Homeಕರ್ನಾಟಕಮಳಲಿ ಪೇಟೆ ಮಸೀದಿ ವಿವಾದ | ಆಡಳಿತ ಮಂಡಳಿ ಅರ್ಜಿ ವಜಾ; ಬಿಜೆಪಿ ಬೆಂಬಲಿತ ವಿಎಚ್‌ಪಿ...

ಮಳಲಿ ಪೇಟೆ ಮಸೀದಿ ವಿವಾದ | ಆಡಳಿತ ಮಂಡಳಿ ಅರ್ಜಿ ವಜಾ; ಬಿಜೆಪಿ ಬೆಂಬಲಿತ ವಿಎಚ್‌ಪಿ ಅರ್ಜಿ ಪುರಸ್ಕರಿಸಿದ ಕೋರ್ಟ್‌

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಮಳಲಿಪೇಟೆಯಲ್ಲಿರುವ, ಮಸೀದಿ ವಿವಾದ ಪ್ರಕರಣವನ್ನು ಅಧೀನ ನ್ಯಾಯಾಲಯದಲ್ಲೇ ವಿಚಾರಣೆ ನಡೆಸಬಹುದು ಎಂದು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಬುಧವಾರ ಆದೇಶಿಸಿದ್ದು, 2023ರ ಜನವರಿ 8ರಂದು ಅರ್ಜಿ ಕೈಗೆತ್ತಿಕೊಳ್ಳುವುದಾಗಿ ನ್ಯಾಯಾಲಯ ತಿಳಿಸಿದೆ.

ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆಯಾದ ವಿಎಚ್‌ಪಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯವು, ಮಳಲಿ ಮಸೀದಿ ವಿವಾದ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಯನ್ನು ಸಿವಿಲ್‌ ನ್ಯಾಯಾಲಯವೇ ಆಲಿಸಲಿದೆ ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಳಲಿ ಮಸೀದಿಯಲ್ಲಿ ದೇಗುಲ ಮಾದರಿ ರಚನೆ ಪತ್ತೆಯಾಗಿದ್ದು, ಕೋರ್ಟ್​ ಕಮಿಷನರ್ ಮೂಲಕ ಸರ್ವೆ ನಡೆಸಲು ಆದೇಶ ನೀಡಬೇಕು” ಎಂದು ಕೋರಿ ವಿಹೆಚ್‌ಪಿ ಮನವಿ ಸಲ್ಲಿಸಿತ್ತು. ಈ ಮನವಿಗೆ ಆಕ್ಷೇಪ ವ್ಯಕ್ತಪಡಿಸಿದ್ದ ಮಸೀದಿ ಸಮಿತಿ, “ಇಂಥ ಆದೇಶ ಮಾಡಲು ಅಧೀನ ನ್ಯಾಯಾಲಯಕ್ಕೆ ಅಧಿಕಾರವಿಲ್ಲ. ವಿಎಚ್‌ಪಿ ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡಬೇಕು” ಎಂದು ಕೋರಿತ್ತು.

ಇದನ್ನೂ ಓದಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

ಮಳಲಿಪೇಟೆಯ ಪ್ರಾಚೀನ ಮಸೀದಿ ನವೀಕರಣ ಕಾಮಗಾರಿಯ ವೇಳೆ ಅದರ ಸಾಂಪ್ರದಾಯಿಕ ಕೆತ್ತನೆ ಹಾಗೂ ರಚನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅದನ್ನು ವಿವಾದ ಮಾಡಿದ್ದ ವಿಎಚ್‌ಪಿ ಮಸೀದಿಯ ರಚನೆಯು ದೇವಾಲಯದ ಮಾದರಿಯಲ್ಲಿದೆ ಎಂದು ವಾದಿಸಿ ದಾವೆ ಹೂಡಿತ್ತು. ಧನಂಜಯ್ ಮತ್ತು ಮನೋಜ್ ಕುಮಾರ್ ಎಂಬುವವರು ಮಂಗಳೂರಿನ ಸಿವಿಲ್ ನ್ಯಾಯಾಲಯದಲ್ಲಿ ಈ ದಾವೆ ಹೂಡಿದ್ದರು. ನಂತರ ವಿಚಾರಣೆ ನಡೆಸಿದ್ದ ನ್ಯಾಯಾಲಯವು ರಚನೆ ತೆರವುಗೊಳಿಸದಂತೆ ಪ್ರತಿಬಂಧಕಾಜ್ಞೆ ಹೊರಡಿಸಿತ್ತು.

ಈ ಮಧ್ಯೆ, ಮಸೀದಿಯ ಆಡಳಿತ ಮಂಡಳಿ ಮಧ್ಯಂತರ ಅರ್ಜಿ ಸಲ್ಲಿಸಿ, ವಿವಾದಿತ ಸ್ಥಳ ವಕ್ಫ್ ಆಸ್ತಿಯಾಗಿದೆ. ಜತೆಗೆ, ಸಾರ್ವಜನಿಕ ಪೂಜಾ ಸ್ಥಳ ಕಾಯಿದೆ ಅಡಿಯಲ್ಲಿ ದಾವೆಯು ವಿಚಾರಣಾ ಮಾನ್ಯತೆ ಹೊಂದಿಲ್ಲ ಎಂದು ವಾದಿಸಿದ್ದರು. ಮತ್ತೊಂದೆಡೆ, ಮೂಲ ದಾವೆದಾರರೂ ಮಧ್ಯಂತರ ಅರ್ಜಿ ಸಲ್ಲಿಸಿ, ಮೊದಲು ಕಮಿಷನರ್ ಒಬ್ಬರನ್ನು ನೇಮಕ ಮಾಡಿ ಪರಿಶೀಲನೆ ನಡೆಸುವಂತೆ ಕೋರಿದ್ದರು.

ಆದರೆ, ಸಿವಿಲ್ ನ್ಯಾಯಾಲಯ ಮೊದಲು ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸಲು ನಿರ್ಧರಿಸಿತ್ತು. ಇದನ್ನು ಪ್ರಶ್ನಿಸಿ ವಿಶ್ವ ಹಿಂದೂ ಪರಿಷತ್ ಹೈಕೋರ್ಟ್ ಮೆಟ್ಟಿಲೇರಿತ್ತು. ಆ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು.

ಇದನ್ನೂ ಓದಿ:  ಮಸೀದಿ ವಾಸ್ತು ಶೈಲಿಗಳೂ, ಪೊಳ್ಳು ವಾದಗಳೂ!

ಏನಿದು ವಿವಾದ?

ಸ್ಥಳೀಯರ ಪ್ರಕಾರ ಮಳಲಿ ಮಸೀದಿ ಸುಮಾರು 900 ನೂರು ವರ್ಷಗಳಷ್ಟು ಹಳೆಯದು. ಊರು ಬೆಳೆದಂತೆ ಈ ಮಸೀದಿಯಲ್ಲಿ ಜನರಿಗೆ ಜಾಗ ಸಾಕಾಗದ ಕಾರಣಕ್ಕೆ ಅದರ ಹೊರ ಭಾಗದಲ್ಲಿ ಕೂಡಾ ಮಸೀದಿಯನ್ನು ವಿಸ್ತರಿಸಲಾಗಿತ್ತು. ಎಪ್ರಿಲ್‌‌ನಲ್ಲಿ ಪ್ರಾಚೀನ ಮಸೀದಿಯ ರಚನೆಯನ್ನು ಹಾಗೆ ಬಿಟ್ಟು, ನಂತರ ವಿಸ್ತರಿಸಿರುವ ಕಟ್ಟಡವನ್ನು ಕೆಡವಿ ನವೀಕರಣಕ್ಕೆ ಊರಿನ ಜನರು ಸಿದ್ದತೆ ನಡೆಸಿದ್ದರು. ಈ ವೇಳೆ ಪ್ರಾಚೀನ ಮಸೀದಿಯ ಶೈಲಿಯ ಕಾರಣಕ್ಕೆ ಅದನ್ನು ವಿವಾದ ಮಾಡಲಾಗುತ್ತಿದೆ.

ಬಿಜೆಪಿ ಬೆಂಬಲಿತ ಬಜರಂಗದಳ ಮತ್ತು ವಿಎಚ್‌ಪಿ ಸುದ್ದಿ ಹರಡಿರುವಂತೆ ಅದು ಹೊಸದಾಗಿ ಪತ್ತೆಯಾದ ಕಟ್ಟಡ ಅಲ್ಲ. ಜೊತೆಗೆ ಅದು ದರ್ಗಾವನ್ನು ಕಡೆವಿದಾಗ ಧುತ್ತನೆ ಪ್ರತ್ಯಕ್ಷವಾದ ಕಟ್ಟಡವೂ ಅಲ್ಲ. “ನಾವು ಅಲ್ಲಿಯೆ ತಲತಲಾಂತರದಿಂದ ನಮಾಜ್‌ ಮಾಡುತ್ತಲೇ ಬಂದಿದ್ದೇವೆ” ಎಂದು ಸ್ಥಳೀಯ ನಾಗರೀಕ ಝಾಕಿರ್‌ ನಾನುಗೌರಿ.ಕಾಂಗೆ ಹೇಳಿದ್ದಾರೆ.

ಎಪ್ರಿಲ್‌ನಲ್ಲಿ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ್ದ ಮಳಲಿ ಪೇಟೆ ಜುಮ್ಮಾ ಮಸೀದಿ ಅಧ್ಯಕ್ಷರಾದ ಮೊಹಮ್ಮದ್‌ ಮಾಮು, “ಇದು ಸುಮಾರು 900 ವರ್ಷಗಳಷ್ಟು ಹಳೆಯ ಮಸೀದಿಯಾಗಿದೆ. ಇದೇನೂ ಹೊಸದಾಗಿ ಏನೂ ಪತ್ತೆಯಾಗಿದ್ದಲ್ಲ, ನಾವು ತಲೆಮಾರುಗಳಿಂದಲೂ ಪ್ರಾರ್ಥನೆ ಮಾಡುತ್ತಲೆ ಬಂದಿರುವ ಮಸೀದಿಯಾಗಿದೆ. ಹೊರಗಿನ ಕಟ್ಟಡಗಳನ್ನು ಕೆಡವಿದಾಗ ಅದರ ಆಕರ್ಷಕ ಶೈಲಿಯ ರಚನೆಗಳು ಹೊರಗೆ ಗೋಚರಿಸಿದೆ. ಈ ರೀತಿಯ ಮಸೀದಿಯನ್ನು ಕಂಡಿರದ ಹಾಗೂ ಈಗಾಗಲೆ ಬಿಜೆಪಿ ಹರಡಿರುವ ಸುಳ್ಳುಗಳಿಂದ ಪ್ರೇರೇಪಿತರಾಗಿರುವವರು ಮಸೀದಿಯನ್ನು ದೇವಸ್ಥಾನ ಎಂದು ಯಾವುದೆ ಆಧಾರ ಇಲ್ಲದೆ ಪ್ರತಿಪಾದಿಸುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ:  ‘ಮಸ್ಜಿದ್‌‌ ಝೀನತ್‌ ಭಕ್ಷ್‌’: ಕರ್ನಾಟಕದ ಅತ್ಯಂತ ಪುರಾತನ ಮಸೀದಿಯನ್ನು ದೇವಸ್ಥಾನ ಎಂದು ಪ್ರತಿಪಾದಿಸಿ ವಿಡಿಯೊ ವೈರಲ್‌‌ ಮಾಡಿರುವ ದುಷ್ಕರ್ಮಿಗಳು

“ಇದೇ ಮಾದರಿಯ ವಾಸ್ತುಶೈಲಿಯ ಪ್ರಾಚೀನ ಮಸೀದಿಗಳು ಕರಾವಳಿಯಲ್ಲಿ ಹಲವಾರು ಇದೆ. ಮಸೀದಿಯ ವಾಸ್ತು ಶೈಲಿ ಹಾಗೆ ಇದ್ದ ಕೂಡಲೇ ಅದು ದೇವಸ್ಥಾನಗಳು ಆಗುತ್ತದೆಯೆ?. ಈ ರೀತಿಯ ವಾಸ್ತುಶೈಲಿ ಮಸೀದಿಗೆ ಇರಬಾರದು ಎಂದರೆ ಯಾವ ನ್ಯಾಯ?” ಎಂದು ಅವರು ಪ್ರಶ್ನಿಸಿದ್ದರು.

ಮಳಲಿ ಮಸೀದಿಯ ವಾಸ್ತುಶೈಲಿಯನ್ನು ಅಭ್ಯಾಸ ಮಾಡಿದ ಜವಾಹರ್‌ಲಾಲ್‌ ನೆಹರೂ ವಿಶ್ವವಿದ್ಯಾಲಯದ ನಿವೃತ್ತ ಪ್ರೊಫೆಸರ್‌, ಸಂಶೋಧಕ ಡಾ. ಪುರುಷೋತ್ತಮ ಬಿಳಿಮಲೆ, “ಮಳಲಿ ಮಸೀದಿಯು ದ್ರಾವಿಡ ಶೈಲಿಯ ಒಂದು ಪ್ರಬೇಧವಾದ ಕೇರಳ ವಾಸ್ತುವನ್ನು ಬಳಸಿಕೊಂಡಿದೆ. ಇದು ಹೆಚ್ಚು ಮಳೆಬೀಳುವ ಪ್ರದೇಶವಾದ್ದರಿಂದ, ಇಳಿಜಾರಾದ ಮಾಡು ಬಹಳ ಅಗತ್ಯ.‌ ಮಾಡನ್ನು ಮುಳಿ ಹುಲ್ಲು ಅಥವಾ ಹಂಚು ಬಳಸಿ ಕಟ್ಟಲಾಗಿದೆ. ಒಳಗಿನ ಕಂಬವು ವಿಜಯನಗರ ಕಾಲದ್ದು.‌ ಹೀಗಾಗಿ ಇದು ಸುಮಾರು 15-16ನೇ ಶತಮಾನದ್ದೆಂದು ಹೇಳಬಹುದು. ಹಿಂದೂ ಮುಸ್ಲಿಂ ಮೈತ್ರಿಯನ್ನು ಸಾರುವ ಇಂಥ ಕಟ್ಟಡಗಳು ಕೇರಳ ಮತ್ತು ಕರ್ನಾಟಕ ಕರಾವಳಿಯಲ್ಲಿ ಹೇರಳವಾಗಿ ಕಂಡು ಬರುತ್ತವೆ” ಎಂದು ಹೇಳಿದ್ದಾರೆ.

“ವಿಜಯನಗರ ಮತ್ತು ವಿಜಯನಗರೋತ್ತರ ಕಾಲದಲ್ಲಿ ಇಂಡೋ ಸಾರ್ಸೆನಿಕ್ (ಇಂಡೋ-ಇಸ್ಲಾಮಿಕ್) ಶೈಲಿಯ ಅನೇಕ ಧಾರ್ಮಿಕ ಕಟ್ಟಡಗಳು ಬೆಳೆದಿವೆ. ಇವು ಎರಡೂ ಸಂಸ್ಕೃತಿಗಳ ಅತ್ಯುತ್ತಮ ಅಂಶಗಳನ್ನು ಒಟ್ಟಿಗೆ ತರುವ ಪ್ರಯತ್ನ.‌ ಹಂಪಿಯ ಕಮಲ ಮಹಲ್ ಇದಕ್ಕೆ ಒಳ್ಳೆಯ ಉದಾಹರಣೆ” ಎಂದು ಡಾ. ಬಿಳಿಮಲೆ ಅವರು ತಿಳಿಸಿದ್ದಾರೆ.

ಇದನ್ನೂ ಓದಿ:  ತುಳುನಾಡಿನ ಮಸೀದಿಗಳು ದ್ರಾವಿಡಶೈಲಿಯಲ್ಲಿ ಯಾಕಿದೆ? ತುಳುನಾಡಿನ ಇತಿಹಾಸವೇನು? ಮಾಧ್ಯಮಗಳ ಸುಳ್ಳುಗಳೇನು?

ಮಸೀದಿಯ ಒಳಭಾಗದ ದೃಶ್ಯವನ್ನು ಕೆಳಗಿನ ವಿಡಿಯೊದಲ್ಲಿ ನೋಡಿ

ಕರ್ನಾಟಕದ ಕರಾವಳಿಯಲ್ಲಿ ಹಾಗೂ ನೆರೆಯ ಕೇರಳದಲ್ಲೂ ಇದೇ ರೀತಿಯ ಹಲವಾರು ಮಸೀದಿಗಳು ಇವೆ. ಉದಾಹರಣೆಗೆ ಕಾಸರಗೋಡಿನ ಮಾಲಿಕು ದಿನಾರ್‌‌ ಮಸೀದಿಯನ್ನು ಓದುಗರು ಗಮನಿಸಬಹುದು.

ಕರಾವಳಿಯ ಪ್ರಾಚೀನ ಮಸೀದಿಯ ಬಗ್ಗೆ ಹಲವಾರು ಡಾಕ್ಯುಮಂಟ್‌ ಮಾಡುತ್ತಿರುವ ಲೇಖಕ, ಇಸ್ಮತ್‌ ಪಜೀರ್‌, “ಮಸೀದಿಗೆ ಸುಮಾರು 900 ವರ್ಷಗಳ ಇತಿಹಾಸವಿದೆ. 900 ವರ್ಷಗಳ ಹಿಂದೆಯೆ ಪ್ರಸ್ತುತ ಕಾಣುತ್ತಿರುವಂತೆ ವೈಭವಯುತವಾಗಿ ಕಟ್ಟಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. ಕಾಲಕಾಲಕ್ಕೆ ಅದನ್ನು ನವೀಕರಣ ಮಾಡುತ್ತಲೇ ಬಂದಿದ್ದಾರೆ. ಈ ರೀತಿಯ ಹಲವಾರು ಮಸೀದಿಗಳು ಕರಾವಳಿಯಲ್ಲಿ ಇವೆ. ಉದಾಹರಣೆಗೆ ಹಳೆ ಬಂದರ್‌ನಲ್ಲಿ ಇರುವ 1400 ವರ್ಷಗಳ ಹಿಂದಿನ ಝೀನತ್‌ ಬಖ್ಷ್‌ ಮಸೀದಿ. ದ್ರಾವಿಡ ವಾಸ್ತುಶೈಲಿ ಇದ್ದಕೂಡಲೇ ಅದು ದೇವಸ್ಥಾನ ಆಗುವುದಿಲ್ಲ. ಇಲ್ಲಿನ ಮುಸ್ಲಿಮರು ಕೂಡಾ ಸ್ಥಳೀಯ ದ್ರಾವಿಡ ಸಂಸ್ಕೃತಿಯವರೇ ಆಗಿರುವುದರಿಂದ ಅವರು ಕಟ್ಟಿದ ಮಸೀದಿ ಸ್ಥಳೀಯ ಶೈಲಿಯಲ್ಲೇ ಇರುತ್ತದೆ. ಅದರಲ್ಲಿ ವಿಶೇಷ ಏನೂ ಇಲ್ಲ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ:  ಹುಡುಗಿಯರೆ ಸೇರಿ ನಡೆಸುವ ‘ಮುಹಮ್ಮದ್‌ ಅಂಕಲ್‌’ ನೇತೃತ್ವದ ಬೆಂಕಿಕೆರೆ ಗಣೇಶೋತ್ಸವ!

ಸುಳ್ಯ, ಬೆಳ್ತಂಗಡಿ, ಪುತ್ತೂರು, ಬಂಟ್ವಳ, ಉಳ್ಳಾಲ, ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು ಮೂವತ್ತು ಪುರಾತನ ಮಸೀದಿಗಳಿವೆ ಎಂದು ಇಸ್ಮತ್‌ ಪಜೀರ್‌ ಹೇಳುತ್ತಾರೆ. ಅದರಲ್ಲೂ ಜಿಲ್ಲೆಯ ವಲವೂರು, ಅಕ್ಕರಂಗಡಿ, ಅಜಿಲಮೊಗರು, ವಿಟ್ಲ ಪರ್ತಿಪ್ಪಾಡಿ, ಅಮ್ಮುಂಜೆ ಸೇರಿದಂತೆ ಆರರಿಂದ ಏಳು ಮಸೀದಿಗಳು ಮಳಲಿ ಪೇಟೆಯಲ್ಲಿರುವ ಮಸೀದಿಯ ವಾಸ್ತು ಶೈಲಿಯಲ್ಲೇ ಕಟ್ಟಲ್ಪಟ್ಟಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...