Homeಮುಖಪುಟರಾಷ್ಟ್ರಪತಿ ಮುರ್ಮು ಕುರಿತು ಅವಹೇಳನ: ಟಿಎಂಸಿ ನಾಯಕ ಕ್ಷಮೆಯಾಚನೆ

ರಾಷ್ಟ್ರಪತಿ ಮುರ್ಮು ಕುರಿತು ಅವಹೇಳನ: ಟಿಎಂಸಿ ನಾಯಕ ಕ್ಷಮೆಯಾಚನೆ

ಮುರ್ಮು ಅವರ ಬಗ್ಗೆ ಆಕ್ಷೇಪಾರ್ಹವಾಗಿ ಬರೆದಿದ್ದ ವಿಶ್ವೇಶ್ವರ ಭಟ್ ಪ್ರಕರಣ ಚರ್ಚೆಯಲ್ಲಿರುವ ಹೊತ್ತಿನಲ್ಲಿ ಇಂತಹದ್ದೇ ಮತ್ತೊಂದು ಘಟನೆ ನಡೆದಿದೆ.

- Advertisement -
- Advertisement -

ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಅಖಿಲ್ ಗಿರಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಆಕ್ಷೇಪಾರ್ಹವಾಗಿ ಹೇಳಿಕೆ ನೀಡಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬೆನ್ನಲ್ಲೇ ಗಿರಿಯವರು ಶನಿವಾರ ಕ್ಷಮೆಯಾಚಿಸಿದ್ದಾರೆ.

ಪಶ್ಚಿಮ ಬಂಗಾಳದ ಕ್ಯಾಬಿನೆಟ್‌ನಲ್ಲಿ ಸಚಿವರಾಗಿದ್ದ ಗಿರಿ ಅವರು ಪಶ್ಚಿಮ ಬಂಗಾಳದ ನಂದಿಗ್ರಾಮ್‌ನಲ್ಲಿ ನಡೆದ ಸಭೆಯೊಂದರಲ್ಲಿ ನೀಡಿದ ಹೇಳಿಕೆ ವಿವಾದಕ್ಕೆ ಗುರಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಯಾರನ್ನೂ ಅವರ ನೋಟದಿಂದ ನಿರ್ಣಯಿಸುವುದಿಲ್ಲ, ನಾವು ರಾಷ್ಟ್ರಪತಿ ಕಚೇರಿಯನ್ನು ಗೌರವಿಸುತ್ತೇವೆ. ಆದರೆ ನಮ್ಮ ರಾಷ್ಟ್ರಪತಿಗಳು ಹೇಗೆ ಕಾಣುತ್ತಾರೆ?” ಎಂದು ಗಿರಿಯವರು ಪ್ರಶ್ನಿಸುತ್ತಿರುವುದು ವಿಡಿಯೊದಲ್ಲಿ ದಾಖಲಾಗಿತ್ತು.

“ಸಂವಿಧಾನ ಮತ್ತು ರಾಷ್ಟ್ರಪತಿ ಹುದ್ದೆಯನ್ನು ಗೌರವಿಸುತ್ತೇನೆ” ಎಂದಿರುವ ಗಿರಿ, ಶನಿವಾರ ಕ್ಷಮೆಯಾಚನೆ ಮಾಡಿದ್ದಾರೆ.

“ಕಳೆದ ಕೆಲವು ತಿಂಗಳುಗಳಿಂದ, ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ನನ್ನ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ, ಅದು ನನಗೆ ಕೋಪವನ್ನುಂಟುಮಾಡಿದೆ” ಎಂದು ಗಿರಿ ತಮ್ಮ ವೀಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ನಂದಿಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾನು ಕೋಪದಲ್ಲಿ ಮಾತನಾಡಿರುವೆ. ‌ಆದರೆ ಭಾರತದ ರಾಷ್ಟ್ರಪತಿಗಳ ಬಗ್ಗೆ ನನಗೆ ಅಪಾರವಾದ ಗೌರವವಿದೆ. ನನ್ನ ಕಾಮೆಂಟ್‌ಗಳಿಗಾಗಿ ನಾನು ಕ್ಷಮೆಯಾಚಿಸುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿಯ ಹಲವಾರು ನಾಯಕರು ಗಿರಿ ಹೇಳಿಕೆಯನ್ನು, ತೃಣಮೂಲ ಕಾಂಗ್ರೆಸ್ ಅನ್ನು ಟೀಕಿಸಿದ್ದಾರೆ. ಮಮತಾ “ಬ್ಯಾನರ್ಜಿ ನೇತೃತ್ವದ ತೃಣಮೂಲ ಸರ್ಕಾರವು ಬುಡಕಟ್ಟು ವಿರೋಧಿಯಾಗಿದೆ” ಎಂದು ಪಶ್ಚಿಮ ಬಂಗಾಳ ಬಿಜೆಪಿ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್ ಆರೋಪಿಸಿದ್ದಾರೆ.

“ಸಿಎಂ ಮಮತಾ ಬ್ಯಾನರ್ಜಿ ಯಾವಾಗಲೂ ಬುಡಕಟ್ಟು ವಿರೋಧಿಯಾಗಿದ್ದಾರೆ” ಎಂದು ಮಜುಂದಾರ್ ಟ್ವೀಟ್ ಮಾಡಿದ್ದಾರೆ.

ಏತನ್ಮಧ್ಯೆ, ಬಿಜೆಪಿ ಸಂಸದರಾದ ಸೌಮಿತ್ರಾ ಖಾನ್ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದು, ಗಿರಿಯವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ರಾಷ್ಟ್ರಪತಿಯವರ ಕುರಿತ ಗಿರಿಯವರ ಹೇಳಿಕೆಯು ದೇಶದ ನಾಗರಿಕರಿಗೆ ಮತ್ತು ಅದರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅವಮಾನವಾಗಿದೆ ಎಂದು ಸೌಮಿತ್ರಾ ಪತ್ರದಲ್ಲಿ ಬರೆದಿದ್ದಾರೆ.

“ಆದ್ದರಿಂದ ಈ ಹೇಯ ಕೃತ್ಯಕ್ಕಾಗಿ ಅಖಿಲ್ ಗಿರಿಯನ್ನು ತಕ್ಷಣವೇ ಬಂಧಿಸಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನಿಮ್ಮನ್ನು ವಿನಂತಿಸಲಾಗಿದೆ” ಎಂದು ಬಿಜೆಪಿ ಸಂಸದರು ಹೇಳಿದ್ದಾರೆ. “ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ, ಏಕೆಂದರೆ ಸಮಾಜವು ಈ ರೀತಿಯ ಮನಸ್ಥಿತಿಯನ್ನು ಬಯಸುವುದಿಲ್ಲ” ಎಂದಿದ್ದಾರೆ.

ಕರ್ನಾಟಕದಲ್ಲಿಯೂ ಇದೇ ರೀತಿಯ ಪ್ರಕರಣ ಇತ್ತೀಚೆಗೆ ವರದಿಯಾಗಿತ್ತು. ರಾಷ್ಟ್ರಪತಿ ಮುರ್ಮು ಅವರ ಬಗ್ಗೆ ‘ವಿಶ್ವವಾಣಿ’ ಪತ್ರಿಕೆಯ ಸಂಪಾದಕ ಬರೆದಿದ್ದ ಸಾಲು ಟೀಕೆಗೆ ಗುರಿಯಾಗಿತ್ತು. ವರ್ಣವನ್ನು ಹೀಯಾಳಿಸಿ ಅಪಮಾನಿಸಿದ್ದ ಕರ್ನಾಟಕದ ಪ್ರಕರಣ ಚರ್ಚೆಯಲ್ಲಿರುವ ಹೊತ್ತಿನಲ್ಲಿಯೇ ಪಶ್ಚಿಮ ಬಂಗಾಳದಲ್ಲಿಯೂ ಇಂಥದ್ದೇ ಪ್ರಕರಣ ವರದಿಯಾಗಿದೆ.

ಇದನ್ನೂ ಓದಿರಿ: ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಸಂಸ್ಕಾರಿ ಬ್ರಾಹ್ಮಣರು ಎಂದಿದ್ದ ಶಾಸಕನಿಗೆ ಮತ್ತೆ ಟಿಕೆಟ್ ನೀಡಿದ ಬಿಜೆಪಿ

ತಮ್ಮ ಅಂಕಣ ಬರಹದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುರವರ ಬಣ್ಣವನ್ನು ಅವಮಾನಕರ ರೀತಿಯಲ್ಲಿ ಚಿತ್ರಿಸಿ ಜನಾಂಗೀಯ ನಿಂದನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವೇಶ್ವರ ಭಟ್, ರಾಷ್ಟ್ರೀಯ ಮಹಿಳಾ ಆಯೋಗದ ಎದುರು ಇತ್ತೀಚೆಗೆ ಹಾಜರಿದ್ದರು.

ಅವಹೇಳನಕಾರಿಯಾಗಿ ಬರೆದಿರುವುದನ್ನು ರಾಷ್ಟ್ರೀಯ ಮಹಿಳಾ ಆಯೋಗವು (NCW) ಗುರುತಿಸಿತ್ತು. ಈ ಕುರಿತು ಅಕ್ಟೋಬರ್ 26ರಂದು ವಿಚಾರಣೆಗೆ ಹಾಜರಾಗುವಂತೆ ಪತ್ರಕರ್ತ ವಿಶ್ವೇಶ್ವರ ಭಟ್‌ರವರಿಗೆ ನೋಟಿಸ್ ನೀಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಆಯೋಗದ ಮುಂದೆ ಹಾಜರಾದ ವಿಶ್ವೇಶ್ವರ ಭಟ್, “ಭಾರತದ ರಾಷ್ಟ್ರಪತಿಯವರನ್ನು ಅವಮಾನಿಸುವ ಯಾವುದೇ ದುರುದ್ದೇಶ ತನಗೆ ಇಲ್ಲ ಎಂಬುದಾಗಿ ಸ್ಪಷ್ಟಪಡಿಸಿ ಕ್ಷೆಮೆ ಯಾಚಿಸಿದ್ದಾರೆ, ಲಿಖಿತವಾಗಿಯೂ ಕ್ಷಮೆ ಕೇಳಿದ್ದಾರೆ” ಎಂದು ಆಯೋಗದ ಅಧ್ಯಕ್ಷೆ ರೇಖಾ ಶರ್ಮಾರವರ ಹೇಳಿಕೆ ಉಲ್ಲೇಖಿಸಿ ‘ಪ್ರಜಾವಾಣಿ’ ವರದಿ ಮಾಡಿತ್ತು. ಆದರೆ ಕ್ಷಮೆಯಾಚಿಸಿಲ್ಲ ಎಂದು ವಿಶ್ವೇಶ್ವರ್‌ ಭಟ್ ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...