Homeಮುಖಪುಟರಾಷ್ಟ್ರಪತಿ ಮುರ್ಮು ಕುರಿತು ಅವಹೇಳನ: ಟಿಎಂಸಿ ನಾಯಕ ಕ್ಷಮೆಯಾಚನೆ

ರಾಷ್ಟ್ರಪತಿ ಮುರ್ಮು ಕುರಿತು ಅವಹೇಳನ: ಟಿಎಂಸಿ ನಾಯಕ ಕ್ಷಮೆಯಾಚನೆ

ಮುರ್ಮು ಅವರ ಬಗ್ಗೆ ಆಕ್ಷೇಪಾರ್ಹವಾಗಿ ಬರೆದಿದ್ದ ವಿಶ್ವೇಶ್ವರ ಭಟ್ ಪ್ರಕರಣ ಚರ್ಚೆಯಲ್ಲಿರುವ ಹೊತ್ತಿನಲ್ಲಿ ಇಂತಹದ್ದೇ ಮತ್ತೊಂದು ಘಟನೆ ನಡೆದಿದೆ.

- Advertisement -
- Advertisement -

ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಅಖಿಲ್ ಗಿರಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಆಕ್ಷೇಪಾರ್ಹವಾಗಿ ಹೇಳಿಕೆ ನೀಡಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬೆನ್ನಲ್ಲೇ ಗಿರಿಯವರು ಶನಿವಾರ ಕ್ಷಮೆಯಾಚಿಸಿದ್ದಾರೆ.

ಪಶ್ಚಿಮ ಬಂಗಾಳದ ಕ್ಯಾಬಿನೆಟ್‌ನಲ್ಲಿ ಸಚಿವರಾಗಿದ್ದ ಗಿರಿ ಅವರು ಪಶ್ಚಿಮ ಬಂಗಾಳದ ನಂದಿಗ್ರಾಮ್‌ನಲ್ಲಿ ನಡೆದ ಸಭೆಯೊಂದರಲ್ಲಿ ನೀಡಿದ ಹೇಳಿಕೆ ವಿವಾದಕ್ಕೆ ಗುರಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಯಾರನ್ನೂ ಅವರ ನೋಟದಿಂದ ನಿರ್ಣಯಿಸುವುದಿಲ್ಲ, ನಾವು ರಾಷ್ಟ್ರಪತಿ ಕಚೇರಿಯನ್ನು ಗೌರವಿಸುತ್ತೇವೆ. ಆದರೆ ನಮ್ಮ ರಾಷ್ಟ್ರಪತಿಗಳು ಹೇಗೆ ಕಾಣುತ್ತಾರೆ?” ಎಂದು ಗಿರಿಯವರು ಪ್ರಶ್ನಿಸುತ್ತಿರುವುದು ವಿಡಿಯೊದಲ್ಲಿ ದಾಖಲಾಗಿತ್ತು.

“ಸಂವಿಧಾನ ಮತ್ತು ರಾಷ್ಟ್ರಪತಿ ಹುದ್ದೆಯನ್ನು ಗೌರವಿಸುತ್ತೇನೆ” ಎಂದಿರುವ ಗಿರಿ, ಶನಿವಾರ ಕ್ಷಮೆಯಾಚನೆ ಮಾಡಿದ್ದಾರೆ.

“ಕಳೆದ ಕೆಲವು ತಿಂಗಳುಗಳಿಂದ, ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ನನ್ನ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ, ಅದು ನನಗೆ ಕೋಪವನ್ನುಂಟುಮಾಡಿದೆ” ಎಂದು ಗಿರಿ ತಮ್ಮ ವೀಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ನಂದಿಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾನು ಕೋಪದಲ್ಲಿ ಮಾತನಾಡಿರುವೆ. ‌ಆದರೆ ಭಾರತದ ರಾಷ್ಟ್ರಪತಿಗಳ ಬಗ್ಗೆ ನನಗೆ ಅಪಾರವಾದ ಗೌರವವಿದೆ. ನನ್ನ ಕಾಮೆಂಟ್‌ಗಳಿಗಾಗಿ ನಾನು ಕ್ಷಮೆಯಾಚಿಸುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿಯ ಹಲವಾರು ನಾಯಕರು ಗಿರಿ ಹೇಳಿಕೆಯನ್ನು, ತೃಣಮೂಲ ಕಾಂಗ್ರೆಸ್ ಅನ್ನು ಟೀಕಿಸಿದ್ದಾರೆ. ಮಮತಾ “ಬ್ಯಾನರ್ಜಿ ನೇತೃತ್ವದ ತೃಣಮೂಲ ಸರ್ಕಾರವು ಬುಡಕಟ್ಟು ವಿರೋಧಿಯಾಗಿದೆ” ಎಂದು ಪಶ್ಚಿಮ ಬಂಗಾಳ ಬಿಜೆಪಿ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್ ಆರೋಪಿಸಿದ್ದಾರೆ.

“ಸಿಎಂ ಮಮತಾ ಬ್ಯಾನರ್ಜಿ ಯಾವಾಗಲೂ ಬುಡಕಟ್ಟು ವಿರೋಧಿಯಾಗಿದ್ದಾರೆ” ಎಂದು ಮಜುಂದಾರ್ ಟ್ವೀಟ್ ಮಾಡಿದ್ದಾರೆ.

ಏತನ್ಮಧ್ಯೆ, ಬಿಜೆಪಿ ಸಂಸದರಾದ ಸೌಮಿತ್ರಾ ಖಾನ್ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದು, ಗಿರಿಯವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ರಾಷ್ಟ್ರಪತಿಯವರ ಕುರಿತ ಗಿರಿಯವರ ಹೇಳಿಕೆಯು ದೇಶದ ನಾಗರಿಕರಿಗೆ ಮತ್ತು ಅದರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅವಮಾನವಾಗಿದೆ ಎಂದು ಸೌಮಿತ್ರಾ ಪತ್ರದಲ್ಲಿ ಬರೆದಿದ್ದಾರೆ.

“ಆದ್ದರಿಂದ ಈ ಹೇಯ ಕೃತ್ಯಕ್ಕಾಗಿ ಅಖಿಲ್ ಗಿರಿಯನ್ನು ತಕ್ಷಣವೇ ಬಂಧಿಸಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನಿಮ್ಮನ್ನು ವಿನಂತಿಸಲಾಗಿದೆ” ಎಂದು ಬಿಜೆಪಿ ಸಂಸದರು ಹೇಳಿದ್ದಾರೆ. “ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ, ಏಕೆಂದರೆ ಸಮಾಜವು ಈ ರೀತಿಯ ಮನಸ್ಥಿತಿಯನ್ನು ಬಯಸುವುದಿಲ್ಲ” ಎಂದಿದ್ದಾರೆ.

ಕರ್ನಾಟಕದಲ್ಲಿಯೂ ಇದೇ ರೀತಿಯ ಪ್ರಕರಣ ಇತ್ತೀಚೆಗೆ ವರದಿಯಾಗಿತ್ತು. ರಾಷ್ಟ್ರಪತಿ ಮುರ್ಮು ಅವರ ಬಗ್ಗೆ ‘ವಿಶ್ವವಾಣಿ’ ಪತ್ರಿಕೆಯ ಸಂಪಾದಕ ಬರೆದಿದ್ದ ಸಾಲು ಟೀಕೆಗೆ ಗುರಿಯಾಗಿತ್ತು. ವರ್ಣವನ್ನು ಹೀಯಾಳಿಸಿ ಅಪಮಾನಿಸಿದ್ದ ಕರ್ನಾಟಕದ ಪ್ರಕರಣ ಚರ್ಚೆಯಲ್ಲಿರುವ ಹೊತ್ತಿನಲ್ಲಿಯೇ ಪಶ್ಚಿಮ ಬಂಗಾಳದಲ್ಲಿಯೂ ಇಂಥದ್ದೇ ಪ್ರಕರಣ ವರದಿಯಾಗಿದೆ.

ಇದನ್ನೂ ಓದಿರಿ: ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಸಂಸ್ಕಾರಿ ಬ್ರಾಹ್ಮಣರು ಎಂದಿದ್ದ ಶಾಸಕನಿಗೆ ಮತ್ತೆ ಟಿಕೆಟ್ ನೀಡಿದ ಬಿಜೆಪಿ

ತಮ್ಮ ಅಂಕಣ ಬರಹದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುರವರ ಬಣ್ಣವನ್ನು ಅವಮಾನಕರ ರೀತಿಯಲ್ಲಿ ಚಿತ್ರಿಸಿ ಜನಾಂಗೀಯ ನಿಂದನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವೇಶ್ವರ ಭಟ್, ರಾಷ್ಟ್ರೀಯ ಮಹಿಳಾ ಆಯೋಗದ ಎದುರು ಇತ್ತೀಚೆಗೆ ಹಾಜರಿದ್ದರು.

ಅವಹೇಳನಕಾರಿಯಾಗಿ ಬರೆದಿರುವುದನ್ನು ರಾಷ್ಟ್ರೀಯ ಮಹಿಳಾ ಆಯೋಗವು (NCW) ಗುರುತಿಸಿತ್ತು. ಈ ಕುರಿತು ಅಕ್ಟೋಬರ್ 26ರಂದು ವಿಚಾರಣೆಗೆ ಹಾಜರಾಗುವಂತೆ ಪತ್ರಕರ್ತ ವಿಶ್ವೇಶ್ವರ ಭಟ್‌ರವರಿಗೆ ನೋಟಿಸ್ ನೀಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಆಯೋಗದ ಮುಂದೆ ಹಾಜರಾದ ವಿಶ್ವೇಶ್ವರ ಭಟ್, “ಭಾರತದ ರಾಷ್ಟ್ರಪತಿಯವರನ್ನು ಅವಮಾನಿಸುವ ಯಾವುದೇ ದುರುದ್ದೇಶ ತನಗೆ ಇಲ್ಲ ಎಂಬುದಾಗಿ ಸ್ಪಷ್ಟಪಡಿಸಿ ಕ್ಷೆಮೆ ಯಾಚಿಸಿದ್ದಾರೆ, ಲಿಖಿತವಾಗಿಯೂ ಕ್ಷಮೆ ಕೇಳಿದ್ದಾರೆ” ಎಂದು ಆಯೋಗದ ಅಧ್ಯಕ್ಷೆ ರೇಖಾ ಶರ್ಮಾರವರ ಹೇಳಿಕೆ ಉಲ್ಲೇಖಿಸಿ ‘ಪ್ರಜಾವಾಣಿ’ ವರದಿ ಮಾಡಿತ್ತು. ಆದರೆ ಕ್ಷಮೆಯಾಚಿಸಿಲ್ಲ ಎಂದು ವಿಶ್ವೇಶ್ವರ್‌ ಭಟ್ ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...