Homeಮುಖಪುಟಹಿಮಾಚಲ ಪ್ರದೇಶ ಚುನಾವಣೆ: ಬಿಜೆಪಿ ವಿರುದ್ಧ ಸಿಡಿಮಿಡಿಗೊಂಡಿರುವ ಸೇಬು ಬೆಳೆಗಾರರು

ಹಿಮಾಚಲ ಪ್ರದೇಶ ಚುನಾವಣೆ: ಬಿಜೆಪಿ ವಿರುದ್ಧ ಸಿಡಿಮಿಡಿಗೊಂಡಿರುವ ಸೇಬು ಬೆಳೆಗಾರರು

1990ರಲ್ಲಿ ಬಿಜೆಪಿ ಸರ್ಕಾರ ಸೇಬು ಬೆಳೆಗಾರರ ಮೇಲೆ ಗುಂಡು ಹಾರಿಸಿ ಮೂವರನ್ನು ಕೊಂದಿತ್ತು. ಆನಂತರದ ಚುನಾವಣೆಯಲ್ಲಿ ಅದು ಹೀನಾಯ ಸೋಲು ಕಂಡಿತ್ತು. ಈಗ ಮತ್ತೆ ಸೇಬು ಬೆಳೆಗಾರರು ಹೋರಾಟಕ್ಕಿಳಿದಿದ್ದಾರೆ...

- Advertisement -
- Advertisement -

ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಒಂದು ಹಂತದಲ್ಲಿ ನವೆಂಬರ್ 12ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಘೋಷಣೆಯಾಗಲಿದೆ. 1985 ರಿಂದ 2017ರವರೆಗೆ ಹಿಮಾಚಲ ಪ್ರದೇಶದಲ್ಲಿ ಒಮ್ಮೆ ಕಾಂಗ್ರೆಸ್, ಒಮ್ಮೆ ಬಿಜೆಪಿ ಅಧಿಕ್ಕಾರಕ್ಕೇರುವ ಸಂಪ್ರದಾಯವನ್ನು ಪಾಲಿಸಿಕೊಂಡು ಬಂದಿವೆ. ಕಳೆದ 8 ಚುನಾವಣೆಗಳಲ್ಲಿ ನಾಲ್ಕು ಬಾರಿ ಕಾಂಗ್ರೆಸ್ ಗೆದ್ದರೆ, ನಾಲ್ಕು ಬಾರಿ ಬಿಜೆಪಿ ಗೆಲುವು ಸಾಧಿಸಿದೆ. ಅಂದರೆ 1977ರಿಂದ ಈ ರಾಜ್ಯದಲ್ಲಿ ಯಾವುದೇ ಪಕ್ಷ ಸತತ ಎರಡು ಬಾರಿಗೆ ಅಧಿಕಾರ ಹಿಡಿಯಲು ಸಾಧ್ಯವಾಗಿಲ್ಲ. ಆ ಸಂಪ್ರದಾಯಕ್ಕೆ ಈ ಬಾರಿ ಬ್ರೇಕ್ ಬೀಳಲಿದೆ, ಬಿಜೆಪಿ ಎರಡನೇ ಅವಧಿಗೆ ಅಧಿಕಾರ ಹಿಡಿಯಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಬಿಜೆಪಿ 41 ಸ್ಥಾನಗಳಲ್ಲಿ, ಕಾಂಗ್ರೆಸ್ 25 ಸ್ಥಾನಗಳಲ್ಲಿ ಗೆದ್ದರೆ ಆಪ್ ಖಾತೆ ತೆರೆಯವುದು ಕಷ್ಟ ಎಂದಿವೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 44 ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೇರಿತ್ತು. 21 ಸ್ಥಾನ ಪಡೆದ ಕಾಂಗ್ರೆಸ್ ಪ್ರತಿಪಕ್ಷ ಸ್ಥಾನದಲ್ಲಿ ಕೂತಿತ್ತು. ಈ ಬಾರಿ ಸರಳ ಬಹುಮತಕ್ಕೆ ಬೇಕಾದ 35 ಸ್ಥಾನಗಳನ್ನು ಯಾವ ಪಕ್ಷ ತಲುಪಲಿದೆ ಎಂಬುದು ಸುಲಭಕ್ಕೆ ನಿರ್ಣಯಿಸಲು ಸಾಧ್ಯವಾಗುತ್ತಿಲ್ಲ. ಬಿಜೆಪಿ ಹಲವು ಕಾಂಗ್ರೆಸ್ ಮುಖಂಡರನ್ನು ತನ್ನತ್ತ ಸೆಳೆದುಕೊಳ್ಳುತ್ತಿದ್ದರೆ, ಕಾಂಗ್ರೆಸ್ ಸೇಬು ಬೆಳೆಗಾರರನ್ನು ನಂಬಿ ಕುಳಿತಿದೆ.

ಬಿಜೆಪಿ ವಿರುದ್ಧ ಸಿಡಿಮಿಡಿಗೊಂಡಿರುವ ಸೇಬು ಬೆಳೆಗಾರರು

ಹಿಮಾಚಲ ಪ್ರದೇಶದ ಮುಖ್ಯ ವಾಣಿಜ್ಯ ಬೆಳೆ ಸೇಬು. ಭಾರತದ ಒಟ್ಟು ಸೇಬು ಬೆಳೆಯ ಶೇ.26ರಷ್ಟು ಹಿಮಾಚಲ ಪ್ರದೇಶವೊಂದರಿಂದಲೇ ಬರುತ್ತದೆ. ರಾಜ್ಯ ಸರ್ಕಾರಕ್ಕೆ ವಾರ್ಷಿಕ 5000 ಕೋಟಿ ರೂಗಳಿಗಿಂತ ಅತಿ ಹೆಚ್ಚು ಆದಾಯ ತಂದುಕೊಡುವ ಸೇಬು ಬೆಳೆಗಾರರು ಸದ್ಯಕ್ಕೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ. ಸೇಬಿಗೆ ಎಂಎಸ್‌ಪಿ ನಿಗದಿಗೊಳಿಸಿಲ್ಲ, ಖಾಸಗಿ ಮಧ್ಯವರ್ತಿಗಳನ್ನು ತಡೆಯುತ್ತಿಲ್ಲ ಎಂಬುದು ರೈತರ ಹಳೆಯ ಕೂಗು. ಅದರೊಟ್ಟಿಗೆ ರಸಗೊಬ್ಬರ ಮತ್ತು ಸೇಬು ಪ್ಯಾಕ್ ಮಾಡುವ ರಟ್ಟಿನ ಬೆಲೆ ಹೆಚ್ಚು ಮಾಡಿರುವುದು ಒಂದೆಡೆಯಾದರೆ ಮತ್ತೊಂದೆಡೆ ಪ್ಯಾಕ್ ಮಾಡಿದ ಬೆಳೆಗಳ ಮೇಲಿನ ಜಿಎಸ್‌ಟಿಯನ್ನು 12%ಇಂದ 18%ಗೆ ಹೆಚ್ಚಿಸಿರುವುದು ಅವರನ್ನು ಕೆರಳಿಸಿದೆ. ಇದೆಲ್ಲವೂ ಈ ಸರ್ಕಾರವನ್ನು ಆಹುತಿ ತೆಗೆದುಕೊಳ್ಳುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮರುಕಳಿಸುವುದೇ 1990ರ ಸೇಬು ಬೆಳೆಗಾರರ ಹೋರಾಟ?

1990ರಲ್ಲಿ ಹಿಮಾಚಲ ಪ್ರದೇಶದಲ್ಲಿ ಮುಖ್ಯಮಂತ್ರಿ ಶಾಂತಕುಮಾರ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಆಗ ಸೇಬು ಬೆಳೆಗಾರರು ಎಂಎಸ್‌ಪಿ ನಿಗದಿ ಮಾಡಬೇಕೆಂದು ಒತ್ತಾಯಿಸಿ ತೀವ್ರ ಪ್ರತಿಭಟನೆ ಆರಂಭಿಸಿದ್ದರು. ಕೋಟ್‌ಘರ್‌ನಲ್ಲಿ ತಾರಕಕ್ಕೇರಿದ ಪ್ರತಿಭಟನೆ ಹತ್ತಿಕ್ಕಲು ಸರ್ಕಾರ ಗೋಲಿಬಾರ್ ನಡೆಸಲು ಆದೇಶವಿತ್ತಿತ್ತು. ಇದರಿಂದಾಗಿ ಗೋವಿಂದ್ ಸಿಂಗ್, ತಾರ ಚಂದ್ ಮತ್ತು ಹಿರಾ ಸಿಂಗ್ ಎಂಬ ಸೇಬು ಬೆಳೆಗಾರರು ಗುಂಡಿಗೆ ಬಲಿಯಾದರೆ ನೂರಾರು ಜನರು ಗಾಯಗೊಂಡರು.

ಇದು 1993ರಲ್ಲಿ ಹಿಮಾಚಲ ಪ್ರದೇಶದಲ್ಲಿ ನಡೆದ ಮಧ್ಯಂತರ ಚುನಾವಣೆಯಲ್ಲಿ ರಾಜಕೀಯ ಬದಲಾವಣೆಗೆ ಕಾರಣವಾಯಿತು. 1990ರ ಚುನಾವಣೆಯಲ್ಲಿ 46 ಸ್ಥಾನ ಗೆದ್ದಿದ್ದ ಬಿಜೆಪಿ ಮೂರೇ ವರ್ಷದಲ್ಲಿ ಕೇವಲ 8 ಸ್ಥಾನಗಳಿಗೆ ಕುಸಿಯಿತು. ಸಿಎಂ ಆಗಿದ್ದ ಶಾಂತಕುಮಾರ್ ಎರಡು ಕ್ಷೇತ್ರಗಳಿಂದ ಕಣಕ್ಕಿಳಿದು ಎರಡರಲ್ಲಿಯೂ ಸೋಲು ಕಂಡರು. ಸೇಬು ಬೆಳೆಗಾರರ ಸಂಪೂರ್ಣ ಲಾಭ ಕಾಂಗ್ರೆಸ್ ಪಡೆಯಿತು. 1990ರಲ್ಲಿ ಕೇವಲ 9 ಸ್ಥಾನ ಗೆದ್ದಿದ್ದ ಕಾಂಗ್ರೆಸ್ 1993ರಲ್ಲಿ 52 ಸ್ಥಾನ ಗಳಿಸಿ ಅಧಿಕಾರಕ್ಕೇರಿತು. ಮುಖ್ಯಮಂತ್ರಿಯಾದ ವೀರಭದ್ರ ಸಿಂಗ್ ಸೇಬು ಬೆಳೆಗಾರರಿಗಾಗಿ ಮಂಡಿ ಮಧ್ಯಸ್ಥಿಕೆ ಯೋಜನೆ (ಎಂಐಎಸ್) ಜಾರಿಗೊಳಿಸಿದರು.

ಈಗ ಮತ್ತೆ ಒಂದು ವರ್ಷದಿಂದ ಸೇಬು ಬೆಳೆಗಾರರ ಹೋರಾಟ ಆರಂಭವಾಗಿದೆ. ಕಳೆದ ಒಂದು ತಿಂಗಳಿನಿಂದ ಸೇಬು ಬೆಳೆಗಾರರು ಧರಣಿ ನಡೆಸುತ್ತಿದ್ದಾರೆ. ಎಂಐಎಸ್ ಯೋಜನೆಯಡಿ ಸೇಬು ಖರೀದಿಸಿರುವ ಬಾಕಿ ಹಣ ಪಾವತಿಸಬೇಕು. ರಸಗೊಬ್ಬರ ಮೇಲಿನ ಸಬ್ಸಿಡಿ ಹಿಂತೆಗೆದುಕೊಳ್ಳಲಾಗಿದ್ದು, ಅದನ್ನು ಬದಲಿಸಿ ಸಬ್ಸಿಡಿ ನೀಡಬೇಕು. ಜಿಎಸ್‌ಟಿ ಕಡಿತಗೊಳಿಸಬೇಕು ಮತ್ತು ಅದಾನಿ ಗ್ರೂಪ್ ನಿಗದಿಪಡಿಸಿದ ಷರತ್ತುಗಳನ್ನು ಸಡಿಲಗೊಳಿಸಬೇಕು ಎಂಬುದು ರೈತರ ಒತ್ತಾಯವಾಗಿದೆ. ಈ ಹೋರಾಟಕ್ಕೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಿದೆ; ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ತಾವು ಅಧಿಕಾರಕ್ಕೆ ಬಂದರೆ ಹಕ್ಕೊತ್ತಾಯಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. 1990ರಲ್ಲಿ ನಡೆದ ರಾಜಕೀಯ ಮತ್ತೆ ಮರುಕಳಿಸುವುದೇ ಎಂದು ಕಾಂಗ್ರೆಸ್ ಆಶಿಸುತ್ತಿದೆ.

ಬಿಜೆಪಿಯ ಸಿಎಂ ಜೈ ರಾಂ ಠಾಕೂರ್ ಸೇಬು ಬೆಳೆಗಾರರಿಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಸೇಬಿಗೆ ಬೆಲೆ ಹೆಚ್ಚಿಸಿರುವುದಾಗಿ ಹೇಳಿದ್ದಾರೆ. ಒಟ್ಟಾರೆಯಾಗಿ ಹಿಮಾಚಲ ಪ್ರದೇಶದ 68 ಕ್ಷೇತ್ರಗಳ ಪೈಕಿ ಸುಮಾರು 20 ಕ್ಷೇತ್ರಗಳಲ್ಲಿ ಸೇಬು ಬೆಳೆಗಾರರು ನಿರ್ಣಾಯಕವಾಗಿದ್ದಾರೆ. ಅವರು ಸರ್ಕಾರದ ಭರವಸೆಗಳನ್ನು ಒಪ್ಪುತ್ತಾರಾ? ಅಥವಾ ಸರ್ಕಾರವನ್ನೇ ಬದಲಿಸುತ್ತಾರಾ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ: ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯನವರು ಬಂದರೆ ಫಲಿತಾಂಶವೇನಾಗಬಹದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...