Homeಕರ್ನಾಟಕಬೆಂಗಳೂರು: ‘ಕಾಂಗ್ರೆಸ್‌’, ‘ಭಾರತ್‌ ಜೋಡೋ’ ಖಾತೆ ತಾತ್ಕಾಲಿಕವಾಗಿ ರದ್ದು ಮಾಡುವಂತೆ ಟ್ವಿಟರ್‌ಗೆ ಸಿವಿಲ್‌ ಕೋರ್ಟ್ ಆದೇಶ

ಬೆಂಗಳೂರು: ‘ಕಾಂಗ್ರೆಸ್‌’, ‘ಭಾರತ್‌ ಜೋಡೋ’ ಖಾತೆ ತಾತ್ಕಾಲಿಕವಾಗಿ ರದ್ದು ಮಾಡುವಂತೆ ಟ್ವಿಟರ್‌ಗೆ ಸಿವಿಲ್‌ ಕೋರ್ಟ್ ಆದೇಶ

- Advertisement -
- Advertisement -

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮತ್ತು ಭಾರತ್ ಜೋಡೋ ಟ್ವಿಟರ್‌ ಖಾತೆಗಳನ್ನು ತಾತ್ಕಾಲಿಕವಾಗಿ ಟ್ವಿಟರ್‌ ಸಂಸ್ಥೆ ನಿರ್ಬಂಧಿಸಬೇಕು ಎಂದು ಬೆಂಗಳೂರಿನ ಸಿವಿಲ್ ನ್ಯಾಯಾಲಯ ಸೋಮವಾರ ಆದೇಶಿಸಿದೆ.

‘ಕೆಜಿಎಫ್‌‌ ಚಾಪ್ಟರ್‌-2’ ಸಿನಿಮಾದ ಸಂಗೀತವನ್ನು ಕಾಂಗ್ರೆಸ್ ಕಾನೂನುಬಾಹಿರವಾಗಿ ತನ್ನ ವೀಡಿಯೊಗಳಲ್ಲಿ ಬಳಸಿಕೊಂಡು ಹಕ್ಕುಸ್ವಾಮ್ಯವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಎಂಆರ್‌ಟಿ ಸಂಗೀತ ಸಂಸ್ಥೆಯು ಪ್ರಕರಣ ದಾಖಲಿಸಿತ್ತು. ವಿಚಾರಣೆಯನ್ನು ಕೈಗೆತ್ತಿಕೊಂಡ ಕೋರ್ಟ್ ಈ ಆದೇಶ ಹೊರಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾಂಗ್ರೆಸ್ ಪಕ್ಷದ ಖಾತೆಯಾದ @INCIndiaಯಿಂದ ಮಾಡಲಾದ ಮೂರು ಟ್ವೀಟ್‌ಗಳನ್ನು ತೆಗೆದುಹಾಕಬೇಕು ಎಂದು ಕೋರ್ಟ್ ಸೂಚಿಸಿದೆ. ಹೆಚ್ಚುವರಿಯಾಗಿ ಮುಂದಿನ ವಿಚಾರಣೆಯ ದಿನಾಂಕದವರೆಗೆ @INCIndia ಮತ್ತು @BharatJodo ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿಷೇಧಿಸಬೇಕು ಎಂದು ಟ್ವಿಟರ್‌‌ ಸಂಸ್ಥೆಗೆ ಆದೇಶಿಸಲಾಗಿದೆ.

ಕೆಜಿಎಫ್- 2ರ ಸಂಗೀತವನ್ನು ಬಳಸಿದ್ದಕ್ಕಾಗಿ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮತ್ತು ಸುಪ್ರಿಯಾ ಶ್ರಿನೇಟ್ ವಿರುದ್ಧ ಕೃತಿಸ್ವಾಮ್ಯ ಕಾಯ್ದೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ನವೆಂಬರ್ 4 ರಂದು ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಎಂಆರ್‌ಟಿ ಮ್ಯೂಸಿಕ್ ಸಂಸ್ಥೆಯ ಎಂ.ನವೀನ್ ಕುಮಾರ್ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್‌ ಮಾಡಿದ್ದರು.

ಭಾರತ್ ಜೋಡೋ ಯಾತ್ರೆಯು ಕರ್ನಾಟಕದಲ್ಲಿ ಸಾಗುವಾಗ ಪ್ಲೇ ಮಾಡಲಾಗಿರುವ ಕೆಜಿಎಫ್‌-2ರ ಹಿಂದಿ ಅವತರಣಿಕೆಯ ‘ಸುಲ್ತಾನ್’ ಹಾಡಿನ ಕುರಿತು ಆಕ್ಷೇಪ ಎತ್ತಲಾಗಿದೆ. ರಾಹುಲ್ ಅವರ ಪಾದಯಾತ್ರೆ ಮತ್ತು ಸಾರ್ವಜನಿಕರೊಂದಿಗೆ ಸಂವಹನ ನಡೆಸುವುದನ್ನು ತೋರಿಸುವ ವೀಡಿಯೊದಲ್ಲಿ ಹಾಡು ಬಳಸಲಾಗಿದೆ ಎಂದು ದೂರು ನೀಡಲಾಗಿದೆ.

ಜೈರಾಮ್ ರಮೇಶ್ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಭಾರತ್‌ ಜೋಡೋ ಯಾತ್ರೆಯ ಎರಡು ವೀಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ. ಇದರಲ್ಲಿ ಕೆಜಿಎಫ್ 2ರ ಚಿತ್ರದ ಜನಪ್ರಿಯ ಹಾಡುಗಳನ್ನು ಅನುಮತಿಯಿಲ್ಲದೆ ಬಳಸಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ.

“ವೀಡಿಯೊಗಳನ್ನು ನೋಡಿದಾಗ ಆರೋಪಿಗಳು ಮೋಸದಿಂದ, ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಅನಧಿಕೃತವಾಗಿ ಮತ್ತು ಕಾನೂನುಬಾಹಿರವಾಗಿ ದೂರುದಾರನ ಮಾಲೀಕತ್ವದ ಧ್ವನಿಮುದ್ರಿಕೆಯನ್ನು ಬಳಸಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಭಾರತ್‌ ಜೋಡೋ ಯಾತ್ರೆಯು ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಯಿತು. ಜನವರಿ 30, 2023ರಂದು ಜಮ್ಮುವನ್ನು ತಲುಪುವ ಗುರಿಯನ್ನು ಹೊಂದಿದೆ. ಈ ಯಾತ್ರೆಯು ಇದುವರೆಗೆ ಕೇರಳ, ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಮೂಲಕ ಹಾದುಹೋಗಿದೆ.

ಇದನ್ನೂ ಓದಿರಿ: ನಾವೇಕೆ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಕಾಣಲು ಹೋದೆವು?

ಹಕ್ಕುಸ್ವಾಮ್ಯದ ಆರೋಪಗಳು ಇತ್ತೀಚೆಗೆ ಸದ್ದು ಮಾಡುತ್ತಿವೆ. ‘ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡಿನ ವಿರುದ್ಧ ಕೇರಳ ಮೂಲದ ಜನಪ್ರಿಯ ಸಂಗೀತ ಬ್ಯಾಂಡ್ ಥೈಕ್ಕುಡಂ ಬ್ರಿಡ್ಜ್ ಇತ್ತೀಚೆಗೆ ಪ್ರಕರಣ ದಾಖಲಿಸಿತ್ತು. ಹಕ್ಕುಸ್ವಾಮ್ಯ ಉಲ್ಲಂಘನೆಯ ಮೊಕದ್ದಮೆ ವಿಚಾರಣೆ ನಡೆಸಿದ ನ್ಯಾಯಾಲಯ ಹಾಡನ್ನು ಪ್ಲೇ ಮಾಡದಂತೆ ಸ್ಟ್ರೀಮಿಂಗ್ ಫ್ಲಾಟ್‌ಫಾರ್ಮ್‌ಗಳಿಗೆ ತಡೆಯಾಜ್ಞೆ ನೀಡಿತ್ತು.

ಕಾಂತಾರ ಚಿತ್ರದ ವರಾಹ ರೂಪಂ ಹಾಡು ಮತ್ತು 2015 ರಲ್ಲಿ ಬಿಡುಗಡೆಯಾದ ಥಕ್ಕುಡಂ ಬ್ರಿಡ್ಜ್‌‌ನ ‘ನವರಸಂ’ ಗೀತೆ ನಡುವೆ ‘ಸಾಮ್ಯತೆ’ ಇದೆ ಎಂದು ದೂರಲಾಗಿದೆ.

ನಿರ್ಮಾಪಕ, ನಿರ್ದೇಶಕ, ಸಂಗೀತ ಸಂಯೋಜಕರು, ಅಮೇಜಾನ್, ಯೂಟ್ಯೂಬ್‌, ಸ್ಪೋಟಿಫೈ, ವಿಂಕ್ ಮ್ಯೂಸಿಕ್, ಜಿಯೋಸಾವನ್ ಮತ್ತು ಇತರರು ಕಾಂತಾರ ಚಿತ್ರದ ವರಾಹ ರೂಪಂ ಹಾಡನ್ನು ಥೈಕ್ಕುಡಂ ಬ್ರಿಡ್ಜ್‌ನ ಅನುಮತಿಯಿಲ್ಲದೆ ಬಳಸುವಂತಿಲ್ಲ ಎಂದು ಕೋರ್ಟ್ ತಡೆಯಾಜ್ಞೆ ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...