Homeರಾಜಕೀಯ‘ನನ್ನ ಫೋನ್ ಕದ್ದಾಲಿಸಲಾಗಿದ್ದು, ಖಾಸಗಿತನ ಉಲ್ಲಂಘನೆಯಾಗಿದೆ’: ತೆಲಂಗಾಣ ಗವರ್ನರ್‌‌ ಗಂಭೀರ ಆರೋಪ

‘ನನ್ನ ಫೋನ್ ಕದ್ದಾಲಿಸಲಾಗಿದ್ದು, ಖಾಸಗಿತನ ಉಲ್ಲಂಘನೆಯಾಗಿದೆ’: ತೆಲಂಗಾಣ ಗವರ್ನರ್‌‌ ಗಂಭೀರ ಆರೋಪ

- Advertisement -
- Advertisement -

‘ನನ್ನ ಫೋನ್‌ ಅನ್ನು ಟ್ಯಾಪ್ ಮಾಡಲಾಗಿದ್ದು, ಖಾಸಗಿತನವನ್ನು ಉಲ್ಲಂಘಿಸಲಾಗಿದೆ’ ಎಂದು ತೆಲಂಗಾಣ ರಾಜ್ಯಪಾಲರಾದ ತಮಿಳಿಸೈ ಸೌಂದರಾಜನ್ ಅವರು ರಾಜ್ಯ ಸರ್ಕಾರದ ವಿರುದ್ಧ ಬುಧವಾರ ಗಂಭೀರ ಆರೋಪ ಮಾಡಿದ್ದಾರೆ.

ತೆಲಂಗಾಣದ ಟಿಆರ್‌ಎಸ್‌ ಶಾಸಕರನ್ನು ಆಪರೇಷನ್ ಕಮಲ ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಲಾಗಿದ್ದು, ಬಿಜೆಪಿ ಏಜೆಂಟರು ಎಂದು ಮೂವರನ್ನು ಬಂಧಿಸಲಾಗಿತ್ತು. ಈ ಬಗ್ಗೆ ಟಿಆರ್‌‌ಎಸ್ ಸೋಷಿಯಲ್ ಮೀಡಿಯಾ ಉಸ್ತುವಾರಿ ವಹಿಸಿದ ಟ್ವೀಟರ್‌ ಖಾತೆಯಲ್ಲಿ, ಆಪಾದಿತ ಆಪರೇಷನ್ ಕಮಲದಲ್ಲಿ ರಾಜ್ ಭವನ ಕೂಡಾ ಪಾತ್ರ ವಹಿಸಿದೆ ಎಂದು ಆರೋಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆ ಟ್ವೀಟ್‌‌ ಅನ್ನು ಉಲ್ಲೇಖಿಸಿರುವ ರಾಜ್ಯಪಾಲರು ಪ್ರಕರಣಕ್ಕೆ ಯಾವುದೇ ಸಂಬಂಧವಿಲ್ಲದ ರಾಜ್ಯಪಾಲರ ಕಚೇರಿಯನ್ನು ವಿವಾದಕ್ಕೆ ಎಳೆಯಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: TRS ಶಾಸಕರ ಅಪರೇಷನ್ ಕಮಲ ಪ್ರಕರಣ: ತನಿಖೆ ಮೇಲಿನ ತಡೆಯಾಜ್ಞೆ ಹಿಂಪಡೆದ ತೆಲಂಗಾಣ ಹೈಕೋರ್ಟ್

“ನನ್ನ ಫೋನ್ ಅನ್ನು ಟ್ಯಾಪ್ ಮಾಡಲಾಗಿದ್ದು, ಖಾಸಗಿತದ ಉಲ್ಲಂಘನೆಯಾಗಿದೆ. ನನ್ನ ಹಿಂದಿನ ಎಡಿಸಿ ಹೆಸರು ತುಷರ್ ಆಗಿದ್ದು, ದೀಪಾವಳಿ ಶುಭಾಶಯ ಕೋರಲು ಅವರು ನನಗೆ ಕರೆ ಮಾಡಿದ್ದರು. ಅದೇ ದಿನ ತೆಲಂಗಾಣ ಸರ್ಕಾರವು ಈ ಪ್ರಕರಣದಲ್ಲಿ ತುಷಾರ್ ಭಾಗಿಯಾಗಿದ್ದಾರೆ ಎಂದು ಆರೋಪಿಸಿ, ಅವರು ರಾಜ್ ಭವನ ಕಚೇರಿಯನ್ನು ವಿವಾದಕ್ಕೆ ಎಳೆದಿದೆ” ಎಂದು ಅವರು ಹೇಳಿದ್ದಾರೆ.

“ನನ್ನ ಫೋನ್ ಅನ್ನು ಟ್ಯಾಪ್ ಮಾಡದಿದ್ದರೆ, ಈ ಪ್ರಕರಣದಲ್ಲಿ ತುಷಾರ್ ಭಾಗಿಯಾಗಿದ್ದಾರೆ ಮತ್ತು ರಾಜ ಭವನಕ್ಕೆ ಇದರಲ್ಲಿ ಸಂಪರ್ಕವಿದೆ ಎಂಬ ಪ್ರತಿಪಾದನೆಯನ್ನು ಅವರು ಹೇಗೆ ಮಾಡುತ್ತಾರೆ?”ಎಂದು ತಮಿಲಿಸೈ ಪ್ರಶ್ನಿಸಿದ್ದಾರೆ.

“ನನ್ನ ಫೋನ್ ಅನ್ನು ಟ್ಯಾಪ್ ಮಾಡಿದರೂ ನಾನು ಚಿಂತೆ ಮಾಡುತ್ತಿಲ್ಲ. ನನಗೆ ಮರೆಮಾಚಲು ಏನೂ ಇಲ್ಲ. ರಾಜ ಭವನದಲ್ಲಿ ಎಲ್ಲವೂ ತುಂಬಾ ಪಾರದರ್ಶಕವಾಗಿದೆ. ಒಂದು ವೇಳೆ ಅವರು ಬಯಸಿದರೆ ನಾನು ಅವರಿಗೆ ನನ್ನ ಫೋನ್ ಅನ್ನು ತೋರಿಸುತ್ತೇನೆ” ಎಂದು ರಾಜ್ಯಪಾಲರು ಹೇಳಿದ್ದಾರೆ.

ಇದನ್ನೂ ಓದಿ: ತೆಲಂಗಾಣ ಶಾಸಕರ ಖರೀದಿಗೆ ಬಿಜೆಪಿ ಯತ್ನ ಆರೋಪ: ವಿಡಿಯೊ ಪ್ರದರ್ಶಿಸಿದ ಮುಖ್ಯಮಂತ್ರಿ ಕೆಸಿಆರ್‌

ಟಿಆರ್‌ಎಸ್‌ ಶಾಸಕರನ್ನು ಅಪರೇಷನ್ ಕಮಲ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ  ಮೂವರು ಆರೋಪಿಗಳನ್ನು ಸೈಬರಾಬಾದ್ ಪೊಲೀಸರು ಬಂಧಿಸುವುದರೊಂದಿಗೆ ಪ್ರಕರಣ ಇತ್ತೀಚೆಗೆ ಭಾರಿ ವಿವಾದವನ್ನು ಹುಟ್ಟುಹಾಕಿದೆ. ಆರೋಪಿಗಳು ಶಾಸಕರೊಂದಿಗೆ ಮಾತನಾಡುತ್ತಿರುವುದನ್ನು, ಪೊಲೀಸರು ಹಿಡನ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.

ಈ ಘಟನೆಯ ನಂತರ, ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಸಿಎಂ ಕೆಸಿಆರ್, ಕೇರಳದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯ ಮಿತ್ರಪಕ್ಷ ಬಿಡಿಜೆಯ ಮುಖ್ಯಸ್ಥ ತುಷಾರ್ ವೆಲ್ಲಪಲ್ಲಿ ಅವರು ಪೊಲೀಸರು ಬಂಧನಕ್ಕೊಳಗಾದ ಮೂವರಲ್ಲಿ ಒಬ್ಬರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಆರೋಪಿಸಿದ್ದಾರೆ. ಬಂಧನಕ್ಕೆ ಒಳಗಾದ ಮೂವರು ಕೂಡಾ ಬಿಜೆಪಿಯ ಏಜೆಂಟರು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...