Homeಮುಖಪುಟಗುಜರಾತ್ ಚುನಾವಣೆ: ನಗರಗಳಲ್ಲಿ ಪ್ರಬಲವಾಗಿರುವ ಬಿಜೆಪಿ ಮತ ಕಬಳಿಸಲಿದೆಯೇ ಆಪ್?

ಗುಜರಾತ್ ಚುನಾವಣೆ: ನಗರಗಳಲ್ಲಿ ಪ್ರಬಲವಾಗಿರುವ ಬಿಜೆಪಿ ಮತ ಕಬಳಿಸಲಿದೆಯೇ ಆಪ್?

2017ರ ಚುನಾವಣೆಯಲ್ಲಿ ನಗರಗಳಲ್ಲಿನ 84 ಕ್ಷೇತ್ರಗಳಲ್ಲಿ ಬಿಜೆಪಿ 63 ಅನ್ನು ಗೆದ್ದುಕೊಂಡಿತ್ತು.

- Advertisement -
- Advertisement -

ಗುಜರಾತ್ ಚುನಾವಣೆಯು ಡಿಸೆಂಬರ್ 1 ಮತ್ತು 5ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಘೋಷಣೆಯಾಗಲಿದೆ. ನರೇಂದ್ರ ಮೋದಿ, ಅಮಿತ್ ಶಾ, ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿಯವರ ತವರು ರಾಜ್ಯವಾದ ಕಾರಣಕ್ಕೂ ಈ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.

1995ರವರೆಗೆ ಗುಜರಾತ್ ರಾಜ್ಯವನ್ನು ಕಾಂಗ್ರೆಸ್, ಸಂಸ್ಥಾ ಕಾಂಗ್ರೆಸ್ ಮತ್ತು ಜನತಾದಳ ಪಕ್ಷಗಳು ಆಳಿದ್ದರೆ 1995ರಿಂದೀಚೆಗೆ ನಡೆದ 6 ಚುನಾವಣೆಗಳಲ್ಲಿ ಬಿಜೆಪಿ ಸತತವಾಗಿ ಗೆದ್ದು ಅಧಿಕಾರದಲ್ಲಿದೆ. ಇತ್ತೀಚಿನ ವರ್ಷಗಳಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆಯೆ ಅಧಿಕಾರಕ್ಕಾಗಿ ಪೈಪೋಟಿ ನಡೆಯುತ್ತಿತ್ತು. ಆದರೆ ಮುಂದಿನ ತಿಂಗಳು ನಡೆಯುವ ಚುನಾವಣೆಯಲ್ಲಿ ಆಪ್ ಕೂಡ ಬಿರುಸಿನ ಪೈಪೋಟಿ ನೀಡಲು ಮುಂದಾಗಿದೆ. ಅದಕ್ಕೆ ಇಂಬು ಕೊಡುವಂತೆ ಕೆಲ ಸಮೀಕ್ಷೆಗಳು ಈ ಬಾರಿಯೂ ಬಿಜೆಪಿ ಬಹುಮತ ಸಾಧಿಸಲಿದ್ದು, ಆಪ್ ಎರಡನೇ ಸ್ಥಾನ ಪಡೆಯುತ್ತದೆ ಮತ್ತು ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ತಳ್ಳಲ್ಪಡುತ್ತದೆ ಎಂದು ಭವಿಷ್ಯ ನುಡಿದಿವೆ. ಹಾಗಾಗಿ ಗುಜರಾತ್ ಚುನಾವಣೆ ಬಗೆಗಿನ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

2017ರ ಚುನಾವಣಾ ಮೆಲುಕು

182 ವಿಧಾನಸಭಾ ಕ್ಷೇತ್ರಗಳಿರುವ ಗುಜರಾತ್‌ನಲ್ಲಿ ಸರಳ ಬಹುಮತಕ್ಕೆ 93 ಸ್ಥಾನಗಳ ಅಗತ್ಯವಿದೆ. 2017ರ ಕೊನೆಯ ಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಕಾಳಗ ನಡೆದು ಕೊನೆಗೆ 99 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಅಧಿಕಾರ ಉಳಿಸಿಕೊಂಡಿತು. ಅದು 2012ರ ಚುನಾವಣೆಗೆ ಹೋಲಿಸಿಕೊಂಡರೆ 16 ಸೀಟುಗಳನ್ನು ಕಳೆದುಕೊಂಡರೂ ಆಡಳಿತ ವಿರೋಧಿ ಅಲೆಯ ನಡುವೆಯೂ ಸತತ ಆರನೇ ಬಾರಿಗೆ ಅಧಿಕಾರ ದಕ್ಕಿಸಿಕೊಂಡಿದ್ದು ದಾಖಲೆಯೇ ಸರಿ. ಕಾಂಗ್ರೆಸ್ ಅಧಿಕಾರದ ಹತ್ತಿರಕ್ಕೆ ಬಂದು (77 ಸ್ಥಾನಗಳು) ಎಡವಿತು. ಅದು 16 ಹೆಚ್ಚುವರಿ ಸೀಟುಗಳನ್ನು ಗೆದ್ದುಕೊಂಡರೂ ಸಹ ಸರಳ ಬಹುಮತ ತಲುಪಲು ಸಾಧ್ಯವಾಗಲಿಲ್ಲ.

2017ರ ಚುನಾವಣೆಯ ಸಮಯದಲ್ಲಿ ಊನಾ ದಲಿತ ಚಳವಳಿಯ ನಾಯಕ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ್ದರೆ, ಪಾಟೀದಾರ್ ಮೀಸಲಾತಿಗಾಗಿನ ಹೋರಾಟಗಾರ ಹಾರ್ದಿಕ್ ಪಟೇಲ್ ಮತ್ತು ಹಿಂದುಳಿದ ವರ್ಗದ ಯುವ ನಾಯಕ ಅಲ್ಪೇಶ್ ಠಾಕೂರ್ ಕಾಂಗ್ರೆಸ್ ಸೇರಿದ್ದರು. ನೋಟು ಅಮಾನ್ಯೀಕರಣ ಮತ್ತು ಜಿಎಸ್‌ಟಿ ವಿರುದ್ಧ ಸೂರತ್‌ನ ವ್ಯಾಪಾರಿ ಸಮುದಾಯದಲ್ಲಿ ಆಕ್ರೋಶವಿತ್ತು. ಆದರೂ ಕಾಂಗ್ರೆಸ್ ಗೆಲ್ಲಲಾಗಲಿಲ್ಲ. ಚುನಾವಣೆಗೂ ಮುನ್ನ ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ನರೇಂದ್ರ ಮೋದಿಯವರನ್ನು ನೀಚ ಮನುಷ್ಯ ಎಂದು ಕರೆದಿದ್ದುದು ಕಾಂಗ್ರೆಸ್‌ಗೆ ಮುಳುವಾಯಿತು ಎಂಬ ವಿಶ್ಲೇಷಣೆಗಳು ಕೇಳಿಬಂದಿದ್ದವು.

2022ರ ಸಮೀಕ್ಷೆಗಳು

ಲೋಕನೀತಿ ಸಿಎಸ್‌ಡಿಎಸ್ ಸಮೀಕ್ಷೆಯ ಪ್ರಕಾರ ಗುಜರಾತ್‌ನ ಮೂರನೇ ಒಂದರಷ್ಟು ಜನಕ್ಕೆ ಮಾತ್ರ ಸರ್ಕಾರದ ವಿರುದ್ಧ ಅಸಮಾಧಾನವಿದ್ದು, ಮೂರನೇ ಎರಡರಷ್ಟು ಜನರು (31%) ಬಿಜೆಪಿ ಆಡಳಿತದಿಂದ ತೃಪ್ತರಾಗಿದ್ದೇವೆ ಎಂದಿದ್ದಾರೆ. 2017ರ ಸಮೀಕ್ಷೆಯಲ್ಲಿ ಕೇವಲ ಶೇ.8ರಷ್ಟು ಜನರಿಗೆ ಮಾತ್ರ ಬಿಜೆಪಿ ಆಡಳಿತದ ಬಗ್ಗೆ ಸಕಾರಾತ್ಮಕ ಅಭಿಪ್ರಾಯವಿತ್ತು. ಮೇಲ್ವರ್ಗ ಮತ್ತು ಮಧ್ಯಮ ವರ್ಗ ಬಿಜೆಪಿ ಜೊತೆಗಿದ್ದರೆ, ಕೆಳ ಮತ್ತು ಬಡತನ ರೇಖೆಯಿಂದ ಕೆಳಗಿನ ಬಡಜನರು ಕಾಂಗ್ರೆಸ್ ಕಡೆಗಿದ್ದಾರೆ ಎಂದು ಸಮೀಕ್ಷೆ ಹೇಳಿದೆ.

ಇನ್ನು ಗುಜರಾತ್‌ಗೆ ಬಿಜೆಪಿ, ಕಾಂಗ್ರೆಸ್ ಹೊರತುಪಡಿಸಿ ಮೂರನೇ ಪರ್ಯಾಯ ಪಕ್ಷದ ಅಗತ್ಯವಿದೆಯೇ ಎಂಬ ಪ್ರಶ್ನೆಗೆ ಶೇ.62ರಷ್ಟು ಜನರು ಸಮ್ಮತಿ ಸೂಚಿಸಿದ್ದಾರೆ. 24% ಜನರು ಬೇಡ ಎಂದರೆ 15% ಜನರು ಉತ್ತರಿಸಿಲ್ಲ. ಇದು ಚುನಾವಣೆ ಮೇಲೆ ಗಮನಾರ್ಹ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ.

ಗುಜರಾತ್ ನಗರಗಳಲ್ಲಿ ಬಿಜೆಪಿ ಪ್ರಾಬಲ್ಯ- ಗ್ರಾಮೀಣದಲ್ಲಿ ಕಾಂಗ್ರೆಸ್ ಹಿಡಿತ

ಗುಜರಾತ್ ಹೆಚ್ಚು ನಗರೀಕೃತ ರಾಜ್ಯವಾಗಿದೆ. ರಾಜ್ಯದಲ್ಲಿ ಶೇ.43ರಷ್ಟು ನಗರನಿವಾಸಿಗಳು ಎಂದು 2011ರ ಜನಗಣತಿ ಹೇಳುತ್ತದೆ. ಗುಜರಾತ್‌ನ 182 ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು 84 ಕ್ಷೇತ್ರಗಳು ನಗರ, ಪಟ್ಟಣ ಪ್ರದೇಶಗಳಲ್ಲಿದ್ದರೆ, ಉಳಿದ 98 ಕ್ಷೇತ್ರಗಳು ಗ್ರಾಮೀಣ ಭಾಗದಲ್ಲಿವೆ. ಇತ್ತೀಚಿನ ಚುನಾವಣೆಗಳಲ್ಲಿ ನಗರ ಭಾಗದಲ್ಲಿ ಬಿಜೆಪಿ ಹಿಡಿತವಿದ್ದರೆ ಕಾಂಗ್ರೆಸ್ ಗ್ರಾಮೀಣ ಭಾಗದಲ್ಲಿ ಪ್ರಾಬಲ್ಯ ಸಾಧಿಸಿದೆ.

2017ರ ಚುನಾವಣೆಯನ್ನು ನೋಡುವುದಾದರೆ ನಗರಗಳಲ್ಲಿನ 84 ಕ್ಷೇತ್ರಗಳಲ್ಲಿ ಬಿಜೆಪಿ 63 ಅನ್ನು ಗೆದ್ದುಕೊಂಡಿತ್ತು. ಆದರೆ ಗ್ರಾಮೀಣ ಭಾಗದಲ್ಲಿನ 98 ಕ್ಷೇತ್ರಗಳಲ್ಲಿ 36 ಸ್ಥಾನಗಳಿಗೆ ಸೀಮಿತಗೊಂಡಿತ್ತು. ಅದೇ ರೀತಿ ಕಾಂಗ್ರೆಸ್ ಪಕ್ಷವು ನಗರ ಭಾಗದಲ್ಲಿ ಕೇವಲ 20 ಸ್ಥಾನಗಳಲ್ಲಿ ಗೆಲುವು ಕಂಡರೆ, ಗ್ರಾಮೀಣ ಭಾಗದಲ್ಲಿ 57 ಕ್ಷೇತ್ರಗಳಲ್ಲಿ ಪ್ರಾಬಲ್ಯ ಮೆರೆದಿತ್ತು.

ಆಪ್ ಪ್ರವೇಶದಿಂದ ಯಾರಿಗೆ ಲಾಭ?

2017ರ ಚುನಾವಣೆಯಲ್ಲಿ ಆಪ್ ಗುಜರಾತ್‌ನಲ್ಲಿ ಗಮನ ಸೆಳೆಯಲು ವಿಫಲವಾಗಿತ್ತು. ಆದರೆ ದೆಹಲಿ ನಂತರ ಪಂಜಾಬ್‌ನಲ್ಲಿ ಭಾರೀ ಬಹುಮತದೊಂದಿಗೆ ಅಧಿಕಾರ ಹಿಡಿದಿರುವ ಆಮ್ ಆದ್ಮಿ ಪಕ್ಷ ಸದ್ಯ ಗುಜರಾತ್ ಮೇಲೆ ಹೆಚ್ಚು ಗಮನ ಹರಿಸಿದೆ. ದೊಡ್ಡದೊಡ್ಡ ರ‍್ಯಾಲಿಗಳನ್ನು ನಡೆಸುತ್ತಿದ್ದು ಈಗಾಗಲೇ 118 ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಮಾಧ್ಯಮಗಳು ಸಹ ಆಪ್ ಪಕ್ಷಕ್ಕೆ ಸಾಕಷ್ಟು ಪ್ರಚಾರ ನೀಡಿವೆ. ಕೆಲ ಸರ್ವೆಗಳು ಆಪ್ 22% ಮತಗಳೊಂದಿಗೆ ಕಾಂಗ್ರೆಸ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದು ಮುಖ್ಯ ವಿರೋಧ ಪಕ್ಷವಾಗಲಿದೆ ಎಂದಿವೆ. ಹಾಗಾಗಿ ಆಪ್ ಮೇಲೆ ಎಲ್ಲರ ಕಣ್ಣಿದೆ.

ಮಧ್ಯಮ ವರ್ಗ ಮತ್ತು ನಗರ ಕೇಂದ್ರಿತವಾದ ಆಮ್ ಆದ್ಮಿ ಪಕ್ಷವು ಬಿಜೆಪಿ ಮತಬ್ಯಾಂಕ್‌ಗೆ ಕೈಹಾಕಲಿದೆ ಎಂದು ಗುಜರಾತ್ ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ. “ಆಪ್‌ಗೆ ಗ್ರಾಮೀಣ ಭಾಗದಲ್ಲಿ ಯಾವುದೇ ನೆಲೆಯಿಲ್ಲ. ಅದು ಏನಿದ್ದರೂ ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಗೆಲ್ಲಲಾಗದ ನಗರ ಮತ್ತು ಅರೆ ನಗರದ 66 ಕ್ಷೇತ್ರಗಳಲ್ಲಿ ಬಿಜೆಪಿಗೆ ತಲೆನೋವಾಗಲಿದೆ. ಆಡಳಿತ ವಿರೋಧಿ ಅಲೆ ಗಗನಕ್ಕೇರಿದ್ದು ಜನರು ಬಿಜೆಪಿಯ ದುರಾಡಳಿತದಿಂದ ಬಸವಳಿದಿದ್ದಾರೆ” ಎಂದು ಕಾಂಗ್ರೆಸ್ ಮುಖಂಡ ಪರೇಶ್ ಧಾನನಿ ಹೇಳಿದ್ದಾರೆ. ಆಪ್ ನಗರ ಪ್ರದೇಶಗಳಲ್ಲಿ ಒಂದಷ್ಟು ಮತ ಗಳಿಸುತ್ತದೆಯೇ ಹೊರತು ಅದು ಅಸೆಂಬ್ಲಿ ಸೀಟುಗಳನ್ನು ಗೆಲ್ಲುವುದಿಲ್ಲ ಎಂದು ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಜಿಗ್ನೇಶ್ ಮೇವಾನಿ ಅಭಿಪ್ರಾಯ ಪಡುತ್ತಾರೆ.

2017ರ ಚುನಾವಣೆಯಲ್ಲಿ ಬಿಜೆಪಿ 49.1% ಮತ ಗಳಿಸಿದರೆ ಕಾಂಗ್ರೆಸ್ 41.4% ಮತ ಗಳಿಸಿತ್ತು. ಆಪ್ ಕೇವಲ 0.10% ಮತಗಳನ್ನಷ್ಟೆ ಗಳಿಸಿತ್ತು. ಅದು ಈ ಬಾರಿ ತನ್ನ ಮತ ಪ್ರಮಾಣವನ್ನು ಎಷ್ಟು ಹೆಚ್ಚಿಸಿಕೊಳ್ಳುತ್ತದೆ ಎನ್ನುವುದರ ಮೇಲೆ ಗುಜರಾತ್‌ನಲ್ಲಿ ಯಾರು ಬಹುಮತ ಗಳಿಸುತ್ತಾರೆ ಎನ್ನುವುದು ನಿರ್ಧಾರವಾಗಲಿದೆ.

ಇದನ್ನೂ ಓದಿ: ಹಿಮಾಚಲ ಪ್ರದೇಶ ಚುನಾವಣೆ: ಬಿಜೆಪಿ ವಿರುದ್ಧ ಸಿಡಿಮಿಡಿಗೊಂಡಿರುವ ಸೇಬು ಬೆಳೆಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...