Homeಕರ್ನಾಟಕಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪು ಮರುಪರಿಶೀಲನೆಗೆ ಅವಕಾಶವಿದೆ: ಜಸ್ಟೀಸ್ ದಾಸ್

ಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪು ಮರುಪರಿಶೀಲನೆಗೆ ಅವಕಾಶವಿದೆ: ಜಸ್ಟೀಸ್ ದಾಸ್

ನ್ಯಾಯಾಂಗ ಕಾಲಕಾಲಕ್ಕೆ ತನ್ನ ತಪ್ಪುಗಳನ್ನು ತಿದ್ದುಕೊಂಡ ಉದಾಹರಣೆಗಳಿವೆ ಎಂದು ಆಶಾವಾದ ವ್ಯಕ್ತಪಡಿಸುತ್ತಾರೆ ಜಸ್ಟೀಸ್‌ ಎಚ್‌.ಎನ್.ನಾಗಮೋಹನ ದಾಸ್.

- Advertisement -
- Advertisement -

“ಆರ್ಥಿಕವಾಗಿ ಹಿಂದುಳಿದ ವಿಭಾಗದ (ಇಡಬ್ಲ್ಯೂಎಸ್‌) ಮೀಸಲಾತಿ ಸಂವಿಧಾನ ಬಾಹಿರವಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಆದರೆ ಈ ತೀರ್ಪನ್ನು ಮರುಪರಿಶೀಲನೆಗೆ ಒಳಪಡಿಸಲು ಅವಕಾಶವಿದೆ” ಎಂದು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ ದಾಸ್ ತಿಳಿಸಿದ್ದಾರೆ.

ಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಮರುಪರಿಶೀಲನೆ ಅರ್ಜಿಯನ್ನು ಸಲ್ಲಿಸಬೇಕಾಗಿದೆ. ಕಾಲಕಾಲಕ್ಕೆ ನ್ಯಾಯಾಂಗ ತನ್ನ ತೀರ್ಪುಗಳನ್ನು ಬದಲಿಸಿಕೊಂಡ ಉದಾಹರಣೆಗಳಿವೆ. ಉದಾಹರಣೆಗೆ ತುರ್ತುಪರಿಸ್ಥಿತಿಯನ್ನು ಐದು ಜನರ ನ್ಯಾಯಮೂರ್ತಿಗಳ ಪೀಠ ಒಪ್ಪಿಕೊಂಡಿತ್ತು. ಐದು ಜನರಲ್ಲಿ ನಾಲ್ಕು ನ್ಯಾಯಾಧೀಶರು ತುರ್ತುಪರಿಸ್ಥಿತಿಯನ್ನು ಸಮರ್ಥಿಸಿಕೊಂಡಿದ್ದರು. ಆನಂತರದ ತೀರ್ಪುಗಳಲ್ಲಿ ನಾವು ತಪ್ಪು ಮಾಡಿದ್ದೇವೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಹೀಗಾಗಿ ಈಗ ಕೊಟ್ಟಿರುವ ತೀರ್ಪು ಅಂತಿಮವಲ್ಲ” ಎಂದು ಅಭಿಪ್ರಾಯಪಟ್ಟರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಡಬ್ಲ್ಯೂಎಸ್‌ಗೆ ಸಂಬಂಧಿಸಿದಂತೆ ಐದು ನ್ಯಾಯಮೂರ್ತಿಗಳ ಪೀಠವು ತೀರ್ಪು ನೀಡಿದೆ. ಸಂವಿಧಾನ 103ನೇ ತಿದ್ದುಪಡಿ ಸರಿ ಇದೆ ಎಂದು ಮೂವರು ನ್ಯಾಯಮೂರ್ತಿಗಳು ಸಮ್ಮತಿ ಸೂಚಿಸಿದರೆ, ಇನ್ನಿಬ್ಬರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾವು ನ್ಯಾಯಾಂಗದ ತೀರ್ಪಿಗೆ ಬದ್ಧರಾಗಿರಬೇಕು. ಆದರೆ ಈ ದೇಶದ ಪ್ರತಿಯೊಬ್ಬ ಪ್ರಜೆಗೂ ನ್ಯಾಯಾಂಗದ ತೀರ್ಪುಗಳನ್ನು ವಿಮರ್ಶೆ ಮಾಡುವ ಹಕ್ಕಿದೆ. ಈ ವಿಮರ್ಶೆಗಳು ರಚನಾತ್ಮಕವಾಗಿರಬೇಕು, ಆರೋಗ್ಯಕರವಾಗಿರಬೇಕು. ಜನಸಾಮಾನ್ಯರು ನ್ಯಾಯಾಂಗದ ಮೇಲೆ ಇಟ್ಟಿರುವ  ನಂಬಿಕೆಯನ್ನು ಹಾಳುಗೆಡುವಂತೆ ವಿಮರ್ಶೆಗಳು ಇರಬಾರದು. ನ್ಯಾಯಮೂರ್ತಿಗಳನ್ನು ವೈಯಕ್ತಿಕವಾಗಿ ಅವಹೇಳನ ಮಾಡಬಾರದು” ಎಂದು ಎಚ್ಚರಿಸಿದರು.

“ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಬೇಕು ಎಂದು ನಮ್ಮ ಸಂವಿಧಾನ ಹೇಳುತ್ತದೆ. ಆರ್ಥಿಕ ಮಾನದಂಡ ಮುಖ್ಯವಾಗಿರಲಿಲ್ಲ. ಈ ಹಿಂದೆ ನೀಡಿದ ತೀರ್ಪುಗಳು ಕೂಡ ಸಂವಿಧಾನದ ಚೌಕಟ್ಟಿನಲ್ಲಿಯೇ ಬಂದಿದೆ. ಹೀಗಾಗಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಎಂಬುದು ಸಂವಿಧಾನ ಹಾಗೂ ಸಾಮಾಜಿಕ ನ್ಯಾಯದ ಆಶಯಗಳಿಗೆ ವಿರುದ್ಧವಾಗಿದೆ” ಎಂದು ಹೇಳಿದರು.

ಸುಪ್ರೀಂ ಕೋರ್ಟ್ ಅನೇಕ ತೀರ್ಪುಗಳಲ್ಲಿ ಹೇಳಿದಂತೆ ಮೀಸಲಾತಿ ಎಂಬುದು ಬಡತನ ನಿವಾರಣ ಕಾರ್ಯಕ್ರಮವಲ್ಲ. ಅವಕಾಶ ವಂಚಿತ ಸಮುದಾಯಗಳಿಗೆ ಪ್ರಾತಿನಿಧ್ಯವನ್ನು ನೀಡುವುದೇ ಮೀಸಲಾತಿ. ಈ ಆಯಾಮ ಎಲ್ಲೋ ಹಳಿ ತಪ್ಪಿದಂತೆ ಕಾಣುತ್ತಿದೆ.  ಹೀಗಾಗಿ ಈ ತೀರ್ಪಿನ ಕುರಿತು ರಚನಾತ್ಮಕ ಹಾಗೂ ಆರೋಗ್ಯಕರ ವಿಮರ್ಶೆ ಅಗತ್ಯವಿದೆ ಎಂದರು.

ಈ ರೀತಿಯ ಸಮಸ್ಯೆಗಳು ಈ ಹಿಂದೆ ಬಂದಾಗ ನ್ಯಾಯಾಂಗ ತಿದ್ದುಕೊಂಡು ಹೋದ ಉದಾಹರಣೆಗಳಿವೆ. ನ್ಯಾಯಾಂಗ ತಪ್ಪು ಮಾಡಿಲ್ಲವೆಂದು ಹೇಳಲಾಗದು. 1948ರಲ್ಲಿ ಮದ್ರಾಸ್ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಜಾತಿ ಹಾಗೂ ಅಲ್ಪಸಂಖ್ಯಾತರಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಮೀಸಲಾತಿ ಒದಗಿಸಿತ್ತು. ಚಂಪಕಂ ದೊರೈರಾಜ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆ ಮೀಸಲಾತಿಯನ್ನು ತೆಗೆದುಹಾಕಿತು. ಆನಂತರ ಸಂವಿಧಾನಕ್ಕೆ ತಿದ್ದುಪಡಿ ತಂದು, ರಾಜ್ಯ ಸರ್ಕಾರಗಳಿಗೆ ಈ ರೀತಿ ಮೀಸಲಾತಿ ನೀಡುವ ಅಧಿಕಾರವಿದೆ ಎಂದು ಸ್ಪಷ್ಟಪಡಿಸಲಾಗಿತ್ತು ಎಂದು ಸ್ಮರಿಸಿದರು.

ಇದನ್ನೂ ಓದಿರಿ: ಇಡಬ್ಲ್ಯುಎಸ್ ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್!

ಇಂದಿರಾ ಸಹಾನಿ ಪ್ರಕರಣ ನೋಡುವುದಾದರೆ, ‘ಪ್ರವೇಶಾತಿಯಲ್ಲಿ ಮೀಸಲಾತಿ ಇರಬೇಕು, ಬಡ್ತಿಯಲ್ಲಿ ಮೀಸಲಾತಿ ಇರಬಾರದು’ ಎಂದು ಹೇಳಲಾಯಿತು. ಸಂವಿಧಾನದಲ್ಲಿ ಮೀಸಲಾತಿ ತಂದು ಬಡ್ತಿಯಲ್ಲೂ ಮೀಸಲಾತಿ ನೀಡಬಹುದು ಎನ್ನಲಾಯಿತು. ಒಳಮೀಸಲಾತಿ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರ್ಕಾರ ಪರಿಶಿಷ್ಟರ ಆಗ್ರಹವನ್ನು ಒಪ್ಪಿತು. ಒಳಮೀಸಲಾತಿ ಜಾರಿಗೊಳಿಸಿತು. ಚಿನ್ನಯ್ಯ ಪ್ರಕರಣದಲ್ಲಿ ಇದನ್ನು ಸುಪ್ರೀಂಕೋರ್ಟ್ ತೆಗೆದುಹಾಕಲಾಯಿತು. 2020ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ಮತ್ತೊಂದು ತೀರ್ಪಿನಲ್ಲಿ, “ಒಳಮೀಸಲಾತಿ ನೀಡುವ ಅಧಿಕಾರವು ರಾಜ್ಯ ಸರ್ಕಾರ‌ಗಳಿಗೆ ಇದೆ” ಎಂದು ಹೇಳಲಾಗಿದೆ. ಈ ರೀತಿಯ ವೈರುಧ್ಯಗಳನ್ನು ನೋಡಿದ್ದೇವೆ. ಈಗಲೂ ಕೂಡ ದೇಶದ ಜನ ತೀರ್ಪನ್ನು ಚರ್ಚೆಗೆ ಒಳಪಡಿಸಿ, ಜನಾಭಿಪ್ರಾಯ ರೂಪಿಸಿ ಒಂದು ದಾರಿಯನ್ನು ಕಂಡುಕೊಳ್ಳಬೇಕು ಎಂದು ಆಶಿಸಿದರು.

“ಮೀಸಲಾತಿ ಬೇರೆ, ಹಂಚಿಕೆ ಬೇರೆ. ಇದು ಹಂಚಿಕೆಯಾಗಬಾರದು. ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮಾತ್ರ ಈ ಅವಕಾಶ ನೀಡಬೇಕು. ಇದು ಕೊನೆಯಿರದ ಸಮಸ್ಯೆಯಾಗಬಾರದು. ನಾವು ಆದಷ್ಟು ಬೇಗ ಈ ಅಸಮಾನತೆಯನ್ನು ತೊಲಗಿಸಲು ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಬೇಕು. ಆನಂತರದಲ್ಲಿ ಮೀಸಲಾತಿ ಎಂಬುದೇ ಇರಬಾರದು ಎನ್ನುವಂತಾಗಬೇಕು” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...