Homeಮುಖಪುಟಹೈಕೋರ್ಟ್‌ ನೀಡಿದ್ದ ಶಿಕ್ಷೆ ಸುಪ್ರಿಂನಿಂದ ಅಮಾನತು; ಆದರೂ ಜೈಲಿನಲ್ಲೆ ಉಳಿಯಲಿರುವ ಹೋರಾಟಗಾರ ಸವುಕ್ಕು ಶಂಕರ್‌!

ಹೈಕೋರ್ಟ್‌ ನೀಡಿದ್ದ ಶಿಕ್ಷೆ ಸುಪ್ರಿಂನಿಂದ ಅಮಾನತು; ಆದರೂ ಜೈಲಿನಲ್ಲೆ ಉಳಿಯಲಿರುವ ಹೋರಾಟಗಾರ ಸವುಕ್ಕು ಶಂಕರ್‌!

- Advertisement -
- Advertisement -

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತಮಿಳು ಭಾಷೆಯ ಖ್ಯಾತ ಯೂಟ್ಯೂಬರ್‌‌, ಹೋರಾಟಗಾರ ಸವುಕ್ಕು ಶಂಕರ್‌ಗೆ ಮದ್ರಾಸ್ ಹೈಕೋರ್ಟ್‌ ನೀಡಿದ್ದ ಜೈಲು ಶಿಕ್ಷೆಯನ್ನು ಶುಕ್ರವಾರ ಸುಪ್ರಿಂಕೋರ್ಟ್‌ ಅಮಾನತುಗೊಳಿದೆ. ಅದಾಗಿಯೂ, ಚೆನ್ನೈ ಕೇಂದ್ರ ಅಪರಾಧ ವಿಭಾಗದ ಸೈಬರ್ ಕ್ರೈಂ ವಿಭಾಗ 2020 ಮತ್ತು 2021 ರಲ್ಲಿ ದಾಖಲಾದ ಪ್ರಕರಣಗಳಿಗಾಗಿ ಅವರನ್ನು ಮತ್ತೆ ಬಂಧಿಸಿದೆ. ಗುರುವಾರ ಕಡಲೂರು ಕೇಂದ್ರ ಕಾರಾಗೃಹದಲ್ಲಿ ಸೈಬರ್ ಕ್ರೈಂ ವಿಭಾಗದ ಅಧಿಕಾರಿಗಳು ಶಂಕರ್ ಅವರಿಗೆ ಬಂಧನದ ಸೂಚನೆಯನ್ನು ನೀಡಿದ್ದರು.

ಚೆನ್ನೈ ಸೆಂಟ್ರಲ್ ಕ್ರೈಂ ಬ್ರಾಂಚ್‌ನ ಸೈಬರ್ ಕ್ರೈಂ ವಿಭಾಗವು ಶಂಕರ್ ವಿರುದ್ಧ ನಾಲ್ಕು ಹೊಸ ಪ್ರಕರಣಗಳನ್ನು ದಾಖಲಿಸಿದೆ ಎಂದು ನ್ಯೂಸ್ ಮಿನಿಟ್‌ ವರದಿ ಹೇಳಿದೆ. ನಾಲ್ಕರಲ್ಲಿ ಮೂರು ಪ್ರಕರಣಗಳು 2020 ರಲ್ಲಿ ದಾಖಲಾಗಿದ್ದು, ಒಂದು ಪ್ರಕರಣವು 2021 ರಲ್ಲಿ ದಾಖಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2020 ರಲ್ಲಿ ದಾಖಲಾದ ಒಂದು ಪ್ರಕರಣದಲ್ಲಿ, ಐಪಿಸಿ 504, 505 (1) (ಬಿ) ಮತ್ತು 505(2); ಮತ್ತು ಇತರ ಎರಡು ಪ್ರಕರಣಗಳನ್ನು IPC 153 ಮತ್ತು 505(1)(b) ಅಡಿಯಲ್ಲಿ ದಾಖಲಿಸಲಾಗಿದೆ. 2021 ರ ಪ್ರಕರಣವನ್ನು ಸರ್ಕಾರಿ ರಹಸ್ಯ ಕಾಯಿದೆಯ ಸೆಕ್ಷನ್ 5(1)(ಎ), 5(1)(ಡಿ) ಮತ್ತು 5(2) ಅಡಿಯಲ್ಲಿ ದಾಖಲಿಸಲಾಗಿದೆ.

ಇದನ್ನೂ ಓದಿ: ‘ನ್ಯಾಯಾಂಗ ನಿಂದನೆ’: ಹೋರಾಟಗಾರ ಸವುಕ್ಕು ಶಂಕರ್‌‌ಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ಮದ್ರಾಸ್ ಹೈಕೋರ್ಟ್‌

ಈ ನಾಲ್ಕು ಪ್ರಕರಣಗಳ ಅಡಿಯಲ್ಲಿ ಶಂಕರ್‌ ಅವರನ್ನು 10 ನಿಮಿಷಗಳ ಅವಧಿಯಲ್ಲಿ ಬಂಧಿಸಲಾಗಿದೆ. ಆ ವೇಳೆ ಅವರು ಇನ್ನೂ ಕಡಲೂರು ಕೇಂದ್ರ ಕಾರಾಗೃಹದಲ್ಲಿದ್ದರು. ಗುರುವಾರ ಸಂಜೆ 4.25 ರಿಂದ 4.35 ರ ಸುಮಾರಿಗೆ ಈ ಎಲ್ಲಾ ಪ್ರಕರಣಗಳಲ್ಲಿ ಅವರ ಬಂಧನ ನಡೆದಿರುವ ಬಗ್ಗೆ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ.

ನ್ಯಾಯಂಗ ನಿಂದನೆ ಪ್ರಕರಣದಲ್ಲಿ ಮದ್ರಾಸ್ ಹೈಕೋರ್ಟ್ ಆದೇಶದ ವಿರುದ್ಧ ಶಂಕರ್ ಅವರು ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ನಿಗದಿಪಡಿಸುವ ಒಂದು ದಿನದ ಮುನ್ನ ಈ ಬೆಳವಣಿಗೆ ನಡೆದಿದೆ. ಮದ್ರಾಸ್ ಹೈಕೋರ್ಟಿನ ಮಧುರೈ ಪೀಠವು ನ್ಯಾಯಾಂಗ ನಿಂದನೆಯ ಆರೋಪದಲ್ಲಿ ಶಂಕರ್ ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿ, ಶಂಕರ್ ಅವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು.

“ಇಡೀ ನ್ಯಾಯಾಂಗವು ಭ್ರಷ್ಟಾಚಾರದಿಂದ ಕೂಡಿದೆ” ಎಂದು ಶಂಕರ್‌ ಅವರು ಸಂದರ್ಶನವೊಂದರಲ್ಲಿ ಹೇಳಿದ್ದಕ್ಕಾಗಿ, ಅವರ ವಿರುದ್ಧ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರು ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಿದ್ದರು.

ಇದನ್ನೂ ಓದಿ: ಹಿಜಾಬ್ ವಿವಾದ: ತಮಿಳುನಾಡು, ಕೇರಳ, ಆಂಧ್ರದ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರಕ್ಕೆ ಛೀಮಾರಿ

ಕಳೆದ 13 ವರ್ಷಗಳಿಂದ ರಾಜ್ಯದಿಂದ ಭತ್ಯೆ ಪಡೆಯುತ್ತಿದ್ದರೂ ಶಂಕರ್ ಅವರು “ರಾಜ್ಯದ ಎಲ್ಲಾ ಮೂರು ಅಂಗಗಳ ಮೇಲೆ ಕೆಟ್ಟದಾಗಿ ದಾಳಿ ಮಾಡುತ್ತಿದ್ದಾರೆ” ಎಂದು ಹೈಕೋರ್ಟ್ ಹೇಳಿತ್ತು. ಅವರ ಆಕ್ಷೇಪಾರ್ಹ ಸಂದರ್ಶನಗಳು ಮತ್ತು ಲೇಖನಗಳನ್ನು ತೆಗೆದುಹಾಕಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ನ್ಯಾಯಾಲಯವು ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಶಂಕರ್ ಅವರು ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯದಲ್ಲಿ (ಡಿವಿಎಸಿ) ಕೆಳ ವಿಭಾಗದ ಗುಮಾಸ್ತರಾಗಿ ಸೇವೆಯಲ್ಲಿದ್ದರು. ಅದೇ ಇಲಾಖೆಯಲ್ಲಿ ಉದ್ಯೋಗಿಯಾಗಿದ್ದ ಅವರ ತಂದೆ ನಿಧನರಾದ ನಂತರ ಮಾನವೀಯ ಆಧಾರದ ಮೇಲೆ ಅವರು ಅಲ್ಲಿ ಕೆಲಸ ಪಡೆದಿದ್ದರು.

2008 ರ ವೇಳೆಗೆ ತಮಿಳುನಾಡಿನಲ್ಲಿ ದ್ರಾವಿಡ ಮುನ್ನೇತ್ರ ಕಳಗಂ ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರ ಪ್ರಕರಣವನ್ನು ಬಹಿರಂಗಪಡಿಸಿದ ನಂತರ ಶಂಕರ್‌ ಅವರನ್ನು ಬಂಧಿಸಲಾಗಿತ್ತು. ಇದರ ನಂತರ ಇಲಾಖೆಯಿಂದ ಅವರನ್ನು ಅಮಾನತುಗೊಳಿಸಲಾಗಿತ್ತು.

ಇದನ್ನೂ ಓದಿ: ಕ್ರೈಸ್ತ- ಮುಸ್ಲಿಂ ದಲಿತರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಲಾಗದು: ಒಕ್ಕೂಟ ಸರ್ಕಾರ

ಬಂಧನದಿಂದ ಬಿಡುಗಡೆಯಾದ ನಂತರ ಅವರು 2009 ರಲ್ಲಿ ಸವುಕ್ಕು ಎಂಬ ವೆಬ್‌ಸೈಟ್ ಅನ್ನು ಪ್ರಾರಂಭಿಸಿ, ಅಲ್ಲಿ ಸರ್ಕಾರಿ ಅಧಿಕಾರಿಗಳು, ರಾಜಕಾರಣಿಗಳು, ಪತ್ರಕರ್ತರು, ವಕೀಲರು ಮತ್ತು ಹೈಕೋರ್ಟ್ ನ್ಯಾಯಾಧೀಶರ ಬಗ್ಗೆ ಬರೆಯುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...