Homeಮುಖಪುಟನನ್ನ ಹೃದಯ ಘಾಸಿಯಾಗಿದೆ: ದ್ವೇಷದ ಟ್ರೋಲ್‌ಗಳಿಂದ ಮನನೊಂದು ರಶ್ಮಿಕಾ ಪೋಸ್ಟ್‌

ನನ್ನ ಹೃದಯ ಘಾಸಿಯಾಗಿದೆ: ದ್ವೇಷದ ಟ್ರೋಲ್‌ಗಳಿಂದ ಮನನೊಂದು ರಶ್ಮಿಕಾ ಪೋಸ್ಟ್‌

- Advertisement -
- Advertisement -

ವಿನಾಕಾರಣ ಟ್ರೋಲ್‌ಗಳಿಗೆ ಒಳಗಾಗುತ್ತಿರುವ ಬಹುಭಾಷಾ ನಟಿ, ಕೊಡಗಿನ ರಶ್ಮಿಕಾ ಮಂದಣ್ಣ ಅವರು ತಮಗಾಗುತ್ತಿರುವ ಬೇಸರವನ್ನು ಹಂಚಿಕೊಂಡಿದ್ದಾರೆ.

ಯಾವುದೇ ಸ್ಪಷ್ಟ ಕಾರಣವಿಲ್ಲದೆ ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತಲಾಗುತ್ತಿರುವ ತಮ್ಮ ವಿರುದ್ಧದ ದ್ವೇಷದ ಅಭಿಯಾನ ಹಾಗೂ ಅಪಹಾಸ್ಯದ ವಿರುದ್ಧ ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಶ್ಮಿಕಾ ಮಾತುಗಳು:

“ಕಳೆದ ಕೆಲವು ದಿನಗಳು, ವಾರಗಳು, ತಿಂಗಳುಗಳು ಅಥವಾ ಬಹುಶಃ ವರ್ಷಗಳಲ್ಲಿ ಒಂದೆರಡು ವಿಷಯಗಳು ನನ್ನನ್ನು ಸಮಸ್ಯೆಗೆ ದೂಡಿವೆ. ನಾನು ಅದನ್ನು ಪರಿಹರಿಸುವ ಸಮಯ ಇದೆಂದು ನಾನು ಭಾವಿಸುತ್ತೇನೆ. ನಾನು ನನಗಾಗಿ ಮಾತ್ರ ಮಾತನಾಡುತ್ತಿದ್ದೇನೆ. ಇದನ್ನು ನಾನು ವರ್ಷಗಳ ಹಿಂದೆಯೇ ಮಾಡಬೇಕಾಗಿತ್ತು. ನಾನು ನನ್ನ ವೃತ್ತಿಜೀವನವನ್ನು ಪ್ರಾರಂಭಿಸಿದಾಗಿನಿಂದಲೂ ಬಹಳಷ್ಟು ದ್ವೇಷವನ್ನು ಸ್ವೀಕರಿಸುತ್ತಿದ್ದೇನೆ. ಸಾಕಷ್ಟು ಟ್ರೋಲ್‌ ಮತ್ತು ನಕಾರಾತ್ಮಕತೆಗೆ ಒಳಗಾಗಿದ್ದೇನೆ” ಎಂದು ಅವರು ಬರೆದಿದ್ದಾರೆ.

“ನಾನು ಆಯ್ಕೆ ಮಾಡಿದ ಜೀವನವು ಮೌಲ್ಯದೊಂದಿಗೆ ಕೂಡಿದೆ ಎಂದು ನನಗೆ ತಿಳಿದಿದೆ. ನಾನು ಪ್ರತಿಯೊಬ್ಬರ ಕಪ್‌ ಆಫ್‌ ಟೀ ಅಲ್ಲ. ಖಂಡಿತವಾಗಿಯೂ ಪ್ರತಿಯೊಬ್ಬ ವ್ಯಕ್ತಿಯಿಂದಲೂ ಪ್ರೀತಿಸಲ್ಪಡಬೇಕೆಂದು ನಾನು ನಿರೀಕ್ಷಿಸುವುದಿಲ್ಲ ಎಂಬುದನ್ನು ಅರ್ಥಮಾಡಿಕೊಂಡಿದ್ದೇನೆ. ನೀವು ನನ್ನನ್ನು ಒಪ್ಪದ ಕಾರಣ ನೀವು ನಕಾರಾತ್ಮಕತೆಯನ್ನು ಹೊರಹಾಕಬಹುದು ಎಂದು ಇದರ ಅರ್ಥವಲ್ಲ. ನೀವೆಲ್ಲರೂ ಖುಷಿಯಿಂದರಲು ನಾನು ಯಾವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ ಎಂದು ನನಗೆ ಮಾತ್ರ ತಿಳಿದಿದೆ. ನಾನು ಮಾಡಿದ ಕಾರ್ಯಕ್ಕೆ ನೀವು ಖುಷಿಯಾದಾಗ ನಾನು ಹೆಚ್ಚು ಕಾಳಜಿ ವಹಿಸುತ್ತೇನೆ. ನೀವು ಮತ್ತು ನಾನು ಹೆಮ್ಮೆಪಡುವ ವಿಷಯಗಳನ್ನು ಹಂಚಿಕೊಳ್ಳಲು ನಾನು ನಿಜವಾಗಿಯೂ ಪ್ರಯತ್ನಿಸುತ್ತಿದ್ದೇನೆ.”

“ನಾನು ಹೇಳದೆ ಇರುವ ವಿಷಯಗಳ ಕಾರಣಕ್ಕಾಗಿ ನನ್ನನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪಹಾಸ್ಯ ಮಾಡಿದಾಗ ನನ್ನ ಹೃದಯ ಘಾಸಿಯಾಗುತ್ತದೆ. ಸಂದರ್ಶನಗಳಲ್ಲಿ ನಾನು ಹೇಳಿದ ಕೆಲವು ವಿಷಯಗಳು ನನ್ನ ವಿರುದ್ಧವೇ ಬಳಕೆಯಾಗುತ್ತಿವೆ ಎಂಬುದನ್ನು ಕಂಡುಕೊಂಡಿದ್ದೇನೆ. ಅಂತರ್ಜಾಲದಲ್ಲಿ ಫೇಕ್‌ ನೆರೆಟಿವ್‌ಗಳನ್ನು (ನಕಲಿ ನಿರೂಪಣೆಗಳನ್ನು) ಹರಡಲಾಗುತ್ತಿದೆ. ಇದರಿಂದ ನನಗೆ, ಹೊರಗಿನ ವೃತ್ತಿ ಬಾಂಧವ್ಯಗಳಿಗೆ ತುಂಬಾ ಹಾನಿಕಾರಕವಾಗಿದೆ”.

“ನಾನು ರಚನಾತ್ಮಕ ಟೀಕೆಗಳನ್ನು ಸ್ವಾಗತಿಸುತ್ತೇನೆ. ಏಕೆಂದರೆ ಇವುಗಳಿಂದ ನನ್ನನ್ನು ಸುಧಾರಿಸಲು ಸಾಧ್ಯವಾಗುತ್ತದೆ. ಆದರೆ ನಕಾರಾತ್ಮಕತೆ ಮತ್ತು ದ್ವೇಷದಿಂದ ಏನು ಸಾಧ್ಯ? ಇದನ್ನು ನಿರ್ಲಕ್ಷಿಸುವಂತೆ ಹಿಂದೆಯೇ ಹೇಳಿದ್ದೇನೆ. ಆದರೆ ಪರಿಸ್ಥಿತಿ ಹದಗೆಟ್ಟಿದೆ. ನಾನು ಯಾರನ್ನೂ ಗೆಲ್ಲಲು ಪ್ರಯತ್ನಿಸುತ್ತಿಲ್ಲ. ನಾನು ಸ್ವೀಕರಿಸುತ್ತಿರುವ ಈ ದ್ವೇಷದ ಕಾರಣದಿಂದಾಗಿ ಬದಲಾಗಲು ಬಯಸುವುದಿಲ್ಲ”.

“ನಿಮ್ಮ ಉಳಿದವರಿಂದ ಸ್ವೀಕರಿಸುತ್ತಿರುವ ಎಲ್ಲಾ ಪ್ರೀತಿಯನ್ನು ಗುರುತಿಸುತ್ತೇನೆ ಮತ್ತು ಅಂಗೀಕರಿಸುತ್ತೇನೆ. ನಿಮ್ಮ ನಿರಂತರ ಪ್ರೀತಿ ಮತ್ತು ಬೆಂಬಲವೇ ನನ್ನನ್ನು ಬೆಳೆಸಿದೆ. ಇದನ್ನು ಹೇಳಲು ನನಗೆ ಧೈರ್ಯವನ್ನು ನೀಡಿದೆ. ನನ್ನ ಸುತ್ತಲಿರುವ ಎಲ್ಲರ ಮೇಲೆ ಪ್ರೀತಿ ಇದೆ. ನಾನು ವೃತ್ತಿ ಬದುಕಿನ ಎಲ್ಲರನ್ನೂ ಮೆಚ್ಚಿಕೊಂಡಿದ್ದೇನೆ. ನಾನು ಕಷ್ಟಪಟ್ಟು ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ. ಏಕೆಂದರೆ ನಾನು ಹೇಳಿದಂತೆ, ನಿಮ್ಮನ್ನು ರಂಜಿಸುತ್ತೇನೆ. ಅದುವೇ ನನ್ನ ಸಂತೋಷ. ಎಲ್ಲರೂ ದಯೆಯಿಂದಿರಿ. ನಾವೆಲ್ಲರೂ ನಮ್ಮ ಕೈಲಾದದ್ದನ್ನು ಮಾಡಲು ಪ್ರಯತ್ನಿಸುತ್ತಿದ್ದೇವೆ”- ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ.

ಇದನ್ನೂ ಓದಿರಿ: ಮಕ್ಕಳಿಗೆ ಉಚಿತವಾಗಿ ‘ಗಂಧದಗುಡಿ’ ತೋರಿಸಬೇಕು, ಏಕೆಂದರೆ..,: ಮಂಸೋರೆ ಮನದ ಮಾತು

‘ಕಿರಿಕ್‌ ಪಾರ್ಟಿ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ರಶ್ಮಿಕಾ ಅವರು ಬಹುಭಾಷಾ ನಟಿಯಾಗಿ ಬೆಳೆದರು. ಬದುಕಿನ ಏರಿಳಿತಗಳನ್ನು ಕಂಡರು. ತಮ್ಮ ಬದುಕಿನ ಭವಿಷ್ಯವನ್ನು ನೆನೆದು ತಮ್ಮದೇ ಆಯ್ಕೆಗಳನ್ನು ಮಾಡಿಕೊಂಡರು. ಆನಂತರದಲ್ಲಿ ಅವರ ವಿರುದ್ಧ ಟ್ರೋಲ್‌ಗಳು ಆರಂಭವಾದವು. ಕನ್ನಡದ ಮುಖ್ಯವಾಹಿನಿ ಕೆಲವು ಮಾಧ್ಯಮಗಳಲ್ಲಿ, ಸುದ್ದಿ ಜಾಲತಾಣಗಳಲ್ಲಿ ವಿನಾಕಾರಣ ರಶ್ಮಿಕಾ ವಿರುದ್ಧ ದ್ವೇಷಕಾರುವ ರೀತಿಯ ಸುದ್ದಿಗಳು ಪ್ರಕಟವಾಗುತ್ತಲೇ ಇರುತ್ತವೆ.

ಇತ್ತೀಚೆಗೆ, “ನಾನಿನ್ನು ಕಾಂತಾರ ಸಿನಿಮಾ ನೋಡಿಲ್ಲ” ಎಂದು ರಶ್ಮಿಕಾ ಅವರು ಹೇಳಿದ ತಕ್ಷಣ ದೊಡ್ಡ ಅಪರಾಧವೆಂಬಂತೆ ಮಾಧ್ಯಮಗಳು ವರದಿ ಮಾಡಿದ್ದವು. ಇದರಿಂದ ಟ್ರೋಲರ್‌ಗಳು ರಶ್ಮಿಕಾ ಅವರ ಮೇಲೆ ಮುಗಿಬಿದ್ದಿದ್ದರು.

ಪತ್ರಕರ್ತ ಪಿ.ಟಿ.ಬೋಪಣ್ಣ ಈ ಟ್ರೋಲ್‌ ವಿರುದ್ಧ ಬರೆದಿದ್ದರು. ಕೊಡಗು ಮೂಲದ ನಟಿಯ ಬಗ್ಗೆ ಆಗುತ್ತಿರುವ ಅಪಪ್ರಚಾರವನ್ನು ಖಂಡಿಸಿದ್ದರು. ಕಾಂತಾರ ಸಿನಿಮಾದಲ್ಲಿ ಕಾಣೆಯಾಗಿರುವ ಲಿಂಗ ಸೂಕ್ಷ್ಮತೆಯನ್ನು ಉಲ್ಲೇಖಿಸಿದ್ದರು. “ನಟನಾ ಕೌಶಲ್ಯದಿಂದ ಲಕ್ಷಾಂತರ ಹೃದಯಗಳನ್ನು ಗೆದ್ದಿರುವ ರಶ್ಮಿಕಾ ಅವರನ್ನು ಟ್ರೋಲ್ ಮಾಡುವ ಬದಲು ಕಾಂತಾರ ಚಿತ್ರದ ಬಗ್ಗೆ ನಿಷ್ಪಕ್ಷಪಾತವಾದ ಮೌಲ್ಯಮಾಪನ ನಡೆಯಬೇಕು” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...