Homeಕ್ರೀಡೆಕ್ರಿಕೆಟ್360 ಡಿಗ್ರಿ ಬ್ಯಾಟರ್ ಸೂರ್ಯಕುಮಾರ್ ಯಾದವ್‌: ಟಿ20ಯಲ್ಲಿ ಮತ್ತೆರೆಡು ದಾಖಲೆ

360 ಡಿಗ್ರಿ ಬ್ಯಾಟರ್ ಸೂರ್ಯಕುಮಾರ್ ಯಾದವ್‌: ಟಿ20ಯಲ್ಲಿ ಮತ್ತೆರೆಡು ದಾಖಲೆ

- Advertisement -
- Advertisement -

ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದಂದಿನಿಂದ ಮಧ್ಯಮ ಕ್ರಮಾಂಕದ ಬ್ಯಾಟರ್ 32 ವರ್ಷದ ಸೂರ್ಯಕುಮಾರ್ ಯಾದವ್ ಒಂದಲ್ಲಾ ಒಂದು ದಾಖಲೆ ಬರೆಯುತ್ತಲೇ ಇದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ನಂಬರ್‌ 1 ಸ್ಥಾನ ಪಡೆದಿರುವ ಅವರು ಭಾನುವಾರ ನಡೆದ ಜಿಂಬಾಬ್ವೆ ಎದುರಿನ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ದಾಖಲಿಸುವ ಮೂಲಕ ಅವರು ಮತ್ತೆರಡು ವಿಶಿಷ್ಟ ದಾಖಲೆ ನಿರ್ಮಿಸಿದ್ದಾರೆ.

ಜಿಂಬಾಬ್ವೆ ಎದುರಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 25 ಎಸೆತಗಳಲ್ಲಿ ಅಜೇಯ 61 ರನ್ (6 ಬೌಂಡರಿ, 4 ಸಿಕ್ಸರ್) ದಾಖಲಿಸಿದ್ದರು. ಈ ವಿಶ್ವಕಪ್‌ನಲ್ಲಿ ಐದು ಪಂದ್ಯಗಳ ಪೈಕಿ ಸೂರ್ಯಕುಮಾರ್ ಯಾದವ್ ದಾಖಲಿಸುತ್ತಿರುವ ಮೂರನೇ ಅರ್ಧಶತಕ ಇದು. ಸೂರ್ಯಕುಮಾರ್ ಈ ಟೂರ್ನಿಯಲ್ಲಿ 225 ರನ್ ಗಳಿಸುವ ಮೂಲಕ ಅತಿ ಹೆಚ್ಚು ರನ್ ಗಳಿಸಿದವರ ಸಾಲಿನಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 246 ರನ್‌ಗಳೊಂದಿಗೆ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಅತಿ ಹೆಚ್ಚು ಬೌಂಡರಿ ಗಳಿಸಿದವರ ಸಾಲಿನಲ್ಲಿ 33 ಬೌಂಡರಿ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. 10ಕ್ಕಿಂತ ಹೆಚ್ಚು ಎಸೆತ ಎದುರಿಸಿ ಅತಿ ಹೆಚ್ಚು ಸ್ಟ್ರೈಕ್‌ರೇಟ್ ಹೊಂದಿರುವವರಲ್ಲಿ ಯಾದವ್ ಮೊದಲ (193.96) ಸ್ಥಾನದಲ್ಲಿದ್ದಾರೆ.

ಇವುಗಳಲ್ಲದೆ ಈ ಪಂದ್ಯದಲ್ಲಿ ಸೂರ್ಯಕುಮಾರ್ ಎರಡು ವಿಶಿಷ್ಠ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಹೌದು ಜಿಂಬಾಬ್ವೆ ವಿರುದ್ಧ ಅರ್ಧಶತಕ ದಾಖಲಿಸುವ ಮೂಲಕ ಕ್ಯಾಲೆಂಡರ್ ವರ್ಷದಲ್ಲಿ ಸಾವಿರ ಟಿ20 ರನ್ ಬಾರಿಸಿದ ವಿಶ್ವದ ಎರಡನೇ ಬ್ಯಾಟರ್ ಮತ್ತು ಭಾರತದ ಮೊದಲ ಬ್ಯಾಟರ್ ಎಂಬ ಶ್ರೇಯಕ್ಕೆ ಅವರು ಪಾತ್ರರಾಗಿದ್ದಾರೆ. 2022ರಲ್ಲಿ ಸೂರ್ಯಕುಮಾರ್ ಯಾದವ್ ಒಟ್ಟಾರೆ 44.60ರ ಸರಾಸರಿಯಲ್ಲಿ 1026 ರನ್ ಗಳಿಸಿದ್ದಾರೆ.

ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಜ್ವಾನ್ ಕಳೆದ ವರ್ಷ 1326 ರನ್ ದಾಖಲಿಸಿದ್ದರು. ಈ ಮೂಲಕ ವಿಶ್ವ ಟಿ20 ಕ್ರಿಕೆಟ್‌ನಲ್ಲಿ ಕ್ಯಾಲೆಂಡರ್ ವರ್ಷದಲ್ಲಿ ಸಾವಿರ ರನ್ ದಾಖಲಿಸಿದ ಮೊದಲ ಬ್ಯಾಟರ್ ಎಂಬ ಶ್ರೇಯಕ್ಕೆ ಪಾತ್ರರಾಗಿದ್ದರು. ಇದೀಗ ಆ ಪಟ್ಟಿಗೆ ಭಾರತದ ಸೂರ್ಯಕುಮಾರ್ ಯಾದವ್ ಸಹ ಸೇರ್ಪಡೆಯಾಗಿದ್ದಾರೆ.

ಈ ಪೈಕಿ ವಿಶೇಷವೆಂದರೆ, ರಿಜ್ವಾನ್ ಸಾವಿರ ರನ್ ಪೂರೈಸಲು 983 ಚೆಂಡುಗಳನ್ನು ಎದುರಿಸಿದ್ದರೆ, ಸೂರ್ಯಕುಮಾರ್ ಯಾದವ್ ಕೇವಲ 550 ಚೆಂಡುಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಅಂದರೆ 186.54ರ ಸ್ಟ್ರೈಕ್‌ರೇಟ್‌ನಲ್ಲಿ ಸೂರ್ಯಕುಮಾರ್ ಯಾದವ್ ಸಾವಿರ ರನ್ ಗಳಿಸಿದ್ದಾರೆ. ಇದೂ ಸಹ ಒಂದು ದಾಖಲೆಯಾಗಿದ್ದು, ವಿಶ್ವ ಚುಟುಕು ಕ್ರಿಕೆಟ್‌ನಲ್ಲಿ ಇಷ್ಟೊಂದು ಉತ್ತಮ ಸ್ಟ್ರೈಕ್‌ರೇಟ್‌ ಹೊಂದಿರುವ ಮೊದಲ ಬ್ಯಾಟರ್ ಎಂಬ ಶ್ರೇಯವೂ ಅವರ ಪಾಲಾಗಿದೆ.

ಇನ್ನು ಜಗತ್ತಿನ ಹಲವು ಕ್ರಿಕೆಟರ್‌ಗಳು ಸೂರ್ಯಕುಮಾರ್ ಯಾದವ್ ಅವರನ್ನು ಪ್ರಶಂಸಿಸಿವೆ. ಕೆಲವರು 360 ಡಿಗ್ರಿ ಬ್ಯಾಟರ್ ಎಂದು ಕರೆದಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಸೂರ್ಯಕುಮಾರ್ ಯಾದವ್, “ಎಬಿಡಿ ವಿಲಿಯರ್ಸ್ ಒಬ್ಬರೆ ಜಗತ್ತಿನ ಏಕೈಕ 360 ಡಿಗ್ರಿ ಆಟಗಾರ. ನಾನು ಅವರಂತೆ ಆಡಲು ಯತ್ನಿಸುತ್ತೇನೆ” ಎಂದಿದ್ದಾರೆ. ಇದಕ್ಕೆ “ಗೆಳೆಯ ನೀನು ಬೇಗ ಆ ಸ್ಥಾನ ಪಡೆಯುತ್ತೀಯ. ಇನ್ನೂ ಎತ್ತರಕ್ಕೆ ಬೆಳೆಯುವೆ. ಇಂದು ಚೆನ್ನಾಗಿ ಆಡಿದೆ” ಎಂದು ಎಬಿಡಿ ವಿಲಿಯರ್ಸ್ ಅಭಿನಂದಿಸಿದ್ದಾರೆ.

ಭಾರತ ತಂಡ ಮುಂದಿನ ಗುರುವಾರ ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್ ಪಂದ್ಯವಾಡಲಿದ್ದು, ಸೂರ್ಯಕುಮಾರ್ ಯಾದವ್ ಫಾರ್ಮ್ ಭಾರತದ ಪಾಲಿಗೆ ವರದಾನವಾಗಿದೆ. ಕಳೆದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಶತಕ ದಾಖಲಿಸುವ ಮೂಲಕ ಮಿಂಚಿದ್ದರು. ಹೀಗಾಗಿ ಸೆಮಿಫೈನಲ್ ಪಂದ್ಯದಲ್ಲೂ ಉತ್ತಮ ಪ್ರದರ್ಶನ ನೀಡುತ್ತಾರೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಇದನ್ನೂ ಓದಿ; ಟಿ20 ವಿಶ್ವಕಪ್: ಬಲಿಷ್ಟ ತಂಡಗಳನ್ನು ಮಣಿಸಿದ ಪುಟ್ಟ ಆದರೆ ದಿಟ್ಟ ತಂಡಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...