Homeಮುಖಪುಟಇಡಬ್ಲ್ಯೂಎಸ್‌ ಮೀಸಲಾತಿ ವಿರುದ್ಧ ತಮಿಳುನಾಡು ಪಕ್ಷಗಳಿಂದ ನಿರ್ಣಯ ಅಂಗೀಕಾರ

ಇಡಬ್ಲ್ಯೂಎಸ್‌ ಮೀಸಲಾತಿ ವಿರುದ್ಧ ತಮಿಳುನಾಡು ಪಕ್ಷಗಳಿಂದ ನಿರ್ಣಯ ಅಂಗೀಕಾರ

- Advertisement -
- Advertisement -

ಪ್ರವೇಶ ಮತ್ತು ಉದ್ಯೋಗಗಳಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದ ವ್ಯಕ್ತಿಗಳಿಗೆ 10% ಮೀಸಲಾತಿ ನೀಡುವ ಸಂವಿಧಾನದ 103ನೇ ತಿದ್ದುಪಡಿಯನ್ನು ತಮಿಳುನಾಡಿನ ರಾಜಕೀಯ ಪಕ್ಷಗಳು ಶನಿವಾರ ತಿರಸ್ಕರಿಸಿವೆ ಎಂದು ಪಿಟಿಐ ವರದಿ ಮಾಡಿದೆ.

“ಸಂವಿಧಾನ ಕಲ್ಪಿಸಿರುವ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ, ಸರ್ವೋಚ್ಚ ನ್ಯಾಯಾಲಯದ ವಿವಿಧ ತೀರ್ಪುಗಳ ವಿರುದ್ಧವಾದ ಮತ್ತು ಬಡವರಲ್ಲಿ ಜಾತಿ ತಾರತಮ್ಯವನ್ನು ಸೃಷ್ಟಿಸಿ ಪ್ರಗತಿ ಸಾಧಿಸಿರುವ ಜಾತಿಗಳಿಗೆ 10%ರಷ್ಟು ಮೀಸಲಾತಿ ನೀಡುವ 103 ನೇ ಸಾಂವಿಧಾನಿಕ ತಿದ್ದುಪಡಿಯನ್ನು ನಾವು ತಿರಸ್ಕರಿಸುತ್ತೇವೆ” ಎಂದು ಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಮಿಳುನಾಡು ಮುಖ್ಯಮಂತ್ರಿ ಮತ್ತು ದ್ರಾವಿಡ ಮುನ್ನೇತ್ರ ಕಳಗಂ ಅಧ್ಯಕ್ಷ ಎಂಕೆ ಸ್ಟಾಲಿನ್ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರತಿಪಕ್ಷ ಎಐಎಡಿಎಂಕೆ ಮತ್ತು ಅದರ ಮಿತ್ರ ಪಕ್ಷವಾದ ಬಿಜೆಪಿ ಸಭೆಯನ್ನು ಬಹಿಷ್ಕರಿಸಿವೆ.

ಕಾಂಗ್ರೆಸ್, ಎಡಪಕ್ಷಗಳು, ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ, ವಿದುತಲೈ ಚಿರುತೈಗಲ್ ಕಚ್ಚಿ ಮತ್ತು ಎನ್‌ಡಿಎ ಬಣದಲ್ಲಿರುವ ಪಟ್ಟಾಲಿ ಮಕ್ಕಳ್ ಕಚ್ಚಿ ಪಕ್ಷಗಳು ಸಭೆಯಲ್ಲಿ ಪಾಲ್ಗೊಂಡಿದ್ದವು.

ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಮೀಸಲಾತಿ ನೀಡುವ ಕೇಂದ್ರದ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿತ್ತು.

ಸಾಂವಿಧಾನಿಕ ಪೀಠದ 3-2 ತೀರ್ಪಿನಲ್ಲಿ, ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ, ಬೇಲಾ ತ್ರಿವೇದಿ ಮತ್ತು ಜೆಬಿ ಪರ್ದಿವಾಲಾ ಅವರು ಇಡಬ್ಲ್ಯೂಎಸ್‌ ತೀರ್ಪನ್ನು ಎತ್ತಿಹಿಡಿದಿದ್ದರೆ, ತೀರ್ಪಿನ ಸಮಯದಲ್ಲಿ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಮತ್ತು ನ್ಯಾಯಮೂರ್ತಿ ರವೀಂದ್ರ ಭಟ್ ಅವರು ಬಹುಮತದ ಅಭಿಪ್ರಾಯವನ್ನು ಒಪ್ಪಲಿಲ್ಲ.

ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿ ಸಲ್ಲಿಸುವುದಾಗಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಬುಧವಾರ ಪ್ರಕಟಿಸಿತ್ತು.

“ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ತನ್ನ ಮರುಪರಿಶೀಲನಾ ಅರ್ಜಿ ಸಲ್ಲಿಸಿ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಖಚಿತಪಡಿಸಿಕೊಳ್ಳಲು ತನ್ನ ಅಭಿಪ್ರಾಯಗಳನ್ನು ಬಲವಾಗಿ ಮಂಡಿಸಬೇಕು” ಎಂದು ಸಭೆಯಲ್ಲಿ ಸೇರಿದ್ದ ರಾಜಕೀಯ ಪಕ್ಷಗಳು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

“ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಮೂಲ ಮೌಲ್ಯಗಳನ್ನು ಛಿದ್ರಗೊಳಿಸಲು ನಾವು ಅನುಮತಿಸುವುದಿಲ್ಲ” ಎಂದು ಪಕ್ಷಗಳು ತಿಳಿಸಿವೆ.

ಇಡಬ್ಲ್ಯೂಎಸ್‌ ಕೋಟಾ ಮತ್ತು ಸುಪ್ರೀಂ ಕೋರ್ಟ್ ತೀರ್ಪು

ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ನೀಡಲಾದ ಮೀಸಲಾತಿಯನ್ನು ಪಡೆಯಲು ಸಾಧ್ಯವಾಗದ ಸಮುದಾಯಗಳಿಗೆ, ಆದರೆ ವಾರ್ಷಿಕ ಆದಾಯ 8 ಲಕ್ಷ ರೂ.ಗಳಿಗಿಂತ ಕಡಿಮೆ ಇರುವ ಕುಟುಂಬಗಳಿಗೆ ಇಡಬ್ಲ್ಯೂಎಸ್‌ ಮೀಸಲಾತಿಯನ್ನು ಕೇಂದ್ರ ಸರ್ಕಾರ 2019ರಲ್ಲಿ ಪರಿಚಯಿಸಿತು.

ಇದನ್ನೂ ಓದಿರಿ: ಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪು ಮರುಪರಿಶೀಲನೆಗೆ ಅವಕಾಶವಿದೆ: ಜಸ್ಟೀಸ್ ದಾಸ್

ಐದು ಎಕರೆಗಿಂತ ಹೆಚ್ಚು ಕೃಷಿ ಭೂಮಿ ಅಥವಾ 1,000 ಚದರ ಅಡಿ ವಸತಿ ಭೂಮಿ ಹೊಂದಿರುವ ಕುಟುಂಬಗಳ ವ್ಯಕ್ತಿಗಳು ಈ ಕೋಟಾಕ್ಕೆ ಅರ್ಹರಾಗಿರುವುದಿಲ್ಲ.

ಸರ್ವೋಚ್ಚ ನ್ಯಾಯಾಲಯದ ಮುಂದೆ ಅರ್ಜಿದಾರರು, ಸಮಾನತೆಯ ಹಕ್ಕು ಮತ್ತು ಮೀಸಲಾತಿಗೆ ಆಧಾರವನ್ನು ಒದಗಿಸುವ 15 ಮತ್ತು 16 ನೇ ವಿಧಿಗಳಿಗೆ ಬದಲಾವಣೆಗಳನ್ನು ಪರಿಚಯಿಸಿದ 103 ನೇ ತಿದ್ದುಪಡಿಯನ್ನು ಪ್ರಶ್ನಿಸಿದ್ದರು.

ಸುಪ್ರೀಂ ಕೋರ್ಟ್‌ನ ಬಹುಮತದ ತೀರ್ಪು 10% ಕೋಟಾದ ಹಂಚಿಕೆಯನ್ನು ಮಾನ್ಯ ಮಾಡಿದೆ. ಈ ತಿದ್ದುಪಡಿಯು ಸಂವಿಧಾನದಲ್ಲಿ ಶಾಸಕಾಂಗಕ್ಕೆ ನೀಡಲಾದ ಅಧಿಕಾರದೊಳಗೆ ಬರುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಮತ್ತೊಂದೆಡೆ ಸಂವಿಧಾನವು ಹೊರಗಿಡಲು ಅವಕಾಶ ನೀಡದ ಕಾರಣ ಇಡಬ್ಲ್ಯೂಎಸ್‌ ವ್ಯಾಪ್ತಿಯಿಂದ ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯಗಳನ್ನು ಹೊರಗಿಡಲು ಸಾಧ್ಯವಿಲ್ಲ ಎಂದು ಭಿನ್ನಮತದ ತೀರ್ಪು ನೀಡಿದ ನ್ಯಾಯಾಧೀಶರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...