Homeಕರ್ನಾಟಕಸದನಕ್ಕೆ ಗೈರಾದ ಶಾಸಕ ಶ್ರೀಮಂತ ಪಾಟೀಲ್: ಬಿಜೆಪಿಯಿಂದ ಮತ್ತೊಂದು ಆಪರೇಷನ್ ಎಂದ ಡಿಕೆಶಿ

ಸದನಕ್ಕೆ ಗೈರಾದ ಶಾಸಕ ಶ್ರೀಮಂತ ಪಾಟೀಲ್: ಬಿಜೆಪಿಯಿಂದ ಮತ್ತೊಂದು ಆಪರೇಷನ್ ಎಂದ ಡಿಕೆಶಿ

- Advertisement -
- Advertisement -

ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ ಪಾಟೀಲ್ ರನ್ನು ಬಿಜೆಪಿ ಕಿಡ್ನಾಪ್ ಮಾಡಿದೆ ಎಂದು ಸಚಿವ ಡಿ.ಕೆ ಶಿವಕುಮಾರ್ ಸದನದಲ್ಲಿಂದು ಆರೋಪ ಮಾಡಿದರು. ಅವರು ನಿನ್ನೆ ತಾನೇ ನಮ್ಮ ಜೊತೆಯಲ್ಲಿಯೇ ಇದ್ದರು, ಚೆನ್ನಾಗಿಯೇ ಮಾತನಾಡಿದರು ಆದರೆ ರಾತ್ರಿಯೇ ಕಣ್ಮರೆಯಾಗಿದ್ದು ಬಿಜೆಪಿಯವರು ಅಪಹರಿಸಿದ್ದು ಇದರ ತನಿಖೆ ನಡೆಸಬೇಕು ಎಂದು ಪಟ್ಟು ಹಿಡಿದರು.

ಅವರು ಬೆಂಗಳೂರಿನ ರೆಸಾರ್ಟ್ ನಿಂದ ಚನ್ನೈಗೆ ಹೋಗಿ ಅಲ್ಲಿಂದ ಮುಂಬೈಗೆ ಹೋಗಿರುವ ಕುರಿತು ವಿಮಾನ ಟಿಕೆಟ್ ಗಳನ್ನು ಪ್ರದರ್ಶಿಸಿದ ಡಿ.ಕೆ ಶಿವಕುಮಾರ್ ಇದೆಲ್ಲದರ ಹಿಂದೆ ಬಿಜೆಪಿಯಿದೆ ಎಂದು ಆರೋಪಿಸಿದರು. ಅದೇ ಸಮಯಕ್ಕೆ ಅವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ಹೋಗಿದ್ದಾರೆ ಎಂಬ ಚರ್ಚೆ ಬಂತು. ಅವರು ಆಸ್ಪತ್ರೆಯಲ್ಲಿ ಮಲಗಿರುವ ಫೋಟೊಗಳು ಓಡಾಡಿದವು. ಕೆಲವೇ ಕ್ಷಣಗಳಲ್ಲಿ ಶ್ರೀಮಂತ ಪಾಟೀಲ ಕಡೆಯಿಂದ ಸ್ಪೀಕರ್ ರವರಿಗೆ ಪತ್ರವೊಂದು ತಲುಪಿತ್ತು.

ಈ ಫೋಟೊಗಳನ್ನು ತೆಗೆದು ಕಳಿಸಿದ್ದು ಯಾರು ಮತ್ತು ಏಕೆ? ಇದು ದೊಡ್ಡ ನಾಟಕ ಎಂದು ಆಡಳಿತ ಪಕ್ಷದ ಶಾಸಕರು ಗದ್ದಲ ಮಾಡಿದರು. ಈ ಕುರಿತು ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್ “ಅವರು ಏಕೆ ಹೋಗಿದ್ದಾರೆ, ಹೇಗೆ ಹೋಗಿದ್ದಾರೆ ನನಗೆ ಗೊತ್ತಿಲ್ಲ” ಆದರೆ ಅವರಿಂದ ಒಂದು ಪತ್ರ ಬಂದಿದೆ. ಅದಕ್ಕೆ ತಳಬುಡವಿಲ್ಲ. ಲೆಟರ್ ಹೆಡ್ ಕೂಡ ಇಲ್ಲ. ನಾನು ಈ ಸ್ಥಾನದಲ್ಲಿ ಇರುತ್ತೇನೆ, ನಾಳೆ ಹೋಗುತ್ತೇನೆ, ಆದರೆ ಹೀಗೆ ಪತ್ರ ಕಳಿಸುವುದು ಸ್ಪೀಕರ್ ಘಟನೆಗೆ ಧಕ್ಕೆ ತರುವಂತದ್ದು” ಎಂದು ಕಿಡಿಕಾರಿದ್ದಾರೆ.

ಇದರ ಜೊತೆಗೆ ಡಿ.ಕೆ ಶಿವಕುಮಾರ್ ರವರು ಅವರು ವಿಮಾನದಲ್ಲಿ ಹೋಗಿರುವ ಟಕೇಟ್ ಕಾಪಿಗಳನ್ನು ಪ್ರದರ್ಶನ ಮಾಡಿ ಇದೆಲ್ಲದರ ಹಿಂದೆ ಬಿಜೆಪಿ ಇದೆ ಎಂದು ಆರೋಪಿಸಿದರು. ದಿನೇಶ್ ಗುಂಡೂರಾವ್ ಕೂಡ ಇದಕ್ಕೆ ದನಿಗೂಡಿಸಿದರು.

ಪಾಟೀಲರ ಪತ್ರವನ್ನು ಓದಿ ಹೇಳಿದ ಸ್ಪೀಕರ್ ಇಂದು ಗೈರು ಹಾಜರಾಗುತ್ತೇನೆ ಎಂದು, ಅನಾರೋಗ್ಯವೆಂದು ಇಂದು 10.45ಕ್ಕೆ ಪತ್ರ ಕಳಿಸುವುದು ಸರಿಯಲ್ಲ. ಮುಂಬೈನಲ್ಲಿ ಆ ಆಸ್ಪತ್ರೆ ಇದಿಯೋ ಇಲ್ವೋ ನನಗೆ ಗೊತ್ತಿಲ್ಲ. ಹೀಗೆ ಮನಬಂದಂತೆ ಪತ್ರ ಬರೆಯುವುದು ಸರಿಯಲ್ಲ ಎಂದು ಅಸಮಧಾನ ವ್ಯಕ್ತಿಪಡಿಸಿದರು. ಗೃಹ ಸಚಿವರು ಇದರ ಕುರಿತು ಕುಟುಂಬವನ್ನು ಸಂಪರ್ಕಿಸಬೇಕು., ತನಿಖೆ ನಡೆಸಿ ವರದಿ ಕೊಡಬೇಕೆಂದು ತಿಳಿಸಿದರು. ಇಲ್ಲವಾದಲ್ಲಿ ಡಿ.ಜಿ.ಪಿ ವರ್ಗಾಹಿಸುತ್ತೇನೆ ಎಂದಿದ್ದಾರೆ. ಗೃಹ ಸಚಿವರು ಒಪ್ಪಿಕೊಂಡಿದ್ದರೆ.

“ಶ್ರೀಮಂತ ಪಾಟೀಲ್ ನಿಜಕ್ಕೂ ಅಸ್ವಸ್ಥರಾಗಿದ್ದರೆ ಬೇಗ ಗುಣಮುಖ ಆಗಲಿ. ಆದರೆ ಅದು ಡ್ರಾಮಾ ಅಂತಾದರೆ, ಟಿವಿಯಲ್ಲಿ ತೋರಿಸುತ್ತಿರುವ ಅವರ ಆ ಚಿತ್ರ ಪ್ರಜಾಪ್ರಭುತ್ವದ ಇಂದಿನ ಸ್ಥಿತಿಯ ರೂಪಕವೇ ಆಗಿದೆ” ಎಂದು ಪತ್ರಕರ್ತ ಮಲ್ಲನಗೌಡರ್ ಅಭಿಪ್ರಾಯಪಟ್ಟಿದ್ದಾರೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಲಗುವ ಸಮಯದಲ್ಲಿ ಕನ್ನಡಕ ದರಿಸುವ ಏಕೈಕ ವ್ಯಕ್ತಿ ಶ್ರೀಮಂತ ಪಾಟಿಲ್

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...