Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್ ಸೋಲು: ತಂಡದ ಆಯ್ಕೆ ಕುರಿತು ಅಪಸ್ವರ, ಹಿರಿಯರಿಗೆ ಕೋಕ್ ಬಗ್ಗೆ ಚಿಂತನೆ

ಟಿ20 ವಿಶ್ವಕಪ್ ಸೋಲು: ತಂಡದ ಆಯ್ಕೆ ಕುರಿತು ಅಪಸ್ವರ, ಹಿರಿಯರಿಗೆ ಕೋಕ್ ಬಗ್ಗೆ ಚಿಂತನೆ

ಮುಂದಿನ ಟಿ20 ವಿಶ್ವಕಪ್ ವೇಳೆಗೆ ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸುವ ಕುರಿತು ಚರ್ಚೆಗಳಾಗುತ್ತಿವೆ.

- Advertisement -
- Advertisement -

ಗುರುವಾರ ಅಡಿಲೇಡ್ ಓವಲ್ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಸೋಲುತ್ತಿದ್ದಂತೆ ತಂಡದ ಆಯ್ಕೆಯ ಬಗ್ಗೆಯೇ ಇದೀಗ ಅಪಸ್ವರ ಕೇಳಿಬರುತ್ತಿದೆ. ಏಕದಿನ ವಿಶ್ವಕಪ್ ಸೇರಿದಂತೆ ಯಾವುದೇ ಪ್ರಮುಖ ಟೂರ್ನಿಗಳಲ್ಲಿ ಭಾರತ ಲೆಗ್ ಸ್ಪಿನ್ನರ್ ಇಲ್ಲದೆ ಕಣಕ್ಕೆ ಇಳಿಯುವುದೇ ಇಲ್ಲ. ಆದರೆ, ಆಸ್ಟ್ರೇಲಿಯಾ ನೆಲದಲ್ಲಿ ಭಾರತ ಒಂದು ಪಂದ್ಯದಲ್ಲೂ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್ ಅವರನ್ನು ಕಣಕ್ಕಿಳಿಸದ ಬಗ್ಗೆ ಹಲವರು ಕಿಡಿಕಾರುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮಾಜಿ ಕ್ರಿಕೆಟಿಗ ಫರೂಕ್ ಇಂಜಿನಿಯರ್, “ನಾನು ಭಾರತ ತಂಡದ ನಾಯಕನಾಗಿದ್ದರೆ ಖಚಿತವಾಗಿ ಎಲ್ಲ ಪಂದ್ಯದಲ್ಲೂ ಯಜುವೇಂದ್ರ ಚಹಲ್ ಅವರನ್ನು ಕಣಕ್ಕಿಳಿಸುತ್ತಿದ್ದೆ. ಆದರೆ, ಆತನನ್ನು ಅಭ್ಯಾಸ ಪಂದ್ಯದಲ್ಲಿ ಆಡಿಸಲಾಯಿತೇ ವಿನಃ ಪ್ರಮುಖ ಪಂದ್ಯಗಳಲ್ಲಿ ಕೈಬಿಡಲಾಗಿತ್ತು. ಭಾರತದ ಸೋಲಿಗೆ ಪರಿಣತ ಲೆಗ್ ಸ್ಪಿನ್ನರ್ ಆಡುವ ಹನ್ನೊಂದರ ಬಳಗದಲ್ಲಿ ಇಲ್ಲದೇ ಇದ್ದುದ್ದೇ ಕಾರಣ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೆ, ವಿಶ್ವಕಪ್‌ಗೆ ಭಾರತ ತಂಡದ ಆಯ್ಕೆಯನ್ನೇ ಅಲ್ಲಗೆಳೆದಿರುವ ಅವರು, “ಯಜುವೇಂದ್ರ ಚಹಲ್ ಮತ್ತು ಯುವ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಇಬ್ಬರೂ ಪ್ರತಿಭಾನ್ವಿತರು. ಈ ಹಿಂದೆ ಅನೇಕ ಪಂದ್ಯಗಳಲ್ಲಿ ಅವರು ತಮ್ಮ ವಿಕೆಟ್ ತೆಗೆಯುವ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಬಿಸಿಸಿಐ ಆಯ್ಕೆ ಮಂಡಳಿ ಈ ಇಬ್ಬರೂ ಬೌಲರ್‌ಗಳನ್ನು ಆಯ್ಕೆ ಮಾಡಬೇಕಿತ್ತು. ಕನಿಷ್ಟ ಒಬ್ಬರನ್ನಾದರೂ ಎಲ್ಲ ಪಂದ್ಯದಲ್ಲಿ ಕಣಕ್ಕಿಳಿಸಬೇಕಾಗಿತ್ತು. ಇಂತಹ ಪ್ರಮಾದಗಳಿಂದಲೇ ಇಂದು ಭಾರತ ತಂಡ ಸವಾಲೊಡ್ಡದೆ ಸೋಲೊಪ್ಪಲು ಕಾರಣವಾಗಿದೆ” ಎಂದು ಫಾರೂಕ್ ಇಂಜಿನಿಯರ್ ಅಸಮಾಧಾನ ಹೊರಹಾಕಿದ್ದಾರೆ.

ಅಶ್ವಿನ್ ಆಯ್ಕೆಯ ಬಗ್ಗೆಯೂ ಪ್ರಶ್ನೆ:

ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಭಾರತದ ಪಾಲಿನ ಅನುಭವಿ ಬೌಲರ್ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಅವರು ಭಾರತದ ನೆಲದಲ್ಲಿ ಸಾಕಷ್ಟು ಯಶಸ್ಸು ಗಳಿಸಿದ್ದಾರೆ ವಿನಃ ವಿದೇಶಿ ನೆಲದಲ್ಲಿ ಅವರ ಸಾಧನೆ ಅಷ್ಟಕ್ಕಷ್ಟೆ. ಇದೇ ಕಾರಣಕ್ಕೆ ಈ ಹಿಂದೆ ಭಾರತ ತಂಡ ಹಲವು ವಿದೇಶಿ ಟೂರ್ನಿಗಳಿಗೆ ಅವರನ್ನು ಫಾರ್ಮ್‌ನಲ್ಲಿ ಇದ್ದಾಗ್ಯೂ ಆಯ್ಕೆ ಮಾಡದೆ ಕೈಬಿಟ್ಟ ಉದಾಹರಣೆಗಳಿವೆ.

ಇನ್ನೂ ಆಸ್ಟ್ರೇಲಿಯಾ ನೆಲದಲ್ಲಿ ಅಶ್ವಿನ್ ಚುಟುಕು ಮಾದರಿ ಕ್ರಿಕೆಟ್‌ನಲ್ಲಿ ಹೇಳಿಕೊಳ್ಳುವಂತಹ ಸಾಧನೆ ಮಾಡಿಲ್ಲ. ಆರು ಪಂದ್ಯಗಳಲ್ಲಿ ಅವರ ಆರು ವಿಕೆಟ್‌ಗಳಲ್ಲಿ ಮೂರು ಜಿಂಬಾಬ್ವೆ ಪಂದ್ಯದಲ್ಲಿ ಬಂದಿವೆ. ಆದರೆ ಅವರ ಎಕಾನಮಿ 8.15 ಇದೆ. ಆದರೂ, ಅವರನ್ನು ಈ ವಿಶ್ವಕಪ್‌ಗೆ ಏಕೆ ಆಯ್ಕೆ ಮಾಡಲಾಯಿತು? ಎಂದು ಹಲವು ಹಿರಿಯ ಕ್ರಿಕೆಟಿಗರು ಸಾಲು ಸಾಲು ಪ್ರಶ್ನೆಗಳನ್ನು ಮುಂದಿಡುತ್ತಿದ್ದಾರೆ.

ಈ ನಡುವೆ ರವೀಂದ್ರ ಜಡೇಜ ಅನುಪಸ್ಥಿತಿಯ ಕಾರಣಕ್ಕೆ ಆಲ್‌ರೌಂಡರ್‌ ಕೋಟಾದ ಅಡಿಯಲ್ಲಿ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಅವರನ್ನೂ ಸಹ ವಿಶ್ವಕಪ್‌ನ ಪಂದ್ಯಗಳಲ್ಲೂ ಕಣಕ್ಕಿಳಿಸಲಾಗಿತ್ತು. ಆದರೆ, ಅವರೂ ಸಹ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸತತ ವಿಫಲರಾದರು. ಆದರೂ, ಸಹ ಸೆಮಿಫೈನಲ್ ಪಂದ್ಯದಲ್ಲಿ ಅವರನ್ನು ಏಕೆ ಆಡಿಸಲಾಯಿತು. ಅವರ ಬದಲಿಗೆ ಬೇರೆ ಆಟಗಾರರನ್ನು ಆಡಿಸಬಹುದಿತ್ತಲ್ಲ? ಎಂದೂ ಸಹ ಹಲವರು ಕಿಡಿಕಾರುತ್ತಿದ್ದಾರೆ.

ಹಿರಿಯ ಆಟಗಾರರಿಗೆ ಕೋಕ್

ಸದ್ಯಕ್ಕೆ 2023ರಲ್ಲಿ ನಡೆಯುವ ಏಕದಿನ ವಿಶ್ವಕಪ್ ಮೇಲೆ ಭಾರತ ಕಣ್ಣಿಟ್ಟಿದೆ. ಅದಕ್ಕಾಗಿ ಮುಂದಿನ ವರ್ಷದವರೆಗೆ ಸುಮಾರು 25 ಏಕದಿನ ಪಂದ್ಯಗಳನ್ನಾಡಲಿದೆ. ಆದರೆ ತೊಂದರೆ ಇರುವುದು 2024 ರ ಟಿ20 ವಿಶ್ವಕಪ್ ಆಗಿದೆ. ಆ ಸಮಯಕ್ಕೆ ಈ ಬಾರಿ ಆಡಿದ ಹಲವು ಆಟಗಾರರು ಇರುವುದಿಲ್ಲ ಎನ್ನಲಾಗುತ್ತಿದೆ.

2024ರ ವಿಶ್ವಕಪ್‌ ಬಗ್ಗೆ ಈಗಲೇ ಮಾತನಾಡುವುದು ಸರಿಯಲ್ಲ ಎಂದು ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ. ಆದರೂ ಆ ವೇಳೆಗೆ ಹಲವು ಹಿರಿಯ ಆಟಗಾರರಿಗೆ ಕೋಕ್ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿವೆ. ಮುಖ್ಯವಾಗಿ ರೋಹಿತ್ ಶರ್ಮಾ, ಆರ್ ಅಶ್ವಿನ್ ಮತ್ತು ದಿನೇಶ್ ಕಾರ್ತಿಕ್ ಆ ಪಟ್ಟಿಯಲ್ಲಿದ್ದು ವಿರಾಟ್ ಕೊಹ್ಲಿಯವರನ್ನು ಸಹ ಕೈಬಿಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.

ಇನ್ನು ಭಾರತ ತಂಡದ ಆರಂಭಿಕ ಆಟಗಾರರಾಗಿ ಶುಭ್‌ಮನ್ ಗಿಲ್, ಪೃಥ್ವಿ ಶಾ ರನ್ನು ಹೆಚ್ಚು ಆಡಿಸುವ ಬಗ್ಗೆ ಚಿಂತಿಸಲಾಗುತ್ತಿದೆ. ರಿಷಬ್ ಪಂತ್ ಎಡಗೈ ಬ್ಯಾಟ್ಸ್‌ಮನ್ ಆಗಿದ್ದು ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಸದ್ಯಕ್ಕೆ ಕಳಪೆ ಪ್ರದರ್ಶನ ನೀಡಿರುವ ಕೆ.ಎಲ್ ರಾಹುಲ್ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಮುಂದಿನ ಟಿ20 ವಿಶ್ವಕಪ್ ವೇಳೆಗೆ ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸುವ ಕುರಿತು ಚರ್ಚೆಗಳಾಗುತ್ತಿವೆ.

ಪೈಪೋಟಿಯಿಲ್ಲದೆ ಸೋಲೊಪ್ಪಿಕೊಂಡ ಭಾರತ

ನಿರ್ಣಾಯಕ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಭಾರತ ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ 168ರನ್‌ಗಳ ಸವಾಲಿನ ಮೊತ್ತ ಪೇರಿಸಿತ್ತು. ಆದರೆ, ಬೌಲಿಂಗ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ ಪರಿಣಾಮ ಆಂಗ್ಲರು ಒಂದು ವಿಕೆಟ್ ಸಹ ನಷ್ಟವಿಲ್ಲದೆ ಕೇವಲ 16 ಓವರ್ಗಳಲ್ಲಿ ಗುರಿ ತಲುಪಿ ಜಯ ಸಾಧಿಸಿತು. ಈ ಸೋಲಿನಿಂದ ಭಾರತ ತಂಡ ತೀವ್ರ ಮುಖಭಂಗಕ್ಕೆ ಗುರಿಯಾಗಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...