Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್ ಸೋಲು: ತಂಡದ ಆಯ್ಕೆ ಕುರಿತು ಅಪಸ್ವರ, ಹಿರಿಯರಿಗೆ ಕೋಕ್ ಬಗ್ಗೆ ಚಿಂತನೆ

ಟಿ20 ವಿಶ್ವಕಪ್ ಸೋಲು: ತಂಡದ ಆಯ್ಕೆ ಕುರಿತು ಅಪಸ್ವರ, ಹಿರಿಯರಿಗೆ ಕೋಕ್ ಬಗ್ಗೆ ಚಿಂತನೆ

ಮುಂದಿನ ಟಿ20 ವಿಶ್ವಕಪ್ ವೇಳೆಗೆ ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸುವ ಕುರಿತು ಚರ್ಚೆಗಳಾಗುತ್ತಿವೆ.

- Advertisement -
- Advertisement -

ಗುರುವಾರ ಅಡಿಲೇಡ್ ಓವಲ್ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಸೋಲುತ್ತಿದ್ದಂತೆ ತಂಡದ ಆಯ್ಕೆಯ ಬಗ್ಗೆಯೇ ಇದೀಗ ಅಪಸ್ವರ ಕೇಳಿಬರುತ್ತಿದೆ. ಏಕದಿನ ವಿಶ್ವಕಪ್ ಸೇರಿದಂತೆ ಯಾವುದೇ ಪ್ರಮುಖ ಟೂರ್ನಿಗಳಲ್ಲಿ ಭಾರತ ಲೆಗ್ ಸ್ಪಿನ್ನರ್ ಇಲ್ಲದೆ ಕಣಕ್ಕೆ ಇಳಿಯುವುದೇ ಇಲ್ಲ. ಆದರೆ, ಆಸ್ಟ್ರೇಲಿಯಾ ನೆಲದಲ್ಲಿ ಭಾರತ ಒಂದು ಪಂದ್ಯದಲ್ಲೂ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್ ಅವರನ್ನು ಕಣಕ್ಕಿಳಿಸದ ಬಗ್ಗೆ ಹಲವರು ಕಿಡಿಕಾರುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮಾಜಿ ಕ್ರಿಕೆಟಿಗ ಫರೂಕ್ ಇಂಜಿನಿಯರ್, “ನಾನು ಭಾರತ ತಂಡದ ನಾಯಕನಾಗಿದ್ದರೆ ಖಚಿತವಾಗಿ ಎಲ್ಲ ಪಂದ್ಯದಲ್ಲೂ ಯಜುವೇಂದ್ರ ಚಹಲ್ ಅವರನ್ನು ಕಣಕ್ಕಿಳಿಸುತ್ತಿದ್ದೆ. ಆದರೆ, ಆತನನ್ನು ಅಭ್ಯಾಸ ಪಂದ್ಯದಲ್ಲಿ ಆಡಿಸಲಾಯಿತೇ ವಿನಃ ಪ್ರಮುಖ ಪಂದ್ಯಗಳಲ್ಲಿ ಕೈಬಿಡಲಾಗಿತ್ತು. ಭಾರತದ ಸೋಲಿಗೆ ಪರಿಣತ ಲೆಗ್ ಸ್ಪಿನ್ನರ್ ಆಡುವ ಹನ್ನೊಂದರ ಬಳಗದಲ್ಲಿ ಇಲ್ಲದೇ ಇದ್ದುದ್ದೇ ಕಾರಣ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೆ, ವಿಶ್ವಕಪ್‌ಗೆ ಭಾರತ ತಂಡದ ಆಯ್ಕೆಯನ್ನೇ ಅಲ್ಲಗೆಳೆದಿರುವ ಅವರು, “ಯಜುವೇಂದ್ರ ಚಹಲ್ ಮತ್ತು ಯುವ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಇಬ್ಬರೂ ಪ್ರತಿಭಾನ್ವಿತರು. ಈ ಹಿಂದೆ ಅನೇಕ ಪಂದ್ಯಗಳಲ್ಲಿ ಅವರು ತಮ್ಮ ವಿಕೆಟ್ ತೆಗೆಯುವ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಬಿಸಿಸಿಐ ಆಯ್ಕೆ ಮಂಡಳಿ ಈ ಇಬ್ಬರೂ ಬೌಲರ್‌ಗಳನ್ನು ಆಯ್ಕೆ ಮಾಡಬೇಕಿತ್ತು. ಕನಿಷ್ಟ ಒಬ್ಬರನ್ನಾದರೂ ಎಲ್ಲ ಪಂದ್ಯದಲ್ಲಿ ಕಣಕ್ಕಿಳಿಸಬೇಕಾಗಿತ್ತು. ಇಂತಹ ಪ್ರಮಾದಗಳಿಂದಲೇ ಇಂದು ಭಾರತ ತಂಡ ಸವಾಲೊಡ್ಡದೆ ಸೋಲೊಪ್ಪಲು ಕಾರಣವಾಗಿದೆ” ಎಂದು ಫಾರೂಕ್ ಇಂಜಿನಿಯರ್ ಅಸಮಾಧಾನ ಹೊರಹಾಕಿದ್ದಾರೆ.

ಅಶ್ವಿನ್ ಆಯ್ಕೆಯ ಬಗ್ಗೆಯೂ ಪ್ರಶ್ನೆ:

ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಭಾರತದ ಪಾಲಿನ ಅನುಭವಿ ಬೌಲರ್ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಅವರು ಭಾರತದ ನೆಲದಲ್ಲಿ ಸಾಕಷ್ಟು ಯಶಸ್ಸು ಗಳಿಸಿದ್ದಾರೆ ವಿನಃ ವಿದೇಶಿ ನೆಲದಲ್ಲಿ ಅವರ ಸಾಧನೆ ಅಷ್ಟಕ್ಕಷ್ಟೆ. ಇದೇ ಕಾರಣಕ್ಕೆ ಈ ಹಿಂದೆ ಭಾರತ ತಂಡ ಹಲವು ವಿದೇಶಿ ಟೂರ್ನಿಗಳಿಗೆ ಅವರನ್ನು ಫಾರ್ಮ್‌ನಲ್ಲಿ ಇದ್ದಾಗ್ಯೂ ಆಯ್ಕೆ ಮಾಡದೆ ಕೈಬಿಟ್ಟ ಉದಾಹರಣೆಗಳಿವೆ.

ಇನ್ನೂ ಆಸ್ಟ್ರೇಲಿಯಾ ನೆಲದಲ್ಲಿ ಅಶ್ವಿನ್ ಚುಟುಕು ಮಾದರಿ ಕ್ರಿಕೆಟ್‌ನಲ್ಲಿ ಹೇಳಿಕೊಳ್ಳುವಂತಹ ಸಾಧನೆ ಮಾಡಿಲ್ಲ. ಆರು ಪಂದ್ಯಗಳಲ್ಲಿ ಅವರ ಆರು ವಿಕೆಟ್‌ಗಳಲ್ಲಿ ಮೂರು ಜಿಂಬಾಬ್ವೆ ಪಂದ್ಯದಲ್ಲಿ ಬಂದಿವೆ. ಆದರೆ ಅವರ ಎಕಾನಮಿ 8.15 ಇದೆ. ಆದರೂ, ಅವರನ್ನು ಈ ವಿಶ್ವಕಪ್‌ಗೆ ಏಕೆ ಆಯ್ಕೆ ಮಾಡಲಾಯಿತು? ಎಂದು ಹಲವು ಹಿರಿಯ ಕ್ರಿಕೆಟಿಗರು ಸಾಲು ಸಾಲು ಪ್ರಶ್ನೆಗಳನ್ನು ಮುಂದಿಡುತ್ತಿದ್ದಾರೆ.

ಈ ನಡುವೆ ರವೀಂದ್ರ ಜಡೇಜ ಅನುಪಸ್ಥಿತಿಯ ಕಾರಣಕ್ಕೆ ಆಲ್‌ರೌಂಡರ್‌ ಕೋಟಾದ ಅಡಿಯಲ್ಲಿ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಅವರನ್ನೂ ಸಹ ವಿಶ್ವಕಪ್‌ನ ಪಂದ್ಯಗಳಲ್ಲೂ ಕಣಕ್ಕಿಳಿಸಲಾಗಿತ್ತು. ಆದರೆ, ಅವರೂ ಸಹ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸತತ ವಿಫಲರಾದರು. ಆದರೂ, ಸಹ ಸೆಮಿಫೈನಲ್ ಪಂದ್ಯದಲ್ಲಿ ಅವರನ್ನು ಏಕೆ ಆಡಿಸಲಾಯಿತು. ಅವರ ಬದಲಿಗೆ ಬೇರೆ ಆಟಗಾರರನ್ನು ಆಡಿಸಬಹುದಿತ್ತಲ್ಲ? ಎಂದೂ ಸಹ ಹಲವರು ಕಿಡಿಕಾರುತ್ತಿದ್ದಾರೆ.

ಹಿರಿಯ ಆಟಗಾರರಿಗೆ ಕೋಕ್

ಸದ್ಯಕ್ಕೆ 2023ರಲ್ಲಿ ನಡೆಯುವ ಏಕದಿನ ವಿಶ್ವಕಪ್ ಮೇಲೆ ಭಾರತ ಕಣ್ಣಿಟ್ಟಿದೆ. ಅದಕ್ಕಾಗಿ ಮುಂದಿನ ವರ್ಷದವರೆಗೆ ಸುಮಾರು 25 ಏಕದಿನ ಪಂದ್ಯಗಳನ್ನಾಡಲಿದೆ. ಆದರೆ ತೊಂದರೆ ಇರುವುದು 2024 ರ ಟಿ20 ವಿಶ್ವಕಪ್ ಆಗಿದೆ. ಆ ಸಮಯಕ್ಕೆ ಈ ಬಾರಿ ಆಡಿದ ಹಲವು ಆಟಗಾರರು ಇರುವುದಿಲ್ಲ ಎನ್ನಲಾಗುತ್ತಿದೆ.

2024ರ ವಿಶ್ವಕಪ್‌ ಬಗ್ಗೆ ಈಗಲೇ ಮಾತನಾಡುವುದು ಸರಿಯಲ್ಲ ಎಂದು ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ. ಆದರೂ ಆ ವೇಳೆಗೆ ಹಲವು ಹಿರಿಯ ಆಟಗಾರರಿಗೆ ಕೋಕ್ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿವೆ. ಮುಖ್ಯವಾಗಿ ರೋಹಿತ್ ಶರ್ಮಾ, ಆರ್ ಅಶ್ವಿನ್ ಮತ್ತು ದಿನೇಶ್ ಕಾರ್ತಿಕ್ ಆ ಪಟ್ಟಿಯಲ್ಲಿದ್ದು ವಿರಾಟ್ ಕೊಹ್ಲಿಯವರನ್ನು ಸಹ ಕೈಬಿಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.

ಇನ್ನು ಭಾರತ ತಂಡದ ಆರಂಭಿಕ ಆಟಗಾರರಾಗಿ ಶುಭ್‌ಮನ್ ಗಿಲ್, ಪೃಥ್ವಿ ಶಾ ರನ್ನು ಹೆಚ್ಚು ಆಡಿಸುವ ಬಗ್ಗೆ ಚಿಂತಿಸಲಾಗುತ್ತಿದೆ. ರಿಷಬ್ ಪಂತ್ ಎಡಗೈ ಬ್ಯಾಟ್ಸ್‌ಮನ್ ಆಗಿದ್ದು ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಸದ್ಯಕ್ಕೆ ಕಳಪೆ ಪ್ರದರ್ಶನ ನೀಡಿರುವ ಕೆ.ಎಲ್ ರಾಹುಲ್ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಮುಂದಿನ ಟಿ20 ವಿಶ್ವಕಪ್ ವೇಳೆಗೆ ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸುವ ಕುರಿತು ಚರ್ಚೆಗಳಾಗುತ್ತಿವೆ.

ಪೈಪೋಟಿಯಿಲ್ಲದೆ ಸೋಲೊಪ್ಪಿಕೊಂಡ ಭಾರತ

ನಿರ್ಣಾಯಕ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಭಾರತ ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ 168ರನ್‌ಗಳ ಸವಾಲಿನ ಮೊತ್ತ ಪೇರಿಸಿತ್ತು. ಆದರೆ, ಬೌಲಿಂಗ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ ಪರಿಣಾಮ ಆಂಗ್ಲರು ಒಂದು ವಿಕೆಟ್ ಸಹ ನಷ್ಟವಿಲ್ಲದೆ ಕೇವಲ 16 ಓವರ್ಗಳಲ್ಲಿ ಗುರಿ ತಲುಪಿ ಜಯ ಸಾಧಿಸಿತು. ಈ ಸೋಲಿನಿಂದ ಭಾರತ ತಂಡ ತೀವ್ರ ಮುಖಭಂಗಕ್ಕೆ ಗುರಿಯಾಗಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...