ ಜನರನ್ನು ನಗಿಸುವ ಬರದಲ್ಲಿ ಎಂತಹ ಹೀನ ಕೆಲಸ ಮಾಡುತ್ತೇನೆಂದು ಗ್ರಹಿಸಿದಂತೆ ಕಾಣುವುದಿಲ್ಲ. ಹಾಗೇ ನೋಡಿದರೆ ದಕ್ಷಿಣ ಕನ್ನಡದ ಯಕ್ಷಗಾನ ಯಕ್ಕುಟ್ಟಿ ಹೋಗಿ ಬಹಳ ದಿನಗಳಾಗಿವೆ. ಕಪ್ಪು ಬಣ್ಣ ಬಳಿದ ಪಾತ್ರ ತಂದು ನಿಲ್ಲಿಸಿಕೊಂಡು ಆಡಿಕೊಳ್ಳುವುದು, ಸಾಬರನ್ನ ಅಣಕಿಸುವುದು ಅದ್ಭುತ ಕಲೆಯಾದ ಯಕ್ಷಗಾನದೊಳಕ್ಕೆ ತಂದು ಬಹಳ ದಿನಗಳಾಗಿವೆ. ಮನುಷ್ಯನ ಆಕಾರವನ್ನ ಆಡಿಕೊಳ್ಳುವುದು, ಪುರೋಹಿತರ ಶ್ರೇಷ್ಠತೆ ಮೆರೆಯುವುದು ಇವೆಲ್ಲಾ ಸಾಮಾನ್ಯ ಸಂಗತಿಗಳಾಗಿವೆ. ಇಂತಹ ಸಮಯದಲ್ಲಿ ಭೂತ, ಕೋಲ, ಪಂಜುರ್ಲಿ ಎಂದುಕೊಂಡು ಮನಸ್ಸಿನ ವಿಕಾರಗಳನ್ನು ಮೆರೆಸುತ್ತ, ಅವುಗಳನ್ನು ದೈವೀಕರಿಸಿ ನಿಂದಿಸಿದವರು ರಕ್ತ ಕಾರಿಕೊಂಡು ಸಾಯುತ್ತಾರೆಂದು ನಂಬಿಸಲು ಹೊರಟಿರುವುದು ಒಂದು ಸಮೂಹದ ತಲೆ ಯಕ್ಕುಟ್ಟಿ ಹೋಗಿರುವುದರ ಸೂಚನೆಯಂತಲ್ಲಾ, ಥೂತ್ತೇರಿ.

******

ಗುಜರಾತಿನ ಮೋರ್ಬಿ ಜಿಲ್ಲೆಯ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ತೂಗು ಸೇತುವೆ ಕುಸಿದುಬಿದ್ದು 135 ಜನ ಸಾವಿಗೀಡಾಗಿದ್ದಾರೆ. ಸೇತುವೆ ಕುಸಿಯುವುದು, ಜನರ ಆಕ್ರಂದನ, ಅಸಹಾಯಕರಾಗಿ ಅಸುನೀಗುವುದು ಇವೆಲ್ಲಾ ಬದುಕಿರುವವರನ್ನ ಕಾಡುವ ಸಂಗತಿಗಳು. ಈ ಸೇತುವೆ ದುರಸ್ತಿಗೊಂಡು ಉದ್ಘಾಟನೆಗೊಂಡ ನಾಲ್ಕೇ ದಿನದಲ್ಲಿ ಕುಸಿದುಬಿದ್ದು 135 ಜನ ಸತ್ತಿದ್ದಾರೆ. ಜನ ಸತ್ತಿದ್ದಕ್ಕೆ ಮೋದಿ ಸರ್ಕಾರ ಇಲ್ಲಿಯವರೆಗೆ ತಮ್ಮ ತವರು ರಾಜ್ಯದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿಲ್ಲ. ಕ್ರಮವಂತೂ ದೂರವೇ ಹೋಯ್ತು. ಹಿಂದೆ ಅವರ ಮುಖ್ಯಮಂತ್ರಿ ಅಧಿಕಾರಾವಧಿಯಲ್ಲಿ ಗುಜರಾತಿನಲ್ಲಿ ಮೂರ್ನಾಕು ದಿನದಲ್ಲಿ ಮೂರು ಸಾವಿರ ಜನ ಸತ್ತಾಗ ಅದು ಅವರನ್ನು ಕಾಡಲಿಲ್ಲ. ರೈತ ಹೋರಾಟದ ಸಮಯದಲ್ಲಿ ದೆಹಲಿ ಗಡಿಯಲ್ಲಿ ಏಳುನೂರ ಐವತ್ತು ಜನ ರೈತರು ಅಸುನೀಗಿದಾಗ ಮಾತನಾಡಲಿಲ್ಲ. ಪ್ರಧಾನಿಯವರ ಈ ವಿಲಕ್ಷಣ ನಡೆಗೆ ಏನು ಹೇಳುವುದೆಂಬುದೇ ಸಮಸ್ಯೆಯಾಗಿದೆಯಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...