Homeರಾಜಕೀಯಸಿಪಿಐ(ಎಂ) ನಾಯಕನ ಹತ್ಯೆ: 11 ಮಂದಿ ಆರೆಸ್ಸೆಸ್‌‌ ದುಷ್ಕರ್ಮಿಗಳು ತಪ್ಪಿತಸ್ಥರೆಂದು ತೀರ್ಪು

ಸಿಪಿಐ(ಎಂ) ನಾಯಕನ ಹತ್ಯೆ: 11 ಮಂದಿ ಆರೆಸ್ಸೆಸ್‌‌ ದುಷ್ಕರ್ಮಿಗಳು ತಪ್ಪಿತಸ್ಥರೆಂದು ತೀರ್ಪು

- Advertisement -
- Advertisement -

ತಿರುವನಂದಪುರಂ ಜಿಲ್ಲೆಯ ಅನವೂರಿನಲ್ಲಿ ನಡೆದ ಸಿಪಿಐ(ಎಂ) ನಾಯಕ ಅನವೂರ್ ನಾರಾಯಣನ್ ನಾಯರ್ ಹತ್ಯೆ ಪ್ರಕರಣದಲ್ಲಿ 11 ಮಂದಿ ಆರೆಸ್ಸೆಸ್‌ ದುಷ್ಕರ್ಮಿಗಳು ತಪ್ಪಿತಸ್ಥರೆಂದು ಕೇರಳದ ನೆಯ್ಯಟ್ಟಿಂಕರ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದ್ದು, ಶಿಕ್ಷೆ ಸೋಮವಾರ ಪ್ರಕಟವಾಗಲಿದೆ. ತಪ್ಪಿತಸ್ಥರಲ್ಲಿ ಬಿಜೆಪಿ ಬೆಂಬಲಿತ ಕಾರ್ಮಿಕ ಸಂಘಟನೆ ಬಿಎಂಎಸ್ (ಕೆಎಸ್‌ಆರ್‌ಟಿಸಿ ನೌಕರರ ಸಂಘ) ನ ರಾಜ್ಯ ಮಟ್ಟದ ನಾಯಕ ಕೂಡ ಸೇರಿದ್ದಾನೆ.

ಸಿಪಿಎಂ ಅನವೂರು ಶಾಖೆಯ ಕಾರ್ಯದರ್ಶಿ ಮತ್ತು ಮುನ್ಸಿಪಲ್ ಕಾರ್ಪೊರೇಷನ್ ಸ್ಟಾಫ್ ಯೂನಿಯನ್ ರಾಜ್ಯ ಸಮಿತಿಯ ಸದಸ್ಯರಾಗಿದ್ದ ನಾರಾಯಣನ್ ಅವರನ್ನು 2013 ರ ನವೆಂಬರ್ 4 ರಂದು ಅವರ ಮನೆಗೆ ನುಗ್ಗಿದ ಶಸ್ತ್ರಧಾರಿ ಆರೆಸ್ಸೆಸ್‌‌ ದುಷ್ಕರ್ಮಿಗಳ ಗುಂಪು ಹತ್ಯೆ ಮಾಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾರಾಯಣನ್‌ ಅವರನ್ನು, ಅವರ ಪತ್ನಿ ಮತ್ತು ಇಬ್ಬರು ಪುತ್ರರ ಎದುರೇ ಕೊಚ್ಚಿ ಕೊಲೆ ಮಾಡಲಾಗಿತ್ತು. ಘಟನೆಯಲ್ಲಿ ನಾರಾಯಣನ್‌ ಅವರ ಮಕ್ಕಳಾದ ಶಿವಪ್ರಸಾದ್ ಹಾಗೂ ಮತ್ತೊಬ್ಬ ಪುತ್ರ ತೀವ್ರವಾಗಿ ಗಾಯಗೊಂಡಿದ್ದರು.

ಇದನ್ನೂ ಓದಿ: ಬೀದರ್: ಮೊರಾರ್ಜಿ ಶಾಲೆಗಳಲ್ಲಿ RSS ಶಿಬಿರ ವಿರೋಧಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ದಾಳಿಕೋರರ ಪ್ರಮುಖ ಗುರಿ ನಾರಾಯಣನ್ ಅವರ ಮಗ ಶಿವಪ್ರಸಾದ್ ಆಗಿದ್ದರು. ವಿದ್ಯಾರ್ಥಿ ಸಂಘಟನೆಯಾಗಿದ್ದ ಎಸ್‌ಎಫ್‌ಐನ ವೆಳ್ಳಾರಡ ಪ್ರದೇಶ ಕಾರ್ಯದರ್ಶಿಯಾಗಿದ್ದ ಅವರನ್ನು ಕೊಲ್ಲಲು ಆರೆಸ್ಸೆಸ್‌ನ ದುಷ್ಕರ್ಮಿಗಳು ಅವರ ಮನೆಗೆ ಬಂದಿದ್ದರು.

ತನ್ನ ಮಗನನ್ನು ಉಳಿಸಲು ಯತ್ನಿಸಿದಾಗ ನಾರಾಯಣನ್ ಅವರನ್ನು ಕಡಿದು ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೂ ಮುನ್ನ ಎಸ್‌ಎಫ್‌ಐ ಸದಸ್ಯರು ಬಿಜೆಪಿ ಬೆಂಬಲಿತ ಕಾರ್ಮಿಕ ಸಂಘಟನೆಯ ಬಿಎಂಎಸ್‌‌‌ನ ಕಾರ್ಯಕರ್ತನಾಗಿದ್ದ ಬಸ್ ಚಾಲಕನೊಂದಿಗೆ ಘರ್ಷಣೆ ನಡೆಸಿದ್ದರು.

ಇದರ ಪ್ರತೀಕಾರವಾಗಿ, ಶಿವಪ್ರಸಾದ್ ಅವರನ್ನು ಗುರಿಯಾಗಿಸಿಕೊಂಡು ನಾರಾಯಣನ್ ಮನೆಗೆ ಆರೆಸ್ಸೆಸ್‌ ದುಷ್ಕರ್ಮಿಗಳ ಗುಂಪು ನುಗ್ಗಿತ್ತು. ಆದರೆ ಅವರನ್ನು ನಾರಾಯಣನ್ ತಡೆದಿದ್ದು, ಈ ವೇಳೆ ಹರಿತವಾದ ಆಯುಧಗಳಿಂದ ಅವರ ಮೇಲೆ ಹಲ್ಲೆ ನಡೆಸಲಾಗಿತ್ತು.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

ಕೆಎಸ್‌ಆರ್‌ಟಿಸಿ ನೌಕರರ ಸಂಘದ (ಬಿಎಂಎಸ್) ರಾಜ್ಯ ಕಾರ್ಯದರ್ಶಿ ವೆಲ್ಲಂಕೊಲ್ಲಿ ರಾಜೇಶ್ ಮತ್ತು ಆರ್‌ಎಸ್‌ಎಸ್ ಪ್ರಚಾರಕ ಅನಿಲ್ ಕೂಡಾ ತಪ್ಪಿತಸ್ಥರಲ್ಲಿ ಸೇರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...