Homeಕರ್ನಾಟಕನಾಳೆ ಕಾರ್ಯಕ್ರಮವಿದ್ದಾಗ ದೇವೇಗೌಡರಿಗೆ ಪತ್ರ ಬಂದಿದ್ದು ಮಧ್ಯರಾತ್ರಿ 12.30ಕ್ಕೆ: ಜೆಡಿಎಸ್‌ ಆಕ್ರೋಶ

ನಾಳೆ ಕಾರ್ಯಕ್ರಮವಿದ್ದಾಗ ದೇವೇಗೌಡರಿಗೆ ಪತ್ರ ಬಂದಿದ್ದು ಮಧ್ಯರಾತ್ರಿ 12.30ಕ್ಕೆ: ಜೆಡಿಎಸ್‌ ಆಕ್ರೋಶ

ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ದೇವೇಗೌಡರನ್ನು ಕರೆಯಲಾಗಿತ್ತು ಎಂದಿರುವ ಬಿಜೆಪಿಗೆ ಜೆಡಿಎಸ್‌ ತಿರುಗೇಟು ನೀಡಿದೆ.

- Advertisement -
- Advertisement -

“ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ! ಆದರೆ; ಮುಖ್ಯಮಂತ್ರಿಗಳೇ ಪತ್ರ ಬರೆದು ಎಚ್‌.ಡಿ.ದೇವೇಗೌಡ ಅವರನ್ನು ಅವರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ ಬಿಜೆಪಿ ಸರಕಾರ, ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ” ಎಂದು ಜೆಡಿಎಸ್‌ ಆಕ್ರೋಶ ವ್ಯಕ್ತಪಡಿಸಿದೆ.

“ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಎಚ್‌.ಡಿ.ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ” ಎಂದು ಶುಕ್ರವಾರ ಜೆಡಿಎಸ್‌ ಸರಣಿ ಟ್ವೀಟ್ ಮಾಡಿತ್ತು. ಅದರ ಬೆನ್ನಲ್ಲೇ, ದೇವೇಗೌಡರಿಗೆ ಮುಖ್ಯಮಂತ್ರಿಯವರು ಬರೆದಿರುವ ಪತ್ರವನ್ನು ಬಿಜೆಪಿಯವರು ಪ್ರಸ್ತಾಪಿಸಿದ್ದರು. ಆದರೆ ಜೆಡಿಎಸ್‌- ಈ ವಾದವನ್ನು ನಿರಾಕರಿಸಿದೆ. ಕಾರ್ಯಕ್ರಮ ಒಂದು ದಿನ ಇರುವಾಗ ಮಾತ್ರ ಆಹ್ವಾನ ನೀಡಲಾಗಿತ್ತು ಎಂದು ಸ್ಪಷ್ಟಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿಗಳಿಗೆ ಕರೆ ಮಾಡಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಟ್ವೀಟಿಸಿದೆ. ಸರಿ; ನವೆಂಬರ್‌ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು, ಪತ್ರ ಬರೆದಿದ್ದು ಯಾವಾಗ? ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ?” ಎಂದು ಪ್ರಶ್ನಿಸಿದೆ.

“ಕಮಲದವರ ಕಣ್ಣಿಗೆ ಕಾಮಾಲೆ ಬಡಿದಿದೆಯಾ, ಹೇಗೆ? ಘನವೇತ್ತ ಮಾನ್ಯ ಮುಖ್ಯಮಂತ್ರಿಗಳು ಬರೆದ ʼಘನವೇತ್ತʼ ಪತ್ರವನ್ನೊಮ್ಮೆ ʼಸಂಘಸಂಸ್ಕಾರʼದ ಬಿಜೆಪಿಗರು ಗಮನಿಸಬೇಕು. ಪತ್ರದಲ್ಲಿ ಮಾಜಿ ಪ್ರಧಾನಿಗಳ ಹೆಸರೆಲ್ಲಿ ಬರೆಯಲ್ಪಟ್ಟಿದೆ? (ಕೊನೆಯಲ್ಲಿ) ಕನ್ನಡ ನೆಲದ ಏಕೈಕ ಪ್ರಧಾನಿಯಾಗಿದ್ದ ಮೇರು ನಾಯಕರಿಗೆ ಪತ್ರ ಬರೆಯುವ ಸಂಸ್ಕಾರ, ಶಿಷ್ಟಾಚಾರ ಇದೇನಾ?” ಎಂದು ಹರಿಹಾಯ್ದಿದೆ.

“ಮರುದಿನ 12.50ರ ಸಮಾರಂಭಕ್ಕೆ ರಾತ್ರಿ 9 ಗಂಟೆಗೆ ಮಾಜಿ ಪ್ರಧಾನಿಗಳಿಗೆ ಕಾಟಾಚಾರದ ಕರೆ ಮಾಡಿದ ಮುಖ್ಯಮಂತ್ರಿಗಳು, ತಾವು ಬರೆದ ಪತ್ರವನ್ನು ತಲುಪಿಸಿದ್ದು ಮಧ್ಯರಾತ್ರಿ 12.30 ಗಂಟೆಗೆ! ಹಾಗಾದರೆ, ಅವರ ಮೊದಲ ಪತ್ರ ಹೋಗಿದ್ದು ಯಾರಿಗೆ? ಇಂಥ ಹಿರಿಯರ ವಿಷಯದಲ್ಲಿ ಜಬಾಬ್ದಾರಿ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ವರ್ತಿಸುವ ರೀತಿ ಹೀಗೇನಾ?” ಎಂದು ಕೇಳಿದೆ.

“ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದರೆ, ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ. ಸತ್ಯ ಹೇಳುವ ದಮ್ಮು, ತಾಕತ್ತು ಮುಖ್ಯಮಂತ್ರಿಗಳಿಗೆ ಇದೆ ಎಂದು ನಾವು ಭಾವಿಸುತ್ತೇವೆ” ಎಂದು ಪತ್ರವನ್ನು ಲಗತ್ತಿಸಿರುವ ಜೆಡಿಎಸ್‌, ಪತ್ರ ಬರೆಯಲಾಗಿರುವ ದಿನಾಂಕವನ್ನು ಗುರುತುಹಾಕಿ ಟ್ವೀಟ್ ಮಾಡಿದೆ.

“ಇನ್ನು ಕನ್ನಡದ ಆಸ್ಮಿತೆ ಪ್ರಶ್ನೆ. ಬಿಜೆಪಿಗೆ ನಾಚಿಕೆಯಾಗಬೇಕು, ಹಿಂದಿ ಹೇರಿಕೆ ವಾಕರಿಕೆ ಬರುವಷ್ಟಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಪಂಗನಾಮ, ಈ ನೆಲದ ಸಂಸ್ಕೃತಿ, ಭಾಷೆ, ಆಚಾರ-ವಿಚಾರಗಳನ್ನು ಹತ್ತಿಕ್ಕಿ,ಇಡೀ ದಕ್ಷಿಣ ಭಾರತೀಯರನ್ನು ದೆಹಲಿ ಗುಲಾಮರನ್ನಾಗಿ ಮಾಡಲು ಹೊರಟಿರುವ ಬಿಜೆಪಿಗರಾ ಕನ್ನಡದ ಮಣ್ಣಿನ ಮಕ್ಕಳನ್ನು ಗುರುತಿಸಿದ್ದು?” ಎಂದು ಕೇಳಿದೆ.

ಇದನ್ನೂ ಓದಿರಿ: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದೆ ಅವಮಾನಿಸಿದ ಬಿಜೆಪಿ: ಜೆಡಿಎಸ್ ಆಕ್ರೋಶ

‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’; ಇದು ಭಾರತ ಕಂಡ ಪರಮ ಢೋಂಗೀ ಘೋಷಣೆ. ಇದಕ್ಕೆ ʼಸಬ್ ಕಾ ಸರ್ವನಾಶ್ʼ ಎಂದು ಸೇರಿದರೆ ಪರಿಪೂರ್ಣ. ಕರ್ನಾಟಕದಲ್ಲಿ ಶಿಕ್ಷಣ, ಧರ್ಮ, ಜಾತಿ, ಆಚಾರ, ವಿಚಾರ, ಆಹಾರ, ಉಡುಪುಗಳ ವಿಷಯದಲ್ಲೂ ಬಿಜೆಪಿ ಮಾಡಿದ್ದು ಸಾಕ್ಷಾತ್ ಸರ್ವನಾಶವೇ ಎಂದು ಅಭಿಪ್ರಾಯಪಟ್ಟಿದೆ.

“ಕುಟುಂಬ ರಾಜಕಾರಣ ಅಂತೀರಾ? ಗುಜರಾತಿನಿಂದ ಶುರುವಾಗಿ ದೆಹಲಿವರೆಗೂ ಹಬ್ಬಿ, ಬಿಸಿಸಿಐ ಒಳಹೊಕ್ಕಿ ಕೂತಿದ್ದು ಯಾರ ಕುಟುಂಬ? ಕರ್ನಾಟಕದಲ್ಲಿ ಬೆಳೆದು ನಿಂತ ಬಿಜೆಪಿ ವಂಶವೃಕ್ಷಗಳೆಷ್ಟು? ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಗುಜರಾತ್ ನಿಂದ ಒಡಿಶಾವರೆಗೆ ವ್ಯಾಪಿಸಿರುವ ಬಿಜೆಪಿ ವಂಶವೃಕ್ಷಗಳ ಕೊಂಬೆಗಳ ಲೆಕ್ಕ ಬಿಚ್ಚಿಡಬೇಕೆ?” ಎಂದು ಟೀಕಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...