Homeಮುಖಪುಟಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ವೈ. ಚಂದ್ರಚೂಡ್

ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ವೈ. ಚಂದ್ರಚೂಡ್

- Advertisement -
- Advertisement -

ನ್ಯಾಯಮೂರ್ತಿ ಧನಂಜಯ ಯಶವಂತ್ ಚಂದ್ರಚೂಡ್ ಅವರು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಅವರಿಂದ ಬುಧವಾರ ಅಧಿಕಾರವನ್ನು ವಹಿಸಿಕೊಂಡರು.

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಅವರಿಗೆ ಪ್ರಮಾಣ ವಚನ ಬೋಧಿಸಿದರು. 74 ದಿನಗಳ ಕಾಲ ಸೇವೆ ಸಲ್ಲಿಸಿದ ಲಲಿತ್ ಅವರು ಚಂದ್ರಚೂಡ್ ಅವರನ್ನು ಉತ್ತರಾಧಿಕಾರಿಯಾಗಿ ಅಕ್ಟೋಬರ್ 11 ರಂದು ಶಿಫಾರಸು ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಒಕ್ಕೂಟ ಸರ್ಕಾರದ ಕಾನೂನು ಸಚಿವ ಕಿರಣ್ ರಿಜಿಜು ಅವರು ಚಂದ್ರಚೂಡ್‌ ಅವರ ನೇಮಕವನ್ನು ಅಕ್ಟೋಬರ್ 17 ರಂದು ಪ್ರಕಟಿಸಿದ್ದರು. ಈ ನಡುವೆ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಬಾರದು ಎಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ನವೆಂಬರ್ 2 ರಂದು ಸುಪ್ರೀಂಕೋರ್ಟ್ ವಜಾ ಮಾಡಿತ್ತು.

ಇದನ್ನೂ ಓದಿ: ಬಾಬರಿ ತೀರ್ಪಿತ್ತ ದಿನ ಇತರ ನ್ಯಾಯಮೂರ್ತಿ‌ಗಳನ್ನು ಡಿನ್ನರ್‌ಗೆ ಕರೆದೊಯ್ದು, ಉತ್ತಮ ವೈನ್‌ ಕೊಡಿಸಿದ್ದೆ: ನಿವೃತ್ತ ಸಿಜೆಐ ರಂಜನ್ ಗೊಗೊಯ್

ಚಂದ್ರಚೂಡ್ ಅವರ ಅಧಿಕಾರಾವಧಿಯು ಎರಡು ವರ್ಷಗಳ ಕಾಲ ಇರಲಿದ್ದು, ನವೆಂಬರ್ 10, 2024 ರವರೆಗೆ ಅವರು ಅಧಿಕಾರದಲ್ಲಿ ಇರುತ್ತಾರೆ.

ಎರಡೂವರೆ ವರ್ಷಗಳ ಕಾಲ ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ ನಂತರ ಅವರು ಮೇ 13, 2016 ರಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡರು.

ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸ ದಿನ: ರಾಮ್‌ ಕೆ ನಾಮ್ | ರಾಮನ ಹೆಸರಿನಲ್ಲಿ | In the name of god

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ವೈ.ವಿ. ಚಂದ್ರಚೂಡ್ ಅವರ ಪುತ್ರರಾಗಿರುವ ಡಿ.ವೈ. ಚಂದ್ರಚೂಡ್ ಅವರನ್ನು ಜೂನ್ 1998 ರಲ್ಲಿ ಬಾಂಬೆ ಹೈಕೋರ್ಟ್‌ನಿಂದ ಹಿರಿಯ ವಕೀಲರಾಗಿ ನೇಮಿಸಲಾಯಿತು. 2000ದ ಮಾರ್ಚ್ ತಿಂಗಳಲ್ಲಿ ಅವರು ಹೈಕೋರ್ಟ್‌ ನ್ಯಾಯಾಧೀಶರಾಗಿ ನೇಮಕಗೊಂಡರು.

ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿದ್ದ ಅವಧಿಯಲ್ಲಿ, ಚಂದ್ರಚೂಡ್ ಅವರು ಖಾಸಗಿತನವನ್ನು ಮೂಲಭೂತ ಹಕ್ಕು ಎಂದು ಘೋಷಿಸುವುದು ಸೇರಿದಂತೆ ಹಲವು ಮಹತ್ವದ ತೀರ್ಪುಗಳನ್ನು ನೀಡಿದ್ದಾರೆ.

ವಯಸ್ಕರ ನಡುವಿನ ಒಪ್ಪಿತ ಸಲಿಂಗಕಾಮ ಚಟುವಟಿಕೆಯು ಅಪರಾಧವಲ್ಲ ಎಂದು ಸರ್ವಾನುಮತದಿಂದ ತೀರ್ಪು ನೀಡಿದ್ದ ಐದು ನ್ಯಾಯಾಧೀಶರ ಪೀಠದಲ್ಲಿ ಚಂದ್ರಚೂಡ್‌ ಕೂಡಾ ಒಬ್ಬರಾಗಿದ್ದರು. ಈ ತೀರ್ಪಿನ ಮೂಲಕ, ಶಾಸಕಾಂಗ ಮಾತ್ರ ಕಾನೂನುಗಳನ್ನು ಬದಲಾಯಿಸಬಹುದು ಎಂದು ಹೇಳಿದ ನ್ಯಾಯಾಲಯವು 2013 ರಿಂದ ಇದ್ದ ತನ್ನದೇ ಆದೇಶವನ್ನು ತಿರಸ್ಕರಿಸಿತು.

ಇದನ್ನೂ ಓದಿ: ಬಾಬರಿ ಮಸೀದಿ ಒಡೆದ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದ ನ್ಯಾಯಾಧೀಶ ಯುಪಿ ಉಪಲೋಕಾಯುಕ್ತರಾಗಿ ನೇಮಕ

2019ರ ನವೆಂಬರ್‌ನಲ್ಲಿ, ಬಾಬರಿ ಮಸೀದಿ ದ್ವಂಸ ಪ್ರಕರಣದಲ್ಲಿ ಮಸೀದಿ ಇದ್ದ ಪ್ರದೇಶದಲ್ಲಿ ರಾಮ ಮಂದಿರ ನಿರ್ಮಿಸಲು ಟ್ರಸ್ಟ್‌ಗೆ ಹಸ್ತಾಂತರಿಸಬೇಕೆಂದು ಸರ್ವಾನುಮತದಿಂದ ನಿರ್ಧರಿಸಿದ ಐವರು ನ್ಯಾಯಾಧೀಶರಲ್ಲಿ ಚಂದ್ರಚೂಡ್ ಕೂಡ ಒಬ್ಬರು. ಮಸೀದಿ ನಿರ್ಮಾಣಕ್ಕಾಗಿ ಮುಸ್ಲಿಮರಿಗೆ ಅಯೋಧ್ಯೆಯಲ್ಲಿ ಪ್ರತ್ಯೇಕ ಐದು ಎಕರೆ ಜಾಗವನ್ನು ನೀಡಬೇಕು ಎಂದು ಪೀಠವು ತೀರ್ಪು ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...