Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್ ಸೋಲು: ತಂಡದ ಆಯ್ಕೆ ಕುರಿತು ಅಪಸ್ವರ, ಹಿರಿಯರಿಗೆ ಕೋಕ್ ಬಗ್ಗೆ ಚಿಂತನೆ

ಟಿ20 ವಿಶ್ವಕಪ್ ಸೋಲು: ತಂಡದ ಆಯ್ಕೆ ಕುರಿತು ಅಪಸ್ವರ, ಹಿರಿಯರಿಗೆ ಕೋಕ್ ಬಗ್ಗೆ ಚಿಂತನೆ

ಮುಂದಿನ ಟಿ20 ವಿಶ್ವಕಪ್ ವೇಳೆಗೆ ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸುವ ಕುರಿತು ಚರ್ಚೆಗಳಾಗುತ್ತಿವೆ.

- Advertisement -
- Advertisement -

ಗುರುವಾರ ಅಡಿಲೇಡ್ ಓವಲ್ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಸೋಲುತ್ತಿದ್ದಂತೆ ತಂಡದ ಆಯ್ಕೆಯ ಬಗ್ಗೆಯೇ ಇದೀಗ ಅಪಸ್ವರ ಕೇಳಿಬರುತ್ತಿದೆ. ಏಕದಿನ ವಿಶ್ವಕಪ್ ಸೇರಿದಂತೆ ಯಾವುದೇ ಪ್ರಮುಖ ಟೂರ್ನಿಗಳಲ್ಲಿ ಭಾರತ ಲೆಗ್ ಸ್ಪಿನ್ನರ್ ಇಲ್ಲದೆ ಕಣಕ್ಕೆ ಇಳಿಯುವುದೇ ಇಲ್ಲ. ಆದರೆ, ಆಸ್ಟ್ರೇಲಿಯಾ ನೆಲದಲ್ಲಿ ಭಾರತ ಒಂದು ಪಂದ್ಯದಲ್ಲೂ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್ ಅವರನ್ನು ಕಣಕ್ಕಿಳಿಸದ ಬಗ್ಗೆ ಹಲವರು ಕಿಡಿಕಾರುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮಾಜಿ ಕ್ರಿಕೆಟಿಗ ಫರೂಕ್ ಇಂಜಿನಿಯರ್, “ನಾನು ಭಾರತ ತಂಡದ ನಾಯಕನಾಗಿದ್ದರೆ ಖಚಿತವಾಗಿ ಎಲ್ಲ ಪಂದ್ಯದಲ್ಲೂ ಯಜುವೇಂದ್ರ ಚಹಲ್ ಅವರನ್ನು ಕಣಕ್ಕಿಳಿಸುತ್ತಿದ್ದೆ. ಆದರೆ, ಆತನನ್ನು ಅಭ್ಯಾಸ ಪಂದ್ಯದಲ್ಲಿ ಆಡಿಸಲಾಯಿತೇ ವಿನಃ ಪ್ರಮುಖ ಪಂದ್ಯಗಳಲ್ಲಿ ಕೈಬಿಡಲಾಗಿತ್ತು. ಭಾರತದ ಸೋಲಿಗೆ ಪರಿಣತ ಲೆಗ್ ಸ್ಪಿನ್ನರ್ ಆಡುವ ಹನ್ನೊಂದರ ಬಳಗದಲ್ಲಿ ಇಲ್ಲದೇ ಇದ್ದುದ್ದೇ ಕಾರಣ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೆ, ವಿಶ್ವಕಪ್‌ಗೆ ಭಾರತ ತಂಡದ ಆಯ್ಕೆಯನ್ನೇ ಅಲ್ಲಗೆಳೆದಿರುವ ಅವರು, “ಯಜುವೇಂದ್ರ ಚಹಲ್ ಮತ್ತು ಯುವ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಇಬ್ಬರೂ ಪ್ರತಿಭಾನ್ವಿತರು. ಈ ಹಿಂದೆ ಅನೇಕ ಪಂದ್ಯಗಳಲ್ಲಿ ಅವರು ತಮ್ಮ ವಿಕೆಟ್ ತೆಗೆಯುವ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಬಿಸಿಸಿಐ ಆಯ್ಕೆ ಮಂಡಳಿ ಈ ಇಬ್ಬರೂ ಬೌಲರ್‌ಗಳನ್ನು ಆಯ್ಕೆ ಮಾಡಬೇಕಿತ್ತು. ಕನಿಷ್ಟ ಒಬ್ಬರನ್ನಾದರೂ ಎಲ್ಲ ಪಂದ್ಯದಲ್ಲಿ ಕಣಕ್ಕಿಳಿಸಬೇಕಾಗಿತ್ತು. ಇಂತಹ ಪ್ರಮಾದಗಳಿಂದಲೇ ಇಂದು ಭಾರತ ತಂಡ ಸವಾಲೊಡ್ಡದೆ ಸೋಲೊಪ್ಪಲು ಕಾರಣವಾಗಿದೆ” ಎಂದು ಫಾರೂಕ್ ಇಂಜಿನಿಯರ್ ಅಸಮಾಧಾನ ಹೊರಹಾಕಿದ್ದಾರೆ.

ಅಶ್ವಿನ್ ಆಯ್ಕೆಯ ಬಗ್ಗೆಯೂ ಪ್ರಶ್ನೆ:

ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಭಾರತದ ಪಾಲಿನ ಅನುಭವಿ ಬೌಲರ್ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಅವರು ಭಾರತದ ನೆಲದಲ್ಲಿ ಸಾಕಷ್ಟು ಯಶಸ್ಸು ಗಳಿಸಿದ್ದಾರೆ ವಿನಃ ವಿದೇಶಿ ನೆಲದಲ್ಲಿ ಅವರ ಸಾಧನೆ ಅಷ್ಟಕ್ಕಷ್ಟೆ. ಇದೇ ಕಾರಣಕ್ಕೆ ಈ ಹಿಂದೆ ಭಾರತ ತಂಡ ಹಲವು ವಿದೇಶಿ ಟೂರ್ನಿಗಳಿಗೆ ಅವರನ್ನು ಫಾರ್ಮ್‌ನಲ್ಲಿ ಇದ್ದಾಗ್ಯೂ ಆಯ್ಕೆ ಮಾಡದೆ ಕೈಬಿಟ್ಟ ಉದಾಹರಣೆಗಳಿವೆ.

ಇನ್ನೂ ಆಸ್ಟ್ರೇಲಿಯಾ ನೆಲದಲ್ಲಿ ಅಶ್ವಿನ್ ಚುಟುಕು ಮಾದರಿ ಕ್ರಿಕೆಟ್‌ನಲ್ಲಿ ಹೇಳಿಕೊಳ್ಳುವಂತಹ ಸಾಧನೆ ಮಾಡಿಲ್ಲ. ಆರು ಪಂದ್ಯಗಳಲ್ಲಿ ಅವರ ಆರು ವಿಕೆಟ್‌ಗಳಲ್ಲಿ ಮೂರು ಜಿಂಬಾಬ್ವೆ ಪಂದ್ಯದಲ್ಲಿ ಬಂದಿವೆ. ಆದರೆ ಅವರ ಎಕಾನಮಿ 8.15 ಇದೆ. ಆದರೂ, ಅವರನ್ನು ಈ ವಿಶ್ವಕಪ್‌ಗೆ ಏಕೆ ಆಯ್ಕೆ ಮಾಡಲಾಯಿತು? ಎಂದು ಹಲವು ಹಿರಿಯ ಕ್ರಿಕೆಟಿಗರು ಸಾಲು ಸಾಲು ಪ್ರಶ್ನೆಗಳನ್ನು ಮುಂದಿಡುತ್ತಿದ್ದಾರೆ.

ಈ ನಡುವೆ ರವೀಂದ್ರ ಜಡೇಜ ಅನುಪಸ್ಥಿತಿಯ ಕಾರಣಕ್ಕೆ ಆಲ್‌ರೌಂಡರ್‌ ಕೋಟಾದ ಅಡಿಯಲ್ಲಿ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಅವರನ್ನೂ ಸಹ ವಿಶ್ವಕಪ್‌ನ ಪಂದ್ಯಗಳಲ್ಲೂ ಕಣಕ್ಕಿಳಿಸಲಾಗಿತ್ತು. ಆದರೆ, ಅವರೂ ಸಹ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸತತ ವಿಫಲರಾದರು. ಆದರೂ, ಸಹ ಸೆಮಿಫೈನಲ್ ಪಂದ್ಯದಲ್ಲಿ ಅವರನ್ನು ಏಕೆ ಆಡಿಸಲಾಯಿತು. ಅವರ ಬದಲಿಗೆ ಬೇರೆ ಆಟಗಾರರನ್ನು ಆಡಿಸಬಹುದಿತ್ತಲ್ಲ? ಎಂದೂ ಸಹ ಹಲವರು ಕಿಡಿಕಾರುತ್ತಿದ್ದಾರೆ.

ಹಿರಿಯ ಆಟಗಾರರಿಗೆ ಕೋಕ್

ಸದ್ಯಕ್ಕೆ 2023ರಲ್ಲಿ ನಡೆಯುವ ಏಕದಿನ ವಿಶ್ವಕಪ್ ಮೇಲೆ ಭಾರತ ಕಣ್ಣಿಟ್ಟಿದೆ. ಅದಕ್ಕಾಗಿ ಮುಂದಿನ ವರ್ಷದವರೆಗೆ ಸುಮಾರು 25 ಏಕದಿನ ಪಂದ್ಯಗಳನ್ನಾಡಲಿದೆ. ಆದರೆ ತೊಂದರೆ ಇರುವುದು 2024 ರ ಟಿ20 ವಿಶ್ವಕಪ್ ಆಗಿದೆ. ಆ ಸಮಯಕ್ಕೆ ಈ ಬಾರಿ ಆಡಿದ ಹಲವು ಆಟಗಾರರು ಇರುವುದಿಲ್ಲ ಎನ್ನಲಾಗುತ್ತಿದೆ.

2024ರ ವಿಶ್ವಕಪ್‌ ಬಗ್ಗೆ ಈಗಲೇ ಮಾತನಾಡುವುದು ಸರಿಯಲ್ಲ ಎಂದು ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ. ಆದರೂ ಆ ವೇಳೆಗೆ ಹಲವು ಹಿರಿಯ ಆಟಗಾರರಿಗೆ ಕೋಕ್ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿವೆ. ಮುಖ್ಯವಾಗಿ ರೋಹಿತ್ ಶರ್ಮಾ, ಆರ್ ಅಶ್ವಿನ್ ಮತ್ತು ದಿನೇಶ್ ಕಾರ್ತಿಕ್ ಆ ಪಟ್ಟಿಯಲ್ಲಿದ್ದು ವಿರಾಟ್ ಕೊಹ್ಲಿಯವರನ್ನು ಸಹ ಕೈಬಿಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.

ಇನ್ನು ಭಾರತ ತಂಡದ ಆರಂಭಿಕ ಆಟಗಾರರಾಗಿ ಶುಭ್‌ಮನ್ ಗಿಲ್, ಪೃಥ್ವಿ ಶಾ ರನ್ನು ಹೆಚ್ಚು ಆಡಿಸುವ ಬಗ್ಗೆ ಚಿಂತಿಸಲಾಗುತ್ತಿದೆ. ರಿಷಬ್ ಪಂತ್ ಎಡಗೈ ಬ್ಯಾಟ್ಸ್‌ಮನ್ ಆಗಿದ್ದು ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಸದ್ಯಕ್ಕೆ ಕಳಪೆ ಪ್ರದರ್ಶನ ನೀಡಿರುವ ಕೆ.ಎಲ್ ರಾಹುಲ್ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಮುಂದಿನ ಟಿ20 ವಿಶ್ವಕಪ್ ವೇಳೆಗೆ ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸುವ ಕುರಿತು ಚರ್ಚೆಗಳಾಗುತ್ತಿವೆ.

ಪೈಪೋಟಿಯಿಲ್ಲದೆ ಸೋಲೊಪ್ಪಿಕೊಂಡ ಭಾರತ

ನಿರ್ಣಾಯಕ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಭಾರತ ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ 168ರನ್‌ಗಳ ಸವಾಲಿನ ಮೊತ್ತ ಪೇರಿಸಿತ್ತು. ಆದರೆ, ಬೌಲಿಂಗ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ ಪರಿಣಾಮ ಆಂಗ್ಲರು ಒಂದು ವಿಕೆಟ್ ಸಹ ನಷ್ಟವಿಲ್ಲದೆ ಕೇವಲ 16 ಓವರ್ಗಳಲ್ಲಿ ಗುರಿ ತಲುಪಿ ಜಯ ಸಾಧಿಸಿತು. ಈ ಸೋಲಿನಿಂದ ಭಾರತ ತಂಡ ತೀವ್ರ ಮುಖಭಂಗಕ್ಕೆ ಗುರಿಯಾಗಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...