Homeಕರ್ನಾಟಕಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದೆ ಅವಮಾನಿಸಿದ ಬಿಜೆಪಿ: ಜೆಡಿಎಸ್ ಆಕ್ರೋಶ

ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದೆ ಅವಮಾನಿಸಿದ ಬಿಜೆಪಿ: ಜೆಡಿಎಸ್ ಆಕ್ರೋಶ

“ಕೆಂಪೇಗೌಡರು ಬಿಜೆಪಿಯ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ” ಎಂದು ಜೆಡಿಎಸ್‌ ಹರಿಹಾಯ್ದಿದೆ

- Advertisement -
- Advertisement -

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಎಚ್‌.ಡಿ.ದೇವೇಗೌಡ ಅವರನ್ನು ಆಹ್ವಾನಿಸಿಲ್ಲದಿರುವುದು ಟೀಕೆಗೆ ಗುರಿಯಾಗಿದೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜಾ.ದಳ (ಜೆಡಿಎಸ್‌), ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ. “ಕೆಂಪೇಗೌಡರು ಬಿಜೆಪಿಯ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ” ಎಂದು ಹರಿಹಾಯ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಎಚ್‌.ಡಿ.ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ” ಎಂದು ಜೆಡಿಎಸ್ ಆಕ್ರೋಶ ಹೊರಹಾಕಿದೆ.

“ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ, ಯಾಕೆ?” ಎಂದು ಪ್ರಶ್ನಿಸಿದೆ.

“ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ‘” ಎಂದು ಬೇಸರ ವ್ಯಕ್ತಪಡಿಸಿದೆ.

“ರಾಜ್ಯ ಬಿಜೆಪಿ ಸರಕಾರ, ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ ಅಪಮಾನ. ಇದು ಅಕ್ಷಮ್ಯದ ಪರಮಾವಧಿ” ಎಂದು ಅಭಿಪ್ರಾಯಪಟ್ಟಿದೆ.

“ಸರ್ವಜನರನ್ನು ಸಮಾನವಾಗಿ ಕಂಡು ಆದರ್ಶ ಪ್ರಭುವಾಗಿದ್ದ ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆಯುವ ಕೆಲಸವನ್ನು ಸ್ವತಃ ಪ್ರಧಾನಿ ನರೇಂದ್ರಮೋದಿ ಅವರೇ ಮಾಡಿರುವುದು ಸ್ಪಷ್ಟ. ಇದು ಅತ್ಯಂತ ದುರದೃಷ್ಟಕರ. ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ ಎನ್ನುವುದು ಸತ್ಯ” ಎಂದು ಎಚ್ಚರಿಸಿದೆ.

ಇದನ್ನೂ ಓದಿರಿ: ಕ್ರೈಸ್ತ- ಮುಸ್ಲಿಂ ದಲಿತರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಲಾಗದು: ಒಕ್ಕೂಟ ಸರ್ಕಾರ

“ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಸರಕಾರ ಹಾಗೂ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ ಎನ್ನುವುದರಲ್ಲಿ ಸಂಶಯ ಇಲ್ಲ. ಮಾನ್ಯ ದೇವೇಗೌಡರ ಬಗ್ಗೆ ಅತೀವ ಗೌರವ ಇಟ್ಟುಕೊಂಡಿರುವ ಪ್ರಧಾನಿಗಳ ಬಗ್ಗೆಯೇ ಕನ್ನಡಿಗರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ರಾಜ್ಯ ಬಿಜೆಪಿ ಸರಕಾರ ಮತ್ತು ಬಿಜೆಪಿ ನಾಯಕರು ವರ್ತಿಸಿದ್ದಾರೆ” ಎಂದು ಟೀಕಿಸಿದೆ.

“ಕೆಂಪೇಗೌಡರು ಬಿಜೆಪಿಯ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ. ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ. ನಮ್ಮೆಲ್ಲರ ಅರಾಧ್ಯದೈವ. ಇನ್ನು, ಬೆಂಗಳೂರು ನಗರ ನಮ್ಮೆಲ್ಲರದ್ದು. ಸಮಸ್ತ ಕನ್ನಡಿಗರ ಜೀವನಾಡಿ. ಈ ಸೂಕ್ಷ್ಮವನ್ನು ರಾಜ್ಯ ಬಿಜೆಪಿ ಸರಕಾರ ಮರೆತು ಕನ್ನಡಿಗರನ್ನು ಅಪಮಾನಿಸಿದೆ” ಎಂದು ಟೀಕಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋದಿ ಬರುವಾಗ ಎಷ್ಟೊಂದು ವಿಜೃಂಭಣೆಯಿಂದ ಅಲಂಕಾರ ಮಾಡಿದ್ದಾರೆ ನೋಡಿ ನೆಲಕ್ಕೆ ಕೆಂಪು ಕೆಂಪು ಕೆಂಪು ಕೆಂಪು ಕಾರ್ಪೆಟ್ ಹಾಸಿ ಹೇಗೆ ಅಲಂಕಾರಿಸಿದ್ದಾರೆ ನೋಡಿ ಆದರೆ ಅಲ್ಲಿ ಇದ್ದವರ ಜನರನ್ನು ಐಡೆಂಟಿ ಮಾಡಿ ಉನ್ನತ ವರ್ಗದವರು ಮಾತ್ರ ಕಾಣಿಸ್ತಿದ್ರು, ಹೆಚ್ಚಾಗಿ ಶೂದ್ರನೂ ದಲಿತನು ಗೌಡನು ಕಾಣಿಸಿಲ್ಲ ಅಥವಾ ಮಾಧ್ಯಮದವರು ತೋರಿಸುವುದೇ ಹಾಗೆಯೋ ಏನೋ ಗೊತ್ತಿಲ್ಲ ಆದರೆ ಅದಕ್ಕೆ ಸಾಕ್ಷಿಯಾಗಿ ನಿಜವಾಗಿ ಸನ್ಮಾನ್ಯ ದೇವೇಗೌಡರನ್ನು ಕರೆಯಲೇಬೇಕಿತ್ತು, ಕರಿಲಿಲ್ಲ ಅಂತಾರೆ ನಿಜವೋ ಗೊತ್ತಿಲ್ಲ, ಕೆಂಪೇಗೌಡರ ಪ್ರತಿಮೆಯನ್ನು ಅನಾವರಣಗೊಳಿಸುವವಾಗ ಹಿರಿಯ ತಲೆಯ ವ್ಯಕ್ತಿಯನ್ನ( ದೇವೇಗೌಡರು ) ಕರೆಯದೆ ಇದ್ದದ್ದು ಸರಕಾರದ ಕೋಮುವಾದಿತನವನ್ನು ತೋರಿಸುತ್ತದೆ .

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...