Homeಮುಖಪುಟಪೃಥ್ವಿರಾಜ್ ಚೌಹಾಣ್‌, ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಯತಿ ನರಸಿಂಗಾನಂದ ವಿರುದ್ಧ ಎಫ್‌ಐಆರ್‌

ಪೃಥ್ವಿರಾಜ್ ಚೌಹಾಣ್‌, ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಯತಿ ನರಸಿಂಗಾನಂದ ವಿರುದ್ಧ ಎಫ್‌ಐಆರ್‌

ಪ್ರಕರಣ ದಾಖಲಾದ ಬಳಿಕ ಜುಬೇರ್‌ ಅವರನ್ನು ನಿಂದಿಸಿ ವಿಡಿಯೊ ಬಿಡುಗಡೆ ಮಾಡಿರುವ ನರಸಿಂಗಾನಂದ, “ನಾನು ತಪ್ಪು ಇತಿಹಾಸ ಓದಿಕೊಂಡಿದ್ದೇನೆ” ಎಂದೂ ಹೇಳಿದ್ದಾರೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರನ್ನು ರಜಪೂತ ರಾಜ ಪೃಥ್ವಿರಾಜ್ ಚೌಹಾಣ್‌ಗೆ ಹೋಲಿಸಿ, ಅವಹೇಳನಕಾರಿಯಾಗಿ ಮಾತನಾಡಿದ್ದ ಉತ್ತರ ಪ್ರದೇಶದ ದಾಸ್ನಾ ದೇವಿ ದೇವಸ್ಥಾನದ ಪ್ರಧಾನ ಅರ್ಚಕ ಯತಿ ನರಸಿಂಗಾನಂದ ವಿರುದ್ಧ ಪ್ರಕರಣ ದಾಖಲಾಗಿದೆ.

ಮಸೂರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ ಎಂದು ಗಾಜಿಯಾಬಾದ್ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಈರಾಜ್ ರಾಜಾ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಜುಬೇರ್‌ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವಿಡಿಯೊ ವೈರಲ್‌ ಆಗಿದೆ. ಗಾಜಿಯಾಬಾದ್ ಪೊಲೀಸರ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ ಮೂಲಕ ಪ್ರತಿಕ್ರಿಯಿಸಿರುವ ಎಸ್‌ಪಿ ರಾಜಾ, “ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ವೈರಲ್‌ ಆಗುತ್ತಿದೆ. ಈ ವಿಡಿಯೊದಲ್ಲಿ ಯತಿ ನರಸಿಂಹಾನಂದ ಅವರು ಗೌರವಾನ್ವಿತ ಪ್ರಧಾನಿ ಮತ್ತು ಇತರ ಮಹಾನ್ ನಾಯಕರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

ಐಪಿಸಿ ಸೆಕ್ಷನ್ 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295 ಎ (ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶಪೂರ್ವಕ ಕೃತ್ಯ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ದ್ವೇಷ ಭಾಷಣಗಳ ಮೂಲಕ ಕುಖ್ಯಾತರಾಗಿರುವ ಯತಿ ನರಸಿಂಗಾನಂದ ಅವರು ಇತ್ತೀಚೆಗೆ ಪೃಥ್ವಿರಾಜ್ ಚೌಹಾಣ್, ಪ್ರಧಾನಿ ನರೇಂದ್ರಮೋದಿ ಹಾಗೂ ಮಹಾತ್ಮ ಗಾಂಧಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು.

“ಪೃಥ್ವಿರಾಜ್ ಚೌಹಾಣ್ ಹಿಂದೂಗಳನ್ನು ಹೇಗೆ ನಡೆಸಿಕೊಂಡರು, ಮೋದಿಯವರೂ ಅದೇ ರೀತಿ ಮಾಡುತ್ತಿದ್ದಾರೆ. ಪೃಥ್ವಿರಾಜನು ಅನೇಕ ಹಿಂದೂಗಳನ್ನು ಕೊಂದನು ಮತ್ತು ಮಹಿಳೆಯರನ್ನು ಅಪಹರಿಸಿದನು. ವಾಸ್ತವವಾಗಿ, ಆತ ತಮ್ಮ ಸ್ವಂತ ಸಹೋದರನ ಮಗಳನ್ನು ಬಿಡಲಿಲ್ಲ” ಎಂದು ಯತಿ ನರಸಿಂಗಾನಂದ ಹೇಳಿರುವುದು ವಿಡಿಯೊದಲ್ಲಿ ದಾಖಲಾಗಿದೆ.

“ಅನೇಕ ವೀರ ಹಿಂದೂ ರಾಜರ ಸಾವಿಗೆ ಪೃಥ್ವಿರಾಜ್ ಕಾರಣನಾಗಿದ್ದನು. ಆದರೆ ಮುಸ್ಲಿಂ ಆಡಳಿತಗಾರನನ್ನು ಎಂದಿಗೂ ಮುಟ್ಟಲಿಲ್ಲ. ಕೊನೆಯಲ್ಲಿ ಏನಾಯಿತು? ಆತನನ್ನು ಮುಸ್ಲಿಂ ದೊರೆ ಕೊಂದಿದ್ದಾನೆಯೇ ಹೊರತು ಹಿಂದೂ ಅಲ್ಲ” ಎಂದು ಆರೋಪಿಸಿದ್ದರು.

“ಪೃಥ್ವಿರಾಜ್ ಮಾಡಿರುವ ದುಷ್ಕೃತ್ಯಗಳು ಮಹಾತ್ಮ ಗಾಂಧಿ ಮತ್ತು ನರೇಂದ್ರ ಮೋದಿಯವರಿಗೆ ಹೋಲಿಕೆಯಾಗುತ್ತವೆ. ನಾವು ಮಾಡುವುದೆಂದರೆ ಅವರನ್ನು (ಮೋದಿ) ಹೊಗಳುವುದು. ಮೋದಿ ಮುಂದುವರಿದರೆ, ಅವರಿಗೆ ಶಾಂತಿಯಿಂದ ಅಳಲು ಸ್ಥಳವಿರುವುದಿಲ್ಲ” ಎಂದು ಟೀಕಿಸಿದ್ದರು.

ಪೃಥ್ವಿರಾಜ್ ಚೌಹಾಣ್ ಅವರ ಸೋದರಸಂಬಂಧಿ ಮತ್ತು ರಾಜಕುಮಾರಿ ಸಂಯೋಗಿತಾ ಅವರ ತಂದೆ ಜೈಚಂದ್ (ರಜಪೂತ ರಾಜ) ಬಗ್ಗೆ ಮಾತನಾಡಿದ್ದರು. ಜೈಚಂದ್‌ ಅವರನ್ನು ಮಹಾನ್ ನಾಯಕ ಎಂದು ಕರೆದ ನರಸಿಂಗಾನಂದ, “ಪೃಥ್ವಿರಾಜ್ ಚೌಹಾಣ್‌ಗಿಂತ ಅವರನ್ನು ತನ್ನ ಸ್ನೇಹಿತನನ್ನಾಗಿ ಆಯ್ಕೆ ಮಾಡಿಕೊಳ್ಳುತ್ತೇನೆ” ಎಂದಿದ್ದರು.

“ಘೋರಿ ರಾಜವಂಶದ ದೊರೆ ಮುಹಮ್ಮದ್ ಘೋರಿಗೆ ಜೈಚಂದ್ ಎಂದಿಗೂ ಸಹಾಯ ಮಾಡಲಿಲ್ಲ. ಅವರು ನಿಜವಾದ ರಜಪೂತರಾಗಿದ್ದರು” ಎಂದು ಶ್ಲಾಘಿಸಿದ್ದರು. ಹಿಂದೂಗಳು ದೀರ್ಘಕಾಲದಿಂದಲೂ ವಿವಿಧ ವಿದೇಶಿ ಆಡಳಿತಗಾರರಿಂದಾಗಿ ಗುಲಾಮರಾಗಿದ್ದಾರೆ ಎಂದು ಆರೋಪಿಸಿದ್ದರು.

“ಇದು ಗಾಂಧಿಯನ್ನು ಗೌರವಿಸುವ, ನಾಥೂರಾಂ ಗೋಡ್ಸೆ ಮತ್ತು ವೀರ್ ಸಾವರ್ಕರ್ ಅವರನ್ನು ನಿಂದಿಸುವ ದೇಶ. ದೇಶದ ಮನಸ್ಥಿತಿ ಬದಲಾಗುವವರೆಗೂ ಇದು ಮುಂದುವರಿಯುತ್ತದೆ” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿರಿ: ಹರ್‌‌ ಘರ್‌ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ

ಕ್ಷತ್ರಿಯ ಪರಿಷತ್ ಖಂಡನೆ

ಯತಿ ನರಸಿಂಗಾನಂದ ಅವರ ಹೇಳಿಕೆಯನ್ನು ಕ್ಷತ್ರೀಯ ಪರಿಷತ್ ಖಂಡಿಸಿದ್ದು, ಕ್ರಮಕ್ಕೆ ಆಗ್ರಹಿಸಿದೆ. “ಮಹಾನ್ ಕ್ಷತ್ರಿಯ ಚಕ್ರವರ್ತಿ ಪೃಥ್ವಿರಾಜ್ ಚೌಹಾಣ್ ಅವರ ವಿರುದ್ಧ ಹುಸಿ-ರಾಷ್ಟ್ರೀಯವಾದಿ ಯತಿ ನರಸಿಂಹಾನಂದ ಮಾಡಿರುವ ಭಯಾನಕ ಅಭಿಪ್ರಾಯಗಳು ಇತ್ತೀಚಿನ ದಿನಗಳಲ್ಲಿನ ವಿಭಜಿಸುವ ರಾಜಕೀಯದಲ್ಲೇ ಕೀಳುಮಟ್ಟದ್ದಾಗಿವೆ” ಎಂದು ಅಭಿಪ್ರಾಯಪಟ್ಟಿದೆ.

“ಯತಿ ನರಸಿಂಗಾನಂದ ಅವರ ದುರುದ್ದೇಶಪೂರಿತ ಅಭಿಪ್ರಾಯಗಳನ್ನು ಖಂಡಿಸುತ್ತೇವೆ. ಅಪರಾಧಿಯ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸುತ್ತೇವೆ” ಎಂದಿದೆ.

ಪ್ರಕರಣ ದಾಖಲಾದ ಬಳಿಕ ತೀವ್ರ ಹಿಂದುತ್ವವಾಗಿ ನರಸಿಂಗಾನಂದ ಯೂಟರ್ನ್ ಹೊಡೆದಿದ್ದಾರೆ. ಮೊಹಮ್ಮದ್ ಜುಬೇರ್‌ ಅವರನ್ನು ನಿಂದಿಸುವ ಮೂಲಕ ಕ್ಷಮಾಪಣಾ ವಿಡಿಯೊ ಬಿಡುಗಡೆ ಮಾಡಿರುವ ಯತಿ, “ನನ್ನ ವಿಡಿಯೊವನ್ನು ಜುಬೇರ್‌ ಎಡಿಟ್‌ ಮಾಡಿ ಹಂಚಿಕೊಂಡಿದ್ದಾರೆ. ಚೌಹಾಣ್ ಬಗ್ಗೆ ತಪ್ಪು ಇತಿಹಾಸವನ್ನು ಓದಿದ್ದೇನೆ ಎಂದು ಭಾವಿಸಿದ್ದೇನೆ. ರಜಪೂತ ಸಮುದಾಯದ ಕ್ಷಮೆಯಾಚಿಸುತ್ತೇನೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಒಂದೆಡೆ ಜುಬೇರ್‌ ಅವರನ್ನು ನಿಂದಿಸುತ್ತಲೇ, ತಾನು ತಪ್ಪು ಓದಿಕೊಂಡಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನು ಮೊದಲೇ ಊಹಿಸಿದ್ದ ಪತ್ರಕರ್ತ ಮೊಹಮ್ಮದ್ ಜುಬೇರ್‌, “ಎಫ್‌ಐಆರ್‌ ದಾಖಲಾಗಿರುವುದರಿಂದ, ಅವರ ವೀಡಿಯೊವನ್ನು ನಾನು ಎಡಿಟ್ ಮಾಡಿದ್ದೇನೆ ಎಂದು ಈಗ ಯತಿ ನರಸಿಂಗಾನಂದ ಹೇಳಿಕೊಳ್ಳಬಹುದು. ಸಂಪೂರ್ಣ ವೀಡಿಯೊ ಲಿಂಕ್‌ ಹಾಕಿದ್ದೇನೆ. 17:20 ನಿಮಿಷದಲ್ಲಿ ನೋಡಿರಿ” ಎಂದು ಟ್ವೀಟ್ ಮಾಡಿದ್ದರು.

ಯತಿ ನರಸಿಂಗಾನಂದ ಅವರು ನಾಲಿಗೆ ಹರಿಬಿಡುವುದು ಇದು ಮೊದಲೇನೂ ಅಲ್ಲ. ಮುಸ್ಲಿಮರ ನರಮೇಧ ನಡೆಸಬೇಕು ಎಂದು ಹೇಳಿಕೆ ನೀಡಿ ಬಂಧನಕ್ಕೆ ಒಳಗಾಗಿದ್ದರು. ಭಾರತದ ಸಂವಿಧಾನ ಹಾಗೂ ಸುಪ್ರೀಂ ಕೋರ್ಟ್ ವಿರುದ್ಧ ಅತ್ಯಂತ ತುಚ್ಛವಾಗಿ ಮಾತನಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...