Homeಮುಖಪುಟಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಸಂಸ್ಕಾರಿ ಬ್ರಾಹ್ಮಣರು ಎಂದಿದ್ದ ಶಾಸಕನಿಗೆ ಮತ್ತೆ ಟಿಕೆಟ್ ನೀಡಿದ ಬಿಜೆಪಿ

ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಸಂಸ್ಕಾರಿ ಬ್ರಾಹ್ಮಣರು ಎಂದಿದ್ದ ಶಾಸಕನಿಗೆ ಮತ್ತೆ ಟಿಕೆಟ್ ನೀಡಿದ ಬಿಜೆಪಿ

- Advertisement -
- Advertisement -

ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳನ್ನು ಉತ್ತಮ ಸಂಸ್ಕಾರ ಅಥವಾ ಗುಣಗಳನ್ನು ಹೊಂದಿರುವ ಬ್ರಾಹ್ಮಣ ಗಂಡಸರು ಎಂದು ಹೇಳಿದ್ದ ಸಿ.ಕೆ.ರೌಲ್ಜಿ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಗೋದ್ರಾ ಕ್ಷೇತ್ರದಿಂದ ಸಿ.ಕೆ.ರೌಲ್ಜಿ ಅವರನ್ನು ಭಾರತೀಯ ಜನತಾ ಪಕ್ಷವು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾರ್ಚ್ 3, 2002ರಂದು ಗುಜರಾತ್ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನೋ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು. ಆ ಸಮಯದಲ್ಲಿ 19 ವರ್ಷದವರಾಗಿದ್ದ ಬಿಲ್ಕಿಸ್‌ ಗರ್ಭಿಣಿಯಾಗಿದ್ದರು. ಬಿಲ್ಕಿಸ್‌ ಅವರ ಮೂರು ವರ್ಷದ ಮಗಳು ಸೇರಿದಂತೆ ಅವರ ಕುಟುಂಬದ ಹದಿನಾಲ್ಕು ಸದಸ್ಯರನ್ನು ಅಹಮದಾಬಾದ್ ಬಳಿ ಗಲಭೆಕೋರರು ಹತ್ಯೆ ಮಾಡಿದ್ದರು. ಒಬ್ಬ ವ್ಯಕ್ತಿಯಂತೂ ತನ್ನ ತಾಯಿಯ ತೋಳುಗಳಿಂದ ಮಗುವನ್ನು ಕಿತ್ತುಕೊಂಡು ಆ ಮಗುವಿನ ತಲೆಯನ್ನು ಬಂಡೆಯ ಮೇಲೆ ಬಡಿದಿದ್ದನು. ಇಂಥವರನ್ನು ಸಂಸ್ಕಾರಿ ಬ್ರಾಹ್ಮಣರೆಂದು ಕರೆದಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು.

ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಎಲ್ಲಾ 11 ಅಪರಾಧಿಗಳನ್ನು ಗುಜರಾತ್ ಸರ್ಕಾರವು ಆಗಸ್ಟ್ 15 ರಂದು ಬಿಡುಗಡೆ ಮಾಡಿತ್ತು. ಸನ್ನಡತೆಯ ನೀತಿಯ ಅಡಿಯಲ್ಲಿ ಅಪರಾಧಿಗಳ ಅರ್ಜಿಯನ್ನು ಅನುಮೋದಿಸಿದ ನಂತರ ಗೋಧ್ರಾ ಜೈಲಿನಿಂದ ಬಿಡುಗಡೆ ಮಾಡಲಾಯಿತ್ತು.

ಗೋಧ್ರಾ ಕ್ಷೇತ್ರದಿಂದ ಆರು ಬಾರಿ ಶಾಸಕರಾಗಿದ್ದ ರೌಲ್ಜಿ ಕಳೆದ ಆಗಸ್ಟ್‌ನಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ಬಿಲ್ಕಿಸ್‌ ಪ್ರಕರಣದ ಅಪರಾಧಿಗಳು ಒಳ್ಳೆಯವರು ಎಂದು ತಿಳಿಸಿದ್ದರು.

“ಅವರು ಅಪರಾಧ ಮಾಡಿದ್ದಾರೆಯೇ ಅಥವಾ ಇಲ್ಲವೇ ಎಂಬುದು ನನಗೆ ತಿಳಿದಿಲ್ಲ…” ಎಂದು ರೌಲ್ಜಿ ಸಂದರ್ಶನವೊಂದರಲ್ಲಿ ಹೇಳಿದ್ದರು. “ಜೈಲಿನಲ್ಲಿ ಅವರ ನಡತೆ ಚೆನ್ನಾಗಿತ್ತು, ಅವರು ಬ್ರಾಹ್ಮಣರು… ಉತ್ತಮ ಸಂಸ್ಕಾರ [ಮೌಲ್ಯಗಳು] ಹೊಂದಿದವರು” ಎಂದು ಶ್ಲಾಘಿಸಿದ್ದರು.

ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳ ಅಡಿಯಲ್ಲಿ ಗುಜರಾತ್ ಸರ್ಕಾರ ರಚಿಸಿದ್ದ ಗೋಧ್ರಾ ಜೈಲು ಸಲಹಾ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಅಪರಾಧಿಗಳನ್ನು ಬಿಡುಗಡೆ ಮಾಡುವ ನಿರ್ಧಾರವನ್ನು ಮಾಡಲಾಗಿದೆ. ಕೋಮುಗಲಭೆ ಪ್ರಕರಣಗಳಲ್ಲಿ ಅಮಾಯಕರನ್ನು ಹೆಚ್ಚಾಗಿ ಗುರಿಯಾಗಿಸಲಾಗುತ್ತದೆ ಎಂದು ಸಮಿತಿಯ ಭಾಗವಾಗಿದ್ದ ರೌಲ್ಜಿ ಹೇಳಿದ್ದರು.

ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯೊಂದಿಗೆ ಡಿಸೆಂಬರ್ 8ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುತ್ತದೆ.

“ಬಿಲ್ಕಿಸ್ ಬಾನೋ ಪ್ರಕರಣದ 11 ಅಪರಾಧಿಗಳು 14 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ. ಅವರ ನಡವಳಿಕೆ ಉತ್ತಮವಾಗಿದೆ ಎಂದು ಕಂಡುಬಂದಿದೆ ಮತ್ತು ಕೇಂದ್ರ ಸರ್ಕಾರವು ಅಪರಾಧಿಗಳ ಬಿಡುಗಡೆಗೆ ಅನುಮೋದನೆ ನೀಡಿದೆ” ಎಂದು ಗುಜರಾತ್ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಕೈದಿಗಳಿಗೆ ನೀಡಲಾದ ವಿನಾಯಿತಿಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ಗುಜರಾತ್ ಸರ್ಕಾರ ಅಫಿಡವಿಟ್ ಸಲ್ಲಿಸಿದೆ. “ಪೊಲೀಸ್ ವರಿಷ್ಠಾಧಿಕಾರಿ, ಸಿಬಿಐ, ಮುಂಬೈ ವಿಶೇಷ ಅಪರಾಧ ವಿಭಾಗ ಮತ್ತು ವಿಶೇಷ ಸಿವಿಲ್ ನ್ಯಾಯಾಧೀಶರು (ಸಿಬಿಐ), ಗ್ರೇಟರ್ ಬಾಂಬೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್” ಕಳೆದ ವರ್ಷದ ಮಾರ್ಚ್‌ನಲ್ಲಿ ಕೈದಿಗಳ ಬಿಡುಗಡೆಯನ್ನು ವಿರೋಧಿಸಿತ್ತು.

ಇದನ್ನೂ ಓದಿರಿ: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದೆ ಅವಮಾನಿಸಿದ ಬಿಜೆಪಿ: ಜೆಡಿಎಸ್ ಆಕ್ರೋಶ

ಗೋಧ್ರಾ ಉಪ ಕಾರಾಗೃಹದ ಅಧೀಕ್ಷಕರಿಗೆ ಬರೆದ ಪತ್ರದಲ್ಲಿ ಸಿಬಿಐ ಅಧಿಕಾರಿಯು, “ಇಲ್ಲಿನ ಅಪರಾಧವು ಘೋರ ಮತ್ತು ಗಂಭೀರವಾಗಿದೆ. ಆದ್ದರಿಂದ ಅವರನ್ನು ಅಕಾಲಿಕವಾಗಿ ಬಿಡುಗಡೆ ಮಾಡಲಾಗುವುದಿಲ್ಲ. ಅವರಿಗೆ ಯಾವುದೇ ವಿನಯವನ್ನು ನೀಡಲಾಗುವುದಿಲ್ಲ” ಎಂದು ಹೇಳಿದ್ದರು.

ಮುಂಬೈನಲ್ಲಿ ವಿಚಾರಣೆ ನಡೆಸಲಾಗಿರುವುದರಿಂದ ಮಹಾರಾಷ್ಟ್ರ ಸರ್ಕಾರದ 2008ರ ನೀತಿ ಅನ್ವಯವಾಗಬೇಕು ಎಂದು ಸಿವಿಲ್ ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದರು.

“ಇಲ್ಲಿನ ಎಲ್ಲಾ ಆರೋಪಿಗಳು ಅಮಾಯಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಗಳೆಂದು ಕಂಡುಬಂದಿದೆ. ಅಪರಾಧಿಗಳಿಗೆ ಸಂತ್ರಸ್ತರು ಶತ್ರುಗಳಾಗಿರಲಿಲ್ಲ ಅಥವಾ ಸಂತ್ರಸ್ತೆಯೊಂದಿಗೆ ಯಾವುದೇ ಸಂಬಂಧವೂ ಇರಲಿಲ್ಲ. ಸಂತ್ರಸ್ತರು ನಿರ್ದಿಷ್ಟ ಧರ್ಮಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ಮಾತ್ರ ಅಪರಾಧ ಎಸಗಲಾಗಿದೆ. ಈ ವೇಳೆ ಅಪ್ರಾಪ್ತ ಮಕ್ಕಳನ್ನೂ ಬಿಡಲಿಲ್ಲ. ಇದು ಮಾನವೀಯತೆಯ ವಿರುದ್ಧದ ಅಪರಾಧದ ಅತ್ಯಂತ ಕೆಟ್ಟ ರೂಪವಾಗಿದೆ. ಇದು ಸಮಾಜದ ಆತ್ಮಸಾಕ್ಷಿಯ ಮೇಲೆ ಪರಿಣಾಮ ಬೀರುತ್ತದೆ” ಎಂದು ಸಿವಿಲ್ ನ್ಯಾಯಾಧೀಶರು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...