Homeಕರ್ನಾಟಕಬೆಂಗಳೂರು: ಹಾಸ್ಯ ಕಾರ್ಯಕ್ರಮ ರದ್ದು ಮಾಡುವಂತೆ ದೂರು ನೀಡಿದ ಬಲಪಂಥೀಯರು; ಹಾಸ್ಯನಟ ವೀರ್‌‌ ದಾಸ್ ವಿರುದ್ಧ...

ಬೆಂಗಳೂರು: ಹಾಸ್ಯ ಕಾರ್ಯಕ್ರಮ ರದ್ದು ಮಾಡುವಂತೆ ದೂರು ನೀಡಿದ ಬಲಪಂಥೀಯರು; ಹಾಸ್ಯನಟ ವೀರ್‌‌ ದಾಸ್ ವಿರುದ್ಧ FIR

- Advertisement -
- Advertisement -

ನವೆಂಬರ್ 10 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾಮೇಡಿಯನ್‌ ವೀರ್‌‌ ದಾಸ್ ಅವರ ಹಾಸ್ಯ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಬಲಪಂಥೀಯ ಸಂಘಟನೆ ಹಿಂದೂ ಜನಜಾಗೃತಿ ಸಮಿತಿ ಪೊಲೀಸರಿಗೆ ದೂರು ನೀಡಿದೆ. ಅವರ ದೂರಿನ ಮೇರೆಗೆ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ವೀರ್‌‌ ದಾಸ್ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಸ್ಟ್ಯಾಂಡ್ ಅಪ್ ಕಾಮಿಡಿಯನ್ ಆಗಿರುವ ವೀರ್‌‌ ದಾಸ್ ಅವರ ಕಾರ್ಯಕ್ರಮವೂ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಮತ್ತು ಭಾರತವನ್ನು ಜಗತ್ತಿಗೆ ಕೆಟ್ಟ ರೀತಿಯನ್ನು ತೋರಿಸುತ್ತದೆ ಎಂದು ದೂರಿನಲ್ಲಿ ಹೇಳಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹಾಸ್ಯನಟ ವೀರ್‌‌ ದಾಸ್ ಅವರು ನವೆಂಬರ್ 10 ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ಹಾಸ್ಯ ಕಾರ್ಯಕ್ರಮ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಅಮೆರಿಕದ ವಾಷಿಂಗ್ಟನ್ ಡಿಸಿಯ ಜಾನ್ ಎಫ್. ಕೆನಡಿ ಸೆಂಟರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳೆಯರು, ನಮ್ಮ ಪ್ರಧಾನಿ ಮತ್ತು ಭಾರತದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಜೊತೆಗೆ ದೇಶವನ್ನು ಅವಮಾನಿಸಿದ್ದಾರೆ” ಎಂದು ಹಿಂದೂ ಜನಜಾಗೃತಿ ಸಮಿತಿ ವಕ್ತಾರ ಮೋಹನ್ ಗೌಡ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಪುನೀತ್‌ ರಾಜ್‌ಕುಮಾರ್‌‌ ಸಂಸ್ಥೆಯ ದೇಣಿಗೆಗಾಗಿ ಆಯೋಜಿಸಿದ್ದ ಕಾರ್ಯಕ್ರಮ ರದ್ದುಗೊಳಿಸಿದ ಪೊಲೀಸರು

“ಇದು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಗಂಭೀರ ಅಪರಾಧವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಂತಹ ಕೋಮು ಸೂಕ್ಷ್ಮ ನಗರದಲ್ಲಿ ಇಂತಹ ವಿವಾದಾತ್ಮಕ ವ್ಯಕ್ತಿಗೆ ಇಂತಹ ಕಾರ್ಯಕ್ರಮ ನಡೆಸಲು ಅವಕಾಶ ನೀಡುವುದು ಸರಿಯಲ್ಲ” ಎಂದು ದೂರಿನಲ್ಲಿ ತಿಳಿಸಲಾಗಿದೆ.

“ಕರ್ನಾಟಕವು ಈಗಾಗಲೇ ಕೋಮು ಘಟನೆಗಳಿಂದ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವಾಗ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಇಂತಹ ಘಟನೆಗಳಿಗೆ ಅವಕಾಶ ನೀಡಬಾರದು. ಈ ಕಾರ್ಯಕ್ರಮವನ್ನು ತಕ್ಷಣವೇ ರದ್ದುಗೊಳಿಸಬೇಕು” ಎಂದು ದೂರು ಹೇಳಿದ್ದು, ಪ್ರಕರಣದ ತನಿಖೆಯನ್ನು ಪೊಲೀಸರು ಕೈಗೆತ್ತಿಕೊಂಡಿದ್ದಾರೆ.

ಕಳೆದ ವರ್ಷ, ವಾಷಿಂಗ್ಟನ್‌ನಲ್ಲಿ ವೀರ್‌‌ ದಾಸ್ ಅವರ ಪ್ರದರ್ಶನದ ನಂತರ ವಕೀಲರೊಬ್ಬರು ಮುಂಬೈ ಪೊಲೀಸರಿಗೆ ದೂರು ನೀಡಿದ್ದರು. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಬಿಜೆಪಿಯ ಕಾನೂನು ಸಲಹೆಗಾರ, ವಕೀಲ ಅಶುತೋಷ್ ದುಬೆ ಅವರು ಭಾರತ, ಭಾರತೀಯ ಮಹಿಳೆಯರು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ “ಉದ್ದೇಶಪೂರ್ವಕವಾಗಿ ಪ್ರಚೋದಿಸುವ ಮತ್ತು ಅವಹೇಳನಕಾರಿ ಹೇಳಿಕೆ” ನೀಡಿದ್ದಕ್ಕಾಗಿ ವೀರ್‌‌ ದಾಸ್ ವಿರುದ್ಧ ದೂರು ದಾಖಲಿಸಿದ್ದರು.

ಇದನ್ನೂ ಓದಿ: ಕಾಮೇಡಿಯನ್ ’ಕುನಾಲ್ ಕಮ್ರ’ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ

ಈ ದೂರಿನ ಬಗ್ಗೆ ಪ್ರತಿಕ್ರಿಯಿಸಿದ್ದ ವೀರ್‌‌ ದಾಸ್, “ವಿವಾದವಾಗಿರುವ ವೀಡಿಯೊವು ವಿಭಿನ್ನ ಕೆಲಸಗಳನ್ನು ಮಾಡುವ ಎರಡು ಪ್ರತ್ಯೇಕ ಭಾರತದ ದ್ವಂದ್ವತೆಯ ಬಗ್ಗೆಗಿನ ವಿಡಂಬನೆಯಾಗಿದೆ. ಯಾವುದೇ ರಾಷ್ಟ್ರಗಳಲ್ಲಿ ಕೂಡಾ ಬೆಳಕು ಮತ್ತು ಕತ್ತಲೆ, ಒಳ್ಳೆಯದು ಮತ್ತು ಕೆಟ್ಟದ್ದು ಇರುತ್ತದೆ. ಇದೇನೂ ಗುಟ್ಟಲ್ಲ. ನಾವು ಶ್ರೇಷ್ಠರು ಎಂಬುದನ್ನು ಎಂದಿಗೂ ಮರೆಯಬಾರದು ಎಂದು ವೀಡಿಯೊ ಮನವಿ ಮಾಡುತ್ತದೆ. ನಮ್ಮನ್ನು ಶ್ರೇಷ್ಠರನ್ನಾಗಿಸುವುದರ ಮೇಲೆ ಕೇಂದ್ರೀಕರಿಸುವುದನ್ನು ಎಂದಿಗೂ ನಿಲ್ಲಿಸಬಾರದು” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಾರತ, ಹಿಟ್ಲರನ ಜರ್ಮನಿಯಾಗುವತ್ತ ವೇಗವಾಗಿ ಸಾಗುತ್ತಿದೆ. ಇದು ನಮ್ಮ ದುರಂತ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...