Homeಕರ್ನಾಟಕಶೃಂಗೇರಿ: ಅಡಿಕೆ ಆಮದು ನೀತಿ, ಅರಣ್ಯ ಕಾಯ್ದೆಯ ಕಿರುಕುಳ ಖಂಡಿಸಿ ಪ್ರತಿಭಟನೆ

ಶೃಂಗೇರಿ: ಅಡಿಕೆ ಆಮದು ನೀತಿ, ಅರಣ್ಯ ಕಾಯ್ದೆಯ ಕಿರುಕುಳ ಖಂಡಿಸಿ ಪ್ರತಿಭಟನೆ

- Advertisement -
- Advertisement -

ಚಿಕ್ಕಮಗಳೂರು: ಸುಂಕರಹಿತ ಭೂತಾನ್ ಅಡಿಕೆ ಆಮದು ನೀತಿಯನ್ನು ತಕ್ಷಣವೇ ಹಿಂಪಡೆಯಬೇಕು. ಎಲೆ ಚುಕ್ಕಿ, ಹಳದಿ ಎಲೆರೋಗದ ಸಂಶೋಧನೆಗಾಗಿ ಸರ್ಕಾರ ವಿಜ್ಞಾನಿಗಳ ಕಾರ್ಯಪಡೆ ರಚಿಸಬೇಕು ಹಾಗೂ ರೈತರಿಗೆ ಮಾರಕವಾಗಿರುವ ಅರಣ್ಯ ಕಾಯ್ದೆಯ ಸೆಕ್ಷನ್‌ 4(1) ರದ್ದು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಜನಶಕ್ತಿ ಸಂಘಟನೆ ನೇತೃತ್ವದಲ್ಲಿ ಶೃಂಗೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಶೃಂಗೇರಿ ಬಸ್‌ಸ್ಟಾಂಡ್‌ನಿಂದ ತಾಲ್ಲೂಕು ಕಚೇರಿವರೆಗೆ ಮೆರವಣಿಗೆ ನಡೆಸಲಾಗಿದ್ದು, “ನಮ್ಮನ್ನಾಳುವ ಸರ್ಕಾರಗಳು ನಿರಂತರವಾಗಿ ಕೃಷಿ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿವೆ. ಸಂಕಷ್ಟದಿಂದ ನರಳುತ್ತಿರುವ ರೈತಾಪಿ ಜನ, ಕೂಲಿಕಾರ್ಮಿಕರು ದಿಕ್ಕು ತೋಚದೆ ಕಂಗಾಲಾಗಿದ್ದಾರೆ. ಇದರ ಪರಿಣಾಮಗಳು ಎಲ್ಲ ಜನವರ್ಗಕ್ಕೂ ತಟ್ಟುತ್ತದೆ. ಈ ಜನವಿರೋಧಿ ನೀತಿಗಳನ್ನು ಹಿಂತೆಗೆದುಕೊಳ್ಳಬೇಕು” ಎಂದು ಆಗ್ರಹಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಲೆನಾಡಿನ ಜನರ ಕೈಯಲ್ಲಿ ಒಂದಷ್ಟು ಹಣ ಓಡಾಡುತ್ತಿದೆ ಎಂದರೆ ಅದಕ್ಕೆ ಕಾರಣ ಅಡಿಕೆ ಎಂಬ ವಾಣಿಜ್ಯ ಬೆಳೆ. ಇದಕ್ಕೆ ಎಷ್ಟು ಮೌಲ್ಯವಿತ್ತೋ ಅಷ್ಟೇ ಕಂಟಕ ಮೊದಲಿನಿಂದಲೂ ಎದುರಾಗಿದೆ. ಈಗ ಎದುರಾಗಿರುವ ಎಲೆ ಚುಕ್ಕಿ ರೋಗ ಬೆಳೆಗಾರರನ್ನು ಸಂಪೂರ್ಣ ನಿರ್ನಾಮ ಮಾಡಲು ಹೊರಟಿದೆ. ಅದರ ಜೊತೆಗೆ ಆಮದು ನೀತಿಯನ್ನು ರೂಪಿಸಿ ಸಂಕಷ್ಟಕ್ಕೆ ಸಿಲುಕಿಸಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

“ಎಲೆ ಚುಕ್ಕಿ, ಹಳದಿ ಎಲೆ ರೋಗದ ಸಂಶೋಧನೆಗಾಗಿ ತಕ್ಷಣವೇ ಸರ್ಕಾರ ವಿಜ್ಞಾನಿಗಳ ಕಾರ್ಯಪಡೆ ರಚಿಸಬೇಕು. ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಯು ರೈತರ ಭೂಮಿಯ ಮಣ್ಣು ಪರೀಕ್ಷೆ ಸೇರಿದಂತೆ ವೈಜ್ಞಾನಿಕ ಪರಿಹಾರಗಳ ಮತ್ತು ಉಪಯೋಗದ ಬಗ್ಗೆ ರೈತರಿಗೆ ಮಾಹಿತಿ ಕೊಡಬೇಕು” ಎಂದು ಒತ್ತಾಯಿಸಲಾಯಿತು.

ಕೊಳೆ ರೋಗ, ಎಲೆ ಚುಕ್ಕಿ ರೋಗದಿಂದ ಬಾಧಿತರಾದ ಎಲ್ಲಾ ರೈತರಿಗೂ ಪರಿಹಾರ ಕೊಡಬೇಕು. ಹಾಗೂ ಕಾರ್ಮಿಕ ಮತ್ತು ಬಡ ಕುಟುಂಬಕ್ಕೆ ವಿವಿಧ ಪ್ಯಾಕೇಟ್ ಘೋಷಿಸಬೇಕು. ಎಲ್ಲಾ ಮಂಜೂರಾತಿ ಹಾಗೂ ಅಭಿವೃದ್ಧಿ ಕೆಲಸಕ್ಕೆ ಮಾರಕವಾದ ಅರಣ್ಯ ಕಾಯ್ದೆಯ ಸೆಕ್ಷನ್ 4(1) ಹಾಗೂ ಇತರೆ ಅರಣ್ಯ ಕಾಯ್ದೆಗಳು ರದ್ದಾಗಬೇಕು. ಸುಂಕರಹಿತ ಭೂತಾನ್ ಅಡಿಕೆ ಆಮದು ನೀತಿಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಲಾಯಿತು.

ಅರ್ಹ ಫಲಾನುಭವಿಗಳಿಗೆ ಭೂಮಿ ಮಂಜೂರಾತಿ ಮಾಡಬೇಕು. ಎಲ್ಲಾ ಹಳ್ಳಿಗಳ ರಸ್ತೆಗಳನ್ನು (ವೈಜ್ಞಾನಿಕವಾಗಿ, ಪರಿಸರಕ್ಕೆ ಪೂರಕವಾಗಿ) ದುರಸ್ಥಿಗೊಳಸಬೇಕು. ರೈತರ ಖಾತೆಗೆ ಜಮಾ ಆಗಬೇಕಿದ್ದ ಪಸಲ್ ಭೀಮಾ ವಿಮಾ ಯೋಜನೆಯ ಹಣವನ್ನು ಪೂರ್ಣ ಪ್ರಮಾಣದಲ್ಲಿ ತಕ್ಷಣವೇ ಬಿಡುಗಡೆ ಮಾಡಿ ಸರ್ಕಾರವೇ ನೇರವಾಗಿ ರೈತರ ಖಾತೆಗೆ ಹಣ ಜಮಾ ಮಾಡಬೇಕು ಎಂದು ಸಂಘಟನೆ ತಿಳಿಸಿದೆ.

ಪ್ರತಿಭಟನೆಯಲ್ಲಿ ಆದಿವಾಸಿ ಹಿತರಕ್ಷಣಾ ಸಮಿತಿಯ ಅಧ್ಯಕ್ಷರಾದ ಕಲ್ಕುಳಿ ವಿಠಲ್ ಹೆಗ್ಡೆ, ಜನಶಕ್ತಿ ರಾಜ್ಯ ಕಾರ್ಯದರ್ಶಿ ಸುರೇಶ್, ಕರ್ನಾಟಕ ಜನಶಕ್ತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಲ್ ಅಶೋಕ್, ಜಿಲ್ಲಾ ಸಮಿತಿ ಗೌರವ ಅಧ್ಯಕ್ಷರಾದ ರಾಧಾ, ಕೌಳಿ ರಾಮು, ಹಾಗಲಾಗಂಚಿ ವೆಂಕಟೇಶ್, ಸರೋಜಾ, ಆನಂದ್, ರೈತ ಮುಖಂಡರಾದ ಕಂಬಳಗೆರೆ ರಾಜೇಂದ್ರ, ನವೀನ್ ಕರ್ವಾಲೆ ಇತರರು ಹಾಜರಿದ್ದರು.

ಏತಕ್ಕಾಗಿ ಈ ಹೋರಾಟ? ಸಂಘಟನೆ ಹೇಳುವುದೇನು?

ಕೊಳೆರೋಗವು ನಿನ್ನೆ ಮೊನ್ನೆ ಜನ್ಮ ತಾಳಿದವುಗಳಲ್ಲ. ಇದಕ್ಕೆ ಕಾರಣ ತೇವಾಂಶ ಜಾಸ್ತಿಯಾಗುವಿಕೆ. ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆಗೆ ಮನುಷ್ಯರಂತೆ ಸಕಲ ಜಲಚರ ಸಸ್ಯಗಳಿಗೂ ಮಾರಕ ರೋಗಗಳು ಬಾಧಿಸುತ್ತಲೇ ಇರುತ್ತವೆ.

ನಮ್ಮನ್ನಾಳುವ ಸರ್ಕಾರಗಳು ಈ ರೋಗದ ಬಗ್ಗೆ ನಿರಂತರವಾದ ಸಂಶೋಧನೆ ನಡೆಸಿ, ಬಾಧೆಗೊಳಗಾದ ಜನರಿಗೆ ಅವಶ್ಯಕ ಸಲಹೆ ಸೂಚನೆ, ಔಷಧಿ, ಪರಿಹಾರಗಳನ್ನು ನೀಡಬೇಕಿತ್ತು. ಅದನ್ನು ಬಿಟ್ಟು, ರೈತರ ಬಗ್ಗೆ ಒಂದಿನಿತೂ ಕಾಳಜಿಯಿಲ್ಲದ ಸರ್ಕಾರಗಳು ಇನ್ನಷ್ಟು ಕೃಷಿ ವಿರೋಧಿ ನೀತಿಗಳನ್ನು ಜಾರಿಗೊಳಿಸಲು ಉತ್ಸುಕವಾಗಿದೆ. ತೊಂಡೆರೋಗ, ಎಲೆ ಚುಕ್ಕಿ ರೋಗ, ಕೊಳೆ ರೋಗದ ಸಮಸ್ಯೆ ತಾಂಡವವಾಡುತ್ತಿದೆ. ಈಗ ಕೇಂದ್ರ ಸರ್ಕಾರ ಭೂತನ್ ಅಡಿಕೆಯನ್ನು ಸುಂಕರಹಿತವಾಗಿ ಆಮದು ಮಾಡಿಕೊಳ್ಳಲು ತಯಾರಿ ನಡೆಸಿದೆ. ಇದು ಇಲ್ಲಿನ ರೈತರ ಬದುಕಿಗೆ ಹಾಗೂ ಮಲೆನಾಡಿನ ಆರ್ಥಿಕ ಚಟುವಟಿಕೆಗೆ ಕೊಡಲಿ ಪೆಟ್ಟು ಕೊಡಲಿದೆ. 17,000 ಟನ್ ಅಡಿಕೆಯನ್ನು ಆಮದು ಮಾಡಿಕೊಳ್ಳುವ ಹುನ್ನಾರದ ಹಿಂದೆ ಅಮಿತ್‌ ಶಾ ಮಗ ಜೈ ಶಾ, ಹಾಗೂ ಕ್ಯಾಂಪ್ಪೋ ಅಧ್ಯಕ್ಷರ ಮಗನ ಸಹಯೋಗದಲ್ಲಿ ನಡೆಯುತ್ತಿರುವ “ಗಣೇಶ್ ಟ್ರೇಡಿಂಗ್” ಎಂಬ ಕಂಪನಿಯ ಕೈಗಳಿವೆ, ಎನ್ನುವ ಆರೋಪವೂ ಕೇಳಿ ಬರುತ್ತಿದೆ.

ನಮ್ಮ ದೇಶದಲ್ಲಿ ಲಕ್ಷಾಂತರ ಎಕರೆ ಅಡಿಕೆ ತೋಟಗಳಿವೆ. 70 ಲಕ್ಷಕ್ಕೂ ಹೆಚ್ಚು ಅಡಿಕೆ ಕೃಷಿ ಕುಟುಂಬಗಳಿವೆ. ಹಾಗೆ ಇದನ್ನು ನಂಬಿ ತಮ್ಮ ಬದುಕನ್ನು ಕಟ್ಟಿಕೊಂಡ ಕೋಟ್ಯಂತರ ಕೂಲಿ ಕಾರ್ಮಿಕರಿದ್ದಾರೆ. ಸರ್ಕಾರ ಈ ಸುಂಕರಹಿತ ಆಮದು ನೀತಿಯಿಂದ ಹತ್ತಾರು ಕೋಟಿ ಕುಟುಂಬಗಳನ್ನು ಬೀದಿಗೆ ತಳ್ಳಲಿದೆ. ಮಲೆನಾಡ ಹಾಗೂ ಇತರೆ ಪ್ರದೇಶದ ಬೀದಿ ವ್ಯಾಪಾರಿಗಳು, ದಲ್ಲಾಳಿ ವ್ಯಾಪಾರಿಗಳು, ದಿನಸಿ ಅಂಗಡಿ ವ್ಯಾಪಾರಸ್ಥರಿಗೂ ಈ ನೀತಿ ದೊಡ್ಡ ಹೊಡೆತ ಕೊಡಲಿದೆ. ಅಷ್ಟೇ ಅಲ್ಲದೇ, ಮಿತ್ರರಾಷ್ಟ್ರವಾದ ಭೂತಾನ್‌ನಿಂದ ಅಡಿಕೆ ಆಮದು ಮಾಡಿಕೊಳ್ಳುವ ನೆಪದಲ್ಲಿ ಹಿಂಬಾಗಿಲಿನಿಂದ ಬರ್ಮಾ ದೇಶದ ಅಡಿಕೆ ತರಿಸುವ ಸಾಧ್ಯತೆಯೇ ಹೆಚ್ಚು.

ಇದನ್ನೂ ಓದಿರಿ: ‘ಹಿಂದೂ’ ಪದ ವಿವಾದ: ಬಹಿರಂಗ ಚರ್ಚೆಗೆ ಸತೀಶ್‌ ಜಾರಕಿಹೊಳಿ ಪಂಥಾಹ್ವಾನ- ಏನಂದರು ಜನ?

ಭೂತಾನ್ ನಿಂದ ಭಾರತಕ್ಕೆ ಸಮುದ್ರ ಮಾರ್ಗವಿಲ್ಲ. ಬರ್ಮಾದಿಂದ ಕೊಲ್ಕತ್ತಾಗೆ ಸಮುದ್ರ ಮಾರ್ಗವಿದೆ ಮತ್ತು ಈ ಬಂದರಿನಲ್ಲಿ ಸುಂಕವಿಲ್ಲ. ಅಂದ್ರೆ ಭೂತಾನ್ ಅಡಿಕೆಯ ಹೆಸರಿನಲ್ಲಿ ಬರ್ಮಾ ದೇಶದ ಅಡಿಕೆ ನಮ್ಮ ದೇಶಕ್ಕೆ ಕಳ್ಳ ಮಾರ್ಗದಲ್ಲಿ ಬರುವುದರಲ್ಲಿ ಸಂಶಯವಿಲ್ಲ. ಅದರ ಪ್ರಮಾಣ ಕೂಡ 17,000 ಟನ್‌ಗೆ ಬದಲಾಗಿ ಲಕ್ಷಾಂತರ ಟನ್ ಭಾರತದ ಮಾರುಕಟ್ಟೆಯನ್ನು ಆವರಿಸುವ ಎಲ್ಲಾ ಸಾಧ್ಯತೆಗಳಿವೆ. ಈ ಸುಳ್ಳಿನ ಕವಚದೊಳಗೆ ರೈತರ ಮತ್ತು ಆರ್ಥಿಕ ವಹಿವಾಟಿನ ನೋವಿನ ಬದುಕಿದೆ. ಇದನ್ನು ಪ್ರಜ್ಞಾವಂತ ಜನರು ಬೀದಿಗಿಳಿದು ವಿರೋಧಿಸಬೇಕಲ್ಲವೇ?

ಹಾಗೆಯೇ ಮಲೆನಾಡಿನ ಜನರನ್ನು ಬಿಟ್ಟುಬಿಡದೆ ಬಾಧಿಸುತ್ತಿರುವ ಸಮಸ್ಯೆಗಳಲ್ಲಿ ಮತ್ತೊಂದು ಅರಣ್ಯ ಕಾಯ್ದೆಗಳು. ಇದರ ಭಾಗವಾಗಿ ಎಲ್ಲೆಡೆಯು ಜನರನ್ನ ಬಾಧಿಸುತ್ತಿರುವುದು ಸೆಕ್ಷನ್ 4(1). ಕಂದಾಯ ಭೂಮಿಯನ್ನು ಕರಾಳ ಸೆಕ್ಷನ್‌ಗಳ ಅಡಿಯಲ್ಲಿ ಮೀಸಲು ಅರಣ್ಯ ಮಾಡುವ ಹುನ್ನಾರವಿದೆ. ಈ ಕಾಡನ್ನು ನಂಬಿ ಬದುಕು ಕಟ್ಟಿಕೊಂಡವರು ಸಾವಿರಾರು ಜನ ಇವತ್ತಿಗೂ ನೂರಾರು ವರ್ಷಗಳಿಂದ ಅಲ್ಲಿ ಬದುಕುತ್ತಿದ್ದರೂ, ತಾನು ನಿಂತ ನೆಲ ನನ್ನದೇ ಎಂದು ಹೇಳಲು ಸಾಧ್ಯವಿಲ್ಲ ಅನ್ನುವ ಸ್ಥಿತಿ ಉಂಟಾಗಿದೆ. ಜೀವ ಭದ್ರತೆಗಾಗಿ ಒಂದು ಅಧಿಕೃತ ದಾಖಲಾತಿ ಇಲ್ಲವಾಗಿದೆ. 94ಸಿ, 94ಸಿಸಿ, 5 ಮಂಜೂರಾತಿಗಾಗಿ ವಿವಿಧ ಫಾರಂ ಹಾಕಿಕೊಂಡು ಆದೇಶಕ್ಕಾಗಿ ಭರವಸೆಯ ಕಣ್ಣುಗಳಿಂದ ನೋಡುತ್ತಿದ್ದಾರೆ. ಎಲ್ಲದಕ್ಕೂ ಈ ಕಾಯ್ದೆಗಳನ್ನು ನೆಪವಾಗಿಟ್ಟುಕೊಂಡು, ಜನರ ಹಕ್ಕುಗಳನ್ನು ನಿರಾಕರಿಸಲಾಗುತ್ತಿದೆ. ಈ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...