Homeಮುಖಪುಟನನ್ನ ಹೃದಯ ಘಾಸಿಯಾಗಿದೆ: ದ್ವೇಷದ ಟ್ರೋಲ್‌ಗಳಿಂದ ಮನನೊಂದು ರಶ್ಮಿಕಾ ಪೋಸ್ಟ್‌

ನನ್ನ ಹೃದಯ ಘಾಸಿಯಾಗಿದೆ: ದ್ವೇಷದ ಟ್ರೋಲ್‌ಗಳಿಂದ ಮನನೊಂದು ರಶ್ಮಿಕಾ ಪೋಸ್ಟ್‌

- Advertisement -
- Advertisement -

ವಿನಾಕಾರಣ ಟ್ರೋಲ್‌ಗಳಿಗೆ ಒಳಗಾಗುತ್ತಿರುವ ಬಹುಭಾಷಾ ನಟಿ, ಕೊಡಗಿನ ರಶ್ಮಿಕಾ ಮಂದಣ್ಣ ಅವರು ತಮಗಾಗುತ್ತಿರುವ ಬೇಸರವನ್ನು ಹಂಚಿಕೊಂಡಿದ್ದಾರೆ.

ಯಾವುದೇ ಸ್ಪಷ್ಟ ಕಾರಣವಿಲ್ಲದೆ ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತಲಾಗುತ್ತಿರುವ ತಮ್ಮ ವಿರುದ್ಧದ ದ್ವೇಷದ ಅಭಿಯಾನ ಹಾಗೂ ಅಪಹಾಸ್ಯದ ವಿರುದ್ಧ ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಶ್ಮಿಕಾ ಮಾತುಗಳು:

“ಕಳೆದ ಕೆಲವು ದಿನಗಳು, ವಾರಗಳು, ತಿಂಗಳುಗಳು ಅಥವಾ ಬಹುಶಃ ವರ್ಷಗಳಲ್ಲಿ ಒಂದೆರಡು ವಿಷಯಗಳು ನನ್ನನ್ನು ಸಮಸ್ಯೆಗೆ ದೂಡಿವೆ. ನಾನು ಅದನ್ನು ಪರಿಹರಿಸುವ ಸಮಯ ಇದೆಂದು ನಾನು ಭಾವಿಸುತ್ತೇನೆ. ನಾನು ನನಗಾಗಿ ಮಾತ್ರ ಮಾತನಾಡುತ್ತಿದ್ದೇನೆ. ಇದನ್ನು ನಾನು ವರ್ಷಗಳ ಹಿಂದೆಯೇ ಮಾಡಬೇಕಾಗಿತ್ತು. ನಾನು ನನ್ನ ವೃತ್ತಿಜೀವನವನ್ನು ಪ್ರಾರಂಭಿಸಿದಾಗಿನಿಂದಲೂ ಬಹಳಷ್ಟು ದ್ವೇಷವನ್ನು ಸ್ವೀಕರಿಸುತ್ತಿದ್ದೇನೆ. ಸಾಕಷ್ಟು ಟ್ರೋಲ್‌ ಮತ್ತು ನಕಾರಾತ್ಮಕತೆಗೆ ಒಳಗಾಗಿದ್ದೇನೆ” ಎಂದು ಅವರು ಬರೆದಿದ್ದಾರೆ.

“ನಾನು ಆಯ್ಕೆ ಮಾಡಿದ ಜೀವನವು ಮೌಲ್ಯದೊಂದಿಗೆ ಕೂಡಿದೆ ಎಂದು ನನಗೆ ತಿಳಿದಿದೆ. ನಾನು ಪ್ರತಿಯೊಬ್ಬರ ಕಪ್‌ ಆಫ್‌ ಟೀ ಅಲ್ಲ. ಖಂಡಿತವಾಗಿಯೂ ಪ್ರತಿಯೊಬ್ಬ ವ್ಯಕ್ತಿಯಿಂದಲೂ ಪ್ರೀತಿಸಲ್ಪಡಬೇಕೆಂದು ನಾನು ನಿರೀಕ್ಷಿಸುವುದಿಲ್ಲ ಎಂಬುದನ್ನು ಅರ್ಥಮಾಡಿಕೊಂಡಿದ್ದೇನೆ. ನೀವು ನನ್ನನ್ನು ಒಪ್ಪದ ಕಾರಣ ನೀವು ನಕಾರಾತ್ಮಕತೆಯನ್ನು ಹೊರಹಾಕಬಹುದು ಎಂದು ಇದರ ಅರ್ಥವಲ್ಲ. ನೀವೆಲ್ಲರೂ ಖುಷಿಯಿಂದರಲು ನಾನು ಯಾವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ ಎಂದು ನನಗೆ ಮಾತ್ರ ತಿಳಿದಿದೆ. ನಾನು ಮಾಡಿದ ಕಾರ್ಯಕ್ಕೆ ನೀವು ಖುಷಿಯಾದಾಗ ನಾನು ಹೆಚ್ಚು ಕಾಳಜಿ ವಹಿಸುತ್ತೇನೆ. ನೀವು ಮತ್ತು ನಾನು ಹೆಮ್ಮೆಪಡುವ ವಿಷಯಗಳನ್ನು ಹಂಚಿಕೊಳ್ಳಲು ನಾನು ನಿಜವಾಗಿಯೂ ಪ್ರಯತ್ನಿಸುತ್ತಿದ್ದೇನೆ.”

“ನಾನು ಹೇಳದೆ ಇರುವ ವಿಷಯಗಳ ಕಾರಣಕ್ಕಾಗಿ ನನ್ನನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪಹಾಸ್ಯ ಮಾಡಿದಾಗ ನನ್ನ ಹೃದಯ ಘಾಸಿಯಾಗುತ್ತದೆ. ಸಂದರ್ಶನಗಳಲ್ಲಿ ನಾನು ಹೇಳಿದ ಕೆಲವು ವಿಷಯಗಳು ನನ್ನ ವಿರುದ್ಧವೇ ಬಳಕೆಯಾಗುತ್ತಿವೆ ಎಂಬುದನ್ನು ಕಂಡುಕೊಂಡಿದ್ದೇನೆ. ಅಂತರ್ಜಾಲದಲ್ಲಿ ಫೇಕ್‌ ನೆರೆಟಿವ್‌ಗಳನ್ನು (ನಕಲಿ ನಿರೂಪಣೆಗಳನ್ನು) ಹರಡಲಾಗುತ್ತಿದೆ. ಇದರಿಂದ ನನಗೆ, ಹೊರಗಿನ ವೃತ್ತಿ ಬಾಂಧವ್ಯಗಳಿಗೆ ತುಂಬಾ ಹಾನಿಕಾರಕವಾಗಿದೆ”.

“ನಾನು ರಚನಾತ್ಮಕ ಟೀಕೆಗಳನ್ನು ಸ್ವಾಗತಿಸುತ್ತೇನೆ. ಏಕೆಂದರೆ ಇವುಗಳಿಂದ ನನ್ನನ್ನು ಸುಧಾರಿಸಲು ಸಾಧ್ಯವಾಗುತ್ತದೆ. ಆದರೆ ನಕಾರಾತ್ಮಕತೆ ಮತ್ತು ದ್ವೇಷದಿಂದ ಏನು ಸಾಧ್ಯ? ಇದನ್ನು ನಿರ್ಲಕ್ಷಿಸುವಂತೆ ಹಿಂದೆಯೇ ಹೇಳಿದ್ದೇನೆ. ಆದರೆ ಪರಿಸ್ಥಿತಿ ಹದಗೆಟ್ಟಿದೆ. ನಾನು ಯಾರನ್ನೂ ಗೆಲ್ಲಲು ಪ್ರಯತ್ನಿಸುತ್ತಿಲ್ಲ. ನಾನು ಸ್ವೀಕರಿಸುತ್ತಿರುವ ಈ ದ್ವೇಷದ ಕಾರಣದಿಂದಾಗಿ ಬದಲಾಗಲು ಬಯಸುವುದಿಲ್ಲ”.

“ನಿಮ್ಮ ಉಳಿದವರಿಂದ ಸ್ವೀಕರಿಸುತ್ತಿರುವ ಎಲ್ಲಾ ಪ್ರೀತಿಯನ್ನು ಗುರುತಿಸುತ್ತೇನೆ ಮತ್ತು ಅಂಗೀಕರಿಸುತ್ತೇನೆ. ನಿಮ್ಮ ನಿರಂತರ ಪ್ರೀತಿ ಮತ್ತು ಬೆಂಬಲವೇ ನನ್ನನ್ನು ಬೆಳೆಸಿದೆ. ಇದನ್ನು ಹೇಳಲು ನನಗೆ ಧೈರ್ಯವನ್ನು ನೀಡಿದೆ. ನನ್ನ ಸುತ್ತಲಿರುವ ಎಲ್ಲರ ಮೇಲೆ ಪ್ರೀತಿ ಇದೆ. ನಾನು ವೃತ್ತಿ ಬದುಕಿನ ಎಲ್ಲರನ್ನೂ ಮೆಚ್ಚಿಕೊಂಡಿದ್ದೇನೆ. ನಾನು ಕಷ್ಟಪಟ್ಟು ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ. ಏಕೆಂದರೆ ನಾನು ಹೇಳಿದಂತೆ, ನಿಮ್ಮನ್ನು ರಂಜಿಸುತ್ತೇನೆ. ಅದುವೇ ನನ್ನ ಸಂತೋಷ. ಎಲ್ಲರೂ ದಯೆಯಿಂದಿರಿ. ನಾವೆಲ್ಲರೂ ನಮ್ಮ ಕೈಲಾದದ್ದನ್ನು ಮಾಡಲು ಪ್ರಯತ್ನಿಸುತ್ತಿದ್ದೇವೆ”- ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ.

ಇದನ್ನೂ ಓದಿರಿ: ಮಕ್ಕಳಿಗೆ ಉಚಿತವಾಗಿ ‘ಗಂಧದಗುಡಿ’ ತೋರಿಸಬೇಕು, ಏಕೆಂದರೆ..,: ಮಂಸೋರೆ ಮನದ ಮಾತು

‘ಕಿರಿಕ್‌ ಪಾರ್ಟಿ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ರಶ್ಮಿಕಾ ಅವರು ಬಹುಭಾಷಾ ನಟಿಯಾಗಿ ಬೆಳೆದರು. ಬದುಕಿನ ಏರಿಳಿತಗಳನ್ನು ಕಂಡರು. ತಮ್ಮ ಬದುಕಿನ ಭವಿಷ್ಯವನ್ನು ನೆನೆದು ತಮ್ಮದೇ ಆಯ್ಕೆಗಳನ್ನು ಮಾಡಿಕೊಂಡರು. ಆನಂತರದಲ್ಲಿ ಅವರ ವಿರುದ್ಧ ಟ್ರೋಲ್‌ಗಳು ಆರಂಭವಾದವು. ಕನ್ನಡದ ಮುಖ್ಯವಾಹಿನಿ ಕೆಲವು ಮಾಧ್ಯಮಗಳಲ್ಲಿ, ಸುದ್ದಿ ಜಾಲತಾಣಗಳಲ್ಲಿ ವಿನಾಕಾರಣ ರಶ್ಮಿಕಾ ವಿರುದ್ಧ ದ್ವೇಷಕಾರುವ ರೀತಿಯ ಸುದ್ದಿಗಳು ಪ್ರಕಟವಾಗುತ್ತಲೇ ಇರುತ್ತವೆ.

ಇತ್ತೀಚೆಗೆ, “ನಾನಿನ್ನು ಕಾಂತಾರ ಸಿನಿಮಾ ನೋಡಿಲ್ಲ” ಎಂದು ರಶ್ಮಿಕಾ ಅವರು ಹೇಳಿದ ತಕ್ಷಣ ದೊಡ್ಡ ಅಪರಾಧವೆಂಬಂತೆ ಮಾಧ್ಯಮಗಳು ವರದಿ ಮಾಡಿದ್ದವು. ಇದರಿಂದ ಟ್ರೋಲರ್‌ಗಳು ರಶ್ಮಿಕಾ ಅವರ ಮೇಲೆ ಮುಗಿಬಿದ್ದಿದ್ದರು.

ಪತ್ರಕರ್ತ ಪಿ.ಟಿ.ಬೋಪಣ್ಣ ಈ ಟ್ರೋಲ್‌ ವಿರುದ್ಧ ಬರೆದಿದ್ದರು. ಕೊಡಗು ಮೂಲದ ನಟಿಯ ಬಗ್ಗೆ ಆಗುತ್ತಿರುವ ಅಪಪ್ರಚಾರವನ್ನು ಖಂಡಿಸಿದ್ದರು. ಕಾಂತಾರ ಸಿನಿಮಾದಲ್ಲಿ ಕಾಣೆಯಾಗಿರುವ ಲಿಂಗ ಸೂಕ್ಷ್ಮತೆಯನ್ನು ಉಲ್ಲೇಖಿಸಿದ್ದರು. “ನಟನಾ ಕೌಶಲ್ಯದಿಂದ ಲಕ್ಷಾಂತರ ಹೃದಯಗಳನ್ನು ಗೆದ್ದಿರುವ ರಶ್ಮಿಕಾ ಅವರನ್ನು ಟ್ರೋಲ್ ಮಾಡುವ ಬದಲು ಕಾಂತಾರ ಚಿತ್ರದ ಬಗ್ಗೆ ನಿಷ್ಪಕ್ಷಪಾತವಾದ ಮೌಲ್ಯಮಾಪನ ನಡೆಯಬೇಕು” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...