Homeರಾಷ್ಟ್ರೀಯಸೇತುವೆ ಕುಸಿತ | ಗುಜರಾತ್ ಸರ್ಕಾರ ಇನ್ನೂ ಸಾರ್ವಜನಿಕರ ಕ್ಷಮೆ ಯಾಚಿಸಿಲ್ಲ: ಪಿ.ಚಿದಂಬರಂ

ಸೇತುವೆ ಕುಸಿತ | ಗುಜರಾತ್ ಸರ್ಕಾರ ಇನ್ನೂ ಸಾರ್ವಜನಿಕರ ಕ್ಷಮೆ ಯಾಚಿಸಿಲ್ಲ: ಪಿ.ಚಿದಂಬರಂ

- Advertisement -
- Advertisement -

ಕಳೆದ ವಾರ ಗುಜರಾತ್‌ನ ಮೊರ್ಬಿಯಲ್ಲಿ ಸೇತುವೆ ಕುಸಿದು 141 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಬಗ್ಗೆ ಕಾಂಗ್ರೆಸ್‌‌ ಸಂಸದ ಪಿ. ಚಿದಂಬರಂ ಮಂಗಳವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ವಾಸ್ತವದಲ್ಲಿ ಸರ್ಕಾರದಿಂದ ಯಾರೂ ಸಾರ್ವಜನಿಕರಲ್ಲಿ ಕ್ಷಮೆಯಾಚಿಸಲಿಲ್ಲ ಎಂದು ಸೂಚಿಸಿದ್ದಾರೆ. ಅಲ್ಲದೆ, ಗುಜರಾತ್‌ ಬಿಜೆಪಿಯನ್ನು ಪಿ.ಚಿದಂಬರಂ ತರಾಟೆಗೆ ತೆಗೆದುಕೊಂಡಿದ್ದಾರೆ.

“…ಅತ್ಯಂತ ಆಘಾತಕಾರಿ ಬೆಳವಣಿಗೆಯೆಂದರೆ, ದುರಂತಕ್ಕೆ ಸರ್ಕಾರದ ಪರವಾಗಿ ಯಾರೂ ಕ್ಷಮೆಯಾಚಿಸಲಿಲ್ಲ. ಘಟನೆಯ ಜವಾಬ್ದಾರಿ ಹೊತ್ತು ಯಾರೂ ರಾಜೀನಾಮೆ ನೀಡಿಲ್ಲ. ಮೋರ್ಬಿ ಸೇತುವೆ ಕುಸಿತವು ಗುಜರಾತ್‌‌ನ ಹೆಸರಿಗೆ ಅವಮಾನ ತಂದಿದೆ” ಎಂದು ಪಿ. ಚಿದಂಬರಂ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೊರ್ಬಿಯ ‘ತೂಗುವ ಸೇತುವೆ’ ಕುಸಿದು 141 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ.

ಇದನ್ನೂ ಓದಿ: ನೋಟ್‌ ಬ್ಯಾನ್‌ಗೆ 6 ವರ್ಷ: ಮೋದಿ ನೇತೃತ್ವದ BJP ಸರ್ಕಾರ ಅಂದು ಹೇಳಿದ್ದೇನು? ಈಗ ಆಗಿದ್ದೇನು?

ಸರಿಯಾದ ಅನುಮತಿಯಿಲ್ಲದೆ ಸೇತುವೆಯನ್ನು ಪುನಃ ತೆರೆಯಲಾಗಿದ್ದು, ಜನದಟ್ಟಣೆಯಿಂದಾಗಿ ಸೇತುವೆ ಮುರಿದುಹೋಗಿದೆ ಎಂದು ಪ್ರಾಥಮಿಕ ವಿಚಾರಣೆಗಳು ದೃಢಪಡಿಸಿವೆ. ಗೋಡೆ ಗಡಿಯಾರಗಳು ಮತ್ತು ಇ-ಬೈಕ್‌ಗಳನ್ನು ತಯಾರಿಸುವ ಖಾಸಗಿ ಕಂಪನಿಯಾದ ಓರೆವಾ ಗ್ರೂಪ್‌ಗೆ ನವೀಕರಣ ಮತ್ತು ನಿರ್ವಹಣೆಯ ಗುತ್ತಿಗೆ ನೀಡಲಾಗಿತ್ತು.

ಹೆಸರು ಹೇಳಲಿಚ್ಛಿಸದ ಹಿರಿಯ ಅಧಿಕಾರಿಯೊಬ್ಬರು ಒರೆವಾ ಸಂಸ್ಥೆ ಮತ್ತು ಮೊರ್ಬಿ ಮುನ್ಸಿಪಾಲಿಟಿ ಅಧಿಕಾರಿಗಳ ನಡುವಿನ ಒಪ್ಪಂದದಲ್ಲಿ ಕೆಲವು ಕಾರ್ಯವಿಧಾನದ ಲೋಪಗಳು ನಡೆದಿದೆ ಎಂದು ಹೇಳಿದ್ದಾರೆ.

ಕಳೆದ ವಾರ ಗುಜರಾತ್ ಸರ್ಕಾರವು ಮೋರ್ಬಿ ಮುನ್ಸಿಪಾಲಿಟಿಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಝಾಲಾ ಅವರನ್ನು ಅಮಾನತುಗೊಳಿಸಿದೆ. ಅಮಾನತು ಆದೇಶದಲ್ಲಿ ಯಾವುದೇ ನಿರ್ದಿಷ್ಟ ಆರೋಪವನ್ನು ಮಾಡಿಲ್ಲ ಎಂದು ಹಿಂದೂಸ್ಥಾನ್‌ ಟೈಮ್ಸ್‌ ವರದಿ ಹೇಳಿದೆ.

ಇದನ್ನೂ ಓದಿ: ನೋಟ್‌ ಬ್ಯಾನ್‌ ದುರಂತಕ್ಕೆ 6 ವರ್ಷ: ದೇಶ ಮರೆಯಬಾರದ ಚಿತ್ರಗಳಿವು!

ಸೋಮವಾರ ಮಾತನಾಡಿದ್ದ ಮತ್ತೊಬ್ಬ ಕಾಂಗ್ರೆಸ್ ನಾಯಕ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, “ದುರಂತವು ಬಿಜೆಪಿಯ 27 ವರ್ಷಗಳ ಆಡಳಿತದ ದುರಾಡಳಿತವನ್ನು ಬಹಿರಂಗಪಡಿಸಿದೆ…” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರದಿಂದ ವರದಿಯನ್ನು ಕೇಳಿದ್ದು, ಅಧಿಕಾರಿಗಳಿಗೆ ನೋಟಿಸ್ ನೀಡಿದೆ. ನ್ಯಾಯಾಲಯವು ಕೆಲವು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಬಯಸಿದ್ದು, ನವೆಂಬರ್ 14 ರೊಳಗೆ ಸ್ಥಿತಿಗತಿ ವರದಿಯನ್ನು ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದೆ. ಅಂದೆ ಪ್ರಕರಣ ಮತ್ತೆ ವಿಚಾರಣೆಗೆ ಬರಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...