Homeಕರ್ನಾಟಕಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪು ಮರುಪರಿಶೀಲನೆಗೆ ಅವಕಾಶವಿದೆ: ಜಸ್ಟೀಸ್ ದಾಸ್

ಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪು ಮರುಪರಿಶೀಲನೆಗೆ ಅವಕಾಶವಿದೆ: ಜಸ್ಟೀಸ್ ದಾಸ್

ನ್ಯಾಯಾಂಗ ಕಾಲಕಾಲಕ್ಕೆ ತನ್ನ ತಪ್ಪುಗಳನ್ನು ತಿದ್ದುಕೊಂಡ ಉದಾಹರಣೆಗಳಿವೆ ಎಂದು ಆಶಾವಾದ ವ್ಯಕ್ತಪಡಿಸುತ್ತಾರೆ ಜಸ್ಟೀಸ್‌ ಎಚ್‌.ಎನ್.ನಾಗಮೋಹನ ದಾಸ್.

- Advertisement -
- Advertisement -

“ಆರ್ಥಿಕವಾಗಿ ಹಿಂದುಳಿದ ವಿಭಾಗದ (ಇಡಬ್ಲ್ಯೂಎಸ್‌) ಮೀಸಲಾತಿ ಸಂವಿಧಾನ ಬಾಹಿರವಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಆದರೆ ಈ ತೀರ್ಪನ್ನು ಮರುಪರಿಶೀಲನೆಗೆ ಒಳಪಡಿಸಲು ಅವಕಾಶವಿದೆ” ಎಂದು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ ದಾಸ್ ತಿಳಿಸಿದ್ದಾರೆ.

ಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಮರುಪರಿಶೀಲನೆ ಅರ್ಜಿಯನ್ನು ಸಲ್ಲಿಸಬೇಕಾಗಿದೆ. ಕಾಲಕಾಲಕ್ಕೆ ನ್ಯಾಯಾಂಗ ತನ್ನ ತೀರ್ಪುಗಳನ್ನು ಬದಲಿಸಿಕೊಂಡ ಉದಾಹರಣೆಗಳಿವೆ. ಉದಾಹರಣೆಗೆ ತುರ್ತುಪರಿಸ್ಥಿತಿಯನ್ನು ಐದು ಜನರ ನ್ಯಾಯಮೂರ್ತಿಗಳ ಪೀಠ ಒಪ್ಪಿಕೊಂಡಿತ್ತು. ಐದು ಜನರಲ್ಲಿ ನಾಲ್ಕು ನ್ಯಾಯಾಧೀಶರು ತುರ್ತುಪರಿಸ್ಥಿತಿಯನ್ನು ಸಮರ್ಥಿಸಿಕೊಂಡಿದ್ದರು. ಆನಂತರದ ತೀರ್ಪುಗಳಲ್ಲಿ ನಾವು ತಪ್ಪು ಮಾಡಿದ್ದೇವೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಹೀಗಾಗಿ ಈಗ ಕೊಟ್ಟಿರುವ ತೀರ್ಪು ಅಂತಿಮವಲ್ಲ” ಎಂದು ಅಭಿಪ್ರಾಯಪಟ್ಟರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಡಬ್ಲ್ಯೂಎಸ್‌ಗೆ ಸಂಬಂಧಿಸಿದಂತೆ ಐದು ನ್ಯಾಯಮೂರ್ತಿಗಳ ಪೀಠವು ತೀರ್ಪು ನೀಡಿದೆ. ಸಂವಿಧಾನ 103ನೇ ತಿದ್ದುಪಡಿ ಸರಿ ಇದೆ ಎಂದು ಮೂವರು ನ್ಯಾಯಮೂರ್ತಿಗಳು ಸಮ್ಮತಿ ಸೂಚಿಸಿದರೆ, ಇನ್ನಿಬ್ಬರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾವು ನ್ಯಾಯಾಂಗದ ತೀರ್ಪಿಗೆ ಬದ್ಧರಾಗಿರಬೇಕು. ಆದರೆ ಈ ದೇಶದ ಪ್ರತಿಯೊಬ್ಬ ಪ್ರಜೆಗೂ ನ್ಯಾಯಾಂಗದ ತೀರ್ಪುಗಳನ್ನು ವಿಮರ್ಶೆ ಮಾಡುವ ಹಕ್ಕಿದೆ. ಈ ವಿಮರ್ಶೆಗಳು ರಚನಾತ್ಮಕವಾಗಿರಬೇಕು, ಆರೋಗ್ಯಕರವಾಗಿರಬೇಕು. ಜನಸಾಮಾನ್ಯರು ನ್ಯಾಯಾಂಗದ ಮೇಲೆ ಇಟ್ಟಿರುವ  ನಂಬಿಕೆಯನ್ನು ಹಾಳುಗೆಡುವಂತೆ ವಿಮರ್ಶೆಗಳು ಇರಬಾರದು. ನ್ಯಾಯಮೂರ್ತಿಗಳನ್ನು ವೈಯಕ್ತಿಕವಾಗಿ ಅವಹೇಳನ ಮಾಡಬಾರದು” ಎಂದು ಎಚ್ಚರಿಸಿದರು.

“ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಬೇಕು ಎಂದು ನಮ್ಮ ಸಂವಿಧಾನ ಹೇಳುತ್ತದೆ. ಆರ್ಥಿಕ ಮಾನದಂಡ ಮುಖ್ಯವಾಗಿರಲಿಲ್ಲ. ಈ ಹಿಂದೆ ನೀಡಿದ ತೀರ್ಪುಗಳು ಕೂಡ ಸಂವಿಧಾನದ ಚೌಕಟ್ಟಿನಲ್ಲಿಯೇ ಬಂದಿದೆ. ಹೀಗಾಗಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಎಂಬುದು ಸಂವಿಧಾನ ಹಾಗೂ ಸಾಮಾಜಿಕ ನ್ಯಾಯದ ಆಶಯಗಳಿಗೆ ವಿರುದ್ಧವಾಗಿದೆ” ಎಂದು ಹೇಳಿದರು.

ಸುಪ್ರೀಂ ಕೋರ್ಟ್ ಅನೇಕ ತೀರ್ಪುಗಳಲ್ಲಿ ಹೇಳಿದಂತೆ ಮೀಸಲಾತಿ ಎಂಬುದು ಬಡತನ ನಿವಾರಣ ಕಾರ್ಯಕ್ರಮವಲ್ಲ. ಅವಕಾಶ ವಂಚಿತ ಸಮುದಾಯಗಳಿಗೆ ಪ್ರಾತಿನಿಧ್ಯವನ್ನು ನೀಡುವುದೇ ಮೀಸಲಾತಿ. ಈ ಆಯಾಮ ಎಲ್ಲೋ ಹಳಿ ತಪ್ಪಿದಂತೆ ಕಾಣುತ್ತಿದೆ.  ಹೀಗಾಗಿ ಈ ತೀರ್ಪಿನ ಕುರಿತು ರಚನಾತ್ಮಕ ಹಾಗೂ ಆರೋಗ್ಯಕರ ವಿಮರ್ಶೆ ಅಗತ್ಯವಿದೆ ಎಂದರು.

ಈ ರೀತಿಯ ಸಮಸ್ಯೆಗಳು ಈ ಹಿಂದೆ ಬಂದಾಗ ನ್ಯಾಯಾಂಗ ತಿದ್ದುಕೊಂಡು ಹೋದ ಉದಾಹರಣೆಗಳಿವೆ. ನ್ಯಾಯಾಂಗ ತಪ್ಪು ಮಾಡಿಲ್ಲವೆಂದು ಹೇಳಲಾಗದು. 1948ರಲ್ಲಿ ಮದ್ರಾಸ್ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಜಾತಿ ಹಾಗೂ ಅಲ್ಪಸಂಖ್ಯಾತರಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಮೀಸಲಾತಿ ಒದಗಿಸಿತ್ತು. ಚಂಪಕಂ ದೊರೈರಾಜ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆ ಮೀಸಲಾತಿಯನ್ನು ತೆಗೆದುಹಾಕಿತು. ಆನಂತರ ಸಂವಿಧಾನಕ್ಕೆ ತಿದ್ದುಪಡಿ ತಂದು, ರಾಜ್ಯ ಸರ್ಕಾರಗಳಿಗೆ ಈ ರೀತಿ ಮೀಸಲಾತಿ ನೀಡುವ ಅಧಿಕಾರವಿದೆ ಎಂದು ಸ್ಪಷ್ಟಪಡಿಸಲಾಗಿತ್ತು ಎಂದು ಸ್ಮರಿಸಿದರು.

ಇದನ್ನೂ ಓದಿರಿ: ಇಡಬ್ಲ್ಯುಎಸ್ ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್!

ಇಂದಿರಾ ಸಹಾನಿ ಪ್ರಕರಣ ನೋಡುವುದಾದರೆ, ‘ಪ್ರವೇಶಾತಿಯಲ್ಲಿ ಮೀಸಲಾತಿ ಇರಬೇಕು, ಬಡ್ತಿಯಲ್ಲಿ ಮೀಸಲಾತಿ ಇರಬಾರದು’ ಎಂದು ಹೇಳಲಾಯಿತು. ಸಂವಿಧಾನದಲ್ಲಿ ಮೀಸಲಾತಿ ತಂದು ಬಡ್ತಿಯಲ್ಲೂ ಮೀಸಲಾತಿ ನೀಡಬಹುದು ಎನ್ನಲಾಯಿತು. ಒಳಮೀಸಲಾತಿ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರ್ಕಾರ ಪರಿಶಿಷ್ಟರ ಆಗ್ರಹವನ್ನು ಒಪ್ಪಿತು. ಒಳಮೀಸಲಾತಿ ಜಾರಿಗೊಳಿಸಿತು. ಚಿನ್ನಯ್ಯ ಪ್ರಕರಣದಲ್ಲಿ ಇದನ್ನು ಸುಪ್ರೀಂಕೋರ್ಟ್ ತೆಗೆದುಹಾಕಲಾಯಿತು. 2020ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ಮತ್ತೊಂದು ತೀರ್ಪಿನಲ್ಲಿ, “ಒಳಮೀಸಲಾತಿ ನೀಡುವ ಅಧಿಕಾರವು ರಾಜ್ಯ ಸರ್ಕಾರ‌ಗಳಿಗೆ ಇದೆ” ಎಂದು ಹೇಳಲಾಗಿದೆ. ಈ ರೀತಿಯ ವೈರುಧ್ಯಗಳನ್ನು ನೋಡಿದ್ದೇವೆ. ಈಗಲೂ ಕೂಡ ದೇಶದ ಜನ ತೀರ್ಪನ್ನು ಚರ್ಚೆಗೆ ಒಳಪಡಿಸಿ, ಜನಾಭಿಪ್ರಾಯ ರೂಪಿಸಿ ಒಂದು ದಾರಿಯನ್ನು ಕಂಡುಕೊಳ್ಳಬೇಕು ಎಂದು ಆಶಿಸಿದರು.

“ಮೀಸಲಾತಿ ಬೇರೆ, ಹಂಚಿಕೆ ಬೇರೆ. ಇದು ಹಂಚಿಕೆಯಾಗಬಾರದು. ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮಾತ್ರ ಈ ಅವಕಾಶ ನೀಡಬೇಕು. ಇದು ಕೊನೆಯಿರದ ಸಮಸ್ಯೆಯಾಗಬಾರದು. ನಾವು ಆದಷ್ಟು ಬೇಗ ಈ ಅಸಮಾನತೆಯನ್ನು ತೊಲಗಿಸಲು ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಬೇಕು. ಆನಂತರದಲ್ಲಿ ಮೀಸಲಾತಿ ಎಂಬುದೇ ಇರಬಾರದು ಎನ್ನುವಂತಾಗಬೇಕು” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...