Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್ ಸೋಲು: ತಂಡದ ಆಯ್ಕೆ ಕುರಿತು ಅಪಸ್ವರ, ಹಿರಿಯರಿಗೆ ಕೋಕ್ ಬಗ್ಗೆ ಚಿಂತನೆ

ಟಿ20 ವಿಶ್ವಕಪ್ ಸೋಲು: ತಂಡದ ಆಯ್ಕೆ ಕುರಿತು ಅಪಸ್ವರ, ಹಿರಿಯರಿಗೆ ಕೋಕ್ ಬಗ್ಗೆ ಚಿಂತನೆ

ಮುಂದಿನ ಟಿ20 ವಿಶ್ವಕಪ್ ವೇಳೆಗೆ ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸುವ ಕುರಿತು ಚರ್ಚೆಗಳಾಗುತ್ತಿವೆ.

- Advertisement -
- Advertisement -

ಗುರುವಾರ ಅಡಿಲೇಡ್ ಓವಲ್ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಸೋಲುತ್ತಿದ್ದಂತೆ ತಂಡದ ಆಯ್ಕೆಯ ಬಗ್ಗೆಯೇ ಇದೀಗ ಅಪಸ್ವರ ಕೇಳಿಬರುತ್ತಿದೆ. ಏಕದಿನ ವಿಶ್ವಕಪ್ ಸೇರಿದಂತೆ ಯಾವುದೇ ಪ್ರಮುಖ ಟೂರ್ನಿಗಳಲ್ಲಿ ಭಾರತ ಲೆಗ್ ಸ್ಪಿನ್ನರ್ ಇಲ್ಲದೆ ಕಣಕ್ಕೆ ಇಳಿಯುವುದೇ ಇಲ್ಲ. ಆದರೆ, ಆಸ್ಟ್ರೇಲಿಯಾ ನೆಲದಲ್ಲಿ ಭಾರತ ಒಂದು ಪಂದ್ಯದಲ್ಲೂ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್ ಅವರನ್ನು ಕಣಕ್ಕಿಳಿಸದ ಬಗ್ಗೆ ಹಲವರು ಕಿಡಿಕಾರುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮಾಜಿ ಕ್ರಿಕೆಟಿಗ ಫರೂಕ್ ಇಂಜಿನಿಯರ್, “ನಾನು ಭಾರತ ತಂಡದ ನಾಯಕನಾಗಿದ್ದರೆ ಖಚಿತವಾಗಿ ಎಲ್ಲ ಪಂದ್ಯದಲ್ಲೂ ಯಜುವೇಂದ್ರ ಚಹಲ್ ಅವರನ್ನು ಕಣಕ್ಕಿಳಿಸುತ್ತಿದ್ದೆ. ಆದರೆ, ಆತನನ್ನು ಅಭ್ಯಾಸ ಪಂದ್ಯದಲ್ಲಿ ಆಡಿಸಲಾಯಿತೇ ವಿನಃ ಪ್ರಮುಖ ಪಂದ್ಯಗಳಲ್ಲಿ ಕೈಬಿಡಲಾಗಿತ್ತು. ಭಾರತದ ಸೋಲಿಗೆ ಪರಿಣತ ಲೆಗ್ ಸ್ಪಿನ್ನರ್ ಆಡುವ ಹನ್ನೊಂದರ ಬಳಗದಲ್ಲಿ ಇಲ್ಲದೇ ಇದ್ದುದ್ದೇ ಕಾರಣ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೆ, ವಿಶ್ವಕಪ್‌ಗೆ ಭಾರತ ತಂಡದ ಆಯ್ಕೆಯನ್ನೇ ಅಲ್ಲಗೆಳೆದಿರುವ ಅವರು, “ಯಜುವೇಂದ್ರ ಚಹಲ್ ಮತ್ತು ಯುವ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಇಬ್ಬರೂ ಪ್ರತಿಭಾನ್ವಿತರು. ಈ ಹಿಂದೆ ಅನೇಕ ಪಂದ್ಯಗಳಲ್ಲಿ ಅವರು ತಮ್ಮ ವಿಕೆಟ್ ತೆಗೆಯುವ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಬಿಸಿಸಿಐ ಆಯ್ಕೆ ಮಂಡಳಿ ಈ ಇಬ್ಬರೂ ಬೌಲರ್‌ಗಳನ್ನು ಆಯ್ಕೆ ಮಾಡಬೇಕಿತ್ತು. ಕನಿಷ್ಟ ಒಬ್ಬರನ್ನಾದರೂ ಎಲ್ಲ ಪಂದ್ಯದಲ್ಲಿ ಕಣಕ್ಕಿಳಿಸಬೇಕಾಗಿತ್ತು. ಇಂತಹ ಪ್ರಮಾದಗಳಿಂದಲೇ ಇಂದು ಭಾರತ ತಂಡ ಸವಾಲೊಡ್ಡದೆ ಸೋಲೊಪ್ಪಲು ಕಾರಣವಾಗಿದೆ” ಎಂದು ಫಾರೂಕ್ ಇಂಜಿನಿಯರ್ ಅಸಮಾಧಾನ ಹೊರಹಾಕಿದ್ದಾರೆ.

ಅಶ್ವಿನ್ ಆಯ್ಕೆಯ ಬಗ್ಗೆಯೂ ಪ್ರಶ್ನೆ:

ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಭಾರತದ ಪಾಲಿನ ಅನುಭವಿ ಬೌಲರ್ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಅವರು ಭಾರತದ ನೆಲದಲ್ಲಿ ಸಾಕಷ್ಟು ಯಶಸ್ಸು ಗಳಿಸಿದ್ದಾರೆ ವಿನಃ ವಿದೇಶಿ ನೆಲದಲ್ಲಿ ಅವರ ಸಾಧನೆ ಅಷ್ಟಕ್ಕಷ್ಟೆ. ಇದೇ ಕಾರಣಕ್ಕೆ ಈ ಹಿಂದೆ ಭಾರತ ತಂಡ ಹಲವು ವಿದೇಶಿ ಟೂರ್ನಿಗಳಿಗೆ ಅವರನ್ನು ಫಾರ್ಮ್‌ನಲ್ಲಿ ಇದ್ದಾಗ್ಯೂ ಆಯ್ಕೆ ಮಾಡದೆ ಕೈಬಿಟ್ಟ ಉದಾಹರಣೆಗಳಿವೆ.

ಇನ್ನೂ ಆಸ್ಟ್ರೇಲಿಯಾ ನೆಲದಲ್ಲಿ ಅಶ್ವಿನ್ ಚುಟುಕು ಮಾದರಿ ಕ್ರಿಕೆಟ್‌ನಲ್ಲಿ ಹೇಳಿಕೊಳ್ಳುವಂತಹ ಸಾಧನೆ ಮಾಡಿಲ್ಲ. ಆರು ಪಂದ್ಯಗಳಲ್ಲಿ ಅವರ ಆರು ವಿಕೆಟ್‌ಗಳಲ್ಲಿ ಮೂರು ಜಿಂಬಾಬ್ವೆ ಪಂದ್ಯದಲ್ಲಿ ಬಂದಿವೆ. ಆದರೆ ಅವರ ಎಕಾನಮಿ 8.15 ಇದೆ. ಆದರೂ, ಅವರನ್ನು ಈ ವಿಶ್ವಕಪ್‌ಗೆ ಏಕೆ ಆಯ್ಕೆ ಮಾಡಲಾಯಿತು? ಎಂದು ಹಲವು ಹಿರಿಯ ಕ್ರಿಕೆಟಿಗರು ಸಾಲು ಸಾಲು ಪ್ರಶ್ನೆಗಳನ್ನು ಮುಂದಿಡುತ್ತಿದ್ದಾರೆ.

ಈ ನಡುವೆ ರವೀಂದ್ರ ಜಡೇಜ ಅನುಪಸ್ಥಿತಿಯ ಕಾರಣಕ್ಕೆ ಆಲ್‌ರೌಂಡರ್‌ ಕೋಟಾದ ಅಡಿಯಲ್ಲಿ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಅವರನ್ನೂ ಸಹ ವಿಶ್ವಕಪ್‌ನ ಪಂದ್ಯಗಳಲ್ಲೂ ಕಣಕ್ಕಿಳಿಸಲಾಗಿತ್ತು. ಆದರೆ, ಅವರೂ ಸಹ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸತತ ವಿಫಲರಾದರು. ಆದರೂ, ಸಹ ಸೆಮಿಫೈನಲ್ ಪಂದ್ಯದಲ್ಲಿ ಅವರನ್ನು ಏಕೆ ಆಡಿಸಲಾಯಿತು. ಅವರ ಬದಲಿಗೆ ಬೇರೆ ಆಟಗಾರರನ್ನು ಆಡಿಸಬಹುದಿತ್ತಲ್ಲ? ಎಂದೂ ಸಹ ಹಲವರು ಕಿಡಿಕಾರುತ್ತಿದ್ದಾರೆ.

ಹಿರಿಯ ಆಟಗಾರರಿಗೆ ಕೋಕ್

ಸದ್ಯಕ್ಕೆ 2023ರಲ್ಲಿ ನಡೆಯುವ ಏಕದಿನ ವಿಶ್ವಕಪ್ ಮೇಲೆ ಭಾರತ ಕಣ್ಣಿಟ್ಟಿದೆ. ಅದಕ್ಕಾಗಿ ಮುಂದಿನ ವರ್ಷದವರೆಗೆ ಸುಮಾರು 25 ಏಕದಿನ ಪಂದ್ಯಗಳನ್ನಾಡಲಿದೆ. ಆದರೆ ತೊಂದರೆ ಇರುವುದು 2024 ರ ಟಿ20 ವಿಶ್ವಕಪ್ ಆಗಿದೆ. ಆ ಸಮಯಕ್ಕೆ ಈ ಬಾರಿ ಆಡಿದ ಹಲವು ಆಟಗಾರರು ಇರುವುದಿಲ್ಲ ಎನ್ನಲಾಗುತ್ತಿದೆ.

2024ರ ವಿಶ್ವಕಪ್‌ ಬಗ್ಗೆ ಈಗಲೇ ಮಾತನಾಡುವುದು ಸರಿಯಲ್ಲ ಎಂದು ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ. ಆದರೂ ಆ ವೇಳೆಗೆ ಹಲವು ಹಿರಿಯ ಆಟಗಾರರಿಗೆ ಕೋಕ್ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿವೆ. ಮುಖ್ಯವಾಗಿ ರೋಹಿತ್ ಶರ್ಮಾ, ಆರ್ ಅಶ್ವಿನ್ ಮತ್ತು ದಿನೇಶ್ ಕಾರ್ತಿಕ್ ಆ ಪಟ್ಟಿಯಲ್ಲಿದ್ದು ವಿರಾಟ್ ಕೊಹ್ಲಿಯವರನ್ನು ಸಹ ಕೈಬಿಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.

ಇನ್ನು ಭಾರತ ತಂಡದ ಆರಂಭಿಕ ಆಟಗಾರರಾಗಿ ಶುಭ್‌ಮನ್ ಗಿಲ್, ಪೃಥ್ವಿ ಶಾ ರನ್ನು ಹೆಚ್ಚು ಆಡಿಸುವ ಬಗ್ಗೆ ಚಿಂತಿಸಲಾಗುತ್ತಿದೆ. ರಿಷಬ್ ಪಂತ್ ಎಡಗೈ ಬ್ಯಾಟ್ಸ್‌ಮನ್ ಆಗಿದ್ದು ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಸದ್ಯಕ್ಕೆ ಕಳಪೆ ಪ್ರದರ್ಶನ ನೀಡಿರುವ ಕೆ.ಎಲ್ ರಾಹುಲ್ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಮುಂದಿನ ಟಿ20 ವಿಶ್ವಕಪ್ ವೇಳೆಗೆ ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸುವ ಕುರಿತು ಚರ್ಚೆಗಳಾಗುತ್ತಿವೆ.

ಪೈಪೋಟಿಯಿಲ್ಲದೆ ಸೋಲೊಪ್ಪಿಕೊಂಡ ಭಾರತ

ನಿರ್ಣಾಯಕ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಭಾರತ ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ 168ರನ್‌ಗಳ ಸವಾಲಿನ ಮೊತ್ತ ಪೇರಿಸಿತ್ತು. ಆದರೆ, ಬೌಲಿಂಗ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ ಪರಿಣಾಮ ಆಂಗ್ಲರು ಒಂದು ವಿಕೆಟ್ ಸಹ ನಷ್ಟವಿಲ್ಲದೆ ಕೇವಲ 16 ಓವರ್ಗಳಲ್ಲಿ ಗುರಿ ತಲುಪಿ ಜಯ ಸಾಧಿಸಿತು. ಈ ಸೋಲಿನಿಂದ ಭಾರತ ತಂಡ ತೀವ್ರ ಮುಖಭಂಗಕ್ಕೆ ಗುರಿಯಾಗಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...