Homeಮುಖಪುಟಭಾರತವು ಮನಮೋಹನ್‌ ಸಿಂಗ್ ಅವರಿಗೆ ಋಣಿಯಾಗಿದೆ: ನಿತಿನ್ ಗಡ್ಕರಿ

ಭಾರತವು ಮನಮೋಹನ್‌ ಸಿಂಗ್ ಅವರಿಗೆ ಋಣಿಯಾಗಿದೆ: ನಿತಿನ್ ಗಡ್ಕರಿ

- Advertisement -
- Advertisement -

ಭಾರತದ ಆರ್ಥಿಕ ಸುಧಾರಣೆಗಳಿಗಾಗಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ದೇಶವು ಋಣಿಯಾಗಿದೆ ಎಂದು ಒಕ್ಕೂಟ ಸರ್ಕಾರದ ಸಚಿವ ನಿತಿನ್ ಗಡ್ಕರಿ ಹೇಳಿದ್ದು, ಬಡವರಿಗೆ ಸವಲತ್ತುಗಳನ್ನು ಒದಗಿಸುವ ಗುರಿಯೊಂದಿಗೆ ದೇಶಕ್ಕೆ ಉದಾರ ಆರ್ಥಿಕ ನೀತಿಯ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಮನಮೋಹನ್ ಸಿಂಗ್ ಅವರು 1991 ರಲ್ಲಿ ಹಣಕಾಸು ಸಚಿವರಾಗಿದ್ದ ಅವಧಿಯಲ್ಲಿ ಪ್ರಾರಂಭಿಸಿದ ಆರ್ಥಿಕ ಸುಧಾರಣೆಗಳು ಭಾರತವನ್ನು ಹೊಸ ದಿಕ್ಕಿನತ್ತ ಕೊಂಡೊಯ್ದವು ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ. ‘ಟ್ಯಾಕ್ಸ್‌ಇಂಡಿಯಾ ಆನ್‌ಲೈನ್’ ಪೋರ್ಟಲ್ ಆಯೋಜಿಸಿದ್ದ ಟಿಐಒಎಲ್‌ ಅವಾರ್ಡ್ಸ್ 2022 ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮನಮೋಹನ್ ಅವರ ಕ್ರಮಗಳು ಉದಾರ ಆರ್ಥಿಕತೆಗೆ ನಾಂದಿ ಹಾಡಿದವು. 1990ರ ದಶಕದ ಮಧ್ಯಭಾಗದಲ್ಲಿ ಮಹಾರಾಷ್ಟ್ರದಲ್ಲಿ ರಸ್ತೆಗಳನ್ನು ನಿರ್ಮಿಸಲು ಹಣವನ್ನು ಸಂಗ್ರಹಿಸಲು ಸಿಂಗ್‌‌ ಅವರ ನೀತಿಗಳು ನೆರವಾದವು” ಎಂದು ಗಡ್ಕರಿ ನೆನಪಿಸಿಕೊಂಡಿದ್ದಾರೆ. ಆ ಸಮಯದಲ್ಲಿ ನಿತಿನ್ ಗಡ್ಕರಿ ಅವರು ಮಹಾರಾಷ್ಟ್ರದ ಸಂಪುಟದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಇದನ್ನೂ ಓದಿ: ಬಿಜೆಪಿ ಸಂಸದೀಯ ಮಂಡಳಿ: ಬಿ.ಎಸ್.ಯಡಿಯೂರಪ್ಪ ಒಳಗೆ, ನಿತಿನ್ ಗಡ್ಕರಿ ಔಟ್; ಆದಿತ್ಯನಾಥ್‌ಗೆ ಸ್ಥಾನವಿಲ್ಲ!

ಉದಾರ ಆರ್ಥಿಕ ನೀತಿಯು ರೈತರು ಮತ್ತು ಬಡವರಿಗಾಗಿ ಇದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರೂ ಆಗಿರುವ ಗಡ್ಕರಿ ಹೇಳಿದ್ದಾರೆ.

ಒಂದು ದೇಶದ ಅಭಿವೃದ್ಧಿಗೆ ಸಹಾಯ ಮಾಡುವ ಉದಾರ ಆರ್ಥಿಕ ನೀತಿಗೆ ಚೀನಾ ಉತ್ತಮ ಉದಾಹರಣೆಯಾಗಿದೆ ಎಂದು ಸೂಚಿಸಿದ ಅವರು, “ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸಲು ಭಾರತಕ್ಕೆ ಹೆಚ್ಚಿನ ಬಂಡವಾಳ ವೆಚ್ಚದ ಹೂಡಿಕೆಯ ಅಗತ್ಯವಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಹೆದ್ದಾರಿಗಳ ನಿರ್ಮಾಣದ ಬಗ್ಗೆ ಮಾತನಾಡಿದ ಸಚಿವರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಜನಸಾಮಾನ್ಯರಿಂದ ಹಣ ಸಂಗ್ರಹಿಸುತ್ತಿದೆ. ಸಚಿವಾಲಯವು 26 ಹಸಿರು ಎಕ್ಸ್‌ಪ್ರೆಸ್‌ವೇಗಳನ್ನು ನಿರ್ಮಿಸುತ್ತಿದೆ ಮತ್ತು ಹಣದ ಕೊರತೆಯನ್ನು ಎದುರಿಸುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಸೋಂಕಿಗಿಂತ ರಸ್ತೆ ಅಪಘಾತದಲ್ಲಿ ಮೃತಪಟ್ಟವರೇ ಹೆಚ್ಚು: ಸಚಿವ ನಿತಿನ್ ಗಡ್ಕರಿ

“ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಟೋಲ್ ಆದಾಯವು ಪ್ರಸ್ತುತ ವಾರ್ಷಿಕ 40,000 ಕೋಟಿಗಳಿಂದ 2024 ರ ಅಂತ್ಯದ ವೇಳೆಗೆ 1.40 ಲಕ್ಷ ಕೋಟಿಗೆ ಏರಲಿದೆ” ಎಂದು ಅವರು ಉಲ್ಲೇಖಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...