Homeರಾಷ್ಟ್ರೀಯಬೆಂಗಳೂರು ಕಾರ್ಯಕ್ರಮ ರದ್ದು - ಪ್ರೇಕ್ಷಕರ ವಿಡಿಯೊ ಬಿಡುಗಡೆ ಮಾಡಿದ ಹಾಸ್ಯನಟ ವೀರ್ ದಾಸ್!

ಬೆಂಗಳೂರು ಕಾರ್ಯಕ್ರಮ ರದ್ದು – ಪ್ರೇಕ್ಷಕರ ವಿಡಿಯೊ ಬಿಡುಗಡೆ ಮಾಡಿದ ಹಾಸ್ಯನಟ ವೀರ್ ದಾಸ್!

- Advertisement -
- Advertisement -

ಬೆಂಗಳೂರಿನಲ್ಲಿ ಗುರುವಾರ ನಡೆಯಬೇಕಿದ್ದ ಸ್ಟ್ಯಾಂಡ್‌ಅಪ್ ಕಾಮೇಡಿಯನ್‌ ವೀರ್‌‌ ದಾಸ್ ಅವರ ಕಾರ್ಯಕ್ರಮ ಮುಂದೂಡಿದ ನಂತರ ಅವರು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದನ್ನು ಹಂಚಿಕೊಂಡಿದ್ದು, ತನ್ನ ಕಾರ್ಯಕ್ರಮವೂ ಯಾವುದೇ ಸಮುದಾಯ, ನಾಯಕ, ಧರ್ಮದ ವಿರುದ್ಧ ಅಲ್ಲ ಎಂದು ಹೇಳಿದ್ದಾರೆ.

ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುತ್ತದೆ ಎಂದು ಹೇಳಿ ಈ ವಾರದ ಆರಂಭದಲ್ಲಿ ಬಲಪಂಥೀಯ ಸಂಘಟನೆಯಾದ ಹಚ್‌ಜೆಎಸ್‌‌ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಒತ್ತಾಯಿಸಿ, ಅವರ ವಿರುದ್ಧ ದೂರು ನೀಡಿತ್ತು. ಇದರ ನಂತರ ಅವರ ಕಾರ್ಯಕ್ರಮ ರದ್ದಾಗಿರುವ ಬಗ್ಗೆ ವರದಿಯಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ವೀರ್‌ ದಾಸ್ “ಅನಿವಾರ್ಯವಾಗಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ” ಎಂದು ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುರುವಾರದಂದು ಬೆಂಗಳೂರಿನ ಮಲ್ಲೇಶ್ವರಂನ ಚೌಡಯ್ಯ ಸ್ಮಾರಕ ಸಭಾಂಗಣದಲ್ಲಿ ವೀರ್‌ ದಾಸ್ ಅವರ ಕಾರ್ಯಕ್ರಮ ನಡೆಯುವುದಾಗಿ ಘೋಷಣೆಯಾಗಿತ್ತು. ಈ ಬಗ್ಗೆ ಪ್ರತಿಕ್ರಿಸಿದ ಅವರು, “ನಾವು ಬೆಂಗಳೂರು ಕಾರ್ಯಕ್ರಮವನ್ನು ಮುಂದೂಡುತ್ತಿದ್ದೇವೆ. ಹೊಸ ವಿವರಗಳು ಮತ್ತು ದಿನಾಂಕಗಳು ಶೀಘ್ರದಲ್ಲೇ ಘೋಷಿಸುತ್ತೇವೆ. ಅನಾನುಕೂಲತೆಗಾಗಿ ಕ್ಷಮಿಸಿ” ಎಂದು ಇನ್ಸ್‌ಟ್ರಾಗ್ರಾಂನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಕುನಾಲ್, ಮುನಾವರ್ ನಿಮಗಾಗಿ ಒಂದು ಶೋ ಏರ್ಪಡಿಸುತ್ತೇನೆ, ಆದರೆ ಒಂದೇ ಷರತ್ತು: ದಿಗ್ವಿಜಯ್ ಸಿಂಗ್

ಇದರ ನಂತರ ಅವರು ಟ್ವಿಟರ್‌ನಲ್ಲಿ ಒಂದು ವಿಡಿಯೊ ಪೋಸ್ಟ್‌ ಮಾಡಿದ್ದು, “ಯಾವುದಕ್ಕೂಇರಲಿ ಎಂದು ನನ್ನ ಶೋ ಒಂದರ ನಂತರ ನಾನು ಈ ವೀಡಿಯೊವನ್ನು ಮಾಡಿದ್ದೇನೆ. ಮಾಧ್ಯಮದ ಕನ್ನಡಕಗಳಲ್ಲಿ ಅಥವಾ ಮುಖ್ಯಾಂಶಗಳಿಗೆ ಬಳಸುವುದರಲ್ಲಿ ನನಗೆ ಆಸಕ್ತಿಯಿಲ್ಲ. ನಾನೊಬ್ಬ ಕಲಾವಿದ. ನಾನು ಸುದ್ದಿಯಲ್ಲಿ ಇರಬಾರದು. ನನ್ನ ವಿಷಯದ ಬಗ್ಗೆ ಅನೇಕ ಊಹೆಗಳನ್ನು ಮಾಡಲಾಗಿದೆ. ನನ್ನ ಕಲೆ ಮತ್ತು ನನ್ನ ಪ್ರೇಕ್ಷಕರು ನನ್ನ ಪರವಾಗಿ ಮಾತನಾಡುತ್ತಾರೆ ಎಂದು ನಾನು ನಂಬುತ್ತೇನೆ” ಎಂದು ಹೇಳಿದ್ದಾರೆ.

ವಿಡಿಯೊದಲ್ಲಿ ಅವರು ತಮ್ಮ ಪ್ರಶ್ನೆಗಳಿಗೆ “ಹೌದು” ಅಥವಾ “ಇಲ್ಲ” ಎಂದು ಒಂದೇ ವಾಕ್ಯದಲ್ಲಿ ಉತ್ತರಿಸುವಂತೆ ಪ್ರೇಕ್ಷಕರನ್ನು ಕೇಳಿದ್ದಾರೆ. “ಇದನ್ನು ಮಾಡಲು ನಾನು ಯಾರಿಗೂ ಹಣ ನೀಡಿಲ್ಲ. ಇವರಲ್ಲಿ ಯಾರೂ ಭಯೋತ್ಪಾದಕರು ಅಥವಾ ಪಾಕಿಸ್ತಾನಿ ಏಜೆಂಟ್‌ಗಳಲ್ಲ” ಎಂದು ಅವರು ಹೇಳುತ್ತಾರೆ.

“ನಾವು ಈ ರಾತ್ರಿ ಇಲ್ಲಿ ಯಾವುದಾದರೂ ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಿಕೊಂಡಿದ್ದೇವೆಯೇ? ನಾವು ಇಂದು ರಾತ್ರಿ ಇಲ್ಲಿ ಯಾವುದೇ ನಿರ್ದಿಷ್ಟ ಸರ್ಕಾರ ಅಥವಾ ನಾಯಕನನ್ನು ಗುರಿಯಾಗಿಸಿಕೊಂಡಿದ್ದೇವೆಯೇ? ಈ ಕಾರ್ಯಕ್ರಮವೂ ಭಾರತವನ್ನು ಅವಮಾನಿಸಿದೆಯ? ನೀವು ಭಾರತೀಯರಾಗಿರಲು ನಾಚಿಕೆಪಡುವಂತೆ ಮಾಡಿದೆಯೇ?” ಎಂದು ಅವರು ಕೇಳುತ್ತಾರೆ. ಈ ವೇಳೆ ಪ್ರೇಕ್ಷಕರು ಇಲ್ಲ ಎಂದು ಹೇಳುತ್ತಾರೆ.

ಇದನ್ನೂ ಓದಿ: ಮುನವ್ವರ್ ಫಾರೂಕಿ ಮತ್ತು ಮಾಬ್

“ಈ ಪ್ರದರ್ಶನವು ನಿಮಗೆ ಭಾರತೀಯರಾಗಿರುವುದಕ್ಕೆ ಹೆಮ್ಮೆ ತಂದಿದೆಯೇ?’’ ಅವರು ಕೇಳುತ್ತಾರೆ. ಅದಕ್ಕೆ ಪ್ರೇಕ್ಷಕರು ‘ಹೌದು’ ಎಂದು ಕಿರುಚುತ್ತಾರೆ. ಇದರ ನಂತರ ವೀರ್‌ ದಾಸ್ ಅವರು ‘ಕೇವಲ ಪ್ರೇಕ್ಷಕರನ್ನು ನಂಬಿ’ ಎಂದು ವೀಡಿಯೊವನ್ನು ಮುಗಿಸುತ್ತಾರೆ.

ಇದನ್ನೂ ಓದಿ: ಪುನೀತ್‌ ರಾಜ್‌ಕುಮಾರ್‌‌ ಸಂಸ್ಥೆಯ ದೇಣಿಗೆಗಾಗಿ ಆಯೋಜಿಸಿದ್ದ ಕಾರ್ಯಕ್ರಮ ರದ್ದುಗೊಳಿಸಿದ ಪೊಲೀಸರು

ಬೆಂಗಳೂರಿನಲ್ಲಿ ಸ್ಟ್ಯಾಂಡ್-ಅಪ್ ಕಾಮೆಡಿ ಕಾರ್ಯಕ್ರಮವನ್ನು ರದ್ದುಗೊಳಿಸಿರುವುದು ಇದೇ ಮೊದಲಲ್ಲ. ಮುನಾವರ್‌ ಫಾರೂಕಿ ಅವರ ಎರಡು ಕಾರ್ಯಕ್ರಮಗಳು ಮತ್ತು ಕುನಾಲ್ ಕಮ್ರಾ ಅವರು ಒಂದು ಕಾರ್ಯಕ್ರಮ ಈ ಹಿಂದೆ ರದ್ದುಗೊಳಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...