Homeಮುಖಪುಟ‘ಗೆಟೌಟ್‌‌’: ಪತ್ರಿಕಾಗೋಷ್ಠಿಯಿಂದ ಕೈರಲಿ, ಮೀಡಿಯಾ ಒನ್‌ ಪತ್ರಕರ್ತರನ್ನು ಹೊರಹಾಕಿದ ಕೇರಳ ರಾಜ್ಯಪಾಲ

‘ಗೆಟೌಟ್‌‌’: ಪತ್ರಿಕಾಗೋಷ್ಠಿಯಿಂದ ಕೈರಲಿ, ಮೀಡಿಯಾ ಒನ್‌ ಪತ್ರಕರ್ತರನ್ನು ಹೊರಹಾಕಿದ ಕೇರಳ ರಾಜ್ಯಪಾಲ

- Advertisement -
- Advertisement -

ಕೇರಳದಲ್ಲಿ ನಡೆಯುತ್ತಿರುವ ಸರ್ಕಾರ ವರ್ಸಸ್‌ ರಾಜ್ಯಪಾಲರ ಸಂಘರ್ಷದ ಸರಣಿ ಮುಂದುವರೆದಿದ್ದು, ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಎರಡು ಮಲಯಾಳಂ ಸುದ್ದಿ ವಾಹಿನಿಗಳ ಪತ್ರಕರ್ತರು ಹೊರ ಹೋಗುವವರೆಗೂ ಗೋಷ್ಠಿಯಲ್ಲಿ ಮಾತನಾಡಲು ನಿರಾಕರಿಸಿದ ಘಟನೆ ನಡೆದಿದೆ.

ಆರಿಫ್ ಖಾನ್ ಅವರು ಇಂದು ಕೊಚ್ಚಿಯ ಎರ್ನಾಕುಲಂ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಅವರು ಕೈರಲಿ ಟಿವಿ ಮತ್ತು ಮೀಡಿಯಾ ಒನ್ ಚಾನೆಲ್ ಅನ್ನು ಹೊರಹೋಗುವಂತೆ ಆಕ್ರೋಶಭರಿತರಾಗಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೈರಲಿ ಟಿವಿ ಸಿಪಿಐಎಂ ಬೆಂಬಲಿತವಾಗಿದ್ದು, ಮೀಡಿಯಾ ಒನ್‌ ಮಾಧ್ಯಮಮ್ ಬ್ರಾಡ್‌ಕಾಸ್ಟಿಂಗ್ ಲಿಮಿಟೆಡ್‌ನಿಂದ ನಿರ್ವಹಿಸಲ್ಪಡುವ ಚಾನೆಲ್ ಆಗಿದೆ. ಈ ವರ್ಷದ ಆರಂಭದಲ್ಲಿ “ಭದ್ರತಾ ಕಾಳಜಿ” ಆರೋಪದಲ್ಲಿ ಒಕ್ಕೂಟ ಸರ್ಕಾರವು ಮೀಡಿಯಾ ಒನ್‌ ಪ್ರಸಾರ ಮಾಡುವುದನ್ನು ನಿರ್ಬಂಧಿಸಿತ್ತು.

ಇದನ್ನೂ ಓದಿ: ತಮಿಳುನಾಡು: ರಾಜ್ಯಪಾಲರನ್ನು ಪದಚ್ಯುತಗೊಳಿಸುವ ಜ್ಞಾಪಕ ಪತ್ರಕ್ಕೆ ಸಹಿ ಹಾಕುವಂತೆ ಎಲ್ಲ ಪಕ್ಷಗಳಿಗೆ ಮನವಿ ಮಾಡಿದ ಡಿಎಂಕೆ

ಮೈಕ್ ಮತ್ತು ಕ್ಯಾಮೆರಾಗಳನ್ನು ಹಿಡಿದಿದ್ದ ಪತ್ರಕರ್ತರ ಮಧ್ಯೆ ನಿಂತಿದ್ದ ಆರೀ‌ಫ್‌ ಖಾನ್, “ನಾನು ಕೈರಾಲಿ ಮತ್ತು ಮೀಡಿಯಾ ಒನ್‌ ನೊಂದಿಗೆ ಮಾತನಾಡುವುದಿಲ್ಲ … ಒಂದು ವೇಳೆ ಇದ್ದರೆ ನಾನು ಹೊರನಡೆಯುತ್ತೇನೆ. ಇಲ್ಲಿ ಕೈರಳಿ ಮತ್ತು ಮೀಡಿಯಾ ಒನ್‌ ಇಲ್ಲ ಎಂದು ನಾನು ಭಾವಿಸುತ್ತೇನೆ. ಈ ಚಾನೆಲ್‌ಗಳ ಯಾವುದಾದರೂ ಇಲ್ಲಿ ಇದ್ದಾರೆಯೆ?” ಎಂದು ಅವರು ಪ್ರಶ್ನಿಸಿದ್ದಾರೆ. ಎಂದು ಮೀಡಿಯಾ ಒನ್ ಇದೆಯೇ?”

ಈ ವೇಳೆ ಅಲ್ಲಿದ್ದ ಚಾನೆಲ್‌ನ ಪತ್ರಕರ್ತರೊಬ್ಬರು,“ಹೌದು, ಸರ್” ಎಂದು ಹೇಳಿದ್ದಾರೆ. ಇದಕ್ಕೆ ಉತ್ತರಿಸಿದ ಆರಿಫ್‌ ಖಾನ್‌, “ನಾನು ನಿಮ್ಮೊಂದಿಗೆ ಮಾತನಾಡಲು ಬಯಸುವುದಿಲ್ಲ. ಗೆಟ್‌ ಔಟ್‌, ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ” ಎಂದು ಆಕ್ರೋಶ ಭರಿತರಾಗಿ ಹೇಳಿದ್ದಾರೆ.

ಇದನ್ನೂ ಓದಿ: ‘ವಿಶ್ವವಿದ್ಯಾಲಯದ ವಿರುದ್ಧ ಯುದ್ಧ…”: ರಾಜ್ಯಪಾಲರ ಆದೇಶಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್

“ನಾನು ಕೈರಾಲಿಯೊಂದಿಗೆ ಮಾತನಾಡುವುದಿಲ್ಲ. ದಯವಿಟ್ಟು ಹೊರಟುಹೋಗಿ. ನಾನು ಮೀಡಿಯಾ ಒನ್ ಜೊತೆ ಮಾತನಾಡುವುದಿಲ್ಲ…ಈ ಬಗ್ಗೆ ನಾನು ಸ್ಪಷ್ಟವಾಗಿ ಹೇಳಿದ್ದೇನೆ. ಕಳೆದ 25 ದಿನಗಳಿಂದ ನಾನು ಪದೇ ಪದೇ ಇದನ್ನು ಹೇಳುತ್ತಿದ್ದೇನೆ. ನಾನು ದೂರ ಹೋಗಬೇಕೆಂದು ನೀವು ಬಯಸಿದರೆ, ನಾನು ಹೋಗುತ್ತೇನೆ. ನಾನು ಈ ಬಗ್ಗೆ ವಾದ ಮಾಡಲು ಬಯಸುವುದಿಲ್ಲ” ಎಂದು ಹೇಳಿದ್ದಾರೆ.

ಇಷ್ಟೆ ಅಲ್ಲದೆ, ಕಾಂಗ್ರೆಸ್ ಬೆಂಬಲಿತ ಟಿವಿ ಚಾನೆಲ್‌ ‘ಜೈಹಿಂದ್‌’ ಸುದ್ದಿ ವಾಹಿನಿಗೆ ಕೂಡಾ ಪತ್ರಿಕಾಗೋಷ್ಠಿಯಲ್ಲಿ ಪ್ರವೇಶವನ್ನು ನಿರಾಕರಿಸಲಾಗಿದೆ ಎಂದು ಕೇರಳದ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್‌ ಹೇಳಿದ್ದಾರೆ.

ಕಳೆದ ತಿಂಗಳು, ಅವರು ನಾಲ್ಕು ಸುದ್ದಿ ವಾಹಿನಿಗಳಾದ ಕೈರಾಲಿ, ಮೀಡಿಯಾ ಒನ್, ಜೈ ಹಿಂದ್ ಮತ್ತು ರಿಪೋರ್ಟರ್ ಟಿವಿಯನ್ನು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಿದ್ದರು.

2019ರ ಕಾರ್ಯಕ್ರಮವೊಂದರಲ್ಲಿ ಅವಮಾನಿಸಿದ್ದಾಗಿ ಆರೋಪಿಸಿರುವುದರಿಂದ ಹಿಡಿದು ಉಪಕುಲಪತಿಗಳ ನೇಮಕದ ವರೆಗೆ ಹಲವಾರು ಘಟನೆಗಳ ಕುರಿತು ಆರಿಫ್‌ ಖಾನ್ ಅವರು ಪ್ರಸ್ತುತ ರಾಜ್ಯದಲ್ಲಿ ಪಿಣರಾಯಿ ವಿಜಯನ್ ಸರ್ಕಾರದೊಂದಿಗೆ ಸಂಘರ್ಷದಲ್ಲಿದ್ದಾರೆ. ಕೇರಳ ಸರ್ಕಾರವು ಆರಿಫ್‌ ಖಾನ್ ಅವರು ಆರ್‌ಎಸ್‌ಎಸ್ ಕೈಯಲ್ಲಿರುವ ಸಾಧನ ಎಂದು ಆರೋಪಿಸಿದೆ.

ಇದನ್ನೂ ಓದಿ: ಕೇರಳದ ಎಡರಂಗ ಸರ್ಕಾರ ಉರುಳಿಸಲು ಕೇಂದ್ರ ಸರ್ಕಾರ ರಾಜ್ಯಪಾಲರನ್ನು ಬಳಸುತ್ತಿದೆ: ಕೊಡಿಯೇರಿ ಬಾಲಕೃಷ್ಣನ್ ಆರೋಪ

ಈ ನಡುವೆ, ರಾಜ್ಯಪಾಲರ ವರ್ತನೆಯನ್ನು ‘ನಿರಂಕುಶ ನಡೆ’ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕೇರಳದ ಕಾರ್ಯನಿರತ ಪತ್ರಕರ್ತರ ಒಕ್ಕೂಟವು, ಅವರ ವಿರುದ್ಧ ನಾಳೆ ರಾಜಭವನಕ್ಕೆ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...