Homeಮುಖಪುಟಮೂವರು ಅತ್ಯಾಚಾರಿ, ಕೊಲೆಗಡುಕರನ್ನು ಬಿಡುಗಡೆ ಮಾಡಿದ ಸುಪ್ರೀಂಕೋರ್ಟ್

ಮೂವರು ಅತ್ಯಾಚಾರಿ, ಕೊಲೆಗಡುಕರನ್ನು ಬಿಡುಗಡೆ ಮಾಡಿದ ಸುಪ್ರೀಂಕೋರ್ಟ್

“ಬೇಟೆಗಾಗಿ ಬೀದಿಗಿಳಿಯುವ ಪರಭಕ್ಷಕರು” ಎಂದು ಈ ಅಪರಾಧಿಗಳನ್ನು ದೆಹಲಿ ಹೈಕೋರ್ಟ್ ಬಣ್ಣಿಸಿತ್ತು.

- Advertisement -
- Advertisement -

2012ರಲ್ಲಿ ನಿರ್ಭಯಾ ಪ್ರಕರಣ ಘಟಿಸುವ ಒಂದು ತಿಂಗಳ ಮೊದಲು ನಡೆದಿದ್ದ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮೂವರು ಅಪರಾಧಿಗಳನ್ನು ಸುಪ್ರೀಂಕೋರ್ಟ್ ಬಿಡುಗಡೆ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ದೆಹಲಿಯ 19 ವರ್ಷದ ಹೆಣ್ಣುಮಗಳ ಮೇಲೆ ಅತ್ಯಾಚಾರ ಎಸಗಿ, ಚಿತ್ರಹಿಂಸೆ ನೀಡಿ ಕೊಂದ ಅಪರಾಧಿಗಳನ್ನು ಸುಪ್ರೀಂ ಕೋರ್ಟ್ ಬಿಡುಗಡೆಗೊಳಿಸುತ್ತಿದೆ. “ಬೇಟೆಗಾಗಿ ಬೀದಿಗಿಳಿಯುವ ಪರಭಕ್ಷಕರು” ಎಂದು ಈ ಅಪರಾಧಿಗಳನ್ನು ದೆಹಲಿ ಹೈಕೋರ್ಟ್ ಬಣ್ಣಿಸಿತ್ತು ಎಂದು ವರದಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿರೂಪಗೊಂಡ ಹಾಗೂ ಸುಟ್ಟ ಸ್ಥಿತಿಯಲ್ಲಿ ಯುವತಿಯ ದೇಹವು ಹರಿಯಾಣದ ರೇವಾರಿ ಜಿಲ್ಲೆಯ ಹೊಲವೊಂದರಲ್ಲಿ ಫೆಬ್ರವರಿ 2012ರಲ್ಲಿ ಪತ್ತೆಯಾಗಿತ್ತು. ಅಪಹರಿಸಿದ ದಿನಗಳ ಅನುಮಾನಾಸ್ಪದ ರೀತಿಯಲ್ಲಿ ಮೃತದೇಹ ಸಿಕ್ಕಿತ್ತು. ಕಾರಿನ ಉಪಕರಣಗಳು ಮತ್ತು ಮಣ್ಣಿನ ಮಡಕೆಗಳಿಂದ ಯುವತಿಗೆ ಹೊಡೆಯಲಾಗಿದೆ ಎಂಬುದನ್ನು ತೀವ್ರವಾದ ಗಾಯದ ಗುರುತುಗಳು ಸೂಚಿಸಿದ್ದವು.

ದೆಹಲಿಯ ನಜಾಫ್‌ಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಯಿತು. ಯುವತಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಶವವನ್ನು ರೇವಾರಿ ಗದ್ದೆಯಲ್ಲಿ ಎಸೆಯಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಅಪಹರಣ, ಅತ್ಯಾಚಾರ ಮತ್ತು ಕೊಲೆ ಸೇರಿದಂತೆ ವಿವಿಧ ಆರೋಪಗಳ ಅಡಿಯಲ್ಲಿ ರವಿಕುಮಾರ್, ರಾಹುಲ್ ಮತ್ತು ವಿನೋದ್ ಎಂಬ ಅಪರಾಧಿಗಳಿಗೆ ದೆಹಲಿ ಹೈಕೋರ್ಟ್ ಫೆಬ್ರವರಿ 2014ರಲ್ಲಿ ಶಿಕ್ಷೆ ವಿಧಿಸಿತು. ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ನೀಡಲಾಗಿತ್ತು.

ಮರಣದಂಡನೆ ಶಿಕ್ಷೆಯನ್ನು ವಿಧಿಸಿದ ಕೋರ್ಟ್, “ಬೇಟೆಯನ್ನು ಹುಡುಕುತ್ತಾ ಬೀದಿಗಳಲ್ಲಿ ಚಲಿಸುವ ಪರಭಕ್ಷಕ ಅಪರಾಧಿಗಳಿವರು” ಎಂದು ಅಭಿಪ್ರಾಯಪಟ್ಟಿತ್ತು.

ಹೈಕೋರ್ಟ್ ತೀರ್ಪನ್ನು ಮೂವರು ಅಪರಾಧಿಗಳು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ತಮ್ಮ ಶಿಕ್ಷೆಯನ್ನು ಕಡಿಮೆ ಮಾಡಬೇಕೆಂದು ಕೋರಿದ್ದರು. ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್, ನ್ಯಾಯಮೂರ್ತಿಗಳಾದ ಎಸ್.ರವೀಂದ್ರ ಭಟ್ ಮತ್ತು ಬೇಲಾ ಎಂ.ತ್ರಿವೇದಿ ಅವರ ಪೀಠವು ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿತು. ಮೂವರನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದೆ.

ಮರಣದಂಡನೆ ಶಿಕ್ಷೆಯನ್ನು ಕಡಿಮೆ ಮಾಡಬೇಕೆಂಬ ಕೋರಿಕೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ದೆಹಲಿ ಪೊಲೀಸರು ವಿರೋಧಿಸಿದ್ದರು. ಅಪರಾಧ ನಡೆದಿರುವುದು ಸಂತ್ರಸ್ತರ ವಿರುದ್ಧ ಮಾತ್ರವಲ್ಲ, ಸಮಾಜದ ವಿರುದ್ಧ ಎಂದು ಅವರು ಹೇಳಿದ್ದರು. ಅಪರಾಧದ ಹೇಯ ಸ್ವರೂಪವನ್ನು ಪೊಲೀಸರು ಉಲ್ಲೇಖಿಸಿದ್ದರು. ಅಪರಾಧಿಗಳಿಗೆ ಯಾವುದೇ ರಿಯಾಯಿತಿಯನ್ನು ನೀಡಬಾರದೆಂದು ಮನವಿ ಮಾಡಿದ್ದರು.

ಅಪರಾಧಿಗಳ ಪರವಾಗಿ ವಾದಿಸಿದ ವಕೀಲರು, “ಅಪರಾಧಿಗಳ ವಯಸ್ಸು, ಕುಟುಂಬದ ಹಿನ್ನೆಲೆ ಮತ್ತು ಹಿಂದಿನ ಕ್ರಿಮಿನಲ್ ದಾಖಲೆಯನ್ನು ಉಲ್ಲೇಖಿಸಿ ಶಿಕ್ಷೆಯನ್ನು ಕಡಿತಗೊಳಿಸಬೇಕು” ಎಂದು ಒತ್ತಾಯಿಸಿದ್ದರು.

ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಯುವತಿಯ ಪೋಷಕರು ಪ್ರತಿಕ್ರಿಯೆ ನೀಡಿದ್ದು, “ತೀರ್ಪಿನಿಂದಾಗಿ ಘಾಸಿಯಾಗಿದ್ದೇವೆ. ಆದರೆ ನಮ್ಮ ಕಾನೂನು ಹೋರಾಟವನ್ನು ಮುಂದುವರೆಸುತ್ತೇವೆ” ಎಂದು ತಿಳಿಸಿದ್ದಾರೆ. “ನಾವು ನ್ಯಾಯಕ್ಕಾಗಿ ಇಲ್ಲಿಗೆ ಬಂದಿದ್ದೇವೆ. ಇದು ಕುರುಡು ನ್ಯಾಯ ವ್ಯವಸ್ಥೆ” ಎಂದು ನೊಂದು ನುಡಿದಿದ್ದಾರೆ.

ನ್ಯಾಯಕ್ಕಾಗಿ ತಮ್ಮ 12 ವರ್ಷಗಳ ಹೋರಾಟವನ್ನು ಪ್ರಸ್ತಾಪಿಸಿದ ಅವರು, ಅಪರಾಧಿಗಳು ನ್ಯಾಯಾಲಯದ ಒಳಗೆಯೂ ಬೆದರಿಕೆ ಹಾಕುತ್ತಾರೆ ಎಂದು ಆರೋಪಿಸಲಾಗಿದೆ.

ಈ ಪ್ರಕರಣ ನಡೆದ ನಂತರ ದೆಹಲಿಯಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಪ್ರಕರಣ ದೇಶದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು. ಚಲಿಸುವ ಬಸ್‌ನಲ್ಲಿ 23 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿತ್ತು. ದೇಶದ್ಯಾಂತ ಬೃಹತ್ ಪ್ರತಿಭಟನೆಗಳು ನಡೆದವು. ಲೈಂಗಿಕ ದೌರ್ಜನ್ಯದ ಮೇಲೆ ಕಠಿಣ ಕಾನೂನು ರೂಪಿಸಲು ಈ ಹೋರಾಟ ಕಾರಣವಾಗಿತ್ತು.

ಇದನ್ನೂ ಓದಿರಿ: 10% ಮೀಸಲಾತಿಗೆ ಒಪ್ಪಿದ ಸುಪ್ರಿಂಕೋರ್ಟ್‌: ಟ್ವಿಟರ್‌‌ನಲ್ಲಿ ‘ಬ್ಯಾನ್‌ ಇಡಬ್ಲ್ಯೂಎಸ್‌’ ಟ್ರೆಂಡ್

ಅತ್ಯಾಚಾರಿಗಳಿಗೆ ಬಿಡುಗಡೆ ನೀಡುತ್ತಿರುವ ಬೆಳವಣಿಗೆಗಳು ಇತ್ತೀಚಿನ ದಿನಗಳಲ್ಲಿ ತಲೆದೋರಿದ್ದು, ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಗುಜರಾತ್ ಸರ್ಕಾರ ಬಿಡುಗಡೆ ಮಾಡಿದ್ದು ಟೀಕೆಗೆ ಗುರಿಯಾಗಿದೆ.

ಗೋಧ್ರಾ ನಂತರದ ಗಲಭೆಗಳ ಸಂದರ್ಭದಲ್ಲಿ ದಹೋದ್ ಜಿಲ್ಲೆಯ ಲಿಮ್ಖೇಡಾ ತಾಲೂಕಿನಲ್ಲಿ ಮಾರ್ಚ್ 3, 2002 ರಂದು ಜನಸಮೂಹದಿಂದ ಹತ್ಯೆಗೀಡಾದ 14 ಮಂದಿಯಲ್ಲಿ ಬಿಲ್ಕಿಸ್ ಅವರ ಮೂರು ವರ್ಷದ ಮಗಳು ಸಲೇಹಳೂ ಸೇರಿದ್ದರು. ಆ ಸಮಯದಲ್ಲಿ ಬಿಲ್ಕಿಸ್ ಗರ್ಭಿಣಿಯಾಗಿದ್ದರು. ಬಿಲ್ಕಿಸ್ ಅವರ ಮೇಲೆ ಅತ್ಯಾಚಾರ ಎಸಗಲಾಗಿತ್ತು.

“ಬಿಲ್ಕಿಸ್ ಬಾನೋ ಪ್ರಕರಣದ 11 ಅಪರಾಧಿಗಳು 14 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ. ಅವರ ನಡವಳಿಕೆ ಉತ್ತಮವಾಗಿದೆ ಎಂದು ಕಂಡುಬಂದಿದೆ ಮತ್ತು ಕೇಂದ್ರ ಸರ್ಕಾರವು ಅಪರಾಧಿಗಳ ಬಿಡುಗಡೆಗೆ ಅನುಮೋದನೆ ನೀಡಿದೆ” ಎಂದು ಗುಜರಾತ್ ಸರ್ಕಾರ ಇತ್ತೀಚೆಗೆ ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...