Homeಕರ್ನಾಟಕಬೆಂಗಳೂರು: ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಗಮಿಸಿದ ಪ್ರಧಾನಿ ಮೋದಿ; ನಗರ ತುಂಬಾ ಟ್ರಾಫಿಕ್ ಜಾಂ

ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಗಮಿಸಿದ ಪ್ರಧಾನಿ ಮೋದಿ; ನಗರ ತುಂಬಾ ಟ್ರಾಫಿಕ್ ಜಾಂ

- Advertisement -
- Advertisement -

ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟನೆ ಮತ್ತು ವಿವಿಧ ಕಾರ್ಯಕ್ರಮಗಳಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಮುಂಜಾನೆ ಬೆಂಗಳೂರಿಗೆ ಬಂದಿಳಿದ್ದು, ಮುಂಜಾನೆಯಿಂದಲೆ ನಗರ ಟ್ರಾಫಿಕ್ ಜಾಂನಿಂದಾಗಿ ತತ್ತರಿಸಿ ಹೋಗಿದೆ. ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ದಕ್ಷಿಣ ಭಾರತದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣಕ್ಕೆ ಭೇಟಿ ಅವರು ನೀಡಲಿದ್ದಾರೆ.

ಇಂದು ಪ್ರಧಾನಮಂತ್ರಿ ವಿಧಾನಸೌಧದಲ್ಲಿ ಕನಕದಾಸರು ಮತ್ತು ವಾಲ್ಮೀಕಿ ಪ್ರತಿಮೆಗಳಿಗೆ ಪುಷ್ಪನಮನ ಸಲ್ಲಿಸಿ, ನಂತರ ಬೆಂಗಳೂರಿನ ಕೆಎಸ್‌ಆರ್ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಭಾರತ್ ಗೌರವ್ ಕಾಶಿ ದರ್ಶನ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಅದರ ನಂತರ ಅವರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ನ್ನು ಪ್ರಧಾನಿ ಉದ್ಘಾಟಿಸಿ, ಮಧ್ಯಾಹ್ನ 12 ಗಂಟೆಗೆ ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಮಧ್ಯಾಹ್ನ 12:30 ಕ್ಕೆ ಬೆಂಗಳೂರಿನಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅವರು ಭಾಷಣ ಮಾಡಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಧಾನಿ ಮೋದಿ ಬೆಂಗಳೂರು ಭೇಟಿ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ವಿಮಾನ ನಿಲ್ದಾಣದಿಂದ ಮತ್ತು ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಜನರ ಸಂಚಾರ ಮಾರ್ಗವನ್ನು ಬದಲಾಯಿಸಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕ ಕಾರ್ಯಕ್ರಮ ಇರುವುದರಿಂದ ನಗರದಿಂದ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಟ್ರಾಫಿಕ್‌‌ ದಟ್ಟಣೆ ಇರಲಿದೆ ಎಂದು ನಿರೀಕ್ಷಿಸಲಾಗಿದೆ. ಹೀಗಾಗಿ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ ಎಂದು ವಿಮಾನ ನಿಲ್ದಾಣದ ಪ್ರಕಟಣೆ ತಿಳಿಸಿದೆ.

ವಿಮಾನ ನಿಲ್ದಾಣಕ್ಕೆ ತೆರಳುವ ಜನರು ಮೈಲನಹಳ್ಳಿ-ಬೇಗೂರು ರಸ್ತೆಯಲ್ಲಿ ಬೆಳಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ತೆರಳುವಂತೆ ತಿಳಿಸಲಾಗಿದೆ. ವಿಮಾನ ನಿಲ್ದಾಣ ಮತ್ತು ನಗರದ ನಡುವೆ ಪ್ರಯಾಣಿಸುವವರಿಗೂ ಬೆಳಿಗ್ಗೆ 9 ರಿಂದ ಸಂಜೆ 5 ರ ನಡುವೆ ಇದೇ ರಸ್ತೆಯನ್ನು ಬಳಸಲು ಸೂಚಿಸಲಾಗಿದೆ.

ಇದನ್ನೂ ಓದಿ: ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು: ಬೆಳಿಗ್ಗೆ ಹೊರಡಿಸಿದ್ದ ಸುತ್ತೋಲೆ ಸಂಜೆ ವಾಪಸ್!

ನಗರಕ್ಕೂ ಪ್ರಧಾನಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರ ಪೊಲೀಸರು ಹಲವಾರು ಸಂಚಾರ ನಿರ್ಬಂಧಗಳು ಮತ್ತು ತಿರುವುಗಳನ್ನು ಸಹ ಜಾರಿಗೆ ತಂದಿದ್ದಾರೆ. ಸಿಟಿಒ ಜಂಕ್ಷನ್, ಪೊಲೀಸ್ ತಿಮ್ಮಯ್ಯ ವೃತ್ತ, ರಾಜಭವನ ರಸ್ತೆ, ಬಸವೇಶ್ವರ ವೃತ್ತ, ಅರಮನೆ ರಸ್ತೆ, ರೇಸ್ ಕೋರ್ಸ್ ರಸ್ತೆ, ಸ್ಯಾಂಕಿ ರಸ್ತೆ, ಕ್ವೀನ್ಸ್ ರಸ್ತೆ, ಬಳ್ಳಾರಿ ರಸ್ತೆ, ಏರ್‌ಪೋರ್ಟ್ ಎಲಿವೇಟೆಡ್ ಕಾರಿಡಾರ್, ಶೇಷಾದ್ರಿ ರಸ್ತೆ(ಮಹಾರಾಣಿ ಸೇತುವೆಯಿಂದ ಕೆಆರ್‌ಎಸ್ ರೈಲು ನಿಲ್ದಾಣದ ಪ್ರವೇಶದವರೆಗೆ), ಕೆ.ಜಿ.ರಸ್ತೆ, ವಾಟಾಳ್ ನಾಗರಾಜ್ ರಸ್ತೆ ಮತ್ತು ಕೆಂಪೇಗೌಡ ಅಂತರರಾಷ್ಟ್ರೀಯ ರಸ್ತೆಯ ಸುತ್ತಮುತ್ತಲಿನ ಎಲ್ಲಾ ರಸ್ತೆಗಳಲ್ಲಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಸಂಚಾರ ನಿರ್ಬಂಧವನ್ನು ನಿರೀಕ್ಷಿಸಲಾಗಿದೆ.

ಪ್ರಧಾನಿ ಮೋದಿ ಆಗಮನದಿಂದಾಗಿ ನಗರದಲ್ಲಿ ಮುಂಜಾನೆಯಿಂದಲೇ ಟ್ರಾಫಿಕ್ ಜಾಂ ಕಿರಿಕಿರಿ ಹೆಚ್ಚಾಗಿದೆ. ಪ್ರಧಾನಿಯ ಸಾರ್ವಜನಿಕ ಭಾಷಣಕ್ಕೆ ಜನಸೇರಿಸಲು ಬಿಜೆಪಿ ಹೆಚ್ಚಿನ ಬಿಎಂಟಿಸಿಯ ಬಸ್ಸುಗಳನ್ನು ಬುಕ್‌ ಮಾಡಿದ್ದು, ಹೀಗಾಗಿ ತಮ್ಮ ದಿನನಿತ್ಯದ ಕೆಲಸಕ್ಕೆ ತೆರಳುವ ಸಾಮಾನ್ಯ ಜನರು ಬಸ್‌ಗಳು ಇಲ್ಲದೆ ಬಸ್‌ ನಿಲ್ದಾಣದಲ್ಲಿ ಕಾಯುತ್ತಿದ್ದಾರೆ. ಈ ನಡುವೆ ಬರುವ ಬಸ್‌ಗಳು ಕಿಕ್ಕಿರಿದು ಪ್ರಯಾಣಿಸುತ್ತಿವೆ.

ಕೆಂಪೇಗೌಡರ ಬೃಹತ್ ಪ್ರತಿಮೆ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ಗೆ ಸೇರಿದೆ ಎಂದು ವರದಿಯಾಗಿದೆ. ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಪ್ರಕಾರ, ಕೆಂಪೇಗೌಡರ ಮೊದಲ ಮತ್ತು ಅತೀ ಎತ್ತರದ ಪ್ರತಿಮೆಯಾಗಿದೆ. ವಿಶ್ವ ದಾಖಲೆ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ‘ಪ್ರಗತಿಯ ಪ್ರತಿಮೆ’ಯು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಅನುಸಾರ ಮೊದಲ ಹಾಗೂ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬುದು ನಮಗೆ ಹೆಮ್ಮೆಯ ವಿಷಯ. 108 ಅಡಿಯ ಈ ಪ್ರತಿಮೆ ಕೆಂಪೇಗೌಡರ ದೂರದೃಷ್ಟಿಯ ಬೆಂಗಳೂರನ್ನು ಬಿಂಬಿಸುತ್ತದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಮೋದಿ ಕಾರ್ಯಕ್ರಮಕ್ಕೆ 6 ಸಾವಿರ ಕಾಲೇಜು ವಿದ್ಯಾರ್ಥಿಗಳನ್ನು ಕರೆತನ್ನಿ: DDPU ಸುತ್ತೋಲೆಗೆ ಕಾಂಗ್ರೆಸ್ ಆಕ್ರೋಶ

ಬೃಹತ್ ಪ್ರತಿಮೆಯನ್ನು ಕಂಚಿನಿಂದ ನಿರ್ಮಿಸಲಾಗಿದ್ದು, ವಿಮಾನ ನಿಲ್ದಾಣದ 23 ಎಕರೆ ಆವರಣದಲ್ಲಿ ಕೆಂಪೇಗೌಡರಿಗೆ ಮೀಸಲಾದ ಪಾರಂಪರಿಕ ಉದ್ಯಾನವನವಾಗಿ ಅಭಿವೃದ್ಧಿಪಡಿಸಲಾಗಿದೆ. ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಬೃಹತ್ ಪ್ರತಿಮೆ ನಿರ್ಮಾಣವಾಗಿದೆ. 98 ಟನ್ ಕಂಚು ಮತ್ತು 120 ಟನ್ ಉಕ್ಕನ್ನು ಈ ಪ್ರತಿಮೆಗೆ ಬಳಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...