Homeಮುಖಪುಟಹಿಮಾಚಲ ಪ್ರದೇಶ ಚುನಾವಣೆ: ಬಿಜೆಪಿ ವಿರುದ್ಧ ಸಿಡಿಮಿಡಿಗೊಂಡಿರುವ ಸೇಬು ಬೆಳೆಗಾರರು

ಹಿಮಾಚಲ ಪ್ರದೇಶ ಚುನಾವಣೆ: ಬಿಜೆಪಿ ವಿರುದ್ಧ ಸಿಡಿಮಿಡಿಗೊಂಡಿರುವ ಸೇಬು ಬೆಳೆಗಾರರು

1990ರಲ್ಲಿ ಬಿಜೆಪಿ ಸರ್ಕಾರ ಸೇಬು ಬೆಳೆಗಾರರ ಮೇಲೆ ಗುಂಡು ಹಾರಿಸಿ ಮೂವರನ್ನು ಕೊಂದಿತ್ತು. ಆನಂತರದ ಚುನಾವಣೆಯಲ್ಲಿ ಅದು ಹೀನಾಯ ಸೋಲು ಕಂಡಿತ್ತು. ಈಗ ಮತ್ತೆ ಸೇಬು ಬೆಳೆಗಾರರು ಹೋರಾಟಕ್ಕಿಳಿದಿದ್ದಾರೆ...

- Advertisement -
- Advertisement -

ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಒಂದು ಹಂತದಲ್ಲಿ ನವೆಂಬರ್ 12ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಘೋಷಣೆಯಾಗಲಿದೆ. 1985 ರಿಂದ 2017ರವರೆಗೆ ಹಿಮಾಚಲ ಪ್ರದೇಶದಲ್ಲಿ ಒಮ್ಮೆ ಕಾಂಗ್ರೆಸ್, ಒಮ್ಮೆ ಬಿಜೆಪಿ ಅಧಿಕ್ಕಾರಕ್ಕೇರುವ ಸಂಪ್ರದಾಯವನ್ನು ಪಾಲಿಸಿಕೊಂಡು ಬಂದಿವೆ. ಕಳೆದ 8 ಚುನಾವಣೆಗಳಲ್ಲಿ ನಾಲ್ಕು ಬಾರಿ ಕಾಂಗ್ರೆಸ್ ಗೆದ್ದರೆ, ನಾಲ್ಕು ಬಾರಿ ಬಿಜೆಪಿ ಗೆಲುವು ಸಾಧಿಸಿದೆ. ಅಂದರೆ 1977ರಿಂದ ಈ ರಾಜ್ಯದಲ್ಲಿ ಯಾವುದೇ ಪಕ್ಷ ಸತತ ಎರಡು ಬಾರಿಗೆ ಅಧಿಕಾರ ಹಿಡಿಯಲು ಸಾಧ್ಯವಾಗಿಲ್ಲ. ಆ ಸಂಪ್ರದಾಯಕ್ಕೆ ಈ ಬಾರಿ ಬ್ರೇಕ್ ಬೀಳಲಿದೆ, ಬಿಜೆಪಿ ಎರಡನೇ ಅವಧಿಗೆ ಅಧಿಕಾರ ಹಿಡಿಯಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಬಿಜೆಪಿ 41 ಸ್ಥಾನಗಳಲ್ಲಿ, ಕಾಂಗ್ರೆಸ್ 25 ಸ್ಥಾನಗಳಲ್ಲಿ ಗೆದ್ದರೆ ಆಪ್ ಖಾತೆ ತೆರೆಯವುದು ಕಷ್ಟ ಎಂದಿವೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 44 ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೇರಿತ್ತು. 21 ಸ್ಥಾನ ಪಡೆದ ಕಾಂಗ್ರೆಸ್ ಪ್ರತಿಪಕ್ಷ ಸ್ಥಾನದಲ್ಲಿ ಕೂತಿತ್ತು. ಈ ಬಾರಿ ಸರಳ ಬಹುಮತಕ್ಕೆ ಬೇಕಾದ 35 ಸ್ಥಾನಗಳನ್ನು ಯಾವ ಪಕ್ಷ ತಲುಪಲಿದೆ ಎಂಬುದು ಸುಲಭಕ್ಕೆ ನಿರ್ಣಯಿಸಲು ಸಾಧ್ಯವಾಗುತ್ತಿಲ್ಲ. ಬಿಜೆಪಿ ಹಲವು ಕಾಂಗ್ರೆಸ್ ಮುಖಂಡರನ್ನು ತನ್ನತ್ತ ಸೆಳೆದುಕೊಳ್ಳುತ್ತಿದ್ದರೆ, ಕಾಂಗ್ರೆಸ್ ಸೇಬು ಬೆಳೆಗಾರರನ್ನು ನಂಬಿ ಕುಳಿತಿದೆ.

ಬಿಜೆಪಿ ವಿರುದ್ಧ ಸಿಡಿಮಿಡಿಗೊಂಡಿರುವ ಸೇಬು ಬೆಳೆಗಾರರು

ಹಿಮಾಚಲ ಪ್ರದೇಶದ ಮುಖ್ಯ ವಾಣಿಜ್ಯ ಬೆಳೆ ಸೇಬು. ಭಾರತದ ಒಟ್ಟು ಸೇಬು ಬೆಳೆಯ ಶೇ.26ರಷ್ಟು ಹಿಮಾಚಲ ಪ್ರದೇಶವೊಂದರಿಂದಲೇ ಬರುತ್ತದೆ. ರಾಜ್ಯ ಸರ್ಕಾರಕ್ಕೆ ವಾರ್ಷಿಕ 5000 ಕೋಟಿ ರೂಗಳಿಗಿಂತ ಅತಿ ಹೆಚ್ಚು ಆದಾಯ ತಂದುಕೊಡುವ ಸೇಬು ಬೆಳೆಗಾರರು ಸದ್ಯಕ್ಕೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ. ಸೇಬಿಗೆ ಎಂಎಸ್‌ಪಿ ನಿಗದಿಗೊಳಿಸಿಲ್ಲ, ಖಾಸಗಿ ಮಧ್ಯವರ್ತಿಗಳನ್ನು ತಡೆಯುತ್ತಿಲ್ಲ ಎಂಬುದು ರೈತರ ಹಳೆಯ ಕೂಗು. ಅದರೊಟ್ಟಿಗೆ ರಸಗೊಬ್ಬರ ಮತ್ತು ಸೇಬು ಪ್ಯಾಕ್ ಮಾಡುವ ರಟ್ಟಿನ ಬೆಲೆ ಹೆಚ್ಚು ಮಾಡಿರುವುದು ಒಂದೆಡೆಯಾದರೆ ಮತ್ತೊಂದೆಡೆ ಪ್ಯಾಕ್ ಮಾಡಿದ ಬೆಳೆಗಳ ಮೇಲಿನ ಜಿಎಸ್‌ಟಿಯನ್ನು 12%ಇಂದ 18%ಗೆ ಹೆಚ್ಚಿಸಿರುವುದು ಅವರನ್ನು ಕೆರಳಿಸಿದೆ. ಇದೆಲ್ಲವೂ ಈ ಸರ್ಕಾರವನ್ನು ಆಹುತಿ ತೆಗೆದುಕೊಳ್ಳುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮರುಕಳಿಸುವುದೇ 1990ರ ಸೇಬು ಬೆಳೆಗಾರರ ಹೋರಾಟ?

1990ರಲ್ಲಿ ಹಿಮಾಚಲ ಪ್ರದೇಶದಲ್ಲಿ ಮುಖ್ಯಮಂತ್ರಿ ಶಾಂತಕುಮಾರ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಆಗ ಸೇಬು ಬೆಳೆಗಾರರು ಎಂಎಸ್‌ಪಿ ನಿಗದಿ ಮಾಡಬೇಕೆಂದು ಒತ್ತಾಯಿಸಿ ತೀವ್ರ ಪ್ರತಿಭಟನೆ ಆರಂಭಿಸಿದ್ದರು. ಕೋಟ್‌ಘರ್‌ನಲ್ಲಿ ತಾರಕಕ್ಕೇರಿದ ಪ್ರತಿಭಟನೆ ಹತ್ತಿಕ್ಕಲು ಸರ್ಕಾರ ಗೋಲಿಬಾರ್ ನಡೆಸಲು ಆದೇಶವಿತ್ತಿತ್ತು. ಇದರಿಂದಾಗಿ ಗೋವಿಂದ್ ಸಿಂಗ್, ತಾರ ಚಂದ್ ಮತ್ತು ಹಿರಾ ಸಿಂಗ್ ಎಂಬ ಸೇಬು ಬೆಳೆಗಾರರು ಗುಂಡಿಗೆ ಬಲಿಯಾದರೆ ನೂರಾರು ಜನರು ಗಾಯಗೊಂಡರು.

ಇದು 1993ರಲ್ಲಿ ಹಿಮಾಚಲ ಪ್ರದೇಶದಲ್ಲಿ ನಡೆದ ಮಧ್ಯಂತರ ಚುನಾವಣೆಯಲ್ಲಿ ರಾಜಕೀಯ ಬದಲಾವಣೆಗೆ ಕಾರಣವಾಯಿತು. 1990ರ ಚುನಾವಣೆಯಲ್ಲಿ 46 ಸ್ಥಾನ ಗೆದ್ದಿದ್ದ ಬಿಜೆಪಿ ಮೂರೇ ವರ್ಷದಲ್ಲಿ ಕೇವಲ 8 ಸ್ಥಾನಗಳಿಗೆ ಕುಸಿಯಿತು. ಸಿಎಂ ಆಗಿದ್ದ ಶಾಂತಕುಮಾರ್ ಎರಡು ಕ್ಷೇತ್ರಗಳಿಂದ ಕಣಕ್ಕಿಳಿದು ಎರಡರಲ್ಲಿಯೂ ಸೋಲು ಕಂಡರು. ಸೇಬು ಬೆಳೆಗಾರರ ಸಂಪೂರ್ಣ ಲಾಭ ಕಾಂಗ್ರೆಸ್ ಪಡೆಯಿತು. 1990ರಲ್ಲಿ ಕೇವಲ 9 ಸ್ಥಾನ ಗೆದ್ದಿದ್ದ ಕಾಂಗ್ರೆಸ್ 1993ರಲ್ಲಿ 52 ಸ್ಥಾನ ಗಳಿಸಿ ಅಧಿಕಾರಕ್ಕೇರಿತು. ಮುಖ್ಯಮಂತ್ರಿಯಾದ ವೀರಭದ್ರ ಸಿಂಗ್ ಸೇಬು ಬೆಳೆಗಾರರಿಗಾಗಿ ಮಂಡಿ ಮಧ್ಯಸ್ಥಿಕೆ ಯೋಜನೆ (ಎಂಐಎಸ್) ಜಾರಿಗೊಳಿಸಿದರು.

ಈಗ ಮತ್ತೆ ಒಂದು ವರ್ಷದಿಂದ ಸೇಬು ಬೆಳೆಗಾರರ ಹೋರಾಟ ಆರಂಭವಾಗಿದೆ. ಕಳೆದ ಒಂದು ತಿಂಗಳಿನಿಂದ ಸೇಬು ಬೆಳೆಗಾರರು ಧರಣಿ ನಡೆಸುತ್ತಿದ್ದಾರೆ. ಎಂಐಎಸ್ ಯೋಜನೆಯಡಿ ಸೇಬು ಖರೀದಿಸಿರುವ ಬಾಕಿ ಹಣ ಪಾವತಿಸಬೇಕು. ರಸಗೊಬ್ಬರ ಮೇಲಿನ ಸಬ್ಸಿಡಿ ಹಿಂತೆಗೆದುಕೊಳ್ಳಲಾಗಿದ್ದು, ಅದನ್ನು ಬದಲಿಸಿ ಸಬ್ಸಿಡಿ ನೀಡಬೇಕು. ಜಿಎಸ್‌ಟಿ ಕಡಿತಗೊಳಿಸಬೇಕು ಮತ್ತು ಅದಾನಿ ಗ್ರೂಪ್ ನಿಗದಿಪಡಿಸಿದ ಷರತ್ತುಗಳನ್ನು ಸಡಿಲಗೊಳಿಸಬೇಕು ಎಂಬುದು ರೈತರ ಒತ್ತಾಯವಾಗಿದೆ. ಈ ಹೋರಾಟಕ್ಕೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಿದೆ; ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ತಾವು ಅಧಿಕಾರಕ್ಕೆ ಬಂದರೆ ಹಕ್ಕೊತ್ತಾಯಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. 1990ರಲ್ಲಿ ನಡೆದ ರಾಜಕೀಯ ಮತ್ತೆ ಮರುಕಳಿಸುವುದೇ ಎಂದು ಕಾಂಗ್ರೆಸ್ ಆಶಿಸುತ್ತಿದೆ.

ಬಿಜೆಪಿಯ ಸಿಎಂ ಜೈ ರಾಂ ಠಾಕೂರ್ ಸೇಬು ಬೆಳೆಗಾರರಿಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಸೇಬಿಗೆ ಬೆಲೆ ಹೆಚ್ಚಿಸಿರುವುದಾಗಿ ಹೇಳಿದ್ದಾರೆ. ಒಟ್ಟಾರೆಯಾಗಿ ಹಿಮಾಚಲ ಪ್ರದೇಶದ 68 ಕ್ಷೇತ್ರಗಳ ಪೈಕಿ ಸುಮಾರು 20 ಕ್ಷೇತ್ರಗಳಲ್ಲಿ ಸೇಬು ಬೆಳೆಗಾರರು ನಿರ್ಣಾಯಕವಾಗಿದ್ದಾರೆ. ಅವರು ಸರ್ಕಾರದ ಭರವಸೆಗಳನ್ನು ಒಪ್ಪುತ್ತಾರಾ? ಅಥವಾ ಸರ್ಕಾರವನ್ನೇ ಬದಲಿಸುತ್ತಾರಾ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ: ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯನವರು ಬಂದರೆ ಫಲಿತಾಂಶವೇನಾಗಬಹದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...