Homeಮುಖಪುಟಹಿಮಾಚಲ ಪ್ರದೇಶ ಚುನಾವಣೆ: ಬಿಜೆಪಿ ವಿರುದ್ಧ ಸಿಡಿಮಿಡಿಗೊಂಡಿರುವ ಸೇಬು ಬೆಳೆಗಾರರು

ಹಿಮಾಚಲ ಪ್ರದೇಶ ಚುನಾವಣೆ: ಬಿಜೆಪಿ ವಿರುದ್ಧ ಸಿಡಿಮಿಡಿಗೊಂಡಿರುವ ಸೇಬು ಬೆಳೆಗಾರರು

1990ರಲ್ಲಿ ಬಿಜೆಪಿ ಸರ್ಕಾರ ಸೇಬು ಬೆಳೆಗಾರರ ಮೇಲೆ ಗುಂಡು ಹಾರಿಸಿ ಮೂವರನ್ನು ಕೊಂದಿತ್ತು. ಆನಂತರದ ಚುನಾವಣೆಯಲ್ಲಿ ಅದು ಹೀನಾಯ ಸೋಲು ಕಂಡಿತ್ತು. ಈಗ ಮತ್ತೆ ಸೇಬು ಬೆಳೆಗಾರರು ಹೋರಾಟಕ್ಕಿಳಿದಿದ್ದಾರೆ...

- Advertisement -
- Advertisement -

ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಒಂದು ಹಂತದಲ್ಲಿ ನವೆಂಬರ್ 12ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಘೋಷಣೆಯಾಗಲಿದೆ. 1985 ರಿಂದ 2017ರವರೆಗೆ ಹಿಮಾಚಲ ಪ್ರದೇಶದಲ್ಲಿ ಒಮ್ಮೆ ಕಾಂಗ್ರೆಸ್, ಒಮ್ಮೆ ಬಿಜೆಪಿ ಅಧಿಕ್ಕಾರಕ್ಕೇರುವ ಸಂಪ್ರದಾಯವನ್ನು ಪಾಲಿಸಿಕೊಂಡು ಬಂದಿವೆ. ಕಳೆದ 8 ಚುನಾವಣೆಗಳಲ್ಲಿ ನಾಲ್ಕು ಬಾರಿ ಕಾಂಗ್ರೆಸ್ ಗೆದ್ದರೆ, ನಾಲ್ಕು ಬಾರಿ ಬಿಜೆಪಿ ಗೆಲುವು ಸಾಧಿಸಿದೆ. ಅಂದರೆ 1977ರಿಂದ ಈ ರಾಜ್ಯದಲ್ಲಿ ಯಾವುದೇ ಪಕ್ಷ ಸತತ ಎರಡು ಬಾರಿಗೆ ಅಧಿಕಾರ ಹಿಡಿಯಲು ಸಾಧ್ಯವಾಗಿಲ್ಲ. ಆ ಸಂಪ್ರದಾಯಕ್ಕೆ ಈ ಬಾರಿ ಬ್ರೇಕ್ ಬೀಳಲಿದೆ, ಬಿಜೆಪಿ ಎರಡನೇ ಅವಧಿಗೆ ಅಧಿಕಾರ ಹಿಡಿಯಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಬಿಜೆಪಿ 41 ಸ್ಥಾನಗಳಲ್ಲಿ, ಕಾಂಗ್ರೆಸ್ 25 ಸ್ಥಾನಗಳಲ್ಲಿ ಗೆದ್ದರೆ ಆಪ್ ಖಾತೆ ತೆರೆಯವುದು ಕಷ್ಟ ಎಂದಿವೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 44 ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೇರಿತ್ತು. 21 ಸ್ಥಾನ ಪಡೆದ ಕಾಂಗ್ರೆಸ್ ಪ್ರತಿಪಕ್ಷ ಸ್ಥಾನದಲ್ಲಿ ಕೂತಿತ್ತು. ಈ ಬಾರಿ ಸರಳ ಬಹುಮತಕ್ಕೆ ಬೇಕಾದ 35 ಸ್ಥಾನಗಳನ್ನು ಯಾವ ಪಕ್ಷ ತಲುಪಲಿದೆ ಎಂಬುದು ಸುಲಭಕ್ಕೆ ನಿರ್ಣಯಿಸಲು ಸಾಧ್ಯವಾಗುತ್ತಿಲ್ಲ. ಬಿಜೆಪಿ ಹಲವು ಕಾಂಗ್ರೆಸ್ ಮುಖಂಡರನ್ನು ತನ್ನತ್ತ ಸೆಳೆದುಕೊಳ್ಳುತ್ತಿದ್ದರೆ, ಕಾಂಗ್ರೆಸ್ ಸೇಬು ಬೆಳೆಗಾರರನ್ನು ನಂಬಿ ಕುಳಿತಿದೆ.

ಬಿಜೆಪಿ ವಿರುದ್ಧ ಸಿಡಿಮಿಡಿಗೊಂಡಿರುವ ಸೇಬು ಬೆಳೆಗಾರರು

ಹಿಮಾಚಲ ಪ್ರದೇಶದ ಮುಖ್ಯ ವಾಣಿಜ್ಯ ಬೆಳೆ ಸೇಬು. ಭಾರತದ ಒಟ್ಟು ಸೇಬು ಬೆಳೆಯ ಶೇ.26ರಷ್ಟು ಹಿಮಾಚಲ ಪ್ರದೇಶವೊಂದರಿಂದಲೇ ಬರುತ್ತದೆ. ರಾಜ್ಯ ಸರ್ಕಾರಕ್ಕೆ ವಾರ್ಷಿಕ 5000 ಕೋಟಿ ರೂಗಳಿಗಿಂತ ಅತಿ ಹೆಚ್ಚು ಆದಾಯ ತಂದುಕೊಡುವ ಸೇಬು ಬೆಳೆಗಾರರು ಸದ್ಯಕ್ಕೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ. ಸೇಬಿಗೆ ಎಂಎಸ್‌ಪಿ ನಿಗದಿಗೊಳಿಸಿಲ್ಲ, ಖಾಸಗಿ ಮಧ್ಯವರ್ತಿಗಳನ್ನು ತಡೆಯುತ್ತಿಲ್ಲ ಎಂಬುದು ರೈತರ ಹಳೆಯ ಕೂಗು. ಅದರೊಟ್ಟಿಗೆ ರಸಗೊಬ್ಬರ ಮತ್ತು ಸೇಬು ಪ್ಯಾಕ್ ಮಾಡುವ ರಟ್ಟಿನ ಬೆಲೆ ಹೆಚ್ಚು ಮಾಡಿರುವುದು ಒಂದೆಡೆಯಾದರೆ ಮತ್ತೊಂದೆಡೆ ಪ್ಯಾಕ್ ಮಾಡಿದ ಬೆಳೆಗಳ ಮೇಲಿನ ಜಿಎಸ್‌ಟಿಯನ್ನು 12%ಇಂದ 18%ಗೆ ಹೆಚ್ಚಿಸಿರುವುದು ಅವರನ್ನು ಕೆರಳಿಸಿದೆ. ಇದೆಲ್ಲವೂ ಈ ಸರ್ಕಾರವನ್ನು ಆಹುತಿ ತೆಗೆದುಕೊಳ್ಳುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮರುಕಳಿಸುವುದೇ 1990ರ ಸೇಬು ಬೆಳೆಗಾರರ ಹೋರಾಟ?

1990ರಲ್ಲಿ ಹಿಮಾಚಲ ಪ್ರದೇಶದಲ್ಲಿ ಮುಖ್ಯಮಂತ್ರಿ ಶಾಂತಕುಮಾರ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಆಗ ಸೇಬು ಬೆಳೆಗಾರರು ಎಂಎಸ್‌ಪಿ ನಿಗದಿ ಮಾಡಬೇಕೆಂದು ಒತ್ತಾಯಿಸಿ ತೀವ್ರ ಪ್ರತಿಭಟನೆ ಆರಂಭಿಸಿದ್ದರು. ಕೋಟ್‌ಘರ್‌ನಲ್ಲಿ ತಾರಕಕ್ಕೇರಿದ ಪ್ರತಿಭಟನೆ ಹತ್ತಿಕ್ಕಲು ಸರ್ಕಾರ ಗೋಲಿಬಾರ್ ನಡೆಸಲು ಆದೇಶವಿತ್ತಿತ್ತು. ಇದರಿಂದಾಗಿ ಗೋವಿಂದ್ ಸಿಂಗ್, ತಾರ ಚಂದ್ ಮತ್ತು ಹಿರಾ ಸಿಂಗ್ ಎಂಬ ಸೇಬು ಬೆಳೆಗಾರರು ಗುಂಡಿಗೆ ಬಲಿಯಾದರೆ ನೂರಾರು ಜನರು ಗಾಯಗೊಂಡರು.

ಇದು 1993ರಲ್ಲಿ ಹಿಮಾಚಲ ಪ್ರದೇಶದಲ್ಲಿ ನಡೆದ ಮಧ್ಯಂತರ ಚುನಾವಣೆಯಲ್ಲಿ ರಾಜಕೀಯ ಬದಲಾವಣೆಗೆ ಕಾರಣವಾಯಿತು. 1990ರ ಚುನಾವಣೆಯಲ್ಲಿ 46 ಸ್ಥಾನ ಗೆದ್ದಿದ್ದ ಬಿಜೆಪಿ ಮೂರೇ ವರ್ಷದಲ್ಲಿ ಕೇವಲ 8 ಸ್ಥಾನಗಳಿಗೆ ಕುಸಿಯಿತು. ಸಿಎಂ ಆಗಿದ್ದ ಶಾಂತಕುಮಾರ್ ಎರಡು ಕ್ಷೇತ್ರಗಳಿಂದ ಕಣಕ್ಕಿಳಿದು ಎರಡರಲ್ಲಿಯೂ ಸೋಲು ಕಂಡರು. ಸೇಬು ಬೆಳೆಗಾರರ ಸಂಪೂರ್ಣ ಲಾಭ ಕಾಂಗ್ರೆಸ್ ಪಡೆಯಿತು. 1990ರಲ್ಲಿ ಕೇವಲ 9 ಸ್ಥಾನ ಗೆದ್ದಿದ್ದ ಕಾಂಗ್ರೆಸ್ 1993ರಲ್ಲಿ 52 ಸ್ಥಾನ ಗಳಿಸಿ ಅಧಿಕಾರಕ್ಕೇರಿತು. ಮುಖ್ಯಮಂತ್ರಿಯಾದ ವೀರಭದ್ರ ಸಿಂಗ್ ಸೇಬು ಬೆಳೆಗಾರರಿಗಾಗಿ ಮಂಡಿ ಮಧ್ಯಸ್ಥಿಕೆ ಯೋಜನೆ (ಎಂಐಎಸ್) ಜಾರಿಗೊಳಿಸಿದರು.

ಈಗ ಮತ್ತೆ ಒಂದು ವರ್ಷದಿಂದ ಸೇಬು ಬೆಳೆಗಾರರ ಹೋರಾಟ ಆರಂಭವಾಗಿದೆ. ಕಳೆದ ಒಂದು ತಿಂಗಳಿನಿಂದ ಸೇಬು ಬೆಳೆಗಾರರು ಧರಣಿ ನಡೆಸುತ್ತಿದ್ದಾರೆ. ಎಂಐಎಸ್ ಯೋಜನೆಯಡಿ ಸೇಬು ಖರೀದಿಸಿರುವ ಬಾಕಿ ಹಣ ಪಾವತಿಸಬೇಕು. ರಸಗೊಬ್ಬರ ಮೇಲಿನ ಸಬ್ಸಿಡಿ ಹಿಂತೆಗೆದುಕೊಳ್ಳಲಾಗಿದ್ದು, ಅದನ್ನು ಬದಲಿಸಿ ಸಬ್ಸಿಡಿ ನೀಡಬೇಕು. ಜಿಎಸ್‌ಟಿ ಕಡಿತಗೊಳಿಸಬೇಕು ಮತ್ತು ಅದಾನಿ ಗ್ರೂಪ್ ನಿಗದಿಪಡಿಸಿದ ಷರತ್ತುಗಳನ್ನು ಸಡಿಲಗೊಳಿಸಬೇಕು ಎಂಬುದು ರೈತರ ಒತ್ತಾಯವಾಗಿದೆ. ಈ ಹೋರಾಟಕ್ಕೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಿದೆ; ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ತಾವು ಅಧಿಕಾರಕ್ಕೆ ಬಂದರೆ ಹಕ್ಕೊತ್ತಾಯಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. 1990ರಲ್ಲಿ ನಡೆದ ರಾಜಕೀಯ ಮತ್ತೆ ಮರುಕಳಿಸುವುದೇ ಎಂದು ಕಾಂಗ್ರೆಸ್ ಆಶಿಸುತ್ತಿದೆ.

ಬಿಜೆಪಿಯ ಸಿಎಂ ಜೈ ರಾಂ ಠಾಕೂರ್ ಸೇಬು ಬೆಳೆಗಾರರಿಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಸೇಬಿಗೆ ಬೆಲೆ ಹೆಚ್ಚಿಸಿರುವುದಾಗಿ ಹೇಳಿದ್ದಾರೆ. ಒಟ್ಟಾರೆಯಾಗಿ ಹಿಮಾಚಲ ಪ್ರದೇಶದ 68 ಕ್ಷೇತ್ರಗಳ ಪೈಕಿ ಸುಮಾರು 20 ಕ್ಷೇತ್ರಗಳಲ್ಲಿ ಸೇಬು ಬೆಳೆಗಾರರು ನಿರ್ಣಾಯಕವಾಗಿದ್ದಾರೆ. ಅವರು ಸರ್ಕಾರದ ಭರವಸೆಗಳನ್ನು ಒಪ್ಪುತ್ತಾರಾ? ಅಥವಾ ಸರ್ಕಾರವನ್ನೇ ಬದಲಿಸುತ್ತಾರಾ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ: ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯನವರು ಬಂದರೆ ಫಲಿತಾಂಶವೇನಾಗಬಹದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...