Homeಮುಖಪುಟಪೃಥ್ವಿರಾಜ್ ಚೌಹಾಣ್‌, ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಯತಿ ನರಸಿಂಗಾನಂದ ವಿರುದ್ಧ ಎಫ್‌ಐಆರ್‌

ಪೃಥ್ವಿರಾಜ್ ಚೌಹಾಣ್‌, ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಯತಿ ನರಸಿಂಗಾನಂದ ವಿರುದ್ಧ ಎಫ್‌ಐಆರ್‌

ಪ್ರಕರಣ ದಾಖಲಾದ ಬಳಿಕ ಜುಬೇರ್‌ ಅವರನ್ನು ನಿಂದಿಸಿ ವಿಡಿಯೊ ಬಿಡುಗಡೆ ಮಾಡಿರುವ ನರಸಿಂಗಾನಂದ, “ನಾನು ತಪ್ಪು ಇತಿಹಾಸ ಓದಿಕೊಂಡಿದ್ದೇನೆ” ಎಂದೂ ಹೇಳಿದ್ದಾರೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರನ್ನು ರಜಪೂತ ರಾಜ ಪೃಥ್ವಿರಾಜ್ ಚೌಹಾಣ್‌ಗೆ ಹೋಲಿಸಿ, ಅವಹೇಳನಕಾರಿಯಾಗಿ ಮಾತನಾಡಿದ್ದ ಉತ್ತರ ಪ್ರದೇಶದ ದಾಸ್ನಾ ದೇವಿ ದೇವಸ್ಥಾನದ ಪ್ರಧಾನ ಅರ್ಚಕ ಯತಿ ನರಸಿಂಗಾನಂದ ವಿರುದ್ಧ ಪ್ರಕರಣ ದಾಖಲಾಗಿದೆ.

ಮಸೂರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ ಎಂದು ಗಾಜಿಯಾಬಾದ್ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಈರಾಜ್ ರಾಜಾ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಜುಬೇರ್‌ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವಿಡಿಯೊ ವೈರಲ್‌ ಆಗಿದೆ. ಗಾಜಿಯಾಬಾದ್ ಪೊಲೀಸರ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ ಮೂಲಕ ಪ್ರತಿಕ್ರಿಯಿಸಿರುವ ಎಸ್‌ಪಿ ರಾಜಾ, “ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ವೈರಲ್‌ ಆಗುತ್ತಿದೆ. ಈ ವಿಡಿಯೊದಲ್ಲಿ ಯತಿ ನರಸಿಂಹಾನಂದ ಅವರು ಗೌರವಾನ್ವಿತ ಪ್ರಧಾನಿ ಮತ್ತು ಇತರ ಮಹಾನ್ ನಾಯಕರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

ಐಪಿಸಿ ಸೆಕ್ಷನ್ 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295 ಎ (ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶಪೂರ್ವಕ ಕೃತ್ಯ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ದ್ವೇಷ ಭಾಷಣಗಳ ಮೂಲಕ ಕುಖ್ಯಾತರಾಗಿರುವ ಯತಿ ನರಸಿಂಗಾನಂದ ಅವರು ಇತ್ತೀಚೆಗೆ ಪೃಥ್ವಿರಾಜ್ ಚೌಹಾಣ್, ಪ್ರಧಾನಿ ನರೇಂದ್ರಮೋದಿ ಹಾಗೂ ಮಹಾತ್ಮ ಗಾಂಧಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು.

“ಪೃಥ್ವಿರಾಜ್ ಚೌಹಾಣ್ ಹಿಂದೂಗಳನ್ನು ಹೇಗೆ ನಡೆಸಿಕೊಂಡರು, ಮೋದಿಯವರೂ ಅದೇ ರೀತಿ ಮಾಡುತ್ತಿದ್ದಾರೆ. ಪೃಥ್ವಿರಾಜನು ಅನೇಕ ಹಿಂದೂಗಳನ್ನು ಕೊಂದನು ಮತ್ತು ಮಹಿಳೆಯರನ್ನು ಅಪಹರಿಸಿದನು. ವಾಸ್ತವವಾಗಿ, ಆತ ತಮ್ಮ ಸ್ವಂತ ಸಹೋದರನ ಮಗಳನ್ನು ಬಿಡಲಿಲ್ಲ” ಎಂದು ಯತಿ ನರಸಿಂಗಾನಂದ ಹೇಳಿರುವುದು ವಿಡಿಯೊದಲ್ಲಿ ದಾಖಲಾಗಿದೆ.

“ಅನೇಕ ವೀರ ಹಿಂದೂ ರಾಜರ ಸಾವಿಗೆ ಪೃಥ್ವಿರಾಜ್ ಕಾರಣನಾಗಿದ್ದನು. ಆದರೆ ಮುಸ್ಲಿಂ ಆಡಳಿತಗಾರನನ್ನು ಎಂದಿಗೂ ಮುಟ್ಟಲಿಲ್ಲ. ಕೊನೆಯಲ್ಲಿ ಏನಾಯಿತು? ಆತನನ್ನು ಮುಸ್ಲಿಂ ದೊರೆ ಕೊಂದಿದ್ದಾನೆಯೇ ಹೊರತು ಹಿಂದೂ ಅಲ್ಲ” ಎಂದು ಆರೋಪಿಸಿದ್ದರು.

“ಪೃಥ್ವಿರಾಜ್ ಮಾಡಿರುವ ದುಷ್ಕೃತ್ಯಗಳು ಮಹಾತ್ಮ ಗಾಂಧಿ ಮತ್ತು ನರೇಂದ್ರ ಮೋದಿಯವರಿಗೆ ಹೋಲಿಕೆಯಾಗುತ್ತವೆ. ನಾವು ಮಾಡುವುದೆಂದರೆ ಅವರನ್ನು (ಮೋದಿ) ಹೊಗಳುವುದು. ಮೋದಿ ಮುಂದುವರಿದರೆ, ಅವರಿಗೆ ಶಾಂತಿಯಿಂದ ಅಳಲು ಸ್ಥಳವಿರುವುದಿಲ್ಲ” ಎಂದು ಟೀಕಿಸಿದ್ದರು.

ಪೃಥ್ವಿರಾಜ್ ಚೌಹಾಣ್ ಅವರ ಸೋದರಸಂಬಂಧಿ ಮತ್ತು ರಾಜಕುಮಾರಿ ಸಂಯೋಗಿತಾ ಅವರ ತಂದೆ ಜೈಚಂದ್ (ರಜಪೂತ ರಾಜ) ಬಗ್ಗೆ ಮಾತನಾಡಿದ್ದರು. ಜೈಚಂದ್‌ ಅವರನ್ನು ಮಹಾನ್ ನಾಯಕ ಎಂದು ಕರೆದ ನರಸಿಂಗಾನಂದ, “ಪೃಥ್ವಿರಾಜ್ ಚೌಹಾಣ್‌ಗಿಂತ ಅವರನ್ನು ತನ್ನ ಸ್ನೇಹಿತನನ್ನಾಗಿ ಆಯ್ಕೆ ಮಾಡಿಕೊಳ್ಳುತ್ತೇನೆ” ಎಂದಿದ್ದರು.

“ಘೋರಿ ರಾಜವಂಶದ ದೊರೆ ಮುಹಮ್ಮದ್ ಘೋರಿಗೆ ಜೈಚಂದ್ ಎಂದಿಗೂ ಸಹಾಯ ಮಾಡಲಿಲ್ಲ. ಅವರು ನಿಜವಾದ ರಜಪೂತರಾಗಿದ್ದರು” ಎಂದು ಶ್ಲಾಘಿಸಿದ್ದರು. ಹಿಂದೂಗಳು ದೀರ್ಘಕಾಲದಿಂದಲೂ ವಿವಿಧ ವಿದೇಶಿ ಆಡಳಿತಗಾರರಿಂದಾಗಿ ಗುಲಾಮರಾಗಿದ್ದಾರೆ ಎಂದು ಆರೋಪಿಸಿದ್ದರು.

“ಇದು ಗಾಂಧಿಯನ್ನು ಗೌರವಿಸುವ, ನಾಥೂರಾಂ ಗೋಡ್ಸೆ ಮತ್ತು ವೀರ್ ಸಾವರ್ಕರ್ ಅವರನ್ನು ನಿಂದಿಸುವ ದೇಶ. ದೇಶದ ಮನಸ್ಥಿತಿ ಬದಲಾಗುವವರೆಗೂ ಇದು ಮುಂದುವರಿಯುತ್ತದೆ” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿರಿ: ಹರ್‌‌ ಘರ್‌ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ

ಕ್ಷತ್ರಿಯ ಪರಿಷತ್ ಖಂಡನೆ

ಯತಿ ನರಸಿಂಗಾನಂದ ಅವರ ಹೇಳಿಕೆಯನ್ನು ಕ್ಷತ್ರೀಯ ಪರಿಷತ್ ಖಂಡಿಸಿದ್ದು, ಕ್ರಮಕ್ಕೆ ಆಗ್ರಹಿಸಿದೆ. “ಮಹಾನ್ ಕ್ಷತ್ರಿಯ ಚಕ್ರವರ್ತಿ ಪೃಥ್ವಿರಾಜ್ ಚೌಹಾಣ್ ಅವರ ವಿರುದ್ಧ ಹುಸಿ-ರಾಷ್ಟ್ರೀಯವಾದಿ ಯತಿ ನರಸಿಂಹಾನಂದ ಮಾಡಿರುವ ಭಯಾನಕ ಅಭಿಪ್ರಾಯಗಳು ಇತ್ತೀಚಿನ ದಿನಗಳಲ್ಲಿನ ವಿಭಜಿಸುವ ರಾಜಕೀಯದಲ್ಲೇ ಕೀಳುಮಟ್ಟದ್ದಾಗಿವೆ” ಎಂದು ಅಭಿಪ್ರಾಯಪಟ್ಟಿದೆ.

“ಯತಿ ನರಸಿಂಗಾನಂದ ಅವರ ದುರುದ್ದೇಶಪೂರಿತ ಅಭಿಪ್ರಾಯಗಳನ್ನು ಖಂಡಿಸುತ್ತೇವೆ. ಅಪರಾಧಿಯ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸುತ್ತೇವೆ” ಎಂದಿದೆ.

ಪ್ರಕರಣ ದಾಖಲಾದ ಬಳಿಕ ತೀವ್ರ ಹಿಂದುತ್ವವಾಗಿ ನರಸಿಂಗಾನಂದ ಯೂಟರ್ನ್ ಹೊಡೆದಿದ್ದಾರೆ. ಮೊಹಮ್ಮದ್ ಜುಬೇರ್‌ ಅವರನ್ನು ನಿಂದಿಸುವ ಮೂಲಕ ಕ್ಷಮಾಪಣಾ ವಿಡಿಯೊ ಬಿಡುಗಡೆ ಮಾಡಿರುವ ಯತಿ, “ನನ್ನ ವಿಡಿಯೊವನ್ನು ಜುಬೇರ್‌ ಎಡಿಟ್‌ ಮಾಡಿ ಹಂಚಿಕೊಂಡಿದ್ದಾರೆ. ಚೌಹಾಣ್ ಬಗ್ಗೆ ತಪ್ಪು ಇತಿಹಾಸವನ್ನು ಓದಿದ್ದೇನೆ ಎಂದು ಭಾವಿಸಿದ್ದೇನೆ. ರಜಪೂತ ಸಮುದಾಯದ ಕ್ಷಮೆಯಾಚಿಸುತ್ತೇನೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಒಂದೆಡೆ ಜುಬೇರ್‌ ಅವರನ್ನು ನಿಂದಿಸುತ್ತಲೇ, ತಾನು ತಪ್ಪು ಓದಿಕೊಂಡಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನು ಮೊದಲೇ ಊಹಿಸಿದ್ದ ಪತ್ರಕರ್ತ ಮೊಹಮ್ಮದ್ ಜುಬೇರ್‌, “ಎಫ್‌ಐಆರ್‌ ದಾಖಲಾಗಿರುವುದರಿಂದ, ಅವರ ವೀಡಿಯೊವನ್ನು ನಾನು ಎಡಿಟ್ ಮಾಡಿದ್ದೇನೆ ಎಂದು ಈಗ ಯತಿ ನರಸಿಂಗಾನಂದ ಹೇಳಿಕೊಳ್ಳಬಹುದು. ಸಂಪೂರ್ಣ ವೀಡಿಯೊ ಲಿಂಕ್‌ ಹಾಕಿದ್ದೇನೆ. 17:20 ನಿಮಿಷದಲ್ಲಿ ನೋಡಿರಿ” ಎಂದು ಟ್ವೀಟ್ ಮಾಡಿದ್ದರು.

ಯತಿ ನರಸಿಂಗಾನಂದ ಅವರು ನಾಲಿಗೆ ಹರಿಬಿಡುವುದು ಇದು ಮೊದಲೇನೂ ಅಲ್ಲ. ಮುಸ್ಲಿಮರ ನರಮೇಧ ನಡೆಸಬೇಕು ಎಂದು ಹೇಳಿಕೆ ನೀಡಿ ಬಂಧನಕ್ಕೆ ಒಳಗಾಗಿದ್ದರು. ಭಾರತದ ಸಂವಿಧಾನ ಹಾಗೂ ಸುಪ್ರೀಂ ಕೋರ್ಟ್ ವಿರುದ್ಧ ಅತ್ಯಂತ ತುಚ್ಛವಾಗಿ ಮಾತನಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...