Homeಮುಖಪುಟಭೀಮಕೊರೆಗಾಂವ್‌‌ ಹಿಂಸಾಚಾರ ಪ್ರಚೋದಿಸಿದ ಆರೋಪಿ, ಬಲಪಂಥೀಯ ನಾಯಕನ ಕಾಲಿಗೆರಗಿದ ಸುಧಾ ಮೂರ್ತಿ; ಆಕ್ಷೇಪ

ಭೀಮಕೊರೆಗಾಂವ್‌‌ ಹಿಂಸಾಚಾರ ಪ್ರಚೋದಿಸಿದ ಆರೋಪಿ, ಬಲಪಂಥೀಯ ನಾಯಕನ ಕಾಲಿಗೆರಗಿದ ಸುಧಾ ಮೂರ್ತಿ; ಆಕ್ಷೇಪ

ಬಿಂದಿ ಧರಿಸದ ಪತ್ರಕರ್ತೆಯೊಬ್ಬರನ್ನು ‘ವಿಧವೆ’ ಎಂದು ಹೇಳಿ ಅವಮಾನಿಸಿದ್ದ ಭಿಡೆ ವಿರುದ್ಧ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ

- Advertisement -
- Advertisement -

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವಿವಾದಾತ್ಮಕ ಬಲಪಂಥೀಯ ನಾಯಕ, ಶಿವ ಪ್ರತಿಷ್ಠಾನ ಸಂಸ್ಥಾಪಕ ಸಂಭಾಜಿ ರಾವ್ ಭಿಡೆ ಅವರನ್ನು ಇನ್ಫೋಸಿಸ್‌ ಸಹ-ಸಂಸ್ಥಾಪಕಿ ಸುಧಾ ಮೂರ್ತಿ ಅವರು ಭೇಟಿಯಾಗಿದ್ದು, ಕಾಲಿಗೆ ಎರಗಿ ಆಶೀರ್ವಾದ ಪಡೆದಿದ್ದಾರೆ. ವಿಡಿಯೊ ಮತ್ತು ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಸುಧಾ ಮೂರ್ತಿ ಅವರು ಬಲಪಂಥೀಯ ನಾಯಕನ ಭೇಟಿಯಾಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತಿಯಾಗಿದ್ದು, ಹಲವಾರು ಜನರು ಇದನ್ನು ವಿರೋಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಭೇಟಿಯ ಕುರಿತು ಪ್ರತಿಕ್ರಿಯಿಸಿರುವ ಪತ್ರಕರ್ತೆ ಮಾನ್ಸಿ ದೇಶಪಾಂಡೆ ಅವರು, “ಕೇವಲ ಹೆಚ್ಚುವರಿ ಮಾಹಿತಿ. ಕೆಲ ದಿನಗಳ ಹಿಂದೆ ಮಹಿಳಾ ವರದಿಗಾರ್ತಿಯೊಬ್ಬರು ಬಿಂದಿ ಧರಿಸಿಲ್ಲ ಎಂಬ ಕಾರಣಕ್ಕೆ ಅವರೊಂದಿಗೆ ಮಾತನಾಡಲು ನಿರಾಕರಿಸಿದ್ದು ಇದೇ ವ್ಯಕ್ತಿ… ಮತ್ತು ಈ ಚಿತ್ರವೊಂದರಲ್ಲಿ ಸುಧಾ ಮೂರ್ತಿ ಅವರ ಪಾದಗಳನ್ನು ಸ್ಪರ್ಶಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಭಿಡೆ ನವೆಂಬರ್ 2 ರಂದು ಬಿಂದಿ ಧರಿಸದ ಮಹಿಳಾ ಪತ್ರಕರ್ತೆಯೊಂದಿಗೆ ಮಾತನಾಡಲು ನಿರಾಕರಿಸಿದ್ದು, ಇದರ ವಿರುದ್ಧ ಅವರಿಗೆ ಮಹಾರಾಷ್ಟ್ರ ಮಹಿಳಾ ಆಯೋಗ ಅವರಿಗೆ ನೋಟಿಸ್ ಜಾರಿ ಮಾಡಿದೆ. ಮಹಿಳೆ ಭಾರತ ಮಾತೆಯನ್ನು ಹೋಲುತ್ತಾಳೆ, ಅವಳು ಬಿಂದಿ ಹಾಕದೆ “ವಿಧವೆ” ಯಂತೆ ಕಾಣಿಸಿಕೊಳ್ಳಬಾರದು ಎಂದು ಅವರು ಮಹಿಳಾ ಪತ್ರಕರ್ತರಿಗೆ ಅವಮಾನಿಸಿದ್ದರು.

ಇದನ್ನೂ ಓದಿ: 2009ರಲ್ಲಿ ಯುಪಿಎ ಅಧಿಕಾರಕ್ಕೆ ಶ್ಲಾಘನೆ, ಈಗ ಟೀಕೆ; ವೈರಲ್‌ ಆಯ್ತು ಇನ್ಫೋಸಿಸ್‌ ನಾರಾಯಣಮೂರ್ತಿ ಹಳೆಯ ಸಂದರ್ಶನ

ಇಬ್ಬರ ಭೇಟಿಯ ಕುರಿತು ಪ್ರತಿಕ್ರಿಯಿಸಿದ ಎಎಪಿ ನಾಯಕಿ ಪ್ರೀತಿ ಶರ್ಮಾ ಮೆನನ್, “ಅವರು ಬಿಂದಿ ಧರಿಸಿದ್ದರು ಎಂದು ನಂಬಿ. ಸುಧಾ ಮೂರ್ತಿಯಂತಹವರು ಭಿಡೆಯಂತಹ ಧರ್ಮಾಂಧರನ್ನು ಭೇಟಿಯಾಗುವುದರ ಮೂಲಕ ಅವರು ತಮ್ಮ ನಿಜವಾದ ಬಣ್ಣವನ್ನು ಬಹಿರಂಗಪಡಿಸಿದ್ದಾರೆ” ಎಂದು ಹೇಳಿದ್ದಾರೆ.

ಸಂಭಾಜಿ ರಾವ್ ಭಿಡೆ ಅವರು ಆರೆಸ್ಸೆಸ್ಸಿನ ಮಾಜಿ ನಾಯಕ ಕೂಡಾ ಆಗಿದ್ದು, 2018 ರಲ್ಲಿ ಸಂಭವಿಸಿದ ಭೀಮಾ ಕೋರೆಗಾಂವ್ ಘರ್ಷಣೆಯಲ್ಲಿ, ಕಲ್ಲು ತೂರಾಟದ ಮೂಲಕ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪದ ಮೇಲೆ ಅವರ ವಿರುದ್ಧ ಪ್ರಕರಣ ಕೂಡಾ ದಾಖಲಾಗಿತ್ತು.

2018 ರಲ್ಲಿ, ಭಿಡೆ ಅವರು ತಮ್ಮ ತೋಟದಿಂದ ಮಾವಿನ ಹಣ್ಣುಗಳನ್ನು ತಿಂದ ನಂತರ ದಂಪತಿಗಳಿಗೆ ಮಕ್ಕಳು ಹುಟ್ಟಿದೆ ಎಂದು ಹೇಳಿ ಟೀಕೆಗಳನ್ನು ಎದುರಿಸಿದ್ದರು. ಅಲ್ಲದೆ, 2008 ರಲ್ಲಿ ಅಶುತೋಷ್ ಗೋವಾರಿಕರ್ ಅವರ ಐತಿಹಾಸಿಕ ಚಲನಚಿತ್ರ ಜೋಧಾ ಅಕ್ಬರ್ ವಿರುದ್ಧದ ನಡೆದ ಪ್ರತಿಭಟನೆಗಳಲ್ಲಿ ಮುಂಚೂಣಿಯಲ್ಲಿದ್ದರು. ಜೊತೆಗೆ ಚಿತ್ರಮಂದಿರಗಳನ್ನು ದೋಚಿದ್ದಕ್ಕಾಗಿ ಮತ್ತು ಚಲನಚಿತ್ರದ ಪ್ರದರ್ಶನವನ್ನು ನಿಲ್ಲಿಸಿದ್ದಕ್ಕಾಗಿ ಭಿಡೆ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂ ಓದಿ: ಮಾತು ಮರೆತ ಭಾರತ; ಭೀಮಾ ಕೊರೆಗಾಂವ್ ಫೈಲ್: ಅಂಬೇಡ್ಕರ್ ಮನೆತನದ ಸದಸ್ಯನನ್ನೇ ಜೈಲಿಗಟ್ಟಿದ ಬಿಜೆಪಿ ಸರ್ಕಾರ

ಮತ್ತೊಬ್ಬ ಟ್ವಿಟ್ಟರ್ ಬಳಕೆದಾರರು, “ಒಂದು ಕಾಲದಲ್ಲಿ, ಅವರು ಟೆಲ್ಕೊದ ‘ಓನ್ಲಿ ಮೆನ್’ ನೀತಿಯನ್ನು ಪ್ರಶ್ನಿಸಿ, ಪುರುಷ ಪ್ರಾಬಲ್ಯದ ವಿರುದ್ಧ ನಿಂತಿದ್ದರು. ಈಗ ಬಿಂದಿ ಧರಿಸಲಿಲ್ಲ ಎಂದು ಪತ್ರಕರ್ತೆಯೊಂದಿಗೆ ಮಾತನಾಡಲು ನಿರಾಕರಿಸಿದ ವ್ಯಕ್ತಿಯಿಂದ ಆಶೀರ್ವಾದ ತೆಗೆದುಕೊಳ್ಳುತ್ತಿದ್ದಾರೆ. ಎಂತಹ ಕುಸಿತ ಶ್ರೀಮತಿ ಸುಧಾ ಮೂರ್ತಿ (ವಾಟ್ ಎ ಫಾಲ್ ಮಿಸೆಸ್ ಸುಧಾ ಮೂರ್ತಿ)” ಎಂದು ಹೇಳಿದ್ದಾರೆ.

ಭಿಡೆ ಅವರು ಪುಣೆಯ ಫರ್ಗುಸನ್ ಕಾಲೇಜಿನಲ್ಲಿ ಭೌತಶಾಸ್ತ್ರದ ಪ್ರಾಧ್ಯಾಪಕರಾಗಿದ್ದರು. ನಂತರ, ಅವರು ಆರೆಸ್ಸೆಸ್ ಪ್ರಚಾರಕರಾಗಿ ಸೇರಿಕೊಂಡು, ಶಿವ ಪ್ರತಿಷ್ಠಾನ ಹಿಂದೂಸ್ತಾನ್ ಎಂಬ ಸಂಘಟನೆಯನ್ನು ಸ್ಥಾಪಿಸಿದರು. ಶಿವ ಪ್ರತಿಷ್ಠಾನ ಮರಾಠ ದೊರೆ ಶಿವಾಜಿ ಅವರ ಮಗ ಸಂಭಾಜಿಯ ಜೀವನದ ಬೋಧನೆಗಳು ಮತ್ತು ಮಾಹಿತಿಯನ್ನು ಹರಡಲು ಸ್ಥಾಪಿಸಲಾಗಿದೆ. ಮಹಾರಾಷ್ಟ್ರದ ಸಾಂಗ್ಲಿ, ಕೊಲ್ಲಾಪುರ ಮತ್ತು ಸತಾರಾದಲ್ಲಿ, ವಿಶೇಷವಾಗಿ ಯುವಜನರ ನಡುವೆ ಭಿಡೆ ಸಾಕಷ್ಟು ಅನುಯಾಯಿಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ: ಮಹಿಳಾ ಮುಖ್ಯ ನ್ಯಾಯಮೂರ್ತಿ: ತನ್ನ ಪೂರ್ವಾಗ್ರಹಗಳಿಂದ ಬಿಡುಗಡೆ ಹೊಂದುವುದೇ ಸುಪ್ರೀಂಕೋರ್ಟ್?

ಇದನ್ನೂ ಓದಿ: ವ್ಯವಸ್ಥೆಯ ವಿರೋಧ, ಪ್ರಜಾಪ್ರಭುತ್ವವಾದಿ ಸಮಾನತೆಗೆ ಸಂಕೇತದಂತಿದ್ದ ನನ್ನ ಗುರು ಚಂಪಾ

ಈ ನಡುವೆ ಸುಧಾ ಮೂರ್ತಿ ಮತ್ತು ಭಿಡೆ ಭೇಟಿಯ ಬಗ್ಗೆ ಬಲಪಂಥೀಯರು ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....