Homeಮುಖಪುಟಮುಗ್ಗರಿಸಿದ ಭಾರತ: ಭರ್ಜರಿ ಜಯದೊಂದಿಗೆ ಫೈನಲ್‌ ಲಗ್ಗೆಯಿಟ್ಟ ಇಂಗ್ಲೆಂಡ್

ಮುಗ್ಗರಿಸಿದ ಭಾರತ: ಭರ್ಜರಿ ಜಯದೊಂದಿಗೆ ಫೈನಲ್‌ ಲಗ್ಗೆಯಿಟ್ಟ ಇಂಗ್ಲೆಂಡ್

- Advertisement -
- Advertisement -

ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ಇಂಗ್ಲೆಂಡ್ ಫೈನಲ್ ತಲುಪಿತು. ಅಲೆಕ್ಸ್ ಹೇಲ್ಸ್ (86 ರನ್) ಮತ್ತು ಜೋಸ್ ಬಟ್ಲರ್‌ರವರ (80 ರನ್) ಆಕ್ರಮಣಕಾರಿ ಬ್ಯಾಟಿಂಗ್‌ ಬಲದಿಂದ ಸುಲಭ ಜಯ ಕಂಡಿತು. ಬೌಲಿಂಗ್‌ನಲ್ಲಿ ನೀರಸ ಪ್ರದರ್ಶನ ನೀಡಿದ ಭಾರತ ತಂಡ ಈ ಸೋಲಿನೊಂದಿಗೆ ಟೂರ್ನಿಯಿಂದ ಹೊರಬಿದ್ದಿತು.

ಇಂಗ್ಲೆಂಡ್‌ನ ಈ ಇಬ್ಬರೂ ಆರಂಭಿಕ ಬ್ಯಾಟ್ಸ್‌ಮನ್‌ಗಳು ಭಾರತದ ಬೌಲರ್‌ಗಳ ಬೆವರಿಳಿಸಿದರು. ಚೆಂಡನ್ನು ಅಂಗಳದ ಮೂಲೆ ಮೂಲೆ ಅಟ್ಟುವ ಮೂಲಕ ಅಧಿಕಾರಯುತ ಗೆಲುವು ಪಡೆದರು. ಈ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡ ನವೆಂಬರ್ 13 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಪ್ರಶಸ್ತಿಗಾಗಿ ಸೆಣಸಲಿದೆ.

2010ರಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಚಾಂಪಿಯನ್ ಆಗಿದ್ದ ಇಂಗ್ಲೆಂಡ್, 2016ರಲ್ಲಿ ವೆಸ್ಟ್ ಇಂಡೀಸ್ ಎದುರು ಫೈನಲ್‌ನಲ್ಲಿ ಮುಗ್ಗಿರಿಸಿತ್ತು. ಈಗ ಫೈನಲ್ ತಲುಪಿದ್ದು ಎರಡನೇ ಬಾರಿ ಚಾಂಪಿಯನ್ ಆಗುವ ತವಕದಲ್ಲಿದೆ. ಅದೇ ರೀತಿ 2007 ರಲ್ಲಿ ಫೈನಲ್‌ನಲ್ಲಿ ಭಾರತದ ವಿರುದ್ಧ ಮುಗ್ಗರಿಸಿದ್ದ ಪಾಕ್, 2009 ರಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿ ಚಾಂಪಿಯನ್ ಆಗಿತ್ತು. ಈಗ ಎರಡನೆ ಬಾರಿ ಕಪ್ ಜಯಿಸುವ ಕನಸಿನಲ್ಲಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ಕಳದುಕೊಂಡು 168 ರನ್ ಗಳಿಸುವ ಮೂಲಕ ಸವಾಲಿನ ಮೊತ್ತ ಪೇರಿಸಿತು. ವಿರಾಟ್ ಕೊಹ್ಲಿಯ ಸೊಗಸಾದ ಮತ್ತು ಹಾರ್ದಿಕ್ ಪಾಂಡ್ಯರವರ ಬಿರುಸಿನ ಅರ್ಧಶಕತಗಳಿಂದ ಭಾರತ ತಂಡ ಇಂಗ್ಲೆಂಡ್ ಗೆಲುವಿನ 169 ರನ್‌ಗಳ ಗುರಿ ನೀಡಿತ್ತು.

ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ದುಕೊಂಡರು. ನಾಯಕನ ನಿರೀಕ್ಷೆಯಂತೆ ವೋಕ್ಸ್ ಕೆ.ಎಲ್ ರಾಹುಲ್ ವಿಕೆಟ್ ತೆಗೆದು ಶುಭಾರಂಭ ಮಾಡಿದರು. ನಂತರ ವಿರಾಟ್ ಕೊಹ್ಲಿ ಮತ್ತು ನಾಯಕ ರೋಹಿತ್ ಶರ್ಮಾ ಅಲ್ಪ ಜೊತೆಯಾಟ ನೀಡಿದರೂ ಶರ್ಮಾ ಬೇಗನೆ ನಿರ್ಗಮಿಸುವ ಮೂಲಕ ನಿರಾಸೆ ಮೂಡಿಸಿದರು. ಇನ್ನೂ ಸಿಕ್ಸ್‌ ಬಾರಿಗೆ ಭರವಸೆ ಮೂಡಿಸಿದ್ದ ಸೂರ್ಯಕುಮಾರ್ ಯಾದವ್ ಆಟವೂ ಹೆಚ್ಚು ಹೊತ್ತು ನಡೆಯಲಿಲ್ಲ. ಪರಿಣಾಮ ಭಾರತ ಒಂದು ಹಂತದಲ್ಲಿ 9 ಓವರ್‌ಗಳಿಗೆ 3 ವಿಕೆಟ್ ನಷ್ಟಕ್ಕೆ 60 ಅಷ್ಟೇ ಗಳಿಸಿತ್ತು.

ಆದರೆ, ನಾಲ್ಕನೇ ವಿಕೆಟ್‌ಗೆ ಜೊತೆಯಾದ ವಿರಾಟ್ ಕೊಹ್ಲಿ ಹಾರ್ದಿಕ್ ಪಾಂಡ್ಯ ಬಿರುಸಿನ ಜೊತೆಯಾಟಕ್ಕೆ ಮುಂದಾದರು. 4 ಬೌಂಡರಿ 1 ಸಿಕ್ಸರ್ ಸಹಾಯದಿಂದ ವಿರಾಟ್ ಕೊಹ್ಲಿ 40 ಎಸೆತಕ್ಕೆ 50 ರನ್ ಬಾರಿಸಿದರೆ, ಹಾರ್ದಿಕ್ ಪಾಂಡ್ಯ 4 ಬೌಂಡರಿ 5 ಸಿಕ್ಸರ್ ಸಹಾಯದಿಂದ 33 ಎಸೆತಕ್ಕೆ ಬಿರುಸಿನ 63 ರನ್ ಬಾರಿಸಿದರು.

ಆದರೆ ಭಾರತದ ಬೌಲರ್‌ಗಳು ಯಾವುದೇ ಹಂತದಲ್ಲಿ ಪರಿಣಾಮಕಾರಿ ಪ್ರದರ್ಶನ ನೀಡಲಿಲ್ಲ. ಇಂಗ್ಲೆಂಡ್‌ನ ಒಂದೂ ವಿಕೆಟ್ ಪಡೆಯಲು ವಿಫಲರಾದರು. ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಇಂಗ್ಲೆಂಡ್ ಆಟಗಾರರು ಇನ್ನು 24 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ಗುರಿ ಮುಟ್ಟಿದರು.

ಇದನ್ನೂ ಓದಿ: ಗುಜರಾತ್ ಚುನಾವಣೆ: ಹಾರ್ದಿಕ್ ಪಟೇಲ್‌, ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿಗೆ ಬಿಜೆಪಿ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...