Homeಚಳವಳಿಮೀಸಲಾತಿಯ ಉದ್ದೇಶ ಬಡತನ ನಿರ್ಮೂಲನೆಯಲ್ಲ: EWS ಮೀಸಲಾತಿ ವಿರುದ್ಧ ದಸಂಸ ಖಂಡನೆ

ಮೀಸಲಾತಿಯ ಉದ್ದೇಶ ಬಡತನ ನಿರ್ಮೂಲನೆಯಲ್ಲ: EWS ಮೀಸಲಾತಿ ವಿರುದ್ಧ ದಸಂಸ ಖಂಡನೆ

ರಾಜ್ಯದ ದಲಿತ ಸಂಘಟನೆಗಳ 12 ಬಣಗಳು ಒಗ್ಗೂಡಿ 'ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ' ರಚಿಸಲಾಗಿದೆ.

- Advertisement -
- Advertisement -

ಸಂವಿಧಾನದಲ್ಲಿ ಮೀಸಲಾತಿಯನ್ನು ಜಾರಿಗೊಳಿಸಿರುವುದು ಸಾಮಾಜಿಕ ನ್ಯಾಯ ಮತ್ತು ಪ್ರಾತಿನಿಧ್ಯವನ್ನು ಖಾತ್ರಿಪಡಿಸುವುದಕ್ಕಾಗಿಯೇ ಹೊರತು ಬಡತನ ನಿರ್ಮೂಲನೆಗಾಗಿ ಅಲ್ಲ. ಹಾಗಾಗಿ ಆರ್ಥಿಕವಾಗಿ ದುರ್ಬಲರಾದವರಿಗೆ EWS ಮೀಸಲಾತಿ ನೀಡುವುದು ಸಂವಿಧಾನಬಾಹಿರವಾದುದು ಎಂದು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯ ಮುಖಂಡರಾದ ಮಾವಳ್ಳಿ ಶಂಕರ್ ಅಭಿಪ್ರಾಯಪಟ್ಟರು.

ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇಕಡಾ 10ರಷ್ಟು ಮೀಸಲಾತಿ ನೀಡುವ ಕೇಂದ್ರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು ಸಾಮಾಜಿಕ ನ್ಯಾಯಕ್ಕೆ ಆದ ಬಹುದೊಡ್ಡ ಹಿನ್ನಡೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಇಡಬ್ಲ್ಯೂಎಸ್ ತೀರ್ಪು ಸಾಮಾಜಿಕ ನ್ಯಾಯ ಮತ್ತು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಅದು ಮೀಸಲಾತಿ ಪರಿಕಲ್ಪನೆಯನ್ನೆ ಬುಡಮೇಲು ಮಾಡುತ್ತದೆ. ಈ ಇಡಬ್ಲ್ಯೂಎಸ್ ತೀರ್ಪು ಸಂವಿಧಾನದ ಮೇಲಿನ ನೇರ ದಾಳಿ” ಎಂದು ಅಭಿಪ್ರಾಯಪಟ್ಟರು.

“ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕೊಡಬೇಕು ಎನ್ನುವಾಗ ಮಾತ್ರ, ಯಾವ ಆಧಾರದ ಮೇಲೆ ಕೊಡುತ್ತೀರಿ, ಜಾತಿ ಸಮೀಕ್ಷೆ ಮಾಡಿದ್ದೀರಾ? ಅವರ ಆರ್ಥಿಕ ಸ್ಥಿತಿಗತಿ ಅಧ್ಯಯನ ನಡೆಸಿದ್ದೀರಾ ಎಂಬ ಪ್ರಶ್ನೆಗಳು ಮುನ್ನೆಲೆಗೆ ಬರುತ್ತವೆ. ಆದರೆ ಮೀಸಲಾತಿ ವಿರುದ್ಧವೆ ಮಾತಾಡಿಕೊಂಡ ಬಂದ ಸಮುದಾಯಗಳು, ಇಂದು ಏಕಾಏಕಿ ಮೀಸಲಾತಿಯನ್ನು ಪಡೆಯುತ್ತಿವೆ. ಒಂದು ದಿನ ಹೋರಾಟ ಮಾಡದವರಿಗೆ ಈ ಸೌಲಭ್ಯ ಸಿಗುತ್ತಿದೆ? ಇದಕ್ಕೆ ಯಾವ ಆಧಾರಗಳಿವೆ ಎಂದು ಅವರು ಕಿಡಿಕಾರಿದರು.

ನಮ್ಮ ಉನ್ನತ ನ್ಯಾಯಾಂಗದಲ್ಲಿಯೂ ಹಿಂದುಳಿದ ಸಮುದಾಯಗಳ ಪ್ರಾತಿನಿಧ್ಯ ಇಲ್ಲದ ಕಾರಣ ಈ ರೀತಿಯ ತೀರ್ಪುಗಳು ಬರುತ್ತವೆ. ನಾವು ಅದನ್ನು ಸರಿಪಡಿಸಿ ತಳಸಮುದಾಯಗಳು ಅಲ್ಲಿ ಪಾಲುದಾರರಾಗುವಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ನ್ಯಾಯಾಂಗ ವ್ಯವಸ್ಥೆಯಲ್ಲಿಯೂ ಸಹ ಮೀಸಲಾತಿ ಜಾರಿಗಾಗಿ ಹೋರಾಡಬೇಕು ಎಂದು ಕರೆ ನೀಡಿದರು.

ಡಿಸೆಂಬರ್ 06 ರಂದು ದಲಿತ ಸಾಂಸ್ಕೃತಿಕ ಪ್ರತಿರೋಧ ಸಮಾವೇಶ

ರಾಜ್ಯದಲ್ಲಿ ಮತ್ತು ದೇಶದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಜನ ವಿರೋಧಿ ಆಡಳಿತದ ಮೂಲಕ ಪ್ರಜಾಪ್ರಭುತ್ವ ಸಂವಿಧಾನ, ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಹೊಸಕಿ ಹಾಕುತ್ತಿದೆ. ಇಂತಹ ಸಂದರ್ಭದಲ್ಲಿ ದಲಿತ ಸಂಘಟನೆಗಳು ಒಗ್ಗಟ್ಟಾಗಬೇಕಾದ ಜರೂರು ಅತೀ ಅಗತ್ಯವಾಗಿದೆ. ಅದಕ್ಕಾಗಿ ನಾವೆಲ್ಲರೂ ಒಂದಾಗಿ 12 ಬಣಗಳು ಒಗ್ಗೂಡಿ ‘ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ’ ರಚಿಸಲಾಗಿದೆ ಎಂದು ಮುಖಂಡರಾದ ಇಂದೂಧರ ಹೊನ್ನಾಪುರ ತಿಳಿಸಿದರು.

ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯಲ್ಲಿ “ರಾಜ್ಯ ದಲಿತ ಸಂಘರ್ಷ ಸಮಿತಿಯ ಎನ್ ವೆಂಕಟೇಶ್, ಡಾ. ಡಿ ಜಿ ಸಾಗರ್, ಎನ್ ಮುನಿಸ್ವಾಮಿ, ಮಾವಳ್ಳಿ ಶಂಕರ್, ಲಕ್ಷ್ಮೀನಾರಾಯಣ ನಾಗವಾರ, ಎಂ ಸೋಮಶೇಖರ್, ಗುರುಪ್ರಸಾದ್ ಕೆರಗೋಡು, ಅಣ್ಣಯ್ಯ ಜಿಗಣಿ ಶಂಕರ್, ವಿ ನಾಗರಾಜ್‌, ಅರ್ಜುನ ಭದ್ರೆ, ಎಸ್ ಆರ್ ಕೊಲ್ಲೂರು” ಅವರೆಲ್ಲರೂ ಸೇರಿದ್ದಾರೆ ಎಂದರು.

ಚಾಲನಾ ಸಮಿತಿಯ ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಅವರ 66ನೇ ಪರಿನಿಬ್ಬಾಣ ದಿನದ ಅಂಗವಾಗಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಡಿ. 6ರಂದು “ದಲಿತ ಸಾಂಸ್ಕೃತಿಕ ಪ್ರತಿರೋಧ” ಸಮಾವೇಶ ಏರ್ಪಡಿಸಲಾಗಿದೆ ಎಂದರು.

“ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ, ಸ್ವಾತಂತ್ರ ಸಮಾನತೆ, ಸಹೋದರತೆ, ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ನಾಶ ಮಾಡುತ್ತಿರುವ ಆರ್.ಎಸ್‌ಎಸ್ ಮತ್ತು ಬಿಜೆಪಿಯ ಸರ್ವಾಧಿಕಾರಿ ದುರಾಡಳಿತದ” ವಿರುದ್ಧ ಸಮಾವೇಶ ಆಯೋಜಿಸಲಾಗಿದೆ.

ಇದನ್ನೂ ಓದಿ; ಸುಳ್ಯ: 2 ಹಳ್ಳಿಗಳ 4 ಕಿ.ಮಿ. ಅಂತರದಲ್ಲಿ 2 ಬಾರ್‌‌ ಓಪನ್‌; ಗ್ರಾಮಸ್ಥರ ಪ್ರತಿಭಟನೆ ಕೇಳುವವರಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...