Homeಕರ್ನಾಟಕಸದನಕ್ಕೆ ಗೈರಾದ ಶಾಸಕ ಶ್ರೀಮಂತ ಪಾಟೀಲ್: ಬಿಜೆಪಿಯಿಂದ ಮತ್ತೊಂದು ಆಪರೇಷನ್ ಎಂದ ಡಿಕೆಶಿ

ಸದನಕ್ಕೆ ಗೈರಾದ ಶಾಸಕ ಶ್ರೀಮಂತ ಪಾಟೀಲ್: ಬಿಜೆಪಿಯಿಂದ ಮತ್ತೊಂದು ಆಪರೇಷನ್ ಎಂದ ಡಿಕೆಶಿ

- Advertisement -
- Advertisement -

ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ ಪಾಟೀಲ್ ರನ್ನು ಬಿಜೆಪಿ ಕಿಡ್ನಾಪ್ ಮಾಡಿದೆ ಎಂದು ಸಚಿವ ಡಿ.ಕೆ ಶಿವಕುಮಾರ್ ಸದನದಲ್ಲಿಂದು ಆರೋಪ ಮಾಡಿದರು. ಅವರು ನಿನ್ನೆ ತಾನೇ ನಮ್ಮ ಜೊತೆಯಲ್ಲಿಯೇ ಇದ್ದರು, ಚೆನ್ನಾಗಿಯೇ ಮಾತನಾಡಿದರು ಆದರೆ ರಾತ್ರಿಯೇ ಕಣ್ಮರೆಯಾಗಿದ್ದು ಬಿಜೆಪಿಯವರು ಅಪಹರಿಸಿದ್ದು ಇದರ ತನಿಖೆ ನಡೆಸಬೇಕು ಎಂದು ಪಟ್ಟು ಹಿಡಿದರು.

ಅವರು ಬೆಂಗಳೂರಿನ ರೆಸಾರ್ಟ್ ನಿಂದ ಚನ್ನೈಗೆ ಹೋಗಿ ಅಲ್ಲಿಂದ ಮುಂಬೈಗೆ ಹೋಗಿರುವ ಕುರಿತು ವಿಮಾನ ಟಿಕೆಟ್ ಗಳನ್ನು ಪ್ರದರ್ಶಿಸಿದ ಡಿ.ಕೆ ಶಿವಕುಮಾರ್ ಇದೆಲ್ಲದರ ಹಿಂದೆ ಬಿಜೆಪಿಯಿದೆ ಎಂದು ಆರೋಪಿಸಿದರು. ಅದೇ ಸಮಯಕ್ಕೆ ಅವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ಹೋಗಿದ್ದಾರೆ ಎಂಬ ಚರ್ಚೆ ಬಂತು. ಅವರು ಆಸ್ಪತ್ರೆಯಲ್ಲಿ ಮಲಗಿರುವ ಫೋಟೊಗಳು ಓಡಾಡಿದವು. ಕೆಲವೇ ಕ್ಷಣಗಳಲ್ಲಿ ಶ್ರೀಮಂತ ಪಾಟೀಲ ಕಡೆಯಿಂದ ಸ್ಪೀಕರ್ ರವರಿಗೆ ಪತ್ರವೊಂದು ತಲುಪಿತ್ತು.

ಈ ಫೋಟೊಗಳನ್ನು ತೆಗೆದು ಕಳಿಸಿದ್ದು ಯಾರು ಮತ್ತು ಏಕೆ? ಇದು ದೊಡ್ಡ ನಾಟಕ ಎಂದು ಆಡಳಿತ ಪಕ್ಷದ ಶಾಸಕರು ಗದ್ದಲ ಮಾಡಿದರು. ಈ ಕುರಿತು ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್ “ಅವರು ಏಕೆ ಹೋಗಿದ್ದಾರೆ, ಹೇಗೆ ಹೋಗಿದ್ದಾರೆ ನನಗೆ ಗೊತ್ತಿಲ್ಲ” ಆದರೆ ಅವರಿಂದ ಒಂದು ಪತ್ರ ಬಂದಿದೆ. ಅದಕ್ಕೆ ತಳಬುಡವಿಲ್ಲ. ಲೆಟರ್ ಹೆಡ್ ಕೂಡ ಇಲ್ಲ. ನಾನು ಈ ಸ್ಥಾನದಲ್ಲಿ ಇರುತ್ತೇನೆ, ನಾಳೆ ಹೋಗುತ್ತೇನೆ, ಆದರೆ ಹೀಗೆ ಪತ್ರ ಕಳಿಸುವುದು ಸ್ಪೀಕರ್ ಘಟನೆಗೆ ಧಕ್ಕೆ ತರುವಂತದ್ದು” ಎಂದು ಕಿಡಿಕಾರಿದ್ದಾರೆ.

ಇದರ ಜೊತೆಗೆ ಡಿ.ಕೆ ಶಿವಕುಮಾರ್ ರವರು ಅವರು ವಿಮಾನದಲ್ಲಿ ಹೋಗಿರುವ ಟಕೇಟ್ ಕಾಪಿಗಳನ್ನು ಪ್ರದರ್ಶನ ಮಾಡಿ ಇದೆಲ್ಲದರ ಹಿಂದೆ ಬಿಜೆಪಿ ಇದೆ ಎಂದು ಆರೋಪಿಸಿದರು. ದಿನೇಶ್ ಗುಂಡೂರಾವ್ ಕೂಡ ಇದಕ್ಕೆ ದನಿಗೂಡಿಸಿದರು.

ಪಾಟೀಲರ ಪತ್ರವನ್ನು ಓದಿ ಹೇಳಿದ ಸ್ಪೀಕರ್ ಇಂದು ಗೈರು ಹಾಜರಾಗುತ್ತೇನೆ ಎಂದು, ಅನಾರೋಗ್ಯವೆಂದು ಇಂದು 10.45ಕ್ಕೆ ಪತ್ರ ಕಳಿಸುವುದು ಸರಿಯಲ್ಲ. ಮುಂಬೈನಲ್ಲಿ ಆ ಆಸ್ಪತ್ರೆ ಇದಿಯೋ ಇಲ್ವೋ ನನಗೆ ಗೊತ್ತಿಲ್ಲ. ಹೀಗೆ ಮನಬಂದಂತೆ ಪತ್ರ ಬರೆಯುವುದು ಸರಿಯಲ್ಲ ಎಂದು ಅಸಮಧಾನ ವ್ಯಕ್ತಿಪಡಿಸಿದರು. ಗೃಹ ಸಚಿವರು ಇದರ ಕುರಿತು ಕುಟುಂಬವನ್ನು ಸಂಪರ್ಕಿಸಬೇಕು., ತನಿಖೆ ನಡೆಸಿ ವರದಿ ಕೊಡಬೇಕೆಂದು ತಿಳಿಸಿದರು. ಇಲ್ಲವಾದಲ್ಲಿ ಡಿ.ಜಿ.ಪಿ ವರ್ಗಾಹಿಸುತ್ತೇನೆ ಎಂದಿದ್ದಾರೆ. ಗೃಹ ಸಚಿವರು ಒಪ್ಪಿಕೊಂಡಿದ್ದರೆ.

“ಶ್ರೀಮಂತ ಪಾಟೀಲ್ ನಿಜಕ್ಕೂ ಅಸ್ವಸ್ಥರಾಗಿದ್ದರೆ ಬೇಗ ಗುಣಮುಖ ಆಗಲಿ. ಆದರೆ ಅದು ಡ್ರಾಮಾ ಅಂತಾದರೆ, ಟಿವಿಯಲ್ಲಿ ತೋರಿಸುತ್ತಿರುವ ಅವರ ಆ ಚಿತ್ರ ಪ್ರಜಾಪ್ರಭುತ್ವದ ಇಂದಿನ ಸ್ಥಿತಿಯ ರೂಪಕವೇ ಆಗಿದೆ” ಎಂದು ಪತ್ರಕರ್ತ ಮಲ್ಲನಗೌಡರ್ ಅಭಿಪ್ರಾಯಪಟ್ಟಿದ್ದಾರೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಲಗುವ ಸಮಯದಲ್ಲಿ ಕನ್ನಡಕ ದರಿಸುವ ಏಕೈಕ ವ್ಯಕ್ತಿ ಶ್ರೀಮಂತ ಪಾಟಿಲ್

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...