Homeಮುಖಪುಟಸದುದ್ದೇಶದಿಂದ ನೀಡಿದ ಹೇಳಿಕೆ ಹಿಂಪಡೆಯುವೆ: ಸತೀಶ್ ಜಾರಕಿಹೊಳಿ

ಸದುದ್ದೇಶದಿಂದ ನೀಡಿದ ಹೇಳಿಕೆ ಹಿಂಪಡೆಯುವೆ: ಸತೀಶ್ ಜಾರಕಿಹೊಳಿ

- Advertisement -
- Advertisement -

“ಸದುದ್ದೇಶದಿಂದ ನೀಡಿದ ಹೇಳಿಕೆಯನ್ನು ಹಿಂಪಡೆಯುಯುತ್ತಿದ್ದೇನೆ” ಎಂದು ತಿಳಿಸಿರುವ ಕಾಂಗ್ರೆಸ್ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿಯವರು, “ತನಿಖಾ ಸಮಿತಿ ರಚಿಸಬೇಕು” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದಾರೆ.

ನವೆಂಬರ್‌ 6ರಂದು ನಿಪ್ಪಾಣಿಯಲ್ಲಿ ಜರುಗಿದ ಮಾನವ ಬಂಧುತ್ವ ವೇದಿಕೆಯ ‘ಮನೆಮನೆಗೆ ಬುದ್ಧ, ಬಸವ, ಅಂಬೇಡ್ಕರ್‌’ ಕಾರ್ಯಕ್ರಮದಲ್ಲಿ ಜಾರಕಿಹೊಳಿಯವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದ್ದವು.

ಹಿಂದೂ ಪದಕ್ಕೆ ಇರುವ ಅರ್ಥಗಳ ಕುರಿತು ಮಾತನಾಡಿದ್ದ ಸತೀಶ್ ಜಾರಕಿಹೊಳಿಯವರ ವಿರುದ್ಧ ಕೆಲವರು ವಿವಾದ ಸೃಷ್ಟಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಅವರು ಪತ್ರ ಬರೆದಿದ್ದಾರೆ.

“ಹಿಂದೂ ಪದದ ಕುರಿತು ನಾನು ನೀಡಿದ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡಲಾಗುತ್ತಿದೆ. ಇದರಿಂದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿ ಆಗಬಾರದು ಎಂದು ಹೇಳಿಕೆ ಹಿಂಪಡೆದಿದ್ದೇನೆ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದಿಸುತ್ತೇನೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

“ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೊರಟಿವೆ. ನನ್ನ ತೇಜೋವಧೆ ಮಾಡುವ ವ್ಯವಸ್ಥಿತ ಪಿತೂರಿ ನಡೆದಿದೆ. ಈ ಎಲ್ಲ ಅಂಶಗಳ ಕುರಿತು ಪರಿಶೀಲಿಸಬೇಕು. ನೈಜ ಸ್ಥಿತಿ ವಿವರಿಸದೇ, ಅವಾಂತರ ಸೃಷ್ಟಿಸಿದವರ ವಿರುದ್ಧ ತನಿಖೆಗಾಗಿ ಸಮಿತಿ ರಚಿಸಬೇಕು” ಎಂದು ಮನವಿ ಮಾಡಿದ್ದಾರೆ.

“ಹಿಂದೂ ಶಬ್ದ ಪರ್ಷಿಯನ್ ಭಾಷೆಯಿಂದ ಬಂದಿದೆ. ಇದು ಭಾರತಕ್ಕೆ ಹೇಗೆ ಬಂತು? ಹಲವಾರು ಲೇಖನಗಳಲ್ಲಿ ಹಿಂದೂ ಪದದ ಬಗ್ಗೆ ಕೆಟ್ಟ ಅರ್ಥಗಳಿವೆ ಎಂಬುದಾಗಿ ಬರೆದಿದ್ದಾರೆ ಎಂದು ನಾನು ಹೇಳಿಕೆ ನೀಡಿದ್ದೇನೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ ಆಗಬೇಕಾದುದು ಅವಶ್ಯ ಎಂದು ಹೇಳಿದ್ದೇನೆ. ವಿಕಿಪೀಡಿಯಾ, ಪುಸ್ತಕಗಳು, ಶಬ್ದಕೋಶಗಳು ಹಾಗೂ ಇತಿಹಾಸಕಾರರ ಬರಹದ ಉಲ್ಲೇಖದ ಮೇಲೆ ಈ ನನ್ನ ಭಾಷಣ ಆಧರಿತವಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಈ ಕುರಿತು ತಕ್ಷಣ ತನಿಖಾ ಸಮಿತಿ ರಚಿಸಬೇಕು ಎಂದು ನಾನು ವಿನಂತಿಸಿಕೊಳ್ಳುತ್ತೇನೆ. ನಿಪ್ಪಾಣಿಯಲ್ಲಿ ಜರುಗಿದ ಮಾನವ ಬಂಧುತ್ವ ವೇದಿಕೆಯ ಮನೆಮನೆಗೆ ಬುದ್ಧ, ಬಸವ, ಅಂಬೇಡ್ಕರ್‌ ಕಾರ್ಯಕ್ರಮದಲ್ಲಿ ನಾನು ಮಾತನಾಡಿದ ಆ ಒಂದು ಮಾತು ವಿವಾದಕ್ಕೀಡಾಗಿದೆ ಅಲ್ಲದೆ ಅದನ್ನೇ ತಿರುಚಿ ಅಪಪ್ರಚಾರಗೊಳಿಸುತ್ತಿದ್ದಾರೆ” ಎಂದು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

“ನಾನು ಅರೆಬರೆ ಓದಿದವನಲ್ಲ, 30 ವರ್ಷಗಳಿಂದ ಓದುತ್ತಲೇ ಇದ್ದೇನೆ. ಹಿಂದೂ ಪದದ ಬಗ್ಗೆ ನೀಡಿದ್ದ ಹೇಳಿಕೆ ಕುರಿತು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ, ಹೇಳಿಕೆ ತಪ್ಪೆಂದು ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ” ಎಂದು ಅವರು ನಿನ್ನೆ ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...