Homeಮುಖಪುಟಲೈವ್ ಪ್ರಸಾರದಲ್ಲೆ ‘ಝೀನ್ಯೂಸ್’ ಅನ್ನು ‘ಕೆಟ್ಟ ಚಾನಲ್’ ಎಂದು ಕರೆದ ಭಾರತೀಯ ಕ್ರಿಕೆಟ್ ಅಭಿಮಾನಿ

ಲೈವ್ ಪ್ರಸಾರದಲ್ಲೆ ‘ಝೀನ್ಯೂಸ್’ ಅನ್ನು ‘ಕೆಟ್ಟ ಚಾನಲ್’ ಎಂದು ಕರೆದ ಭಾರತೀಯ ಕ್ರಿಕೆಟ್ ಅಭಿಮಾನಿ

ಝೀ ನ್ಯೂಸ್‌ಗೆ ಅವರ ಚಾನೆಲ್‌ನಲ್ಲೆ ಪಾಠ ಮಾಡಿರುವ ಯುವಕನಿಗೆ ಅಭಿನಂಧನೆಗಳ ಮಹಾಪೂರ ಹರಿದು ಬಂದಿದೆ

- Advertisement -
- Advertisement -

ಲೈವ್‌‌‌ ಇದೆ ಎಂದು ಖಚಿತಪಡಿಸಿ ಭಾರತೀಯ ಕ್ರಿಕೆಟ್ ಅಭಿಮಾನಿಯೊಬ್ಬರು ಝೀ ನ್ಯೂಸ್‌ ಅನ್ನು “ನೀವು ಭಾರತದ ಅತ್ಯಂತ ಕೆಟ್ಟ ಚಾನೆಲ್” ಎಂದು ತರಾಟೆಗೆ ಪಡೆದಿರುವ ಘಟನೆ ಆಸ್ಟ್ರೇಲಿಯಾದಲ್ಲಿ ಭಾರತ-ಇಂಗ್ಲೇಂಡ್‌ ಟಿ20 ವಿಶ್ವಕಪ್‌ ಸಮಿಫೈನಲ್‌‌‌ ಪಂದ್ಯದ ನಡೆದಿದೆ. ಕನಿಷ್ಠ ಪಕ್ಷ ಇಲ್ಲಾದರೂ ಕೋಮುವಾದ ಮಾಡಬೇಡಿ ಎಂದು ಅವರು ಕ್ಯಾಮರಾ ಮುಂದೆ ಹೇಳಿದ್ದು, ಅದು ಝೀ ನ್ಯೂಸ್‌ನಲ್ಲೆ ಲೈ‌ವ್‌ ಪ್ರಸಾರವಾಗಿದೆ.

ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಝೀ ನ್ಯೂಸ್‌ಗೆ ಪಾಠ ಮಾಡಿರುವ ಯುವಕನಿಗೆ ಅಭಿನಂಧನೆಗಳ ಮಹಾಪೂರ ಹರಿದು ಬಂದಿದೆ. ಝೀ ನ್ಯೂಸ್‌ ದೇಶದ ಪ್ರಮುಖ ಸುದ್ದಿ ವಾಹಿನಿಯಾಗಿದ್ದು, ಅದು ತನ್ನ ಕೋಮುವಾದಿ ಕಾರ್ಯಕ್ರಮಗಳಿಗೆ ಪ್ರಸಿದ್ದವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2022 ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನಲ್ಲಿ ಭಾರತವು ಇಂಗ್ಲೆಂಡ್‌ ವಿರುದ್ಧ ಸೋತ ನಂತರ ಅಡಿಲೇಡ್‌ನಿಂದ ಈ ಲೈವ್‌ ಅನ್ನು ಝೀ ನ್ಯೂಸ್ ‌ಪ್ರಸಾರ ಮಾಡಿತ್ತು. ಪಂದ್ಯದ ಬಗ್ಗೆ ಝೀ ಟಿವಿಯು ಅಲ್ಲಿ ಅಭಿಮಾನಿಗಳ ಜೊತೆಗೆ ಅಭಿಪ್ರಾಯವನ್ನು ಕೇಳುತ್ತಿತ್ತು. ಈ ವೇಳೆ ಘಟನೆ ನಡೆದಿದೆ.

ಇದನ್ನೂ ಓದಿ: ಪತ್ರಕರ್ತರಿಗೆ ಲಂಚ| ಸಿಎಂ ಮಾಧ್ಯಮ ಸಲಹೆಗಾರರ ಸರ್ಕಾರಿ ಕಾರಿನಲ್ಲೇ ತಲುಪಿತ್ತೇ ಲಕ್ಷ, ಲಕ್ಷ ಹಣ?

“ನೋಡಿ, ಮೊದಲನೆಯದಾಗಿ ಇದು ಒಂದು ಆಟವಾಗಿದೆ. ನಮ್ಮ ಕೈಯಲ್ಲೋ, ಇನ್ನೊಬ್ಬ ಕೈಯ್ಯಲ್ಲೊ…ಎಲ್ಲವೂ ಸರಿ, ಬಿಡಿ” ಭಾರತೀಯ ಅಭಿಮಾನಿ ಝೀ ನ್ಯೂಸ್‌ ಕ್ಯಾಮೆರಾದ ಮುಂದೆ ಹೇಳಿದ್ದಾರೆ. ಮುಂದುವರೆದು ಮಾತನಾಡಿದ ಅವರು, “ಇದು ಲೈವ್ ಆಗುತ್ತಿದೆಯೇ?” ಎಂದು ಅವರು ಕೇಳಿದ್ದು, ವರದಿಗಾರ ಹೌದು ಲೈವ್‌ ಆಗುತ್ತಿದೆ ಎಂದು ಹೇಳಿದ್ದಾರೆ. “ಸರಿ, ಇದು ಝೀ ಟಿವಿ, ಮೊದಲನೆಯದಾಗಿ ನಿಮಗೆ ಹೇಳಲು ಇಚ್ಛಿಸುವುದೇನೆಂದರೆ, ನಿಮಗೆ ಅಭ್ಯಂತರವಿಲ್ಲದಿದ್ದರೆ, ಕನಿಷ್ಠ ಇಲ್ಲಾದರೂ ಹಿಂದೂ-ಮುಸ್ಲಿಂ ಮಾಡಬೇಡಿ” ಎನ್ನುತ್ತಿದ್ದಂತೆ ವರದಿಗಾರ ಕ್ಯಾಮರಾವನ್ನು ತಿರುಗಿಸುತ್ತಾರೆ.

ಈ ವೇಳೆ ಯುವಕ, “ನೀವು ಭಾರತದ ಅತ್ಯಂತ ಕೆಟ್ಟ ಚಾನೆಲ್‌‌” ಎಂದು ಕಿರುಚಿ ಹೇಳಿದ್ದಾರೆ. ಅವರು ಮಾತು ಝೀ ಟಿವಿಯಲ್ಲಿ ಲೈವ್‌ ಪ್ರಸಾರವಾಗಿದೆ.

ಝೀ ನ್ಯೂಸ್ ಆಗಾಗ್ಗೆ ದ್ವೇಷದ ಭಾಷಣವನ್ನು ಪ್ರಸಾರ ಮಾಡುತ್ತಿದೆ ಎಂದು ಆರೋಪಿಸಲಾಗಿದೆ. ಈ ವರ್ಷದ ಆರಂಭದಲ್ಲಿ, ‘ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ’ವು ಝೀ ಟಿವಿಗೆ ಮುಸ್ಲಿಂ ಜನಸಂಖ್ಯೆಯ ಮೇಲಿನ ಕಾರ್ಯಕ್ರಮವನ್ನು ತೆಗೆದುಹಾಕುವಂತೆ ಕೇಳಿಕೊಂಡಿತ್ತು. ಜೊತಗೆ ಚಾನೆಲ್‌ ಅಜೆಂಡಾಕ್ಕಾಗಿ ಇದನ್ನು ಮಾಡುತ್ತಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ದೇಶದ ಯಾವುದೇ ಮುಖ್ಯವಾಹಿನಿ ಮಾಧ್ಯಮದಲ್ಲಿ ದಲಿತ, ಆದಿವಾಸಿ, ಒಬಿಸಿ ಮುಖ್ಯಸ್ಥರಿಲ್ಲ: ವರದಿ

ಘಟನೆ ನಂತರ ನ್ಯೂಸ್ ಲಾಂಡ್ರಿ ಯುವಕನನ್ನು ಮಾತನಾಡಿಸಿದೆ. ವೂಲ್‌ವರ್ತ್ಸ್‌ನಲ್ಲಿ ಕೆಲಸ ಮಾಡುತ್ತಿರುವ ಮತ್ತು ಕಳೆದ ಏಳು ವರ್ಷಗಳಿಂದ ಆಸ್ಟ್ರೇಲಿಯಾದಲ್ಲಿ ವಾಸಿಸುತ್ತಿರುವ ಸಾಹಿಲ್ ಸರೋಯಾ, “ನನ್ನ ದೇಶದ ಮಾಧ್ಯಮಗಳ ಸ್ಥಿತಿ ನನ್ನನ್ನು ಅಸಮಾಧಾನಗೊಳಿಸಿದೆ” ಎಂದು ಹೇಳಿದ್ದಾರೆ.

“ನಾನು ಪ್ರತಿ ತಿಂಗಳು ಭಾರತಕ್ಕೆ ಹೋಗಲು ಸಾಧ್ಯವಿಲ್ಲ… ನಾನು ಮಾಡಬಹುದಾದ ಎಲ್ಲವು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಹೆಚ್ಚು ತಲುಪುವುದಿಲ್ಲ. ಹಾಗಾಗಿ ನಿನ್ನೆ ನಾನು ಅಲ್ಲಿ ಝೀ ನ್ಯೂಸ್ ಮೈಕ್ ಅನ್ನು ನೋಡಿದೆ, ಆ ವೇಳೆ ಅವರು ಲೈವ್ ಆಗಿದ್ದರು. ಝೀಟಿವಿ ಏನು ಮಾಡುತ್ತಿದೆ ಮತ್ತು ಹೇಗೆ ಮೂರ್ಖರನ್ನಾಗಿ ಮಾಡುತ್ತಿದ್ದಾರೆ ಎಂದು ವೀಕ್ಷಕರಿಗೆ ಬಹಿರಂಗಪಡಿಸುವುದು ಅಥವಾ ಹೇಳುವುದು ನನ್ನ ಏಕೈಕ ಉದ್ದೇಶವಾಗಿತ್ತು.” ಎಂದು ಸಾಹಿಲ್ ಹೇಳಿದ್ದಾರೆ.

“ನಾನು ಅನೇಕ ವಿಷಯಗಳನ್ನು ಸಭ್ಯ ರೀತಿಯಲ್ಲಿ ಹೇಳಲು ಬಯಸಿದ್ದೆ. ಆದರೆ ವರದಿಗಾರ ನನ್ನನ್ನು ತಳ್ಳಿದ್ದರಿಂದ ನನಗೆ ಕೆಟ್ಟದು ಅನಿಸಿತು, ಹಾಗಾಗಿ ನಾನು ಅಲ್ಲಿಂದ ಹೊರಟೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜನಮತಗಣನೆಯಲ್ಲಿ ಚಿಲಿಯ ಹೊಸ ಸಂವಿಧಾನ ಸೋತದ್ದೇಕೆ? ಮಾಧ್ಯಮಗಳ ಪಾತ್ರವೇನು?

ಭಾರತದ ಮಾಧ್ಯಮದ ಸ್ಥಿತಿಯ ಬಗ್ಗೆ ಮಾತನಾಡಿದ ಅವರು, ಆಸ್ಟ್ರೇಲಿಯಾದ ಮಾಧ್ಯಮಕ್ಕೆ ಭಾರತದ ಮಾಧ್ಯಮಗಳನ್ನು ಹೋಲಿಸುವುದಿಲ್ಲ. ಆದರೆ ನಮ್ಮ ಮಾಧ್ಯಮಗಳು ಅತ್ಯಂತ ಕೆಳಮಟ್ಟಕ್ಕೆ ಹೋಗಿವೆ ಮತ್ತು ಇಲ್ಲಿನ ಜನರು ಟಿವಿಯಲ್ಲಿ ಸರ್ಕಸ್ ಆಡುವ ಆಂಕರ್‌ಗಳನ್ನು ಗೇಲಿ ಮಾಡುತ್ತಾರೆ ಎಂದು ಹೇಳಿದ್ದಾರೆ.

“ಭಾರತದ ಮಾಧ್ಯಮಗಳು ಧರ್ಮ, ಜಾತಿಯ ಹೆಸರಿನಲ್ಲಿ ಜನರನ್ನು ವಿಭಜಿಸುತ್ತಿದೆ. ನನ್ನ ಬಾಲ್ಯದಲ್ಲಿ ಜನರು ಈ ವಿಷಯಗಳ ಬಗ್ಗೆ ಎಂದಿಗೂ ಜಗಳವಾಡಿಲ್ಲ. ಆದರೆ ಈಗ ಎಲ್ಲೆಡೆ, ಹಿಂದೂ-ಮುಸ್ಲಿಂ, ಹಿಂದೂ-ಮುಸ್ಲಿಂ ಎಂದು ಜಗಳಗಳಾಗುತ್ತಿವೆ. ಇದಕ್ಕೆಲ್ಲಾ ಕಾರಣ ಈ ಪ್ರೊಪಗಾಂಡ ವಾಹಿನಿಗಳು” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತೀಯರು ಈಗಲೂ ಧರ್ಮದ ಆಧಾರದಲ್ಲಿ ಸ್ನೇಹಿತರನ್ನು ಹೊಂದುವುದಿಲ್ಲ ಮತ್ತು ವ್ಯವಹಾರ ಗಳನ್ನೂ ಮಾಡುವುದಿಲ್ಲ
    ಜಾತಿ ಧರ್ಮಗಳ ಆಧಾರದಲ್ಲಿ ವಿಭಜನೆ ಆಗುತ್ತಿರುವುದು ರಾಜಕಾರಣಿ ಮತ್ತು ಮಾಧ್ಯಮಗಳಿಂದ ಮಾತ್ರ.
    ನಿರ್ಲಕ್ಷವೇ ಪರಿಹಾರ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...